AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಾಸನದಲ್ಲಿ ಕಾಡಾನೆ ದಾಳಿ; ಕಾಫಿ ತೋಟದ ಮಾಲೀಕ ಸಾವು

ಇಂದು ಬೆಳಿಗ್ಗೆ 6.30ರ ಸುಮಾರಿಗೆ ಒಂಟಿ ಸಲಗ 59 ವರ್ಷದ ವ್ಯಕ್ತಿಯ ಮೇಲೆ ದಾಳಿ ನಡೆಸಿ ಕೊಂದಿದೆ. ಮನೆ ಸಮೀಪವೇ ಕಾಡಾನೆ ಬಂದು ತೋಟದ ಮಾಲೀಕನ ಜೀವವನ್ನು ತೆಗೆದಿದೆ. ಆನೆಯ ದಾಳಿಯಿಂದ ವ್ಯಕ್ತಿಯ ತಲೆ ಛಿದ್ರ ಛಿದ್ರವಾಗಿದೆ.

ಹಾಸನದಲ್ಲಿ ಕಾಡಾನೆ ದಾಳಿ; ಕಾಫಿ ತೋಟದ ಮಾಲೀಕ ಸಾವು
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on:Jun 02, 2021 | 9:56 AM

Share

ಹಾಸನ: ಹಾಸನದಲ್ಲಿ ಇತ್ತೀಚೆಗೆ ಕಾಡಾನೆಗಳ ಹಾವಳಿ ಜೋರಾಗಿದ್ದು, ಆನೆ ದಾಳಿಗೆ ತೋಟದ ಮಾಲೀಕ ಸಾವನ್ನಪ್ಪಿದ್ದಾರೆ. ಜಿಲ್ಲೆಯ ಸಕಲೇಶಪುರ ತಾಲೂಕಿನ ಕಿರುಹುಣಸೆ ಗ್ರಾಮದ ರಾಜಣ್ಣ ಎಂಬುವವರು ಕಾಡಾನೆ ದಾಳಿಯಿಂದ ಮೃತಪಟ್ಟಿದ್ದಾರೆ. ಇಂದು ಬೆಳಿಗ್ಗೆ 6.30ರ ಸುಮಾರಿಗೆ ಒಂಟಿ ಸಲಗ 59 ವರ್ಷದ ವ್ಯಕ್ತಿಯ ಮೇಲೆ ದಾಳಿ ನಡೆಸಿ ಕೊಂದಿದೆ. ಮನೆ ಸಮೀಪವೇ ಕಾಡಾನೆ ಬಂದು ತೋಟದ ಮಾಲೀಕನ ಜೀವವನ್ನು ತೆಗೆದಿದೆ. ಆನೆಯ ದಾಳಿಯಿಂದ ವ್ಯಕ್ತಿಯ ತಲೆ ಛಿದ್ರ ಛಿದ್ರವಾಗಿದ್ದು, ಆನೆ ಹಾವಳಿ ತಡೆಯದ ಅರಣ್ಯ ಇಲಾಖೆ ವಿರುದ್ಧ ಜನರು ಆಕ್ರೋಶ ಹೊರಹಾಕಿದ್ದಾರೆ.

ಮಾವ ತಯಾರಿಸುತ್ತಿದ್ದ ಮೂವರು ಆರೋಪಿಗಳ ಬಂಧನ ವಿಜಯಪುರ: ಮಾವ ತಯಾರಿಸುತ್ತಿದ್ದ ಮೂವರು ಆರೋಪಿಗಳನ್ನು ತಿಕೋಟ ಪೊಲೀಸರು ಬಂಧಿಸಿದ್ದಾರೆ. ಮದರ್​ಸಾಬ್ ಮಡ್ಡಿಮನಿ, ಅಬ್ದುಲ್ಕರೀಂ ಬಡಕಲ್ ಮತ್ತು ಮುಬಾರಕ್ ಬಡಕಲ್ ಬಂಧಿತ ಆರೋಪಿಗಳು. ಮೂವರು ತಿಕೋಟ ಪಟ್ಟಣದ ಬಡಕಲ್​ನಲ್ಲಿ, ಗೌಡರ ಗಲ್ಲಿಯಲ್ಲಿ ಅಪಾರ ಪ್ರಮಾಣದಲ್ಲಿ ಮಾವ ತಯಾರಿಸಿ, ಲಾಕ್​ಡೌನ್​ ನಡುವೆ ಯುವಕರಿಗೆ ಮಾರಾಟ ಮಾಡುತ್ತಿದ್ದರು. ಸದ್ಯ ಇವರನ್ನು ಬಂಧಿಸಿದ್ದು, 185 ಕೆ.ಜಿ ಮಾವ ಮತ್ತು 1.50 ಲಕ್ಷ ರೂ. ಮೌಲ್ಯದ ಮಾವ ಜೊತೆಗೆ ತಯಾರಿಸಲು ಬಳಸುತ್ತಿದ್ದ ಮಿಕ್ಸರ್, ಮಾದಕ ವಸ್ತುಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಕಳ್ಳಭಟ್ಟಿ ಅಡ್ಡೆಯ ಮೇಲೆ ಅಧಿಕಾರಿಗಳ ದಾಳಿ ಶಿವಮೊಗ್ಗ: ಕಳ್ಳಭಟ್ಟಿ ತಯಾರಿಸುತ್ತಿದ್ದ ಅಡ್ಡೆಯ ಮೇಲೆ ಅಬಕಾರಿ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಜಿಲ್ಲೆಯ ಶಿಕಾರಿಪುರ ತಾಲೂಕಿನ ಮಳವಳ್ಳಿ ತಾಂಡಾದ ಮಲ್ಲಪ್ಪನ ಕಟ್ಟೆ ಕೆರೆಯ ಬಳಿ ಅಡ್ಡೆಯಿತ್ತು. ಆರೋಪಿಗಳಾದ ಬೀರಾ ನಾಯಕ್ ಮತ್ತು ಲೋಕಿ ಬಾಯಿ ಪರಾರಿಯಾಗಿದ್ದಾರೆ. 135 ಲೀಟರ್ ಬೆಲ್ಲದ ಕೊಳೆ ಹಾಗೂ 09 ಲೀಟರ್ ಕಳ್ಳಭಟ್ಟಿ ಸಾರಾಯಿಯ ಜೊತೆಗೆ ತಯಾರಿಕೆಗೆ ಬಳಸುವ ಸಾಮಗ್ರಿಯನ್ನು ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.

ಇದನ್ನೂ ಓದಿ

Covid 19 Vaccine: ಚೀನಾ ಸಹಾಯದೊಂದಿಗೆ ಲಸಿಕೆ ಅಭಿವೃದ್ಧಿ ಪಡಿಸಿದ ಪಾಕಿಸ್ತಾನ; ನಿನ್ನೆ ಉದ್ಘಾಟನೆಯಾದ ‘ಪಾಕ್​​ವಾಕ್’​

ಸಿಲಿಂಡರ್ ಸ್ಫೋಟದಿಂದ ಕುಸಿದುಬಿದ್ದ ಕಟ್ಟಡ; 7 ಮಂದಿ ಸಾವು, 14 ಜನರಿಗೆ ಗಾಯ

(owner of coffee plantation has died from a elephant attack)

Published On - 9:24 am, Wed, 2 June 21

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?