Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೇರಳದಿಂದ ಪೂರೈಕೆಯಾಗುತ್ತಿದ್ದ ಆಕ್ಸಿಜನ್ ಬಂದ್; ಮಂಗಳೂರಿನಲ್ಲಿ ಹೆಚ್ಚಿದ ಆತಂಕ

ಕೇರಳದ ಪಾಲಕ್ಕಾಡ್ ಮತ್ತು ಕಾರ್ನಾಡಿನಿಂದ ಆಕ್ಸಿಜನ್ ಪೂರೈಕೆಯಾಗುತ್ತಿತ್ತು. ಆದರೆ ಅದನ್ನು ಈಗ ಇದ್ದಕ್ಕಿದ್ದ ಹಾಗೆ ನಿಲ್ಲಿಸಲಾಗಿದೆ. ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಿಗೆ ಕೇರಳಿಂದ ಬಂದ ಆಕ್ಸಿಜನ್ ರಿಫಿಲ್ ಸಪ್ಲೇಯಾಗುತ್ತಿತ್ತು. ಆದರೆ ಇದನ್ನು ಕೇರಳ ಕಂಪೆನಿಗಳು ಬಂದ್ ಮಾಡಿದೆ.

ಕೇರಳದಿಂದ ಪೂರೈಕೆಯಾಗುತ್ತಿದ್ದ ಆಕ್ಸಿಜನ್ ಬಂದ್; ಮಂಗಳೂರಿನಲ್ಲಿ ಹೆಚ್ಚಿದ ಆತಂಕ
ಆಕ್ಸಿಜನ್ ಸಿಲಿಂಡರ್ (ಪ್ರಾತಿನಿಧಿಕ ಚಿತ್ರ)
Follow us
preethi shettigar
|

Updated on: May 04, 2021 | 3:12 PM

ಮಂಗಳೂರು: ಕೊರೊನಾ ಎರಡನೇ ಅಲೆ ದಿನದಿಂದ ದಿನಕ್ಕೆ ತೀವ್ರವಾಗುತ್ತಿದೆ. ಸೋಂಕಿತರ ಸಂಖ್ಯೆಯಲ್ಲಿ ಹೆಚ್ಚಳ ಕಂಡುಬಂದಿದ್ದು, ಸಾವಿನ ಸಂಖ್ಯೆಯಲ್ಲೂ ಕೂಡ ಏರಿಕೆಯಾಗಿದೆ. ಇಷ್ಟೇ ಅಲ್ಲದೇ ಚಾಮರಾಜನಗರ ಜಿಲ್ಲೆಯಲ್ಲಿ ಆದ ದುರುಂತ ರಾಜ್ಯಕ್ಕೆ ಎಚ್ಚರಿಕೆಯ ಗಂಟೆಯಾಗಿದೆ. ಆಕ್ಸಿಜನ್ ಪೂರೈಕೆಯಾಗದೆ ಇನ್ನು ಅದೆಷ್ಟು ದುರುಂತಗಳನ್ನು ನೋಡಬೇಕೋ ಎನ್ನುವ ಸದ್ಯ ಆತಂಕ ಸೃಷ್ಟಿಯಾಗಿದೆ. ಈ ಆತಂಕ್ಕೆ ಪ್ರಮುಖ ಕಾರಣ ಈಗಾಗಲೇ ಕರ್ನಾಟಕಕ್ಕೆ ಇತರ ರಾಜ್ಯಗಳಿಂದ ಪೂರೈಕೆಯಾಗುತ್ತಿದ್ದ ಆಕ್ಸಿಜನ್​ಅನ್ನು ನಿಲ್ಲಿಸಲಾಗಿದೆ ಎನ್ನುವ ಕೂಗು ಕೇಳಿ ಬಂದಿರುವುದೇ ಆಗಿದೆ.

ದಕ್ಷಿಣ ಕನ್ನಡ ಜಿಲ್ಲೆಗೆ ಸದ್ಯದ ಪರಿಸ್ಥಿತಿಯಲ್ಲಿ 15 ಟನ್​ನಷ್ಟು ಆಕ್ಸಿಜನ್ ರಿಕ್ವಾರ್ಮೆಂಟ್ ಇದೆ. ಆದರೆ ಈಗ ಇಲ್ಲಿರೋದು ಕೇವಲ 15 ಟನ್ ಆಕ್ಸಿಜನ್. ಅಂದರೆ 24 ಗಂಟೆಗಳಿಗಾಗುವಷ್ಟು ಆಕ್ಸಿಜನ್ ಮಾತ್ರ ಲಭ್ಯವಿದೆ. ಪ್ರತಿನಿತ್ಯ ಆಕ್ಸಿಜನ್ ಪೂರೈಕೆಯಾಗುತ್ತಿತ್ತು. ಈ ಕಾರಣದಿಂದ ಯಾವುದೇ ಆತಂಕ ಇರಲಿಲ್ಲ. ಆದರೆ ಈ ಮಧ್ಯೆ ಆದ ಒಂದು ಬೆಳವಣಿಗೆ ಈಗ ಕರಾವಳಿ ಭಾಗಕ್ಕೆ ಆತಂಕ ಉಂಟು ಮಾಡುವಂತೆ ಮಾಡಿದೆ.

ಕೇರಳದ ಪಾಲಕ್ಕಾಡ್ ಮತ್ತು ಕಾರ್ನಾಡಿನಿಂದ ಆಕ್ಸಿಜನ್ ಪೂರೈಕೆಯಾಗುತ್ತಿತ್ತು. ಆದರೆ ಅದನ್ನು ಈಗ ಇದ್ದಕ್ಕಿದ್ದ ಹಾಗೆ ನಿಲ್ಲಿಸಲಾಗಿದೆ. ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಿಗೆ ಕೇರಳಿಂದ ಬಂದ ಆಕ್ಸಿಜನ್ ರಿಫಿಲ್ ಸಪ್ಲೇಯಾಗುತ್ತಿತ್ತು. ಆದರೆ ಇದನ್ನು ಕೇರಳ ಕಂಪೆನಿಗಳು ಬಂದ್ ಮಾಡಿದೆ. ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ತಮ್ಮ ಪ್ರಭಾವ ಬಳಸಿ ಕಳೆದ ಒಂದಷ್ಟು ದಿನದಿಂದ ಆಕ್ಸಿಜನ್ ತರಿಸುತ್ತಿದ್ದರು. ಆದರೆ ಈಗ ಅವರಿಗೂ ಕಂಪನಿಗಳು ಸಹಕಾರ ನೀಡುತ್ತಿಲ್ಲ. ಕರ್ನಾಟಕಕ್ಕೆ 20 ಟನ್ ಪೂರೈಕೆ ಮಾಡುವಂತೆ ಆದೇಶವಾಗಿದೆ. ಆದ್ದರಿಂದ ನಿಮ್ಮ ಸರ್ಕಾರದಿಂದ ಅನುಮತಿ ಕೇಳಿ ಆಕ್ಸಿಜನ್ ಪಡೆಯಿರಿ ಎಂದು ಹೇಳಲಾಗಿದೆ ಎಂದು ಮೂಲಗಳು ತಿಳಿಸಿವೆ.

ಸದ್ಯ ಆಕ್ಸಿಜನ್ ಪ್ರತಿನಿತ್ಯ ಬಳ್ಳಾರಿಯಿಂದ ಬರುತ್ತಿದೆ. ಅದರಿಂದಲೇ ಸಂಬಾಳಿಸಲಾಗುತ್ತಿದೆ. ಇಷ್ಟು ದಿನಗಳ ಕಾಲ ಖಾಸಗಿ ಆಸ್ಪತ್ರೆಯವರಿಗೂ ಸರಿಯಾಗಿ ಆಕ್ಸಿಜನ್ ಪೂರೈಕೆ ಇತ್ತು. ಆದರೆ ಇನ್ನು ಮುಂದೆ ಕೆ.ಪಿ.ಎಮ್.ಇ ನಲ್ಲಿ ರಿಜಿಸ್ಟರ್ ಮಾಡಿ ನೇರವಾಗಿ ಸರ್ಕಾರದಿಂದ ಆಕ್ಸಿಜನ್ ಪಡೆದುಕೊಳ್ಳಬೇಕು ಎಂದು ಆದೇಶವಾಗಿದೆ. ಆದ್ದರಿಂದ ಆಕ್ಸಿಜನ್ ಪರಿಸ್ಥಿತಿ ಇನ್ನು ಕೂಡ ಬಿಗಡಾಯಿಸುವ ಸಾಧ್ಯತೆ ಇದೆ ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇದ್ರ ಹೇಳಿದ್ದಾರೆ.

ಈ ಮಧ್ಯೆ ಜಿಲ್ಲಾಡಳಿತ ಮತ್ತು ಇಲ್ಲಿನ ಜನಪ್ರತಿನಿಧಿಗಳು ಕೇರಳದಿಂದ ಆಕ್ಸಿಜನ್ ಪೂರೈಕೆ ಬಂದ್ ಆಗಿರುವ ವಿಚಾರವನ್ನು ಸರ್ಕಾರದ ಗಮನಕ್ಕೆ ತಂದಿದ್ದು, ಹೆಚ್ಚುವರಿ ಆಕ್ಸಿಜನ್​ಗೆ ಬೇಡಿಕೆ ಇಟ್ಟಿದ್ದಾರೆ. ಸದ್ಯ ಕರಾವಳಿ ಭಾಗಕ್ಕೆ ಇತರ ಜಿಲ್ಲೆಗಳಿಂದ ಕೂಡ ರೋಗಿಗಳು ಬರುತ್ತಾರೆ. ಆದರೆ ಬೇರೆ ಬೇರೆ ರಾಜ್ಯಗಳಿಂದ ಪೂರೈಕೆ ಮಾಡುತ್ತಿದ್ದ ಆಕ್ಸಿಜನ್ ಪೂರೈಕೆ ಕೂಡ ಬಂದ್ ಆಗಿದೆ. ಸದ್ಯ ಈ ಎಲ್ಲವನ್ನು ಸರಿಯಾಗಿ ನಿಭಾಯಿಸುವ ಜವಬ್ದಾರಿ ಸರ್ಕಾರ ಮತ್ತು ಜಿಲ್ಲಾಢತದ್ದಾಗಿದೆ.

ಇದನ್ನೂ ಓದಿ:

ಕೊರೊನಾ: ತುಮಕೂರಿನಲ್ಲಿ 6 ತಿಂಗಳ ಹಿಂದಷ್ಟೇ ಮದುವೆಯಾಗಿದ್ದ ವ್ಯಕ್ತಿ ಬಲಿ, ನೇಣು ಬಿಗಿದುಕೊಂಡು ಶ್ರೀರಂಗಪಟ್ಟಣದಲ್ಲಿ ಮತ್ತೊಬ್ಬ ಸಾವು

ಸ್ವಂತ ಹಣದಲ್ಲಿ ಮಂಡ್ಯ ಜನರಿಗೆ ನಿತ್ಯ 2 ಸಾವಿರ ಲೀಟರ್ ಆಕ್ಸಿಜನ್‌ ನೀಡಲು ನಿರ್ಧಾರ: ಸಂಸದೆ ಸುಮಲತಾ

ಕುಟುಂಬ, ಮಕ್ಕಳು, ಸಿನಿಮಾ ಇತ್ಯಾದಿ.. ಮಗಳೊಟ್ಟಿಗೆ ಮಾತಿಗೆ ಕೂತ ಶಿವಣ್ಣ
ಕುಟುಂಬ, ಮಕ್ಕಳು, ಸಿನಿಮಾ ಇತ್ಯಾದಿ.. ಮಗಳೊಟ್ಟಿಗೆ ಮಾತಿಗೆ ಕೂತ ಶಿವಣ್ಣ
ಜೆಡಿಎಸ್ ಈಗಲೂ ಕರ್ನಾಟಕದಲ್ಲಿ ಸಾಕಷ್ಟು ಬಲಾಢ್ಯ: ನಿಖಿಲ್ ಕುಮಾರಸ್ವಾಮಿ
ಜೆಡಿಎಸ್ ಈಗಲೂ ಕರ್ನಾಟಕದಲ್ಲಿ ಸಾಕಷ್ಟು ಬಲಾಢ್ಯ: ನಿಖಿಲ್ ಕುಮಾರಸ್ವಾಮಿ
ವಕ್ಫ್ ತಿದ್ದುಪಡಿ ಕಾಯ್ದೆ ಕುರಿತು ಜಮ್ಮು ಕಾಶ್ಮೀರದ ವಿಧಾನಸಭೆಯಲ್ಲಿ ಗಲಾಟೆ
ವಕ್ಫ್ ತಿದ್ದುಪಡಿ ಕಾಯ್ದೆ ಕುರಿತು ಜಮ್ಮು ಕಾಶ್ಮೀರದ ವಿಧಾನಸಭೆಯಲ್ಲಿ ಗಲಾಟೆ
Video: ಕಚ್ಚಿದ್ದಕ್ಕೆ ಬೀದಿ ನಾಯಿಯನ್ನು ಗುಂಡಿಕ್ಕಿ ಕೊಂದ ವ್ಯಕ್ತಿ
Video: ಕಚ್ಚಿದ್ದಕ್ಕೆ ಬೀದಿ ನಾಯಿಯನ್ನು ಗುಂಡಿಕ್ಕಿ ಕೊಂದ ವ್ಯಕ್ತಿ
ಬೀದರ್ ಮತ್ತು ಕಲಬುರಗಿ ದರೋಡೆ ಪ್ರಕರಣಗಳ ನಡುವೆ ಲಿಂಕ್ ಇರೋ ಸಾಧ್ಯತೆ
ಬೀದರ್ ಮತ್ತು ಕಲಬುರಗಿ ದರೋಡೆ ಪ್ರಕರಣಗಳ ನಡುವೆ ಲಿಂಕ್ ಇರೋ ಸಾಧ್ಯತೆ
ಸಮಾಜ ಸ್ವಾಮೀಜಿಯನ್ನು ಕಡೆಗಣಿಸಿಲಾರಂಭಿಸಿದರೆ ಅಚ್ಚರಿಯಿಲ್ಲ: ವಿಜುಗೌಡ
ಸಮಾಜ ಸ್ವಾಮೀಜಿಯನ್ನು ಕಡೆಗಣಿಸಿಲಾರಂಭಿಸಿದರೆ ಅಚ್ಚರಿಯಿಲ್ಲ: ವಿಜುಗೌಡ
2 ಬಾರಿ ಫೈನ್ ಕಟ್ಟಿದ ಬಳಿಕ ಹೊಸ ಸೆಲೆಬ್ರೇಷನ್ ಪರಿಚಯಿಸಿದ ದಿಗ್ವೇಶ್ ರಾಠಿ
2 ಬಾರಿ ಫೈನ್ ಕಟ್ಟಿದ ಬಳಿಕ ಹೊಸ ಸೆಲೆಬ್ರೇಷನ್ ಪರಿಚಯಿಸಿದ ದಿಗ್ವೇಶ್ ರಾಠಿ
ಅಧಿವೇಶನದ ಬಗ್ಗೆ ಬೆಂಗಳೂರಲ್ಲಿ ಬ್ರೀಫ್ ಮಾಡಿದ್ದ ಮಲ್ಲಿಕಾರ್ಜುನ ಖರ್ಗೆ
ಅಧಿವೇಶನದ ಬಗ್ಗೆ ಬೆಂಗಳೂರಲ್ಲಿ ಬ್ರೀಫ್ ಮಾಡಿದ್ದ ಮಲ್ಲಿಕಾರ್ಜುನ ಖರ್ಗೆ
ದಾಳಿಗೆ ಬಂದ ಚಿರತೆಯಿಂದ ಬಾಲಕನನ್ನು ರಕ್ಷಿಸಿದ ಶ್ವಾನಗಳು
ದಾಳಿಗೆ ಬಂದ ಚಿರತೆಯಿಂದ ಬಾಲಕನನ್ನು ರಕ್ಷಿಸಿದ ಶ್ವಾನಗಳು
ಕೊಕ್ಕನೂರ ಆಂಜನೇಯ ಉತ್ಸವದಲ್ಲಿ ಗಮನ ಸೆಳೆದ ಗರಿ ಗರಿ ನೋಟಿನ‌ ಪಲ್ಲಕ್ಕಿ
ಕೊಕ್ಕನೂರ ಆಂಜನೇಯ ಉತ್ಸವದಲ್ಲಿ ಗಮನ ಸೆಳೆದ ಗರಿ ಗರಿ ನೋಟಿನ‌ ಪಲ್ಲಕ್ಕಿ