AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಾಮರಾಜನಗರದಲ್ಲುಂಟಾದ ಪರಿಸ್ಥಿತಿ ಬೆಂಗಳೂರಿಗೂ ಬರಲಿದೆ: ಆತಂಕಕಾರಿ ಮಾಹಿತಿಯನ್ನೊಂದು ಬಿಚ್ಚಿಟ್ಟ ಫನಾ ಅಧ್ಯಕ್ಷ

ಬೆಂಗಳೂರಿನ ಎರಡು-ಮೂರು ಆಸ್ಪತ್ರೆಗಳು, ಚಿತ್ರದುರ್ಗ ಹಾಗೂ ಕಲಬುರ್ಗಿಯ ಒಂದೊಂದು ಆಸ್ಪತ್ರೆಗಳು ತಮ್ಮಲ್ಲಿ ಆಕ್ಸಿಜನ್​ ಖಾಲಿ ಆಗಿವೆ ಎಂದು ಸರ್ಕಾರಕ್ಕೆ ಮಾಹಿತಿ ನೀಡಿವೆ.

ಚಾಮರಾಜನಗರದಲ್ಲುಂಟಾದ ಪರಿಸ್ಥಿತಿ ಬೆಂಗಳೂರಿಗೂ ಬರಲಿದೆ: ಆತಂಕಕಾರಿ ಮಾಹಿತಿಯನ್ನೊಂದು ಬಿಚ್ಚಿಟ್ಟ ಫನಾ ಅಧ್ಯಕ್ಷ
ಪ್ರಾತಿನಿಧಿಕ ಚಿತ್ರ
Lakshmi Hegde
| Edited By: |

Updated on:May 03, 2021 | 5:30 PM

Share

ಬೆಂಗಳೂರು: ಚಾಮರಾಜನಗರದಲ್ಲಿ 24 ಗಂಟೆಯಲ್ಲಿ 24 ರೋಗಿಗಳು ಮೃತಪಟ್ಟಿದ್ದಾರೆ. ಅವರು ಮೃತಪಟ್ಟಿದ್ದು ಆಕ್ಸಿಜನ್​ ಕೊರತೆಯಿಂದ ಎಂದು ಹೇಳಲಾಗಿದ್ದರೂ, ಆಮ್ಲಜನಕವಿಲ್ಲದೆ ಮೃತಪಟ್ಟಿದ್ದು ಮೂರೇ ರೋಗಿಗಳು ಎಂದು ಆರೋಗ್ಯ ಸಚಿವರು ಹೇಳಿದ್ದಾರೆ. ಆದರೆ ಚಾಮರಾಜನಗರದ ಘಟನೆ ಒಂದು ಎಚ್ಚರಿಕೆ ಗಂಟೆಯಾಗಿದ್ದು, ಆತಂಕವನ್ನೂ ಸೃಷ್ಟಿಸಿದೆ. ಈ ಮಧ್ಯೆ ಖಾಸಗಿ ಆಸ್ಪತ್ರೆಗಳು ಮತ್ತು ನರ್ಸಿಂಗ್ ಹೋಂ ಒಕ್ಕೂಟದ (ಫನಾ) ಅಧ್ಯಕ್ಷ ಡಾ. ಪ್ರಸನ್ನ ಇನ್ನೊಂದು ಆತಂಕಕಾರಿ ಮಾಹಿತಿಯನ್ನು ನೀಡಿದ್ದಾರೆ.

ಚಾಮರಾಜನಗರಕ್ಕೆ ಉಂಟಾದ ಪರಿಸ್ಥಿತಿ ಬೆಂಗಳೂರಿಗೂ ಬರಲಿದೆ. ಯಾಕೆಂದರೆ ಬೆಂಗಳೂರಿಗೆ ಪ್ರತಿದಿನ 300 ಮೆಟ್ರಿಕ್​ ಟನ್​ಗಳಷ್ಟು ಆಮ್ಲಜನಕ ಬೇಕು. ಆದರೆ ಅರ್ಧದಷ್ಟು ಅಂದರೆ, 150 ಮೆಟ್ರಿಕ್​ ಟನ್​ಗಳಷ್ಟು ಮಾತ್ರ ಪೂರೈಕೆಯಾಗುತ್ತಿದೆ. ಹೀಗಾದರೆ ತುಂಬ ಗಂಭೀರ ಪರಿಸ್ಥಿತಿ ಎದುರಾಗಲಿದೆ ಎಂದು ಡಾ. ಪ್ರಸನ್ನ ಹೇಳಿದ್ದಾರೆ. ಅಲ್ಲದೆ, ಬೆಂಗಳೂರಿನಲ್ಲಿ ಇರುವ ಆಕ್ಸಿಜನ್​ ಕೊರತೆಯ ಬಗ್ಗೆ ರಾಜ್ಯ ಸರ್ಕಾರಕ್ಕೆ ತಿಳಿಸುತ್ತಲೇ ಇದ್ದೇವೆ. ಪತ್ರವನ್ನೂ ಬರೆದಿದ್ದೇವೆ. ಇನ್ನೂ ಸರ್ಕಾರ ಏನೂ ಕ್ರಮ ಕೈಗೊಂಡಿಲ್ಲ ಎಂದೂ ತಿಳಿಸಿದ್ದಾರೆ.

ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಆಕ್ಸಿಜನ್​ ಕೊರತೆ ಇಲ್ಲ ಎಂದು ಸರ್ಕಾರ ಹೇಳುತ್ತಲೇ ಇದೆ. ಆದರೆ ಚಾಮರಾಜನಗರದ ಘಟನೆ ರಾಜ್ಯಾದ್ಯಂತ ಭಯಕ್ಕೆ ಕಾರಣವಾಗಿದೆ. ಇದರ ಬೆನ್ನಲ್ಲೇ ಬೆಂಗಳೂರಿನ ಎರಡು-ಮೂರು ಆಸ್ಪತ್ರೆಗಳು, ಚಿತ್ರದುರ್ಗ ಹಾಗೂ ಕಲಬುರ್ಗಿಯ ಒಂದೊಂದು ಆಸ್ಪತ್ರೆಗಳು ತಮ್ಮಲ್ಲಿ ಆಕ್ಸಿಜನ್​ ಖಾಲಿ ಆಗಿವೆ ಎಂದು ಸರ್ಕಾರಕ್ಕೆ ಮಾಹಿತಿ ನೀಡಿವೆ. ಕೊವಿಡ್ ಸೋಂಕು ಉಲ್ಬಣಗೊಂಡ ಕಾರಣಕ್ಕೆ ಹೀಗೆ ಆಕ್ಸಿಜನ್, ಬೆಡ್, ಐಸಿಯು ಬೆಡ್​ಗಳ ಕೊರತೆ ಎದುರಾಗಿದೆ. ಆದರೆ ಒಂದು ನೈಜ ಚಿತ್ರಣ ಸಿಗದೆ ಜನರು ಕಂಗಾಲಾಗುವಂತಾಗಿದೆ.

ಇದನ್ನೂ ಓದಿ: ಚಾಮರಾಜನಗರ ದುರ್ಘಟನೆಗೆ ರಾಜ್ಯ ಸರ್ಕಾರವೇ ಹೊಣೆ, ಘಟನೆ ಬಗ್ಗೆ ನ್ಯಾಯಾಂಗ ತನಿಖೆಯಾಗಲಿ; ಸಿದ್ದರಾಮಯ್ಯ

ಫರ್ನಾಜ್​ ಶೆಟ್ಟಿ ಜೊತೆ ಬೋಲ್ಡ್​ ಪೋಸ್ಟರ್​ನಿಂದ ಗಮನ ಸೆಳೆದ ನಟ ವರುಣ್​ ಸಂದೇಶ್

Published On - 5:26 pm, Mon, 3 May 21

Follow Us
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಮಕ್ಕಳ ಗೆಟಪ್​​​ನಲ್ಲಿ ಬಂದು ಗಮನ ಸೆಳೆದ ಆ್ಯಂಕರ್ ಅನುಶ್ರೀ
ಮಕ್ಕಳ ಗೆಟಪ್​​​ನಲ್ಲಿ ಬಂದು ಗಮನ ಸೆಳೆದ ಆ್ಯಂಕರ್ ಅನುಶ್ರೀ
ಅಮೆರಿಕದಿಂದ ಇರಾನ್​ಗೆ 300 ಡಾಲರ್ ಆರ್ಥಿಕ ನೆರವು
ಅಮೆರಿಕದಿಂದ ಇರಾನ್​ಗೆ 300 ಡಾಲರ್ ಆರ್ಥಿಕ ನೆರವು