AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Oxygen Emergency: ತುಮಕೂರು, ಮಂಡ್ಯ ಖಾಸಗಿ ಆಸ್ಪತ್ರೆಗಳಲ್ಲಿ ಆಕ್ಸಿಜನ್ ಕೊರತೆ; ರೋಗಿಗಳು ಕಂಗಾಲು

ಅಸಹಾಯಕ ಸ್ಥಿತಿಯಲ್ಲಿರುವ ರೋಗಿಗಳು ಮುಂದೇನು ಮಾಡಬೇಕು ಎಂದು ತೋಚದೆ ಕಂಗಾಲಾಗಿದ್ದಾರೆ. ರಾಜ್ಯ ಸರ್ಕಾರ, ಜಿಲ್ಲಾಡಳಿತಗಳು ನೆರವಿಗೆ ಬರಬಹುದು ಎಂಬ ನಿರೀಕ್ಷೆಯಲ್ಲಿ ರೋಗಿಗಳ ಸಂಬಂಧಿಕರು ಕಾಯುತ್ತಿದ್ದಾರೆ.

Oxygen Emergency: ತುಮಕೂರು, ಮಂಡ್ಯ ಖಾಸಗಿ ಆಸ್ಪತ್ರೆಗಳಲ್ಲಿ ಆಕ್ಸಿಜನ್ ಕೊರತೆ; ರೋಗಿಗಳು ಕಂಗಾಲು
ತುಮಕೂರಿನ ಅಶ್ವಿನಿ ಆಸ್ಪತ್ರೆ
Ghanashyam D M | ಡಿ.ಎಂ.ಘನಶ್ಯಾಮ
|

Updated on:May 05, 2021 | 9:07 PM

Share

ಬೆಂಗಳೂರು: ತುಮಕೂರು ಮತ್ತು ಮಂಡ್ಯ ನಗರದ ಖಾಸಗಿ ಆಸ್ಪತ್ರೆಗಳಲ್ಲಿ ಬುಧವಾರ ವೈದ್ಯಕೀಯ ಆಮ್ಲಜನಕದ ಕೊರತೆ ಕಾಣಿಸಿಕೊಂಡಿದ್ದು, ರೋಗಿಗಳನ್ನು ತುರ್ತಾಗಿ ಬೇರೆಡೆಗೆ ಕರೆದೊಯ್ಯುವಂತೆ ಆಸ್ಪತ್ರೆ ಸಿಬ್ಬಂದಿ ಸೂಚಿಸುತ್ತಿದ್ದಾರೆ. ಈಗಾಗಲೇ ಅಸಹಾಯಕ ಸ್ಥಿತಿಯಲ್ಲಿರುವ ರೋಗಿಗಳು ಮುಂದೇನು ಮಾಡಬೇಕು ಎಂದು ತೋಚದೆ ಕಂಗಾಲಾಗಿದ್ದಾರೆ. ರಾಜ್ಯ ಸರ್ಕಾರ, ಜಿಲ್ಲಾಡಳಿತಗಳು ನೆರವಿಗೆ ಬರಬಹುದು ಎಂಬ ನಿರೀಕ್ಷೆಯಲ್ಲಿ ರೋಗಿಗಳ ಸಂಬಂಧಿಕರು ಕಾಯುತ್ತಿದ್ದಾರೆ.

ಆಕ್ಸಿಜನ್​ ಕೊರತೆ ಹಿನ್ನೆಲೆಯಲ್ಲಿ ತುಮಕೂರಿನಲ್ಲಿ ಅಶ್ವಿನಿ ಆಸ್ಪತ್ರೆಯಲ್ಲಿ ರೋಗಿಗಳನ್ನು ತೆರವುಗೊಳಿಸಲು ಸಿಬ್ಬಂದಿ ಮುಂದಾಗಿದ್ದಾರೆ. ರಾತ್ರಿ 12 ಗಂಟೆಯ ಒಳಗೆ ಆಸ್ಪತ್ರೆ ಖಾಲಿ ಮಾಡುವಂತೆ ರೋಗಿಗಳಿಗೆ ಸೂಚನೆ ನೀಡಲಾಗಿದೆ. ಈ ಆಸ್ಪತ್ರೆಯಲ್ಲಿ 60ಕ್ಕೂ ಹೆಚ್ಚು ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ. ಆಸ್ಪತ್ರೆ ಸಿಬ್ಬಂದಿ ನೀಡಿರುವ ಸೂಚನೆಯಿಂದ ರೋಗಿಗಳು ಮತ್ತು ಅವರ ಸಂಬಂಧಿಗಳು ಪರದಾಡುವಂತಾಗಿದೆ.

ಮಂಡ್ಯದಲ್ಲಿಯೂ ಮೆಡಿಕಲ್​ ಆಕ್ಸಿಜನ್​ ಸಮಸ್ಯೆಯಿಂದ ಇಂಥದ್ದೇ ಸಮಸ್ಯೆ ತಲೆದೋರಿದೆ. ಖಾಸಗಿ ಆಸ್ಪತ್ರೆಯಲ್ಲಿ ಕೆಲವೇ ಗಂಟೆಯಲ್ಲಿ ಆಕ್ಸಿಜನ್​ ಖಾಲಿಯಾಗಲಿದೆ ಎಂಬ ಆತಂಕದ ಸೂಚನೆಯನ್ನು ಸಿಬ್ಬಂದಿ ನೀಡುತ್ತಿದ್ದಾರೆ. ಮೈಸೂರಿಂದ ಇಂದು ಬರಬೇಕಿದ್ದ ಆಕ್ಸಿಜನ್​ ಬಾರದ ಹಿನ್ನೆಲೆಯಲ್ಲಿ ಆಸ್ಪತ್ರೆಯಲ್ಲಿ ಸಮಸ್ಯೆಯಾಗಿದೆ. ಜಿಲ್ಲಾಡಳಿತಕ್ಕೆ ತಿಳಿಸಿದ್ರೂ ಕ್ರಮ ತೆಗೆದುಕೊಂಡಿಲ್ಲ ಎಂದು ಹೆಸರು ಹೇಳಲು ಇಚ್ಛಿಸದ ಆಸ್ಪತ್ರೆ ಸಿಬ್ಬಂದಿಯೊಬ್ಬರು ತಿಳಿಸಿದರು. ಈಗಾಗಲೇ ನಾಲ್ವರು ರೋಗಿಗಳನ್ನು ಸಂಬಂಧಿಕರು ಬೇರೆಡೆಗೆ ಕರೆದೊಯ್ದಿದ್ದಾರೆ. ಆದರೆ ಉಳಿದವರಿಗೆ ಎಲ್ಲಿಗೆ ಹೋಗಬೇಕೆಂಬ ಗೊಂದಲ ಕಾಡುತ್ತಿದೆ. ಅಧಿಕಾರಿಗಳು ಅಸಹಾಯಕತೆ ವ್ಯಕ್ತಪಡಿಸುತ್ತಿದ್ದಾರೆ.

ಆಕ್ಸಿಜನ್ ಕೊಟ್ಟ ತುಮಕೂರು ಡಿಎಚ್​ಒ ಕಚೇರಿ ತುಮಕೂರಿನ ಅಶ್ವಿನಿ ಆಸ್ಪತ್ರೆಯಲ್ಲಿ ಆಕ್ಸಿಜನ್​ ಕೊರತೆಯಿಂದ ತುರ್ತು ಪರಿಸ್ಥಿತಿ ಎದುರಾಗಿರುವುದನ್ನು ಗಮನಿಸಿದ ಜಿಲ್ಲಾ ವೈದ್ಯಾಧಿಕಾರಿ ಕಚೇರಿ 80 ಜಂಬೋ ಆಕ್ಸಿಜನ್ ಸಿಲಿಂಡರ್ ಪೂರೈಕೆ ಮಾಡಿ, 37 ಸೋಂಕಿತರ ಜೀವ ಕಾಪಾಡಿದೆ.

(Oxygen Emergency in Tumkur and Mandya Private Hospitals Treating covid patients SOS call sent)

ಇದನ್ನೂ ಓದಿ: ಆಕ್ಸಿಜನ್ ಇಲ್ಲದೆ ರೋಗಿಗಳ ಸಾವು: ಚಾಮರಾಜನಗರ ದುರಂತದ ನ್ಯಾಯಾಂಗ ತನಿಖೆಗೆ ಕರ್ನಾಟಕ ಸರ್ಕಾರ ಆದೇಶ

ಇದನ್ನೂ ಓದಿ: Covid-19 Karnataka Update: ಕರ್ನಾಟಕದಲ್ಲಿ ಒಂದೇ ದಿನ 50 ಸಾವಿರಕ್ಕೂ ಹೆಚ್ಚು ಮಂದಿಗೆ ಕೊರೊನಾ ಸೋಂಕು, ಇದು ಈವರೆಗಿನ ದಾಖಲೆ

Published On - 9:03 pm, Wed, 5 May 21

ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ
ಬಿಗ್ ಬಾಸ್ ಮುಗಿದ ಬಳಿಕ ಬರಲಿರೋ ಧಾರಾವಾಹಿ ಯಾವುದು? ಪ್ರೋಮೋ ರಿಲೀಸ್
ಬಿಗ್ ಬಾಸ್ ಮುಗಿದ ಬಳಿಕ ಬರಲಿರೋ ಧಾರಾವಾಹಿ ಯಾವುದು? ಪ್ರೋಮೋ ರಿಲೀಸ್