AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬುಡಕಟ್ಟು ಸಮುದಾಯವನ್ನು ಎಸ್​ಸಿ/ಎಸ್​ಟಿಗೆ ಸೇರಿಸಲು ಪದ್ಮಶ್ರೀ ಪುರಸ್ಕೃತೆ ತುಳಸಿ ಗೌಡ ಮನವಿ

ತುಳಸಿ ಗೌಡ ಉತ್ತರ ಕನ್ನಡ ಜಿಲ್ಲೆಯ ಅಂಕೋಲ ತಾಲೂಕಿನ ಹೊನ್ನಳ್ಳಿ ಗ್ರಾಮದವರು. ಇವರು ಹಾಲಕ್ಕಿ ಎಂಬ ಬುಡಕಟ್ಟು ಸಮುದಾಯಕ್ಕೆ ಸೇರಿದವರಾಗಿದ್ದಾರೆ. ರಸ್ತೆ ಬದಿಗಳಲ್ಲಿ ಗಿಡಗಳನ್ನು ನೆಟ್ಟು ಪೋಷಿಸುವ ಕಾಯಕದಲ್ಲಿ ತೊಡಗಿರುವ ಇವರಿಗೆ ಈಗ 77 ವರ್ಷ.

ಬುಡಕಟ್ಟು ಸಮುದಾಯವನ್ನು ಎಸ್​ಸಿ/ಎಸ್​ಟಿಗೆ ಸೇರಿಸಲು ಪದ್ಮಶ್ರೀ ಪುರಸ್ಕೃತೆ ತುಳಸಿ ಗೌಡ ಮನವಿ
ತುಳಸಿ ಗೌಡ ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಕ್ಷಣ
TV9 Web
| Updated By: Lakshmi Hegde|

Updated on:Nov 08, 2021 | 9:40 PM

Share

ಬುಡಕಟ್ಟು ಸಮುದಾಯವನ್ನು ಎಸ್​ಸಿ/ಎಸ್​ಟಿ ವರ್ಗಕ್ಕೆ ಸೇರಿಸುವಂತೆ ಪದ್ಮಶ್ರೀ ಪುರಸ್ಕೃತ ಪರಿಸರವಾದಿ, ವೃಕ್ಷಮಾತೆ ಎಂದೇ ಹೆಸರಾಗಿರುವ ತುಳಸಿ ಗೌಡ ಇಂದು ಸರ್ಕಾರಕ್ಕೆ ಮನವಿ ಮಾಡಿದ್ದಾರೆ. ಇಂದು ರಾಷ್ಟ್ರಪತಿ ಭವನದಲ್ಲಿ, ರಾಷ್ಟ್ರಪತಿ ರಾಮನಾಥ ಕೋವಿಂದ್​ರಿಂದ ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಬಳಿಕ ದೆಹಲಿಯಲ್ಲಿ ಮಾಧ್ಯಮಗಳೊಟ್ಟಿಗೆ ಮಾತನಾಡಿದ ಅವರು, ನಮ್ಮ ಬುಡಕಟ್ಟು ಸಮುದಾಯವನ್ನು ಎಸ್​ಸಿ/ಎಸ್​ಟಿಗೆ ಸೇರಿಸಬೇಕು ಎಂದು 40 ವರ್ಷಗಳಿಂದ ಹೋರಾಟ ಮಾಡುತ್ತಿದ್ದೇವೆ. ಅದನ್ನು ಈಡೇರಿಸಿದರೆ ನಮಗೆ ತುಂಬ ಖುಷಿಯಾಗುತ್ತದೆ ಎಂದು ಹೇಳಿದರು.

ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ರಾಷ್ಟ್ರಪತಿ ಭವನಕ್ಕೆ ತೆರಳಿ ಪ್ರಶಸ್ತಿ ಪಡೆದಿದ್ದು ಖುಷಿಯಾಗಿದೆ. ಕಾರ್ಯಕ್ರಮದ ಬಳಿಕ ಪ್ರಧಾನಿ ನರೇಂದ್ರ ಮೋದಿ ನನ್ನನ್ನು ಮಾತನಾಡಿಸಲು ಬಂದರು. ನಾನು ಗಿಡ ಬೆಳೆಸಿದ್ದೇನೆ ಎಂದು ಪ್ರಧಾನಿ ಮೋದಿಗೆ ಹೇಳಿದೆ. ಆದರೆ ಅವರಿಗೆ ಅರ್ಥ ಆಗಲಿಲ್ಲ. ನಾನು ಕೈಸನ್ನೆ ಮೂಲಕ ತಿಳಿಸಿದೆ. ನಾನು 15-20 ಲಕ್ಷ ಮರಗಳನ್ನು ಬೆಳೆಸಿದ್ದೇನೆ. ಯಾರೂ ಮರ ಕಡಿಯಬಾರದು. ಅಕೇಶಿಯಾ ಮರಗಳನ್ನು ಬೇಕಾದರೆ ಕಡಿದುಕೊಳ್ಳಲಿ. ಆದರೆ ಬೇರೆ ಮರಗಳನ್ನು ಕಡಿಯಬಾರದು. ನಾವು ಮರ ಬೆಳೆಸುವುದು, ಬೇರೆಯವರು ಕಡಿಯುವುದಾ? ಎಂದು ಹೇಳಿದರು.

ತುಳಸಿ ಗೌಡ ಉತ್ತರ ಕನ್ನಡ ಜಿಲ್ಲೆಯ ಅಂಕೋಲ ತಾಲೂಕಿನ ಹೊನ್ನಳ್ಳಿ ಗ್ರಾಮದವರು. ಇವರು ಹಾಲಕ್ಕಿ ಎಂಬ ಬುಡಕಟ್ಟು ಸಮುದಾಯಕ್ಕೆ ಸೇರಿದವರಾಗಿದ್ದಾರೆ. ಸಾಲುಮರದ ತಿಮ್ಮಕ್ಕನವರಂತೆ ಇವರೂ ಕೂಡ ರಸ್ತೆ ಬದಿಗಳಲ್ಲಿ ಗಿಡಗಳನ್ನು ನೆಟ್ಟು ಪೋಷಿಸುವ ಕಾಯಕದಲ್ಲಿ ತೊಡಗಿರುವ ಇವರಿಗೆ ಈಗ 77 ವರ್ಷ. ಅವರ ಈ ಪರಿಸರ ಪ್ರೇಮ ಮತ್ತು ಅದರ ಬಗೆಗಿನ ನಿಷ್ಠೆಯನ್ನು ಪರಿಗಣಿಸಿ ಕೇಂದ್ರ ಸರ್ಕಾರ ಪದ್ಮಶ್ರೀ ಪ್ರಶಸ್ತಿ ನೀಡಿ ಪುರಸ್ಕರಿಸಿದೆ.

ಇದನ್ನೂ ಓದಿ: ಮತ್ತೆ ಬೋಲ್ಡ್​ ಅವತಾರ ತಾಳಿದ ರಚಿತಾ ರಾಮ್​; ಪಡ್ಡೆ ಹುಡುಗರ ಮನಸ್ಸು ಕದ್ದ ರಚ್ಚು

Published On - 9:21 pm, Mon, 8 November 21

ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?