ಪಾದರಾಯನಪುರ ಗೂಂಡಾಗಿರಿ: ಪ್ರಕರಣದ ತನಿಖೆ ಸಿಸಿಬಿಗೆ ವರ್ಗಾಯಿಸಿದ ಕಮಿಷನರ್

ಬೆಂಗಳೂರು: ಕೊರೊನಾ ಶಂಕಿತರನ್ನು ಕ್ವಾರಂಟೈನ್​ಗೆ ಶಿಫ್ಟ್ ಮಾಡಲು ಬಂದಿದ್ದ ಅಧಿಕಾರಿಗಳ ವಿರುದ್ಧ ಪಾದರಾಯನಪುರದಲ್ಲಿ ಕೆಲ ಗೂಂಡಾಗಳು ಹಲ್ಲೆ ನಡೆಸಿ ಗಲಾಟೆ ಮಾಡಿದ್ದರು. ಸುದೀರ್ಘ ತನಿಖೆಗೆಗಾಗಿ ಈ ಪ್ರಕರಣವನ್ನ ಸಿಸಿಬಿ ಪೊಲೀಸರಿಗೆ ವರ್ಗಾಯಿಸಲಾಗಿದೆ. ಕಾನೂನು ಸುವ್ಯವಸ್ಥೆ ಕರ್ತವ್ಯಕ್ಕೆ ಪಶ್ಚಿಮ ವಿಭಾಗ ಪೊಲೀಸರ ಅಗತ್ಯ ಹಿನ್ನೆಲೆಯಲ್ಲಿ ಸಿಸಿಬಿಗೆ ವರ್ಗಾಯಿಸಲಾಗಿದೆ. ಜಂಟಿ ಪೊಲೀಸ್ ಆಯುಕ್ತ ಸಂದೀಪ್ ಪಾಟೀಲ್ ನೇತೃತ್ವದಲ್ಲಿ 12 ಇನ್ಸ್​ಪೆಕ್ಟರ್ಸ್​, ಮೂವರು ಎಸಿಪಿಗಳಿಂದ ತನಿಖೆ ನಡೆಸಲು ಬೆಂಗಳೂರು ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಸೂಚಿಸಿದ್ದಾರೆ. ಎರಡು ಗಂಟೆಗಳ ಹಿಂದೆ ಕೇಸ್ […]

ಪಾದರಾಯನಪುರ ಗೂಂಡಾಗಿರಿ: ಪ್ರಕರಣದ ತನಿಖೆ ಸಿಸಿಬಿಗೆ ವರ್ಗಾಯಿಸಿದ ಕಮಿಷನರ್
ಭಾಸ್ಕರ್ ರಾವ್
ಸಾಧು ಶ್ರೀನಾಥ್​

Updated on: Apr 20, 2020 | 3:13 PM

ಬೆಂಗಳೂರು: ಕೊರೊನಾ ಶಂಕಿತರನ್ನು ಕ್ವಾರಂಟೈನ್​ಗೆ ಶಿಫ್ಟ್ ಮಾಡಲು ಬಂದಿದ್ದ ಅಧಿಕಾರಿಗಳ ವಿರುದ್ಧ ಪಾದರಾಯನಪುರದಲ್ಲಿ ಕೆಲ ಗೂಂಡಾಗಳು ಹಲ್ಲೆ ನಡೆಸಿ ಗಲಾಟೆ ಮಾಡಿದ್ದರು. ಸುದೀರ್ಘ ತನಿಖೆಗೆಗಾಗಿ ಈ ಪ್ರಕರಣವನ್ನ ಸಿಸಿಬಿ ಪೊಲೀಸರಿಗೆ ವರ್ಗಾಯಿಸಲಾಗಿದೆ. ಕಾನೂನು ಸುವ್ಯವಸ್ಥೆ ಕರ್ತವ್ಯಕ್ಕೆ ಪಶ್ಚಿಮ ವಿಭಾಗ ಪೊಲೀಸರ ಅಗತ್ಯ ಹಿನ್ನೆಲೆಯಲ್ಲಿ ಸಿಸಿಬಿಗೆ ವರ್ಗಾಯಿಸಲಾಗಿದೆ.

ಜಂಟಿ ಪೊಲೀಸ್ ಆಯುಕ್ತ ಸಂದೀಪ್ ಪಾಟೀಲ್ ನೇತೃತ್ವದಲ್ಲಿ 12 ಇನ್ಸ್​ಪೆಕ್ಟರ್ಸ್​, ಮೂವರು ಎಸಿಪಿಗಳಿಂದ ತನಿಖೆ ನಡೆಸಲು ಬೆಂಗಳೂರು ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಸೂಚಿಸಿದ್ದಾರೆ. ಎರಡು ಗಂಟೆಗಳ ಹಿಂದೆ ಕೇಸ್ ಟೇಕ್ ಓವರ್ ಮಾಡಿದ ಸಿಸಿಬಿ ತಂಡ ಸದ್ಯ ಬಂಧಿತರ ಮೊಬೈಲ್ ಕರೆಗಳ ಮಾಹಿತಿ ಕಲೆ ಹಾಕಿ ಆರೋಪಿಗಳ ವಿಚಾರಣೆ ನಡೆಸುತ್ತಿದೆ.

Published On - 2:47 pm, Mon, 20 April 20

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us