AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಕ್ಸಿಜನ್ ಕಾನ್ಸನ್ಟ್ರೇಟರ್ ಜಾಹೀರಾತು ನೋಡಿ ಮೋಸ ಹೋದ ಕುಟುಂಬಸ್ಥರು; ಹಣ, ವ್ಯಕ್ತಿ ಕಳೆದುಕೊಂಡು ಕಣ್ಣೀರು

ಬೆಂಗಳೂರು ಗ್ರಾಮಾಂತರ ಜಿಲ್ಲೆ‌ ನೆಲಮಂಗಲದ ಕೊರೊನಾ ಸೋಂಕಿತರೊಬ್ಬರಿಗೆ ಆಕ್ಸಿಜನ್ ಅವಶ್ಯಕತೆ ಇತ್ತು. ಹೀಗಾಗಿ ಆಕ್ಸಿಜನ್ ಕಾನ್ಸನ್ಟ್ರೇಟರ್ ಸಿಗುತ್ತದೆ ಎನ್ನುವ ಜಾಹೀರಾತು ನೋಡಿ ಸೋಂಕಿತ ಕುಟುಂಬಸ್ಥರು ಮೋಸ ಹೋಗಿದ್ದಾರೆ.

ಆಕ್ಸಿಜನ್ ಕಾನ್ಸನ್ಟ್ರೇಟರ್ ಜಾಹೀರಾತು ನೋಡಿ ಮೋಸ ಹೋದ ಕುಟುಂಬಸ್ಥರು; ಹಣ, ವ್ಯಕ್ತಿ ಕಳೆದುಕೊಂಡು ಕಣ್ಣೀರು
ವಂಚನೆಗೆ ಒಳಗಾದವರು
ಆಯೇಷಾ ಬಾನು
ಆಯೇಷಾ ಬಾನು|

Updated on: May 20, 2021 | 6:34 AM

Share

ನೆಲಮಂಗಲ: ಕೊರೊನಾ ಸೋಂಕಿನ ಭೀಕರತೆಯ ಲಾಭ ಪಡೆದುಕೊಳ್ಳಲು ಮುಂದಾಗಿರುವ ಕೆಲ ಮಂದಿ ಅಮಾಯಕ ಜನರನ್ನು ನಂಬಿಸಿ ಮೋಸ ಮಾಡುತ್ತಿದ್ದಾರೆ. ಆಕ್ಸಿಜನ್ ಕಾನ್ಸನ್ಟ್ರೇಟರ್ ಕೊಡುತ್ತೇವೆ ಎಂದು ಆನ್ಲೈನ್ ವಂಚನೆ ಮಾಡುತ್ತಿರುವ ಆರೋಪ ಕೇಳಿ ಬಂದಿದೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆ‌ ನೆಲಮಂಗಲದ ಕೊರೊನಾ ಸೋಂಕಿತರೊಬ್ಬರಿಗೆ ಆಕ್ಸಿಜನ್ ಅವಶ್ಯಕತೆ ಇತ್ತು. ಹೀಗಾಗಿ ಆಕ್ಸಿಜನ್ ಕಾನ್ಸನ್ಟ್ರೇಟರ್ ಸಿಗುತ್ತದೆ ಎನ್ನುವ ಜಾಹೀರಾತು ನೋಡಿ ಸೋಂಕಿತ ಕುಟುಂಬಸ್ಥರು ಮೋಸ ಹೋಗಿದ್ದಾರೆ. ವಾಟ್ಸ್‌ಆಪ್ ಮೂಲಕ ಬಂದ ಜಾಹೀರಾತು ಸಂದೇಶದಲ್ಲಿನ ನಂಬರ್‌ಗೆ ಕಾಲ್ ಮಾಡಿದ್ದಾರೆ. ಕರೆ ಮಾಡಿ ಕಾನ್ಸನ್ಟ್ರೇಟರ್ ಬೇಕು ಎಂದು ಮನವಿ ಮಾಡಿಕೊಂಡಿದ್ದಾರೆ. ಆಗ ಪ್ರತಿಕ್ರಿಯಿಸಿದ ವ್ಯಕ್ತಿ ಕಳುಹಿಸುತ್ತೇವೆ ಫೋನ್‌ಪೇ ಮೂಲಕ ಹಣ ಕಳುಹಿಸಿ ಎಂದು ಹೇಳಿದ್ದಾರೆ. ಇದನ್ನು ನಂಬಿದ ಸೋಂಕಿತ ವ್ಯಕ್ತಿಯ ಕುಟುಂಬಸ್ಥರು ಫೋನ್‌ಪೇ ಮೂಲಕ‌ ಹಂತ ಹಂತವಾಗಿ 13 ಸಾವಿರ ಹಣ ಸಂದಾಯ ಮಾಡಿದ್ದಾರೆ.

ಬಳಿಕ ಮತ್ತಷ್ಟು ಹಣ ನೀಡಿ ಎಂದು ಒತ್ತಾಯಿಸಿದ್ದಾರೆ. ಕೊನೆಗೆ ಫೋನ್ ರಿಸೀವ್ ಮಾಡದೆ ಸುಮ್ಮನಾಗಿದ್ದಾರೆ. ಬಳಿಕ ನಿರ್ಲಕ್ಷ್ಯವಹಿಸಿದರೆ ಸೋಂಕಿತನ ಪ್ರಾಣಕ್ಕೆ ಅಪಾಯ ಎಂದು ನೆಲಮಂಗಲ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿದ್ದಾರೆ. ಆದರೆ ಚಿಕಿತ್ಸೆ ನೀಡಿದರು ಸೋಂಕಿತ ವ್ಯಕ್ತಿ ಬದುಕಲಿಲ್ಲ. ಸದ್ಯ ಈ ಸಂಬಂಧ ನೆಲಮಂಗಲ ಟೌನ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಈ ರೀತಿ ಸೋಂಕಿತ ವ್ಯಕ್ತಿಯ ಕುಟುಂಬಸ್ಥರು ಫೋನ್‌ಪೇ ಮೂಲಕ‌ 13 ಸಾವಿರ ಹಣವನ್ನು ಕಳೆದುಕೊಂಡಿದ್ದಾರೆ.

ಕೊರೊನಾ ಸಮಯವನ್ನು ದುರುಪಯೋಗ ಮಾಡಿಕೊಂಡು ಕೆಲವರು ಹಣ ಕೀಳುವ ಕೆಲಸಕ್ಕೆ ಮುಂದಾಗಿದ್ದಾರೆ. ಇತ್ತ ಹಣವೂ ಇಲ್ಲ, ವ್ಯಕ್ತಿಯೂ ಇಲ್ಲ ಎಂಬ ಸ್ಥಿತಿಯಲ್ಲಿ ಕುಟುಂಬಸ್ಥರು ವಂಚನೆಗೆ ಒಳಗಾಗಿ ಕಣ್ಣೀರಿಡುತ್ತಿದ್ದಾರೆ.

ಫೋನ್‌ಪೇ ಮೂಲಕ ವಂಚನೆ

ಇದನ್ನೂ ಓದಿ: World AIDS Vaccine Day 2021: ಹೆಚ್​ಐವಿ ಏಡ್ಸ್​ಗೆ ತಿರುಗದಂತೆ ಮುನ್ನೆಚ್ಚರಿಕೆ ವಹಿಸುವುದು ಹೇಗೆ?

Follow Us
Ayesha Banu
Ayesha Banu

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?