AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಾಸನದಲ್ಲಿ ಕಾಡಾನೆ ದಾಳಿ; ಕಾಫಿ ತೋಟದ ಮಾಲೀಕ ಸಾವು

ಇಂದು ಬೆಳಿಗ್ಗೆ 6.30ರ ಸುಮಾರಿಗೆ ಒಂಟಿ ಸಲಗ 59 ವರ್ಷದ ವ್ಯಕ್ತಿಯ ಮೇಲೆ ದಾಳಿ ನಡೆಸಿ ಕೊಂದಿದೆ. ಮನೆ ಸಮೀಪವೇ ಕಾಡಾನೆ ಬಂದು ತೋಟದ ಮಾಲೀಕನ ಜೀವವನ್ನು ತೆಗೆದಿದೆ. ಆನೆಯ ದಾಳಿಯಿಂದ ವ್ಯಕ್ತಿಯ ತಲೆ ಛಿದ್ರ ಛಿದ್ರವಾಗಿದೆ.

ಹಾಸನದಲ್ಲಿ ಕಾಡಾನೆ ದಾಳಿ; ಕಾಫಿ ತೋಟದ ಮಾಲೀಕ ಸಾವು
ಪ್ರಾತಿನಿಧಿಕ ಚಿತ್ರ
TV9 Web
| Edited By: sandhya thejappa|

Updated on:Jun 02, 2021 | 9:56 AM

Share

ಹಾಸನ: ಹಾಸನದಲ್ಲಿ ಇತ್ತೀಚೆಗೆ ಕಾಡಾನೆಗಳ ಹಾವಳಿ ಜೋರಾಗಿದ್ದು, ಆನೆ ದಾಳಿಗೆ ತೋಟದ ಮಾಲೀಕ ಸಾವನ್ನಪ್ಪಿದ್ದಾರೆ. ಜಿಲ್ಲೆಯ ಸಕಲೇಶಪುರ ತಾಲೂಕಿನ ಕಿರುಹುಣಸೆ ಗ್ರಾಮದ ರಾಜಣ್ಣ ಎಂಬುವವರು ಕಾಡಾನೆ ದಾಳಿಯಿಂದ ಮೃತಪಟ್ಟಿದ್ದಾರೆ. ಇಂದು ಬೆಳಿಗ್ಗೆ 6.30ರ ಸುಮಾರಿಗೆ ಒಂಟಿ ಸಲಗ 59 ವರ್ಷದ ವ್ಯಕ್ತಿಯ ಮೇಲೆ ದಾಳಿ ನಡೆಸಿ ಕೊಂದಿದೆ. ಮನೆ ಸಮೀಪವೇ ಕಾಡಾನೆ ಬಂದು ತೋಟದ ಮಾಲೀಕನ ಜೀವವನ್ನು ತೆಗೆದಿದೆ. ಆನೆಯ ದಾಳಿಯಿಂದ ವ್ಯಕ್ತಿಯ ತಲೆ ಛಿದ್ರ ಛಿದ್ರವಾಗಿದ್ದು, ಆನೆ ಹಾವಳಿ ತಡೆಯದ ಅರಣ್ಯ ಇಲಾಖೆ ವಿರುದ್ಧ ಜನರು ಆಕ್ರೋಶ ಹೊರಹಾಕಿದ್ದಾರೆ.

ಮಾವ ತಯಾರಿಸುತ್ತಿದ್ದ ಮೂವರು ಆರೋಪಿಗಳ ಬಂಧನ ವಿಜಯಪುರ: ಮಾವ ತಯಾರಿಸುತ್ತಿದ್ದ ಮೂವರು ಆರೋಪಿಗಳನ್ನು ತಿಕೋಟ ಪೊಲೀಸರು ಬಂಧಿಸಿದ್ದಾರೆ. ಮದರ್​ಸಾಬ್ ಮಡ್ಡಿಮನಿ, ಅಬ್ದುಲ್ಕರೀಂ ಬಡಕಲ್ ಮತ್ತು ಮುಬಾರಕ್ ಬಡಕಲ್ ಬಂಧಿತ ಆರೋಪಿಗಳು. ಮೂವರು ತಿಕೋಟ ಪಟ್ಟಣದ ಬಡಕಲ್​ನಲ್ಲಿ, ಗೌಡರ ಗಲ್ಲಿಯಲ್ಲಿ ಅಪಾರ ಪ್ರಮಾಣದಲ್ಲಿ ಮಾವ ತಯಾರಿಸಿ, ಲಾಕ್​ಡೌನ್​ ನಡುವೆ ಯುವಕರಿಗೆ ಮಾರಾಟ ಮಾಡುತ್ತಿದ್ದರು. ಸದ್ಯ ಇವರನ್ನು ಬಂಧಿಸಿದ್ದು, 185 ಕೆ.ಜಿ ಮಾವ ಮತ್ತು 1.50 ಲಕ್ಷ ರೂ. ಮೌಲ್ಯದ ಮಾವ ಜೊತೆಗೆ ತಯಾರಿಸಲು ಬಳಸುತ್ತಿದ್ದ ಮಿಕ್ಸರ್, ಮಾದಕ ವಸ್ತುಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಕಳ್ಳಭಟ್ಟಿ ಅಡ್ಡೆಯ ಮೇಲೆ ಅಧಿಕಾರಿಗಳ ದಾಳಿ ಶಿವಮೊಗ್ಗ: ಕಳ್ಳಭಟ್ಟಿ ತಯಾರಿಸುತ್ತಿದ್ದ ಅಡ್ಡೆಯ ಮೇಲೆ ಅಬಕಾರಿ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಜಿಲ್ಲೆಯ ಶಿಕಾರಿಪುರ ತಾಲೂಕಿನ ಮಳವಳ್ಳಿ ತಾಂಡಾದ ಮಲ್ಲಪ್ಪನ ಕಟ್ಟೆ ಕೆರೆಯ ಬಳಿ ಅಡ್ಡೆಯಿತ್ತು. ಆರೋಪಿಗಳಾದ ಬೀರಾ ನಾಯಕ್ ಮತ್ತು ಲೋಕಿ ಬಾಯಿ ಪರಾರಿಯಾಗಿದ್ದಾರೆ. 135 ಲೀಟರ್ ಬೆಲ್ಲದ ಕೊಳೆ ಹಾಗೂ 09 ಲೀಟರ್ ಕಳ್ಳಭಟ್ಟಿ ಸಾರಾಯಿಯ ಜೊತೆಗೆ ತಯಾರಿಕೆಗೆ ಬಳಸುವ ಸಾಮಗ್ರಿಯನ್ನು ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.

ಇದನ್ನೂ ಓದಿ

Covid 19 Vaccine: ಚೀನಾ ಸಹಾಯದೊಂದಿಗೆ ಲಸಿಕೆ ಅಭಿವೃದ್ಧಿ ಪಡಿಸಿದ ಪಾಕಿಸ್ತಾನ; ನಿನ್ನೆ ಉದ್ಘಾಟನೆಯಾದ ‘ಪಾಕ್​​ವಾಕ್’​

ಸಿಲಿಂಡರ್ ಸ್ಫೋಟದಿಂದ ಕುಸಿದುಬಿದ್ದ ಕಟ್ಟಡ; 7 ಮಂದಿ ಸಾವು, 14 ಜನರಿಗೆ ಗಾಯ

(owner of coffee plantation has died from a elephant attack)

Published On - 9:24 am, Wed, 2 June 21

Follow Us
Web contact
Web contact

TV9 Kannada

Read More
ಸಿದ್ದರಾಮಯ್ಯ ಹಾಗೂ ವಿದೇಶಾಂಗ ಸಚಿವ ಎಸ್ ಜೈಶಂಕರ್ ಆಕಸ್ಮಿಕ ಭೇಟಿ!
ಸಿದ್ದರಾಮಯ್ಯ ಹಾಗೂ ವಿದೇಶಾಂಗ ಸಚಿವ ಎಸ್ ಜೈಶಂಕರ್ ಆಕಸ್ಮಿಕ ಭೇಟಿ!
ಸುದೀಪ್ ರೀತಿಯೇ ಸಂಜಿತ್ ಇದ್ದಾರೆ; ಕಾರಣ ಕೊಟ್ಟ ಪ್ರಿಯಾ
ಸುದೀಪ್ ರೀತಿಯೇ ಸಂಜಿತ್ ಇದ್ದಾರೆ; ಕಾರಣ ಕೊಟ್ಟ ಪ್ರಿಯಾ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್