AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬುಡಕಟ್ಟು ಸಮುದಾಯವನ್ನು ಎಸ್​ಸಿ/ಎಸ್​ಟಿಗೆ ಸೇರಿಸಲು ಪದ್ಮಶ್ರೀ ಪುರಸ್ಕೃತೆ ತುಳಸಿ ಗೌಡ ಮನವಿ

ತುಳಸಿ ಗೌಡ ಉತ್ತರ ಕನ್ನಡ ಜಿಲ್ಲೆಯ ಅಂಕೋಲ ತಾಲೂಕಿನ ಹೊನ್ನಳ್ಳಿ ಗ್ರಾಮದವರು. ಇವರು ಹಾಲಕ್ಕಿ ಎಂಬ ಬುಡಕಟ್ಟು ಸಮುದಾಯಕ್ಕೆ ಸೇರಿದವರಾಗಿದ್ದಾರೆ. ರಸ್ತೆ ಬದಿಗಳಲ್ಲಿ ಗಿಡಗಳನ್ನು ನೆಟ್ಟು ಪೋಷಿಸುವ ಕಾಯಕದಲ್ಲಿ ತೊಡಗಿರುವ ಇವರಿಗೆ ಈಗ 77 ವರ್ಷ.

ಬುಡಕಟ್ಟು ಸಮುದಾಯವನ್ನು ಎಸ್​ಸಿ/ಎಸ್​ಟಿಗೆ ಸೇರಿಸಲು ಪದ್ಮಶ್ರೀ ಪುರಸ್ಕೃತೆ ತುಳಸಿ ಗೌಡ ಮನವಿ
ತುಳಸಿ ಗೌಡ ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಕ್ಷಣ
TV9 Web
| Edited By: |

Updated on:Nov 08, 2021 | 9:40 PM

Share

ಬುಡಕಟ್ಟು ಸಮುದಾಯವನ್ನು ಎಸ್​ಸಿ/ಎಸ್​ಟಿ ವರ್ಗಕ್ಕೆ ಸೇರಿಸುವಂತೆ ಪದ್ಮಶ್ರೀ ಪುರಸ್ಕೃತ ಪರಿಸರವಾದಿ, ವೃಕ್ಷಮಾತೆ ಎಂದೇ ಹೆಸರಾಗಿರುವ ತುಳಸಿ ಗೌಡ ಇಂದು ಸರ್ಕಾರಕ್ಕೆ ಮನವಿ ಮಾಡಿದ್ದಾರೆ. ಇಂದು ರಾಷ್ಟ್ರಪತಿ ಭವನದಲ್ಲಿ, ರಾಷ್ಟ್ರಪತಿ ರಾಮನಾಥ ಕೋವಿಂದ್​ರಿಂದ ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಬಳಿಕ ದೆಹಲಿಯಲ್ಲಿ ಮಾಧ್ಯಮಗಳೊಟ್ಟಿಗೆ ಮಾತನಾಡಿದ ಅವರು, ನಮ್ಮ ಬುಡಕಟ್ಟು ಸಮುದಾಯವನ್ನು ಎಸ್​ಸಿ/ಎಸ್​ಟಿಗೆ ಸೇರಿಸಬೇಕು ಎಂದು 40 ವರ್ಷಗಳಿಂದ ಹೋರಾಟ ಮಾಡುತ್ತಿದ್ದೇವೆ. ಅದನ್ನು ಈಡೇರಿಸಿದರೆ ನಮಗೆ ತುಂಬ ಖುಷಿಯಾಗುತ್ತದೆ ಎಂದು ಹೇಳಿದರು.

ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ರಾಷ್ಟ್ರಪತಿ ಭವನಕ್ಕೆ ತೆರಳಿ ಪ್ರಶಸ್ತಿ ಪಡೆದಿದ್ದು ಖುಷಿಯಾಗಿದೆ. ಕಾರ್ಯಕ್ರಮದ ಬಳಿಕ ಪ್ರಧಾನಿ ನರೇಂದ್ರ ಮೋದಿ ನನ್ನನ್ನು ಮಾತನಾಡಿಸಲು ಬಂದರು. ನಾನು ಗಿಡ ಬೆಳೆಸಿದ್ದೇನೆ ಎಂದು ಪ್ರಧಾನಿ ಮೋದಿಗೆ ಹೇಳಿದೆ. ಆದರೆ ಅವರಿಗೆ ಅರ್ಥ ಆಗಲಿಲ್ಲ. ನಾನು ಕೈಸನ್ನೆ ಮೂಲಕ ತಿಳಿಸಿದೆ. ನಾನು 15-20 ಲಕ್ಷ ಮರಗಳನ್ನು ಬೆಳೆಸಿದ್ದೇನೆ. ಯಾರೂ ಮರ ಕಡಿಯಬಾರದು. ಅಕೇಶಿಯಾ ಮರಗಳನ್ನು ಬೇಕಾದರೆ ಕಡಿದುಕೊಳ್ಳಲಿ. ಆದರೆ ಬೇರೆ ಮರಗಳನ್ನು ಕಡಿಯಬಾರದು. ನಾವು ಮರ ಬೆಳೆಸುವುದು, ಬೇರೆಯವರು ಕಡಿಯುವುದಾ? ಎಂದು ಹೇಳಿದರು.

ತುಳಸಿ ಗೌಡ ಉತ್ತರ ಕನ್ನಡ ಜಿಲ್ಲೆಯ ಅಂಕೋಲ ತಾಲೂಕಿನ ಹೊನ್ನಳ್ಳಿ ಗ್ರಾಮದವರು. ಇವರು ಹಾಲಕ್ಕಿ ಎಂಬ ಬುಡಕಟ್ಟು ಸಮುದಾಯಕ್ಕೆ ಸೇರಿದವರಾಗಿದ್ದಾರೆ. ಸಾಲುಮರದ ತಿಮ್ಮಕ್ಕನವರಂತೆ ಇವರೂ ಕೂಡ ರಸ್ತೆ ಬದಿಗಳಲ್ಲಿ ಗಿಡಗಳನ್ನು ನೆಟ್ಟು ಪೋಷಿಸುವ ಕಾಯಕದಲ್ಲಿ ತೊಡಗಿರುವ ಇವರಿಗೆ ಈಗ 77 ವರ್ಷ. ಅವರ ಈ ಪರಿಸರ ಪ್ರೇಮ ಮತ್ತು ಅದರ ಬಗೆಗಿನ ನಿಷ್ಠೆಯನ್ನು ಪರಿಗಣಿಸಿ ಕೇಂದ್ರ ಸರ್ಕಾರ ಪದ್ಮಶ್ರೀ ಪ್ರಶಸ್ತಿ ನೀಡಿ ಪುರಸ್ಕರಿಸಿದೆ.

ಇದನ್ನೂ ಓದಿ: ಮತ್ತೆ ಬೋಲ್ಡ್​ ಅವತಾರ ತಾಳಿದ ರಚಿತಾ ರಾಮ್​; ಪಡ್ಡೆ ಹುಡುಗರ ಮನಸ್ಸು ಕದ್ದ ರಚ್ಚು

Published On - 9:21 pm, Mon, 8 November 21

ಹಿಮಾವೃತವಾದ ಚಂಡೀಗಢದ ಸುಕ್ಮಾ ಸರೋವರದ ಸೌಂದರ್ಯ ನೋಡಿ
ಹಿಮಾವೃತವಾದ ಚಂಡೀಗಢದ ಸುಕ್ಮಾ ಸರೋವರದ ಸೌಂದರ್ಯ ನೋಡಿ
ಸ್ಪಂದನಾ ಫ್ಯಾಮಿಲಿಗೆ ಗಿಲ್ಲಿ ಇಷ್ಟ ಆಗಿದ್ದೇ ಈ ಕಾರಣಕ್ಕೆ; ವಿವರಿಸಿದ ನಟಿ
ಸ್ಪಂದನಾ ಫ್ಯಾಮಿಲಿಗೆ ಗಿಲ್ಲಿ ಇಷ್ಟ ಆಗಿದ್ದೇ ಈ ಕಾರಣಕ್ಕೆ; ವಿವರಿಸಿದ ನಟಿ
ಪ್ರಸಿದ್ಧ ಆಭರಣ ಮಳಿಗೆಯಲ್ಲಿ 14 ಲಕ್ಷದ ಜ್ಯುವೆಲರಿ ಕದ್ದ ಮಹಿಳೆಯರು
ಪ್ರಸಿದ್ಧ ಆಭರಣ ಮಳಿಗೆಯಲ್ಲಿ 14 ಲಕ್ಷದ ಜ್ಯುವೆಲರಿ ಕದ್ದ ಮಹಿಳೆಯರು
ಅರ್ಧಶತಕ ಬಾರಿಸಿಯೂ ತಂಡವನ್ನು ಗೆಲ್ಲಿಸದ ವಾರ್ನರ್
ಅರ್ಧಶತಕ ಬಾರಿಸಿಯೂ ತಂಡವನ್ನು ಗೆಲ್ಲಿಸದ ವಾರ್ನರ್
ಸಾಕ್ಷಿ ನಾಶ ಹಿನ್ನೆಲೆ ರಾಜಶೇಖರ್​ ಶವ ಸುಟ್ಟು ಹಾಕಿದ್ದಾರೆ ಎಂದ ಶ್ರೀರಾಮುಲು
ಸಾಕ್ಷಿ ನಾಶ ಹಿನ್ನೆಲೆ ರಾಜಶೇಖರ್​ ಶವ ಸುಟ್ಟು ಹಾಕಿದ್ದಾರೆ ಎಂದ ಶ್ರೀರಾಮುಲು
ಕೊಡಗು ಜಿಲ್ಲೆಯ ನಂಬರ್ ಒನ್ ಟ್ಯಾಕ್ಸ್ ಪೇಯರ್ ರಶ್ಮಿಕಾ ಮಂದಣ್ಣ
ಕೊಡಗು ಜಿಲ್ಲೆಯ ನಂಬರ್ ಒನ್ ಟ್ಯಾಕ್ಸ್ ಪೇಯರ್ ರಶ್ಮಿಕಾ ಮಂದಣ್ಣ
ರಕ್ಷಿತಾ ಬೆಂಬಲಕ್ಕೆ ಬಂದ ಗಿಲ್ಲಿ, ರಾಶಿಕಾ ಜೊತೆ ಜಗಳ: ವಿಡಿಯೋ
ರಕ್ಷಿತಾ ಬೆಂಬಲಕ್ಕೆ ಬಂದ ಗಿಲ್ಲಿ, ರಾಶಿಕಾ ಜೊತೆ ಜಗಳ: ವಿಡಿಯೋ
ಸಿದ್ದರಾಮಯ್ಯ ಇಲ್ಲ ಅಂದ್ರೆ ಕಾಂಗ್ರೆಸ್ ಪಕ್ಷ ಇಲ್ಲ: ರಾಜಣ್ಣ ಖಡಕ್​​ ಮಾತು
ಸಿದ್ದರಾಮಯ್ಯ ಇಲ್ಲ ಅಂದ್ರೆ ಕಾಂಗ್ರೆಸ್ ಪಕ್ಷ ಇಲ್ಲ: ರಾಜಣ್ಣ ಖಡಕ್​​ ಮಾತು
ರಾಜಶೇಖರ್​ ತಾಯಿಗೆ ಡಿಕೆ ಶಿವಕುಮಾರ್​ ಸಾಂತ್ವನ: ಸರ್ಕಾರದಿಂದ ನೆರವು ಭರವಸೆ
ರಾಜಶೇಖರ್​ ತಾಯಿಗೆ ಡಿಕೆ ಶಿವಕುಮಾರ್​ ಸಾಂತ್ವನ: ಸರ್ಕಾರದಿಂದ ನೆರವು ಭರವಸೆ
ಸನ್​ರೂಫ್ ಬಳಿ ನಿಂತು ಕೈ ಬೀಸುತ್ತಿದ್ದಾಗ ಬ್ರೇಕ್ ಹಾಕಿದ ಕಾರು
ಸನ್​ರೂಫ್ ಬಳಿ ನಿಂತು ಕೈ ಬೀಸುತ್ತಿದ್ದಾಗ ಬ್ರೇಕ್ ಹಾಕಿದ ಕಾರು