AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯೂರಿಯಾ ಮಿಶ್ರಿತ ನೀರು ಕುಡಿದು 4 ಎತ್ತು, ಒಂದು ಜಿಂಕೆ ಸಾವು; ಕಿಡಿಗೇಡಿಗಳ ಕೃತ್ಯಕ್ಕೆ ಮೂಕಪ್ರಾಣಿಗಳು ಬಲಿ

ಯೂರಿಯಾ ಮಿಶ್ರಿತ ನೀರನ್ನು ಕುಡಿದ 4 ಎತ್ತುಗಳು, ಒಂದು ಜಿಂಕೆ ಸಾವನ್ನಪ್ಪಿದೆ. ಮಾನವರ ಈ ಕೆಲಸಕ್ಕೆ ಮೂಕಪ್ರಾಣಿಗಳು ಪ್ರಾಣ ಕಳೆದುಕೊಂಡಿವೆ. ಕೋಡಿಹಳ್ಳಿ ವಲಯ ಅರಣ್ಯಾಧಿಕಾರಿಗಳು ಘಟನಾ ಸ್ಥಳಕ್ಕೆ ಭೇಟಿ ಮಾಡಿ, ಪರಿಶೀಲನೆ ನಡೆಸಿದ್ದಾರೆ.

ಯೂರಿಯಾ ಮಿಶ್ರಿತ ನೀರು ಕುಡಿದು 4 ಎತ್ತು, ಒಂದು ಜಿಂಕೆ ಸಾವು; ಕಿಡಿಗೇಡಿಗಳ ಕೃತ್ಯಕ್ಕೆ ಮೂಕಪ್ರಾಣಿಗಳು ಬಲಿ
ಯೂರಿಯಾ ಮಿಶ್ರಿತ ನೀರು
TV9 Web
| Edited By: |

Updated on:Apr 05, 2022 | 1:07 PM

Share

ರಾಮನಗರ: ಯೂರಿಯಾ ಮಿಶ್ರಿತ ನೀರು ಕುಡಿದು 4 ಎತ್ತು ಹಾಗೂ ಒಂದು ಜಿಂಕೆ ಸಾವನ್ನಪ್ಪಿದ ದಾರುಣ ಘಟನೆ ರಾಮನಗರ ಜಿಲ್ಲೆ ಕನಕಪುರ ತಾಲೂಕಿನ ಆಳುಕುಳಿ ಗ್ರಾಮದ ಬಳಿ ಅರಣ್ಯ ಪ್ರದೇಶದಲ್ಲಿ ನಡೆದಿದೆ. ಕಾಡು ಪ್ರಾಣಿ ಬೇಟೆಯಾಡಲು ನೀರಿಗೆ ಯೂರಿಯಾ ಮಿಶ್ರಣ ಮಾಡಲಾಗಿತ್ತು. ಕಿಡಿಗೇಡಿಗಳು ನೀರಿಗೆ ಯೂರಿಯಾ ಮಿಕ್ಸ್ ಮಾಡಿದ್ದರು. ಯೂರಿಯಾ ಮಿಶ್ರಿತ ನೀರನ್ನು ಕುಡಿದ 4 ಎತ್ತುಗಳು, ಒಂದು ಜಿಂಕೆ ಸಾವನ್ನಪ್ಪಿದೆ. ಮಾನವರ ಈ ಕೆಲಸಕ್ಕೆ ಮೂಕಪ್ರಾಣಿಗಳು ಪ್ರಾಣ ಕಳೆದುಕೊಂಡಿವೆ. ಕೋಡಿಹಳ್ಳಿ ವಲಯ ಅರಣ್ಯಾಧಿಕಾರಿಗಳು ಘಟನಾ ಸ್ಥಳಕ್ಕೆ ಭೇಟಿ ಮಾಡಿ, ಪರಿಶೀಲನೆ ನಡೆಸಿದ್ದಾರೆ.

ಮೂಕಪ್ರಾಣಿಗಳ ಸಾವು ಇದೇ ಮೊದಲೇನಲ್ಲ ಈ ರೀತಿಯ ಘಟನೆ ನಡೆಯುತ್ತಿರುವುದು ಇದೇ ಮೊದಲೇನಲ್ಲ. ಈ ಹಿಂದೆಯೂ ತಮ್ಮದಲ್ಲದ ತಪ್ಪಿಗೆ ಪ್ರಾಣಿಗಳು ಸಾವನ್ನಪ್ಪಿರುವ ಘಟನೆಗಳು ನಡೆದಿವೆ. ಚಿರತೆಯೊಂದು ಮರದ ಮೇಲೆ ಹಾರು ಬೆಕ್ಕೊಂದನ್ನು ಹಿಡಿಯಲು ಜಿಗಿದ ವೇಳೆ ವಿದ್ಯುತ್ ತಂತಿ ತಾಗಿ ಚಿರತೆ ಮತ್ತು ಹಾರುಬೆಕ್ಕು ಎರಡೂ ಪ್ರಾಣಿಗಳು ಸಾವಿಗೀಡಾದ ಘಟನೆ ಜಿಲ್ಲೆಯ ಜೋಯಿಡಾ ತಾಲೂಕಿನ ನಂದಿಗದ್ದಾ ಗ್ರಾಮ ಪಂಚಾಯತ್​ಗೆ ಸೇರಿದ ಶೇವಾಳಿ ಬಳಿ ನಡೆದಿತ್ತು. ಗುಂದ ಅರಣ್ಯ ಇಲಾಖೆಯ ತಮ್ಮಣಗಿ ಶಾಖೆಯ ಶೇವಾಳಿಯಲ್ಲಿ ಹಾರು ಬೆಕ್ಕನ್ನು ಬೇಟೆಯಾಡುವಾಗ ಚಿರತೆ ಮರದಿಂದ ಮರಕ್ಕೆ ಹಾರಿದ್ದು, ವಿದ್ಯುತ್ ತಂತಿ ತಾಗಿ ಸಾವಿಗೀಡಾಗಿತ್ತು.

ಸಿಡಿಮದ್ದಿನ ಆಹಾರ ಸೇವಿಸಿದಾಗ ಅದು ಸ್ಪೋಟಗೊಂಡು ಹಸು ಸಾವನ್ನಪ್ಪಿದ ದಾರುಣ ಘಟನೆ ಹೆಚ್.ಡಿ.ಕೋಟೆ ತಾಲ್ಲೂಕಿನ ಬೆಟ್ಟದಬೀಡು ಗ್ರಾಮದಲ್ಲಿ ನಡೆದಿತ್ತು. ರೈತ ನರಸಿಂಹೇಗೌಡರಿಗೆ ಸೇರಿದ ಹಸು, ಸಿಡಿಮದ್ದು ಇರಿಸಿದ್ದ ಅರಿವಿಲ್ಲದೇ ಆಹಾರ ಸೇವಿಸಿತ್ತು. ಕಾಡು ಪ್ರಾಣಿಗಳ ಬೇಟೆಗೆ ಕಿಡಿಗೇಡಿಗಳು ಇರಿಸಿದ್ದ ಆಹಾರ ಸೇವಿಸಿದಾಗ ಸ್ಪೋಟ ಉಂಟಾಗಿತ್ತು.

ಇದನ್ನೂ ಓದಿ: ಗದಗ್ ನ ಕಿರು ಮೃಗಾಲಯಕ್ಕೆ ಹೊಸ ಅತಿಥಿಗಳ ಎಂಟ್ರಿ-ಝೂನ ಮೆರಗು ಹೆಚ್ಚಿಸಿದ ಸಿಂಹಗಳು-ಪ್ರಾಣಿಪ್ರಿಯರು, ಮಕ್ಕಳು ದಿಲ್ ಖುಷ್

ಮೈಸೂರು ಮೃಗಾಲಯದ ಪ್ರಾಣಿಗಳಿಗಾಗಿ ಬಂತು ಶವರ್​: ಅಧಿಕಾರಿಗಳ ಈ ಕ್ರಮಕ್ಕೆ ಸಾರ್ವಜನಿಕರಿಂದ ಭಾರೀ ಮೆಚ್ಚುಗೆ

Published On - 7:29 pm, Sun, 28 March 21

Follow Us
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು
‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು
ಹನೂರು ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ ಮಹಿಮದಾಸ್
ಹನೂರು ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ ಮಹಿಮದಾಸ್
ಕಾರ್ಕಳದ ದುರ್ಗಾ ಫಾಲ್ಸ್‌ನಲ್ಲಿ ಸ್ಥಳೀಯರ ಸಾಹಸಮಯ ಕಾರ್ಯಾಚರಣೆ
ಕಾರ್ಕಳದ ದುರ್ಗಾ ಫಾಲ್ಸ್‌ನಲ್ಲಿ ಸ್ಥಳೀಯರ ಸಾಹಸಮಯ ಕಾರ್ಯಾಚರಣೆ
ಸ್ಕ್ಯಾನ್ ಮಾಡಿ, ದೂರು ನೀಡಿ; ಕಳಪೆ ಆಹಾರ, ನಕಲಿ ಔಷಧಿಗೆ ಬ್ರೇಕ್!
ಸ್ಕ್ಯಾನ್ ಮಾಡಿ, ದೂರು ನೀಡಿ; ಕಳಪೆ ಆಹಾರ, ನಕಲಿ ಔಷಧಿಗೆ ಬ್ರೇಕ್!
ಜೈಲಿನಲ್ಲಿ ಪವಿತ್ರಾ ಗೌಡಗೆ ವಿಪರೀತ ಜ್ವರ; ವಿಚಾರಣೆಗೆ ಗೈರು
ಜೈಲಿನಲ್ಲಿ ಪವಿತ್ರಾ ಗೌಡಗೆ ವಿಪರೀತ ಜ್ವರ; ವಿಚಾರಣೆಗೆ ಗೈರು