ಅನಂತಪುರದ ಆ ಸೋಂಕಿತನಿಗೆ ಮತ್ತೊಂದು ವಿಶೇಷತೆಯೂ ಇತ್ತು! ಆದ್ರೆ..

ಬೆಂಗಳೂರು: ಇಂದು ಬೆಂಗಳೂರಿನಲ್ಲಿ ಮೃತಪಟ್ಟ ಕೊರೊನಾ ಸೋಂಕಿತ P-796ಗೆ ಪ್ಲಾಸ್ಮಾ ಥೆರಪಿ ಮಾಡಲಾಗಿತ್ತು. ಇದು ರಾಜ್ಯದ ಮೊದಲ ಪ್ಲಾಸ್ಮಾ ಥೆರಪಿ ಆಗಿದೆ. ಪ್ಲಾಸ್ಮಾ ಥೆರಪಿ ಮಾಡಿದರೂ ಕೊರೊನಾ ಸೋಂಕಿತ ವ್ಯಕ್ತಿ ಬದುಕುಳಿಯಲಿಲ್ಲ. ಹೀಗಾಗಿ ರಾಜ್ಯದ ಮೊದಲ ಪ್ಲಾಸ್ಮಾ ಥೆರಪಿ ಫೆಲ್ಯೂರ್ ಆಯ್ತಾ ಎಂಬ ಅನುಮಾನ ಹುಟ್ಟಿದೆ. ಆಂಧ್ರದ ನೆಲ್ಲೂರಿನ ವ್ಯಕ್ತಿ P-796ತೀವ್ರ ಜ್ವರ ಹಾಗೂ ಶ್ವಾಸಕೋಶದ ತೊಂದರೆಯಿಂದ ಬಳಲುತ್ತಿದ್ದರು. ಬದುಕುವುದು ಕಷ್ಟ ಎಂದು ಅರಿತ ಮೇಲೆ ವಿಕ್ಟೋರಿಯಾ ಆಸ್ಪತ್ರೆಯ ತಜ್ಞರ ತಂಡ ಪ್ಲಾಸ್ಮಾ ಥೆರಪಿ ಮಾಡಿದ್ದರು. ಥೆರಪಿ […]

ಅನಂತಪುರದ ಆ ಸೋಂಕಿತನಿಗೆ ಮತ್ತೊಂದು ವಿಶೇಷತೆಯೂ ಇತ್ತು! ಆದ್ರೆ..
ಸಾಧು ಶ್ರೀನಾಥ್​

Updated on: May 14, 2020 | 11:44 AM

ಬೆಂಗಳೂರು: ಇಂದು ಬೆಂಗಳೂರಿನಲ್ಲಿ ಮೃತಪಟ್ಟ ಕೊರೊನಾ ಸೋಂಕಿತ P-796ಗೆ ಪ್ಲಾಸ್ಮಾ ಥೆರಪಿ ಮಾಡಲಾಗಿತ್ತು. ಇದು ರಾಜ್ಯದ ಮೊದಲ ಪ್ಲಾಸ್ಮಾ ಥೆರಪಿ ಆಗಿದೆ. ಪ್ಲಾಸ್ಮಾ ಥೆರಪಿ ಮಾಡಿದರೂ ಕೊರೊನಾ ಸೋಂಕಿತ ವ್ಯಕ್ತಿ ಬದುಕುಳಿಯಲಿಲ್ಲ. ಹೀಗಾಗಿ ರಾಜ್ಯದ ಮೊದಲ ಪ್ಲಾಸ್ಮಾ ಥೆರಪಿ ಫೆಲ್ಯೂರ್ ಆಯ್ತಾ ಎಂಬ ಅನುಮಾನ ಹುಟ್ಟಿದೆ.

ಆಂಧ್ರದ ನೆಲ್ಲೂರಿನ ವ್ಯಕ್ತಿ P-796ತೀವ್ರ ಜ್ವರ ಹಾಗೂ ಶ್ವಾಸಕೋಶದ ತೊಂದರೆಯಿಂದ ಬಳಲುತ್ತಿದ್ದರು. ಬದುಕುವುದು ಕಷ್ಟ ಎಂದು ಅರಿತ ಮೇಲೆ ವಿಕ್ಟೋರಿಯಾ ಆಸ್ಪತ್ರೆಯ ತಜ್ಞರ ತಂಡ ಪ್ಲಾಸ್ಮಾ ಥೆರಪಿ ಮಾಡಿದ್ದರು. ಥೆರಪಿ ಮಾಡಿದ್ರೂ ಸೋಂಕಿತನಲ್ಲಿ ಯಾವುದೆ ಚೇತರಿಕೆ ಕಂಡಿರಲಿಲ್ಲ. ಹಾಗಾದ್ರೆ ಭರವಸೆ ಮೂಡಿಸಿದ್ದ ಪ್ಲಾಸ್ಮಾ ಥೆರಪಿ ಸಕ್ಸಸ್ ಆಗಲಿಲ್ವಾ ಎಂಬ ಅನುಮಾನ ಕಾಡುತ್ತಿದೆ. ಸದ್ಯ P-796 ಹೃದಯಘಾತದಿಂದ ಮೃತಪಟ್ಟಿದ್ದಾರೆ ಎಂದು ವಿಕ್ಟೋರಿಯಾ ಮೂಲಗಳು ಮಾಹಿತಿ ನೀಡಿವೆ.

 

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us