Sign In

By signing in or creating an account, you agree with Associated Broadcasting Company's Terms & Conditions and Privacy Policy.

Oxygen Emergency: ತುಮಕೂರು, ಮಂಡ್ಯ ಖಾಸಗಿ ಆಸ್ಪತ್ರೆಗಳಲ್ಲಿ ಆಕ್ಸಿಜನ್ ಕೊರತೆ; ರೋಗಿಗಳು ಕಂಗಾಲು

ಅಸಹಾಯಕ ಸ್ಥಿತಿಯಲ್ಲಿರುವ ರೋಗಿಗಳು ಮುಂದೇನು ಮಾಡಬೇಕು ಎಂದು ತೋಚದೆ ಕಂಗಾಲಾಗಿದ್ದಾರೆ. ರಾಜ್ಯ ಸರ್ಕಾರ, ಜಿಲ್ಲಾಡಳಿತಗಳು ನೆರವಿಗೆ ಬರಬಹುದು ಎಂಬ ನಿರೀಕ್ಷೆಯಲ್ಲಿ ರೋಗಿಗಳ ಸಂಬಂಧಿಕರು ಕಾಯುತ್ತಿದ್ದಾರೆ.

Oxygen Emergency: ತುಮಕೂರು, ಮಂಡ್ಯ ಖಾಸಗಿ ಆಸ್ಪತ್ರೆಗಳಲ್ಲಿ ಆಕ್ಸಿಜನ್ ಕೊರತೆ; ರೋಗಿಗಳು ಕಂಗಾಲು
ತುಮಕೂರಿನ ಅಶ್ವಿನಿ ಆಸ್ಪತ್ರೆ
Follow us
Ghanashyam D M | ಡಿ.ಎಂ.ಘನಶ್ಯಾಮ
|

Updated on:May 05, 2021 | 9:07 PM

ಬೆಂಗಳೂರು: ತುಮಕೂರು ಮತ್ತು ಮಂಡ್ಯ ನಗರದ ಖಾಸಗಿ ಆಸ್ಪತ್ರೆಗಳಲ್ಲಿ ಬುಧವಾರ ವೈದ್ಯಕೀಯ ಆಮ್ಲಜನಕದ ಕೊರತೆ ಕಾಣಿಸಿಕೊಂಡಿದ್ದು, ರೋಗಿಗಳನ್ನು ತುರ್ತಾಗಿ ಬೇರೆಡೆಗೆ ಕರೆದೊಯ್ಯುವಂತೆ ಆಸ್ಪತ್ರೆ ಸಿಬ್ಬಂದಿ ಸೂಚಿಸುತ್ತಿದ್ದಾರೆ. ಈಗಾಗಲೇ ಅಸಹಾಯಕ ಸ್ಥಿತಿಯಲ್ಲಿರುವ ರೋಗಿಗಳು ಮುಂದೇನು ಮಾಡಬೇಕು ಎಂದು ತೋಚದೆ ಕಂಗಾಲಾಗಿದ್ದಾರೆ. ರಾಜ್ಯ ಸರ್ಕಾರ, ಜಿಲ್ಲಾಡಳಿತಗಳು ನೆರವಿಗೆ ಬರಬಹುದು ಎಂಬ ನಿರೀಕ್ಷೆಯಲ್ಲಿ ರೋಗಿಗಳ ಸಂಬಂಧಿಕರು ಕಾಯುತ್ತಿದ್ದಾರೆ.

ಆಕ್ಸಿಜನ್​ ಕೊರತೆ ಹಿನ್ನೆಲೆಯಲ್ಲಿ ತುಮಕೂರಿನಲ್ಲಿ ಅಶ್ವಿನಿ ಆಸ್ಪತ್ರೆಯಲ್ಲಿ ರೋಗಿಗಳನ್ನು ತೆರವುಗೊಳಿಸಲು ಸಿಬ್ಬಂದಿ ಮುಂದಾಗಿದ್ದಾರೆ. ರಾತ್ರಿ 12 ಗಂಟೆಯ ಒಳಗೆ ಆಸ್ಪತ್ರೆ ಖಾಲಿ ಮಾಡುವಂತೆ ರೋಗಿಗಳಿಗೆ ಸೂಚನೆ ನೀಡಲಾಗಿದೆ. ಈ ಆಸ್ಪತ್ರೆಯಲ್ಲಿ 60ಕ್ಕೂ ಹೆಚ್ಚು ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ. ಆಸ್ಪತ್ರೆ ಸಿಬ್ಬಂದಿ ನೀಡಿರುವ ಸೂಚನೆಯಿಂದ ರೋಗಿಗಳು ಮತ್ತು ಅವರ ಸಂಬಂಧಿಗಳು ಪರದಾಡುವಂತಾಗಿದೆ.

ಮಂಡ್ಯದಲ್ಲಿಯೂ ಮೆಡಿಕಲ್​ ಆಕ್ಸಿಜನ್​ ಸಮಸ್ಯೆಯಿಂದ ಇಂಥದ್ದೇ ಸಮಸ್ಯೆ ತಲೆದೋರಿದೆ. ಖಾಸಗಿ ಆಸ್ಪತ್ರೆಯಲ್ಲಿ ಕೆಲವೇ ಗಂಟೆಯಲ್ಲಿ ಆಕ್ಸಿಜನ್​ ಖಾಲಿಯಾಗಲಿದೆ ಎಂಬ ಆತಂಕದ ಸೂಚನೆಯನ್ನು ಸಿಬ್ಬಂದಿ ನೀಡುತ್ತಿದ್ದಾರೆ. ಮೈಸೂರಿಂದ ಇಂದು ಬರಬೇಕಿದ್ದ ಆಕ್ಸಿಜನ್​ ಬಾರದ ಹಿನ್ನೆಲೆಯಲ್ಲಿ ಆಸ್ಪತ್ರೆಯಲ್ಲಿ ಸಮಸ್ಯೆಯಾಗಿದೆ. ಜಿಲ್ಲಾಡಳಿತಕ್ಕೆ ತಿಳಿಸಿದ್ರೂ ಕ್ರಮ ತೆಗೆದುಕೊಂಡಿಲ್ಲ ಎಂದು ಹೆಸರು ಹೇಳಲು ಇಚ್ಛಿಸದ ಆಸ್ಪತ್ರೆ ಸಿಬ್ಬಂದಿಯೊಬ್ಬರು ತಿಳಿಸಿದರು. ಈಗಾಗಲೇ ನಾಲ್ವರು ರೋಗಿಗಳನ್ನು ಸಂಬಂಧಿಕರು ಬೇರೆಡೆಗೆ ಕರೆದೊಯ್ದಿದ್ದಾರೆ. ಆದರೆ ಉಳಿದವರಿಗೆ ಎಲ್ಲಿಗೆ ಹೋಗಬೇಕೆಂಬ ಗೊಂದಲ ಕಾಡುತ್ತಿದೆ. ಅಧಿಕಾರಿಗಳು ಅಸಹಾಯಕತೆ ವ್ಯಕ್ತಪಡಿಸುತ್ತಿದ್ದಾರೆ.

ಆಕ್ಸಿಜನ್ ಕೊಟ್ಟ ತುಮಕೂರು ಡಿಎಚ್​ಒ ಕಚೇರಿ ತುಮಕೂರಿನ ಅಶ್ವಿನಿ ಆಸ್ಪತ್ರೆಯಲ್ಲಿ ಆಕ್ಸಿಜನ್​ ಕೊರತೆಯಿಂದ ತುರ್ತು ಪರಿಸ್ಥಿತಿ ಎದುರಾಗಿರುವುದನ್ನು ಗಮನಿಸಿದ ಜಿಲ್ಲಾ ವೈದ್ಯಾಧಿಕಾರಿ ಕಚೇರಿ 80 ಜಂಬೋ ಆಕ್ಸಿಜನ್ ಸಿಲಿಂಡರ್ ಪೂರೈಕೆ ಮಾಡಿ, 37 ಸೋಂಕಿತರ ಜೀವ ಕಾಪಾಡಿದೆ.

(Oxygen Emergency in Tumkur and Mandya Private Hospitals Treating covid patients SOS call sent)

ಇದನ್ನೂ ಓದಿ: ಆಕ್ಸಿಜನ್ ಇಲ್ಲದೆ ರೋಗಿಗಳ ಸಾವು: ಚಾಮರಾಜನಗರ ದುರಂತದ ನ್ಯಾಯಾಂಗ ತನಿಖೆಗೆ ಕರ್ನಾಟಕ ಸರ್ಕಾರ ಆದೇಶ

ಇದನ್ನೂ ಓದಿ: Covid-19 Karnataka Update: ಕರ್ನಾಟಕದಲ್ಲಿ ಒಂದೇ ದಿನ 50 ಸಾವಿರಕ್ಕೂ ಹೆಚ್ಚು ಮಂದಿಗೆ ಕೊರೊನಾ ಸೋಂಕು, ಇದು ಈವರೆಗಿನ ದಾಖಲೆ

Published On - 9:03 pm, Wed, 5 May 21

ಬೆಳೆದುನಿಂತ ಅಡಿಕೆ ಸಸಿಗಳ ಮೇಲೆ ಅದೆಂಥ ವೈರತ್ವ ಅಂತ ಅರ್ಥವಾಗದು
ಬೆಳೆದುನಿಂತ ಅಡಿಕೆ ಸಸಿಗಳ ಮೇಲೆ ಅದೆಂಥ ವೈರತ್ವ ಅಂತ ಅರ್ಥವಾಗದು
ಫೋರ್ ಇಲ್ಲ, ಸಿಕ್ಸ್ ಅಂತು ಇಲ್ಲವೇ ಇಲ್ಲ: ಸುಮ್ಮನೆ ಕೂತ CSK ಚಿಯರ್​ಲೀಡರ್ಸ್
ಫೋರ್ ಇಲ್ಲ, ಸಿಕ್ಸ್ ಅಂತು ಇಲ್ಲವೇ ಇಲ್ಲ: ಸುಮ್ಮನೆ ಕೂತ CSK ಚಿಯರ್​ಲೀಡರ್ಸ್
‘ಬಾಯ್ಸ್ vs ಗರ್ಲ್ಸ್’ ವೇದಿಕೆ ಮೇಲೆ ರಜತ್​ ಕಾಲೆಳೆದ ಗರ್ಲ್ಸ್
‘ಬಾಯ್ಸ್ vs ಗರ್ಲ್ಸ್’ ವೇದಿಕೆ ಮೇಲೆ ರಜತ್​ ಕಾಲೆಳೆದ ಗರ್ಲ್ಸ್
ಗ್ಯಾರಂಟಿ ಯೋಜನೆಗಳ ವೈಫಲ್ಯದಿಂದ ಬೇಸತ್ತ ಜನ ಸಹ ಧರಣಿಯಲ್ಲಿ ಭಾಗಿ: ನಿಖಿಲ್
ಗ್ಯಾರಂಟಿ ಯೋಜನೆಗಳ ವೈಫಲ್ಯದಿಂದ ಬೇಸತ್ತ ಜನ ಸಹ ಧರಣಿಯಲ್ಲಿ ಭಾಗಿ: ನಿಖಿಲ್
ಅಧಿಕ ಹಣದ ಆಸೆಗಾಗಿ ಬಂಡೀಪುರ ಅರಣ್ಯ ಸಿಬ್ಬಂದಿಗಳಿಂದ ಮತ್ತೊಂದು ಎಡವಟ್ಟು
ಅಧಿಕ ಹಣದ ಆಸೆಗಾಗಿ ಬಂಡೀಪುರ ಅರಣ್ಯ ಸಿಬ್ಬಂದಿಗಳಿಂದ ಮತ್ತೊಂದು ಎಡವಟ್ಟು
ಶಾಸ್ತ್ರದ ಪ್ರಕಾರ ಗಂಡ ಹೆಂಡತಿ ಕಾರ್ಯಕ್ರಮಗಳಿಗೆ ಹೇಗೆ ಹೋಗಬೇಕು?
ಶಾಸ್ತ್ರದ ಪ್ರಕಾರ ಗಂಡ ಹೆಂಡತಿ ಕಾರ್ಯಕ್ರಮಗಳಿಗೆ ಹೇಗೆ ಹೋಗಬೇಕು?
Daily Horoscope: ಹುಣ್ಣಿಮೆ ದಿನದಂದು ಯಾವೆಲ್ಲಾ ರಾಶಿಗಳಿಗೆ ಅದೃಷ್ಟ
Daily Horoscope: ಹುಣ್ಣಿಮೆ ದಿನದಂದು ಯಾವೆಲ್ಲಾ ರಾಶಿಗಳಿಗೆ ಅದೃಷ್ಟ
ಮನೆಗೆ ಬೆಂಕಿ ಬಿದ್ದಾಗ ಮಕ್ಕಳನ್ನು ಕಾಪಾಡಲು ಅಮ್ಮ ಮಾಡಿದ ಸಾಹಸ ನೀವೇ ನೋಡಿ
ಮನೆಗೆ ಬೆಂಕಿ ಬಿದ್ದಾಗ ಮಕ್ಕಳನ್ನು ಕಾಪಾಡಲು ಅಮ್ಮ ಮಾಡಿದ ಸಾಹಸ ನೀವೇ ನೋಡಿ
ಬೆಂಗಳೂರು ನಗರದ ಹಲವೆಡೆ ಏಕಾಏಕಿ ಮಳೆ
ಬೆಂಗಳೂರು ನಗರದ ಹಲವೆಡೆ ಏಕಾಏಕಿ ಮಳೆ
ಶಿವಾಜಿ ಸಿನಿಮಾ ಈಗಲೇ ನಿಲ್ಲಿಸಿ: ರಿಷಬ್ ಶೆಟ್ಟಿಗೆ ವಾಟಾಳ್ ವಾರ್ನಿಂಗ್
ಶಿವಾಜಿ ಸಿನಿಮಾ ಈಗಲೇ ನಿಲ್ಲಿಸಿ: ರಿಷಬ್ ಶೆಟ್ಟಿಗೆ ವಾಟಾಳ್ ವಾರ್ನಿಂಗ್