AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯಾದಗಿರಿ ಜನರಿಗೆ ವರದಾನವಾದ ಇಸ್ರೇಲ್​ನಿಂದ ಬಂದ ಆಕ್ಸಿಜನ್ ಕಂಟೇನರ್

ಇಸ್ರೇಲ್​ನಿಂದ ಬಂದ ಆಕ್ಸಿಜನ್ ಕಂಟೇನರ್​ ಯಾದಗಿರಿ ಜಿಲ್ಲಾ ಕೊವಿಡ್ ಆಸ್ಪತ್ರೆ ಬಳಿ ಅಳವಡಿಸಲಾಗಿದೆ. ನಿತ್ಯ 50 ರಿಂದ 60 ರೋಗಿಗಳಿಗೆ ನಿರಂತರ ಆಕ್ಸಿಜನ್ ಪೂರೈಕೆ ಮಾಡುವ ಸಾಮರ್ಥ್ಯ ಹೊಂದಿದೆ. ಕಂಟೇನರ್​ನಿಂದ ದಿನದ 24 ಗಂಟೆಗಳ ಕಾಲ ಆಕ್ಸಿಜನ್ ಉತ್ಪಾದನೆ ಆಗುತ್ತಿದೆ.

ಯಾದಗಿರಿ ಜನರಿಗೆ ವರದಾನವಾದ ಇಸ್ರೇಲ್​ನಿಂದ ಬಂದ ಆಕ್ಸಿಜನ್ ಕಂಟೇನರ್
ಆಕ್ಸಿಜನ್ ಕಂಟೇನರ್
sandhya thejappa
|

Updated on: May 25, 2021 | 12:33 PM

Share

ಯಾದಗಿರಿ: ಆಕ್ಸಿಜನ್ ಸಿಗದೆ ಕೊರೊನಾ ಸೋಂಕಿತರು ಕಂಗಾಲಾಗಿದ್ದರು. ಆದರೆ ಇಸ್ರೇಲ್ನಿಂದ ಬಂದ ಆಕ್ಸಿಜನ್ ಕಂಟೇನರ್ ಜಿಲ್ಲೆಯ ಜನರಿಗೆ ವರದಾನವಾಗಿದೆ. ಇಸ್ರೇಲ್ ಸರ್ಕಾರ ಆಕ್ಸಿಜನ್ ಕಂಟೇನರ್​ ದಾನವಾಗಿ ನೀಡಿತ್ತು. ನೀಡಿದ್ದ ಕಂಟೇನರ್ ಆಕ್ಸಿಜನ್ ಸಮಸ್ಯೆಯನ್ನು ನೀಗಿಸಿದೆ. ಆಕ್ಸಿಜನ್ ಕಂಟೇನರ್ ನಿಮಿಷಕ್ಕೆ 1,500 ಲೀಟರ್ ಆಕ್ಸಿಜನ್ ಉತ್ಪಾದನೆ ಮಾಡುತ್ತದೆ. ಕಳೆದ ಮೂರು ದಿನಗಳಿಂದ ನಿರಂತರವಾಗಿ ಆಕ್ಸಿಜನ್ ಉತ್ಪಾದನೆ ಆಗುತ್ತಿದೆ.

ಇಸ್ರೇಲ್​ನಿಂದ ಬಂದ ಆಕ್ಸಿಜನ್ ಕಂಟೇನರ್​ ಯಾದಗಿರಿ ಜಿಲ್ಲಾ ಕೊವಿಡ್ ಆಸ್ಪತ್ರೆ ಬಳಿ ಅಳವಡಿಸಲಾಗಿದೆ. ನಿತ್ಯ 50 ರಿಂದ 60 ರೋಗಿಗಳಿಗೆ ನಿರಂತರ ಆಕ್ಸಿಜನ್ ಪೂರೈಕೆ ಮಾಡುವ ಸಾಮರ್ಥ್ಯ ಹೊಂದಿದೆ. ಕಂಟೇನರ್​ನಿಂದ ದಿನದ 24 ಗಂಟೆಗಳ ಕಾಲ ಆಕ್ಸಿಜನ್ ಉತ್ಪಾದನೆ ಆಗುತ್ತಿದ್ದು, ಜಿಲ್ಲಾ ಕೊವಿಡ್ ಆಸ್ಪತ್ರೆಯಲ್ಲಿ ಸದ್ಯ 123 ಮಂದಿ ಸೋಂಕಿತರು ಆಕ್ಸಿಜನ್ ಬೆಡ್​ಗಳ ಮೇಲೆ ಚಿಕಿತ್ಸೆ ಪಡೆಯುತ್ತಿದ್ದಾರೆ.

300 ಬೆಡ್ಗಳ ಸಾಮರ್ಥ್ಯ ಉಳ್ಳ ಆಸ್ಪತ್ರೆಯಲ್ಲಿ 140 ಬೆಡ್ಗಳಿಗೆ ಆಕ್ಸಿಜನ್ ಸಪ್ಲೈ ಇದೆ. ಇದೆ ಮೇ 11 ರಂದು ಇಸ್ರೇಲ್ನಿಂದ ಆಕ್ಸಿಜನ್ ಕಂಟೇನರ್ ಯಾದಗಿರಿಗೆ ಬಂದಿತ್ತು. ಕಂಟೇನರ್ ಬಂದ 10 ದಿನಗಳ ಬಳಿಕ ಆಕ್ಸಿಜನ್ ಉತ್ಪಾದನೆ ಆರಂಭವಾಗಿದೆ. ಇಸ್ರೇಲ್​ನಿಂದ ದೇಶಕ್ಕೆ ಮೂರು ಕಂಟೇನರ್ ನೀಡಲಾಗಿದೆ. ಅದರಲ್ಲಿ ಎರಡು ನಮ್ಮ ರಾಜ್ಯಕ್ಕೆ ಕೊಡಲಾಗಿದೆ. ಒಂದು ಯಾದಗಿರಿ ಮತ್ತು ಇನ್ನೊಂದು ಕೋಲಾರ ಜಿಲ್ಲೆಗೆ ನೀಡಲಾಗಿದೆ.

ಬೆಂಗಳೂರಿನ ಭಾರತಿ ಆಸ್ಪತ್ರೆಯಲ್ಲಿ ಬೇಜವಾಬ್ದಾರಿ ವರ್ತನೆ; ಪೊಲೀಸರ ತನಿಖೆ ವೇಳೆ ಮುಖವಾಡ ಬಯಲು

ಸೋಷಿಯಲ್ ಮೀಡಿಯಾ, ಒಟಿಟಿಗೆ ಹೊಸ ಕಾನೂನು; ಟ್ವಿಟ್ಟರ್, ಫೇಸ್​ಬುಕ್ ಕೆಲಸ ಮಾಡೋದು ನಿಲ್ಲಿಸುತ್ತಾ?

(oxygen container provided by Israeli government is very helpful to Yadgir people)

Follow Us
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್