AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಕ್ಸಿಜನ್ ಕಾನ್ಸನ್ಟ್ರೇಟರ್ ಜಾಹೀರಾತು ನೋಡಿ ಮೋಸ ಹೋದ ಕುಟುಂಬಸ್ಥರು; ಹಣ, ವ್ಯಕ್ತಿ ಕಳೆದುಕೊಂಡು ಕಣ್ಣೀರು

ಬೆಂಗಳೂರು ಗ್ರಾಮಾಂತರ ಜಿಲ್ಲೆ‌ ನೆಲಮಂಗಲದ ಕೊರೊನಾ ಸೋಂಕಿತರೊಬ್ಬರಿಗೆ ಆಕ್ಸಿಜನ್ ಅವಶ್ಯಕತೆ ಇತ್ತು. ಹೀಗಾಗಿ ಆಕ್ಸಿಜನ್ ಕಾನ್ಸನ್ಟ್ರೇಟರ್ ಸಿಗುತ್ತದೆ ಎನ್ನುವ ಜಾಹೀರಾತು ನೋಡಿ ಸೋಂಕಿತ ಕುಟುಂಬಸ್ಥರು ಮೋಸ ಹೋಗಿದ್ದಾರೆ.

ಆಕ್ಸಿಜನ್ ಕಾನ್ಸನ್ಟ್ರೇಟರ್ ಜಾಹೀರಾತು ನೋಡಿ ಮೋಸ ಹೋದ ಕುಟುಂಬಸ್ಥರು; ಹಣ, ವ್ಯಕ್ತಿ ಕಳೆದುಕೊಂಡು ಕಣ್ಣೀರು
ವಂಚನೆಗೆ ಒಳಗಾದವರು
ಆಯೇಷಾ ಬಾನು
|

Updated on: May 20, 2021 | 6:34 AM

Share

ನೆಲಮಂಗಲ: ಕೊರೊನಾ ಸೋಂಕಿನ ಭೀಕರತೆಯ ಲಾಭ ಪಡೆದುಕೊಳ್ಳಲು ಮುಂದಾಗಿರುವ ಕೆಲ ಮಂದಿ ಅಮಾಯಕ ಜನರನ್ನು ನಂಬಿಸಿ ಮೋಸ ಮಾಡುತ್ತಿದ್ದಾರೆ. ಆಕ್ಸಿಜನ್ ಕಾನ್ಸನ್ಟ್ರೇಟರ್ ಕೊಡುತ್ತೇವೆ ಎಂದು ಆನ್ಲೈನ್ ವಂಚನೆ ಮಾಡುತ್ತಿರುವ ಆರೋಪ ಕೇಳಿ ಬಂದಿದೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆ‌ ನೆಲಮಂಗಲದ ಕೊರೊನಾ ಸೋಂಕಿತರೊಬ್ಬರಿಗೆ ಆಕ್ಸಿಜನ್ ಅವಶ್ಯಕತೆ ಇತ್ತು. ಹೀಗಾಗಿ ಆಕ್ಸಿಜನ್ ಕಾನ್ಸನ್ಟ್ರೇಟರ್ ಸಿಗುತ್ತದೆ ಎನ್ನುವ ಜಾಹೀರಾತು ನೋಡಿ ಸೋಂಕಿತ ಕುಟುಂಬಸ್ಥರು ಮೋಸ ಹೋಗಿದ್ದಾರೆ. ವಾಟ್ಸ್‌ಆಪ್ ಮೂಲಕ ಬಂದ ಜಾಹೀರಾತು ಸಂದೇಶದಲ್ಲಿನ ನಂಬರ್‌ಗೆ ಕಾಲ್ ಮಾಡಿದ್ದಾರೆ. ಕರೆ ಮಾಡಿ ಕಾನ್ಸನ್ಟ್ರೇಟರ್ ಬೇಕು ಎಂದು ಮನವಿ ಮಾಡಿಕೊಂಡಿದ್ದಾರೆ. ಆಗ ಪ್ರತಿಕ್ರಿಯಿಸಿದ ವ್ಯಕ್ತಿ ಕಳುಹಿಸುತ್ತೇವೆ ಫೋನ್‌ಪೇ ಮೂಲಕ ಹಣ ಕಳುಹಿಸಿ ಎಂದು ಹೇಳಿದ್ದಾರೆ. ಇದನ್ನು ನಂಬಿದ ಸೋಂಕಿತ ವ್ಯಕ್ತಿಯ ಕುಟುಂಬಸ್ಥರು ಫೋನ್‌ಪೇ ಮೂಲಕ‌ ಹಂತ ಹಂತವಾಗಿ 13 ಸಾವಿರ ಹಣ ಸಂದಾಯ ಮಾಡಿದ್ದಾರೆ.

ಬಳಿಕ ಮತ್ತಷ್ಟು ಹಣ ನೀಡಿ ಎಂದು ಒತ್ತಾಯಿಸಿದ್ದಾರೆ. ಕೊನೆಗೆ ಫೋನ್ ರಿಸೀವ್ ಮಾಡದೆ ಸುಮ್ಮನಾಗಿದ್ದಾರೆ. ಬಳಿಕ ನಿರ್ಲಕ್ಷ್ಯವಹಿಸಿದರೆ ಸೋಂಕಿತನ ಪ್ರಾಣಕ್ಕೆ ಅಪಾಯ ಎಂದು ನೆಲಮಂಗಲ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿದ್ದಾರೆ. ಆದರೆ ಚಿಕಿತ್ಸೆ ನೀಡಿದರು ಸೋಂಕಿತ ವ್ಯಕ್ತಿ ಬದುಕಲಿಲ್ಲ. ಸದ್ಯ ಈ ಸಂಬಂಧ ನೆಲಮಂಗಲ ಟೌನ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಈ ರೀತಿ ಸೋಂಕಿತ ವ್ಯಕ್ತಿಯ ಕುಟುಂಬಸ್ಥರು ಫೋನ್‌ಪೇ ಮೂಲಕ‌ 13 ಸಾವಿರ ಹಣವನ್ನು ಕಳೆದುಕೊಂಡಿದ್ದಾರೆ.

ಕೊರೊನಾ ಸಮಯವನ್ನು ದುರುಪಯೋಗ ಮಾಡಿಕೊಂಡು ಕೆಲವರು ಹಣ ಕೀಳುವ ಕೆಲಸಕ್ಕೆ ಮುಂದಾಗಿದ್ದಾರೆ. ಇತ್ತ ಹಣವೂ ಇಲ್ಲ, ವ್ಯಕ್ತಿಯೂ ಇಲ್ಲ ಎಂಬ ಸ್ಥಿತಿಯಲ್ಲಿ ಕುಟುಂಬಸ್ಥರು ವಂಚನೆಗೆ ಒಳಗಾಗಿ ಕಣ್ಣೀರಿಡುತ್ತಿದ್ದಾರೆ.

ಫೋನ್‌ಪೇ ಮೂಲಕ ವಂಚನೆ

ಇದನ್ನೂ ಓದಿ: World AIDS Vaccine Day 2021: ಹೆಚ್​ಐವಿ ಏಡ್ಸ್​ಗೆ ತಿರುಗದಂತೆ ಮುನ್ನೆಚ್ಚರಿಕೆ ವಹಿಸುವುದು ಹೇಗೆ?

ವಿಭಜಕಕ್ಕೆ ಡಿಕ್ಕಿ ಹೊಡೆದು ಕಾರಿನ ಮೇಲೆ ಉರುಳಿದ ಲಾರಿ
ವಿಭಜಕಕ್ಕೆ ಡಿಕ್ಕಿ ಹೊಡೆದು ಕಾರಿನ ಮೇಲೆ ಉರುಳಿದ ಲಾರಿ
ಕರ್ನಾಟಕವನ್ನೇ ಬೆಚ್ಚಿ ಬೀಳಿಸಿದ ದರೋಡೆ ಪ್ರಕರಣಗಳ ಲಿಸ್ಟ್ ಇಲ್ಲಿದೆ ನೋಡಿ!
ಕರ್ನಾಟಕವನ್ನೇ ಬೆಚ್ಚಿ ಬೀಳಿಸಿದ ದರೋಡೆ ಪ್ರಕರಣಗಳ ಲಿಸ್ಟ್ ಇಲ್ಲಿದೆ ನೋಡಿ!
ಅಬ್ಬರಿಸಿದ ಸಾಲ್ಟ್ ಅ್ಯಂಡ್ ಪೆಪ್ಪರ್: ಪ್ಲೇಆಫ್​ಗೆ ನೈಟ್ ರೈಡರ್ಸ್​
ಅಬ್ಬರಿಸಿದ ಸಾಲ್ಟ್ ಅ್ಯಂಡ್ ಪೆಪ್ಪರ್: ಪ್ಲೇಆಫ್​ಗೆ ನೈಟ್ ರೈಡರ್ಸ್​
ಡಿಕೆಶಿ​ಗೆ 16 ಲಕ್ಷ ರೂ ಮೌಲ್ಯದ ಗಿಫ್ಟ್: ಅಂಥದ್ದೇನಿದೆ? ಇಲ್ಲಿದೆ ನೋಡಿ
ಡಿಕೆಶಿ​ಗೆ 16 ಲಕ್ಷ ರೂ ಮೌಲ್ಯದ ಗಿಫ್ಟ್: ಅಂಥದ್ದೇನಿದೆ? ಇಲ್ಲಿದೆ ನೋಡಿ
ಈ ಡ್ಯಾನ್ಸ್ ನೋಡಲು ಎರಡು ಕಣ್ಣು ಸಾಲದು; ನಮ್ರತಾ-ಸಂಗೀತಾ ಪ್ರೀತಿಯ ಅಪ್ಪುಗೆ
ಈ ಡ್ಯಾನ್ಸ್ ನೋಡಲು ಎರಡು ಕಣ್ಣು ಸಾಲದು; ನಮ್ರತಾ-ಸಂಗೀತಾ ಪ್ರೀತಿಯ ಅಪ್ಪುಗೆ
ಅಮೆರಿಕದಲ್ಲಿ ಎರಡು ಹೆಲಿಕಾಪ್ಟರ್​ಗಳ ನಡುವೆ ಡಿಕ್ಕಿ, ಪೈಲಟ್ ಸಾವು
ಅಮೆರಿಕದಲ್ಲಿ ಎರಡು ಹೆಲಿಕಾಪ್ಟರ್​ಗಳ ನಡುವೆ ಡಿಕ್ಕಿ, ಪೈಲಟ್ ಸಾವು
ಮತ್ತೆ ಅಶ್ವಿನಿ-ಗಿಲ್ಲಿ ಮಧ್ಯೆ ದೊಡ್ಡ ಫೈಟ್; ಕೊಟ್ಟ ಶಿಕ್ಷೆ ಘನಘೋರ
ಮತ್ತೆ ಅಶ್ವಿನಿ-ಗಿಲ್ಲಿ ಮಧ್ಯೆ ದೊಡ್ಡ ಫೈಟ್; ಕೊಟ್ಟ ಶಿಕ್ಷೆ ಘನಘೋರ
ಆಂಧ್ರಪ್ರದೇಶದಲ್ಲಿ 158 ಪ್ರಯಾಣಿಕರಿದ್ದ 2 ರೈಲು ಬೋಗಿಗಳಿಗೆ ಬೆಂಕಿ
ಆಂಧ್ರಪ್ರದೇಶದಲ್ಲಿ 158 ಪ್ರಯಾಣಿಕರಿದ್ದ 2 ರೈಲು ಬೋಗಿಗಳಿಗೆ ಬೆಂಕಿ
104 ಮೀಟರ್​ ಸಿಕ್ಸರ್​ನೊಂದಿಗೆ ಹೊಸ ಮೈಲುಗಲ್ಲು ದಾಟಿದ ಮ್ಯಾಕ್ಸ್​ವೆಲ್
104 ಮೀಟರ್​ ಸಿಕ್ಸರ್​ನೊಂದಿಗೆ ಹೊಸ ಮೈಲುಗಲ್ಲು ದಾಟಿದ ಮ್ಯಾಕ್ಸ್​ವೆಲ್
ಮೊಸಳೆ ದಾಳಿ ತಡೆಯಲು ನೀರಿನಲ್ಲಿ ಈಜಿ ಹೊರಟ ಮಂಗಗಳು
ಮೊಸಳೆ ದಾಳಿ ತಡೆಯಲು ನೀರಿನಲ್ಲಿ ಈಜಿ ಹೊರಟ ಮಂಗಗಳು