AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಕ್ಸಿಜನ್ ಕಾನ್ಸನ್ಟ್ರೇಟರ್ ಜಾಹೀರಾತು ನೋಡಿ ಮೋಸ ಹೋದ ಕುಟುಂಬಸ್ಥರು; ಹಣ, ವ್ಯಕ್ತಿ ಕಳೆದುಕೊಂಡು ಕಣ್ಣೀರು

ಬೆಂಗಳೂರು ಗ್ರಾಮಾಂತರ ಜಿಲ್ಲೆ‌ ನೆಲಮಂಗಲದ ಕೊರೊನಾ ಸೋಂಕಿತರೊಬ್ಬರಿಗೆ ಆಕ್ಸಿಜನ್ ಅವಶ್ಯಕತೆ ಇತ್ತು. ಹೀಗಾಗಿ ಆಕ್ಸಿಜನ್ ಕಾನ್ಸನ್ಟ್ರೇಟರ್ ಸಿಗುತ್ತದೆ ಎನ್ನುವ ಜಾಹೀರಾತು ನೋಡಿ ಸೋಂಕಿತ ಕುಟುಂಬಸ್ಥರು ಮೋಸ ಹೋಗಿದ್ದಾರೆ.

ಆಕ್ಸಿಜನ್ ಕಾನ್ಸನ್ಟ್ರೇಟರ್ ಜಾಹೀರಾತು ನೋಡಿ ಮೋಸ ಹೋದ ಕುಟುಂಬಸ್ಥರು; ಹಣ, ವ್ಯಕ್ತಿ ಕಳೆದುಕೊಂಡು ಕಣ್ಣೀರು
ವಂಚನೆಗೆ ಒಳಗಾದವರು
Follow us
ಆಯೇಷಾ ಬಾನು
|

Updated on: May 20, 2021 | 6:34 AM

ನೆಲಮಂಗಲ: ಕೊರೊನಾ ಸೋಂಕಿನ ಭೀಕರತೆಯ ಲಾಭ ಪಡೆದುಕೊಳ್ಳಲು ಮುಂದಾಗಿರುವ ಕೆಲ ಮಂದಿ ಅಮಾಯಕ ಜನರನ್ನು ನಂಬಿಸಿ ಮೋಸ ಮಾಡುತ್ತಿದ್ದಾರೆ. ಆಕ್ಸಿಜನ್ ಕಾನ್ಸನ್ಟ್ರೇಟರ್ ಕೊಡುತ್ತೇವೆ ಎಂದು ಆನ್ಲೈನ್ ವಂಚನೆ ಮಾಡುತ್ತಿರುವ ಆರೋಪ ಕೇಳಿ ಬಂದಿದೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆ‌ ನೆಲಮಂಗಲದ ಕೊರೊನಾ ಸೋಂಕಿತರೊಬ್ಬರಿಗೆ ಆಕ್ಸಿಜನ್ ಅವಶ್ಯಕತೆ ಇತ್ತು. ಹೀಗಾಗಿ ಆಕ್ಸಿಜನ್ ಕಾನ್ಸನ್ಟ್ರೇಟರ್ ಸಿಗುತ್ತದೆ ಎನ್ನುವ ಜಾಹೀರಾತು ನೋಡಿ ಸೋಂಕಿತ ಕುಟುಂಬಸ್ಥರು ಮೋಸ ಹೋಗಿದ್ದಾರೆ. ವಾಟ್ಸ್‌ಆಪ್ ಮೂಲಕ ಬಂದ ಜಾಹೀರಾತು ಸಂದೇಶದಲ್ಲಿನ ನಂಬರ್‌ಗೆ ಕಾಲ್ ಮಾಡಿದ್ದಾರೆ. ಕರೆ ಮಾಡಿ ಕಾನ್ಸನ್ಟ್ರೇಟರ್ ಬೇಕು ಎಂದು ಮನವಿ ಮಾಡಿಕೊಂಡಿದ್ದಾರೆ. ಆಗ ಪ್ರತಿಕ್ರಿಯಿಸಿದ ವ್ಯಕ್ತಿ ಕಳುಹಿಸುತ್ತೇವೆ ಫೋನ್‌ಪೇ ಮೂಲಕ ಹಣ ಕಳುಹಿಸಿ ಎಂದು ಹೇಳಿದ್ದಾರೆ. ಇದನ್ನು ನಂಬಿದ ಸೋಂಕಿತ ವ್ಯಕ್ತಿಯ ಕುಟುಂಬಸ್ಥರು ಫೋನ್‌ಪೇ ಮೂಲಕ‌ ಹಂತ ಹಂತವಾಗಿ 13 ಸಾವಿರ ಹಣ ಸಂದಾಯ ಮಾಡಿದ್ದಾರೆ.

ಬಳಿಕ ಮತ್ತಷ್ಟು ಹಣ ನೀಡಿ ಎಂದು ಒತ್ತಾಯಿಸಿದ್ದಾರೆ. ಕೊನೆಗೆ ಫೋನ್ ರಿಸೀವ್ ಮಾಡದೆ ಸುಮ್ಮನಾಗಿದ್ದಾರೆ. ಬಳಿಕ ನಿರ್ಲಕ್ಷ್ಯವಹಿಸಿದರೆ ಸೋಂಕಿತನ ಪ್ರಾಣಕ್ಕೆ ಅಪಾಯ ಎಂದು ನೆಲಮಂಗಲ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿದ್ದಾರೆ. ಆದರೆ ಚಿಕಿತ್ಸೆ ನೀಡಿದರು ಸೋಂಕಿತ ವ್ಯಕ್ತಿ ಬದುಕಲಿಲ್ಲ. ಸದ್ಯ ಈ ಸಂಬಂಧ ನೆಲಮಂಗಲ ಟೌನ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಈ ರೀತಿ ಸೋಂಕಿತ ವ್ಯಕ್ತಿಯ ಕುಟುಂಬಸ್ಥರು ಫೋನ್‌ಪೇ ಮೂಲಕ‌ 13 ಸಾವಿರ ಹಣವನ್ನು ಕಳೆದುಕೊಂಡಿದ್ದಾರೆ.

ಕೊರೊನಾ ಸಮಯವನ್ನು ದುರುಪಯೋಗ ಮಾಡಿಕೊಂಡು ಕೆಲವರು ಹಣ ಕೀಳುವ ಕೆಲಸಕ್ಕೆ ಮುಂದಾಗಿದ್ದಾರೆ. ಇತ್ತ ಹಣವೂ ಇಲ್ಲ, ವ್ಯಕ್ತಿಯೂ ಇಲ್ಲ ಎಂಬ ಸ್ಥಿತಿಯಲ್ಲಿ ಕುಟುಂಬಸ್ಥರು ವಂಚನೆಗೆ ಒಳಗಾಗಿ ಕಣ್ಣೀರಿಡುತ್ತಿದ್ದಾರೆ.

ಫೋನ್‌ಪೇ ಮೂಲಕ ವಂಚನೆ

ಇದನ್ನೂ ಓದಿ: World AIDS Vaccine Day 2021: ಹೆಚ್​ಐವಿ ಏಡ್ಸ್​ಗೆ ತಿರುಗದಂತೆ ಮುನ್ನೆಚ್ಚರಿಕೆ ವಹಿಸುವುದು ಹೇಗೆ?

‘ಅವರು ಹೇಡಿಗಳು, ಗಂಡಸ್ತನ ಇದ್ರೆ ಸೈನಿಕರ ವಿರುದ್ಧ ಹೋರಾಡಲಿ’; ಚಂದನ್ ಶೆಟ್ಟ
‘ಅವರು ಹೇಡಿಗಳು, ಗಂಡಸ್ತನ ಇದ್ರೆ ಸೈನಿಕರ ವಿರುದ್ಧ ಹೋರಾಡಲಿ’; ಚಂದನ್ ಶೆಟ್ಟ
ಬರವಣಿಗೆ ನನ್ನ ಶಕ್ತಿಯಾಗಿತ್ತು ಎನ್ನುತ್ತಾರೆ 425 ನೇ ರ‍್ಯಾಂಕ್ ಪಡೆದ ಮೇಘನಾ
ಬರವಣಿಗೆ ನನ್ನ ಶಕ್ತಿಯಾಗಿತ್ತು ಎನ್ನುತ್ತಾರೆ 425 ನೇ ರ‍್ಯಾಂಕ್ ಪಡೆದ ಮೇಘನಾ
ಇಂದಿನಿಂದ ಹುಬ್ಬಳ್ಳಿಯಲ್ಲಿ ಆರಂಭವಾಗಿರುವ 2-ದಿನದ ಎಜುಕೇಶನ್ ಎಕ್ಸ್​ಪೋ
ಇಂದಿನಿಂದ ಹುಬ್ಬಳ್ಳಿಯಲ್ಲಿ ಆರಂಭವಾಗಿರುವ 2-ದಿನದ ಎಜುಕೇಶನ್ ಎಕ್ಸ್​ಪೋ
ಯುದ್ಧದ ಬಗ್ಗೆ ಸಿಎಂ ಸಿದ್ದರಾಮಯ್ಯ ಏನು ಹೇಳಿದ್ದಾರೆ ಗೊತ್ತಿಲ್ಲ: ಲಕ್ಷ್ಮಿ
ಯುದ್ಧದ ಬಗ್ಗೆ ಸಿಎಂ ಸಿದ್ದರಾಮಯ್ಯ ಏನು ಹೇಳಿದ್ದಾರೆ ಗೊತ್ತಿಲ್ಲ: ಲಕ್ಷ್ಮಿ
ಕೋಲಾರದಲ್ಲಿ ಜನಪದ ಗಾಯಕನಿಂದ ನಿರ್ಮಾಣವಾದ ಹೈಟೆಕ್ ​ಬಸ್ ನಿಲ್ದಾಣ
ಕೋಲಾರದಲ್ಲಿ ಜನಪದ ಗಾಯಕನಿಂದ ನಿರ್ಮಾಣವಾದ ಹೈಟೆಕ್ ​ಬಸ್ ನಿಲ್ದಾಣ
ಪಾಕಿಸ್ತಾನಕ್ಕೆ ಅದರದ್ದೇ ಭಾಷೆಯಲ್ಲಿ ಉತ್ತರ ಕೊಡಬೇಕು: ಧ್ರುವ ಸರ್ಜಾ
ಪಾಕಿಸ್ತಾನಕ್ಕೆ ಅದರದ್ದೇ ಭಾಷೆಯಲ್ಲಿ ಉತ್ತರ ಕೊಡಬೇಕು: ಧ್ರುವ ಸರ್ಜಾ
ಪಾಕಿಸ್ತಾನಕ್ಕೆ ಉತ್ತರ ನೀಡುವ ಕೆಲಸ ವರಿಷ್ಠರು ಮಾಡುತ್ತಿದ್ದಾರೆ: ಯದುವೀರ್
ಪಾಕಿಸ್ತಾನಕ್ಕೆ ಉತ್ತರ ನೀಡುವ ಕೆಲಸ ವರಿಷ್ಠರು ಮಾಡುತ್ತಿದ್ದಾರೆ: ಯದುವೀರ್
ಟಿವಿಯಲ್ಲಿ ಬರತ್ತಿದ್ದ ಸುದ್ದಿ ಸುಳ್ಳಾಗಲಿ ಅಂತ ಪ್ರಾರ್ಥಿಸುತ್ತಿದ್ದೆ:ಸುಮತಿ
ಟಿವಿಯಲ್ಲಿ ಬರತ್ತಿದ್ದ ಸುದ್ದಿ ಸುಳ್ಳಾಗಲಿ ಅಂತ ಪ್ರಾರ್ಥಿಸುತ್ತಿದ್ದೆ:ಸುಮತಿ
ಕರ್ನಾಟಕದಲ್ಲಿರುವ ಪಾಕಿಸ್ತಾನೀಯರನ್ನು ವಾಪಸ್ಸು ಕಳಿಸ್ತೇವೆ: ಸಿದ್ದರಾಮಯ್ಯ
ಕರ್ನಾಟಕದಲ್ಲಿರುವ ಪಾಕಿಸ್ತಾನೀಯರನ್ನು ವಾಪಸ್ಸು ಕಳಿಸ್ತೇವೆ: ಸಿದ್ದರಾಮಯ್ಯ
ಪಹಲ್ಗಾಮ್ ಉಗ್ರರಿಗೆ ನೆರವಾದ ಇಬ್ಬರು ಸ್ಥಳೀಯ ಕಾಶ್ಮೀರಿಗಳ ಮನೆ ಧ್ವಂಸ!
ಪಹಲ್ಗಾಮ್ ಉಗ್ರರಿಗೆ ನೆರವಾದ ಇಬ್ಬರು ಸ್ಥಳೀಯ ಕಾಶ್ಮೀರಿಗಳ ಮನೆ ಧ್ವಂಸ!