AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಕ್ಸಿಜನ್ ಕಾನ್ಸನ್ಟ್ರೇಟರ್ ಜಾಹೀರಾತು ನೋಡಿ ಮೋಸ ಹೋದ ಕುಟುಂಬಸ್ಥರು; ಹಣ, ವ್ಯಕ್ತಿ ಕಳೆದುಕೊಂಡು ಕಣ್ಣೀರು

ಬೆಂಗಳೂರು ಗ್ರಾಮಾಂತರ ಜಿಲ್ಲೆ‌ ನೆಲಮಂಗಲದ ಕೊರೊನಾ ಸೋಂಕಿತರೊಬ್ಬರಿಗೆ ಆಕ್ಸಿಜನ್ ಅವಶ್ಯಕತೆ ಇತ್ತು. ಹೀಗಾಗಿ ಆಕ್ಸಿಜನ್ ಕಾನ್ಸನ್ಟ್ರೇಟರ್ ಸಿಗುತ್ತದೆ ಎನ್ನುವ ಜಾಹೀರಾತು ನೋಡಿ ಸೋಂಕಿತ ಕುಟುಂಬಸ್ಥರು ಮೋಸ ಹೋಗಿದ್ದಾರೆ.

ಆಕ್ಸಿಜನ್ ಕಾನ್ಸನ್ಟ್ರೇಟರ್ ಜಾಹೀರಾತು ನೋಡಿ ಮೋಸ ಹೋದ ಕುಟುಂಬಸ್ಥರು; ಹಣ, ವ್ಯಕ್ತಿ ಕಳೆದುಕೊಂಡು ಕಣ್ಣೀರು
ವಂಚನೆಗೆ ಒಳಗಾದವರು
ಆಯೇಷಾ ಬಾನು
|

Updated on: May 20, 2021 | 6:34 AM

Share

ನೆಲಮಂಗಲ: ಕೊರೊನಾ ಸೋಂಕಿನ ಭೀಕರತೆಯ ಲಾಭ ಪಡೆದುಕೊಳ್ಳಲು ಮುಂದಾಗಿರುವ ಕೆಲ ಮಂದಿ ಅಮಾಯಕ ಜನರನ್ನು ನಂಬಿಸಿ ಮೋಸ ಮಾಡುತ್ತಿದ್ದಾರೆ. ಆಕ್ಸಿಜನ್ ಕಾನ್ಸನ್ಟ್ರೇಟರ್ ಕೊಡುತ್ತೇವೆ ಎಂದು ಆನ್ಲೈನ್ ವಂಚನೆ ಮಾಡುತ್ತಿರುವ ಆರೋಪ ಕೇಳಿ ಬಂದಿದೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆ‌ ನೆಲಮಂಗಲದ ಕೊರೊನಾ ಸೋಂಕಿತರೊಬ್ಬರಿಗೆ ಆಕ್ಸಿಜನ್ ಅವಶ್ಯಕತೆ ಇತ್ತು. ಹೀಗಾಗಿ ಆಕ್ಸಿಜನ್ ಕಾನ್ಸನ್ಟ್ರೇಟರ್ ಸಿಗುತ್ತದೆ ಎನ್ನುವ ಜಾಹೀರಾತು ನೋಡಿ ಸೋಂಕಿತ ಕುಟುಂಬಸ್ಥರು ಮೋಸ ಹೋಗಿದ್ದಾರೆ. ವಾಟ್ಸ್‌ಆಪ್ ಮೂಲಕ ಬಂದ ಜಾಹೀರಾತು ಸಂದೇಶದಲ್ಲಿನ ನಂಬರ್‌ಗೆ ಕಾಲ್ ಮಾಡಿದ್ದಾರೆ. ಕರೆ ಮಾಡಿ ಕಾನ್ಸನ್ಟ್ರೇಟರ್ ಬೇಕು ಎಂದು ಮನವಿ ಮಾಡಿಕೊಂಡಿದ್ದಾರೆ. ಆಗ ಪ್ರತಿಕ್ರಿಯಿಸಿದ ವ್ಯಕ್ತಿ ಕಳುಹಿಸುತ್ತೇವೆ ಫೋನ್‌ಪೇ ಮೂಲಕ ಹಣ ಕಳುಹಿಸಿ ಎಂದು ಹೇಳಿದ್ದಾರೆ. ಇದನ್ನು ನಂಬಿದ ಸೋಂಕಿತ ವ್ಯಕ್ತಿಯ ಕುಟುಂಬಸ್ಥರು ಫೋನ್‌ಪೇ ಮೂಲಕ‌ ಹಂತ ಹಂತವಾಗಿ 13 ಸಾವಿರ ಹಣ ಸಂದಾಯ ಮಾಡಿದ್ದಾರೆ.

ಬಳಿಕ ಮತ್ತಷ್ಟು ಹಣ ನೀಡಿ ಎಂದು ಒತ್ತಾಯಿಸಿದ್ದಾರೆ. ಕೊನೆಗೆ ಫೋನ್ ರಿಸೀವ್ ಮಾಡದೆ ಸುಮ್ಮನಾಗಿದ್ದಾರೆ. ಬಳಿಕ ನಿರ್ಲಕ್ಷ್ಯವಹಿಸಿದರೆ ಸೋಂಕಿತನ ಪ್ರಾಣಕ್ಕೆ ಅಪಾಯ ಎಂದು ನೆಲಮಂಗಲ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿದ್ದಾರೆ. ಆದರೆ ಚಿಕಿತ್ಸೆ ನೀಡಿದರು ಸೋಂಕಿತ ವ್ಯಕ್ತಿ ಬದುಕಲಿಲ್ಲ. ಸದ್ಯ ಈ ಸಂಬಂಧ ನೆಲಮಂಗಲ ಟೌನ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಈ ರೀತಿ ಸೋಂಕಿತ ವ್ಯಕ್ತಿಯ ಕುಟುಂಬಸ್ಥರು ಫೋನ್‌ಪೇ ಮೂಲಕ‌ 13 ಸಾವಿರ ಹಣವನ್ನು ಕಳೆದುಕೊಂಡಿದ್ದಾರೆ.

ಕೊರೊನಾ ಸಮಯವನ್ನು ದುರುಪಯೋಗ ಮಾಡಿಕೊಂಡು ಕೆಲವರು ಹಣ ಕೀಳುವ ಕೆಲಸಕ್ಕೆ ಮುಂದಾಗಿದ್ದಾರೆ. ಇತ್ತ ಹಣವೂ ಇಲ್ಲ, ವ್ಯಕ್ತಿಯೂ ಇಲ್ಲ ಎಂಬ ಸ್ಥಿತಿಯಲ್ಲಿ ಕುಟುಂಬಸ್ಥರು ವಂಚನೆಗೆ ಒಳಗಾಗಿ ಕಣ್ಣೀರಿಡುತ್ತಿದ್ದಾರೆ.

ಫೋನ್‌ಪೇ ಮೂಲಕ ವಂಚನೆ

ಇದನ್ನೂ ಓದಿ: World AIDS Vaccine Day 2021: ಹೆಚ್​ಐವಿ ಏಡ್ಸ್​ಗೆ ತಿರುಗದಂತೆ ಮುನ್ನೆಚ್ಚರಿಕೆ ವಹಿಸುವುದು ಹೇಗೆ?

Follow Us
ನಮ್ಮ ಉದ್ದೇಶ ಈಡೇರುವವರೆಗೆ ಇರಾನ್ ವಿರುದ್ಧದ ಕಾರ್ಯಾಚರಣೆ ನಿಲ್ಲುವುದಿಲ್ಲ
ನಮ್ಮ ಉದ್ದೇಶ ಈಡೇರುವವರೆಗೆ ಇರಾನ್ ವಿರುದ್ಧದ ಕಾರ್ಯಾಚರಣೆ ನಿಲ್ಲುವುದಿಲ್ಲ
ಇಂದು ಈ ರಾಶಿಯವರು ಅನುಮಾನಗಳಿಗೆ ಆಸ್ಪದ ನೀಡಬೇಡಿ
ಇಂದು ಈ ರಾಶಿಯವರು ಅನುಮಾನಗಳಿಗೆ ಆಸ್ಪದ ನೀಡಬೇಡಿ
ಇಂದು ಕೇತುಗ್ರಸ್ತ ಚಂದ್ರಗ್ರಹಣ ಏನೇನು ಮಾಡಬೇಕು ಗೊತ್ತಾ?
ಇಂದು ಕೇತುಗ್ರಸ್ತ ಚಂದ್ರಗ್ರಹಣ ಏನೇನು ಮಾಡಬೇಕು ಗೊತ್ತಾ?
‘ಜೂನ್, ಜುಲೈ ಒಳಗೆ ದರ್ಶನ್ ರಿಲೀಸ್’: ಭವಿಷ್ಯ ನುಡಿದ ಓಂ ಪ್ರಕಾಶ್ ರಾವ್
‘ಜೂನ್, ಜುಲೈ ಒಳಗೆ ದರ್ಶನ್ ರಿಲೀಸ್’: ಭವಿಷ್ಯ ನುಡಿದ ಓಂ ಪ್ರಕಾಶ್ ರಾವ್
ಅವಳಿ ಮಕ್ಕಳನ್ನ ಕೊಂದು ತಾಯಿ ಆತ್ಮಹತ್ಯೆಗೆ ಯತ್ನಿಸಿದ್ಯಾಕೆ?
ಅವಳಿ ಮಕ್ಕಳನ್ನ ಕೊಂದು ತಾಯಿ ಆತ್ಮಹತ್ಯೆಗೆ ಯತ್ನಿಸಿದ್ಯಾಕೆ?
‘ಭೀಮ ತೀರದಲ್ಲಿ’ ಸಿನಿಮಾ ಮರು ಬಿಡುಗಡೆ ಯಾಕೆ? ಕಾರಣ ತಿಳಿಸಿದ ಚಿತ್ರತಂಡ
‘ಭೀಮ ತೀರದಲ್ಲಿ’ ಸಿನಿಮಾ ಮರು ಬಿಡುಗಡೆ ಯಾಕೆ? ಕಾರಣ ತಿಳಿಸಿದ ಚಿತ್ರತಂಡ
ಸಚಿವರ ಬರ್ತ್​​ಡೇ: ಸರ್ಕಾರಿ ಶಾಲೆ ಮಕ್ಕಳಿಗೆ, ಪೋಷಕರಿಗೆ ವಿಮಾನಯಾನ ಭಾಗ್ಯ
ಸಚಿವರ ಬರ್ತ್​​ಡೇ: ಸರ್ಕಾರಿ ಶಾಲೆ ಮಕ್ಕಳಿಗೆ, ಪೋಷಕರಿಗೆ ವಿಮಾನಯಾನ ಭಾಗ್ಯ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​
ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​