AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಹಲ್​ಗಾಮ್ ಉಗ್ರ ದಾಳಿ: ಕನ್ನಡಿಗರ ರಕ್ಷಣೆಗಾಗಿ ಕರ್ನಾಟಕದಿಂದ ಸಹಾಯವಾಣಿ ಆರಂಭ, ಇಲ್ಲಿದೆ ವಿವರ

ಪಹಲ್​ಗಾಮ್ ಉಗ್ರ ದಾಳಿ, ಕರ್ನಾಟಕ ಸಹಾಯವಾಣಿ: ಜಮ್ಮು ಮತ್ತು ಕಾಶ್ಮೀರದ ಪಹಲ್​ಗಾಮ್​ನಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ ಕನ್ನಡಿಗರು ಮೃತಪಟ್ಟು, ಕರ್ನಾಟಕದ ಅನೇಕ ಪ್ರವಾಸಿಗರು ಅಲ್ಲಿ ಸಿಲುಕಿರುವ ಕಾರಣ ಸರ್ಕಾರ ಸಹಾಯವಾಣಿ ಸಂಖ್ಯೆಗಳನ್ನು ಬಿಡುಗಡೆ ಮಾಡಿದೆ. ರಾಜ್ಯದ ಪ್ರವಾಸಿಗರ ಬಗ್ಗೆ ಅವರ ಕುಟುಂದವರು, ಸಂಬಂಧಿಕರು ಮಾಹಿತಿ ನೀಡುವಂತೆ ಸರ್ಕಾರ ಮನವಿ ಮಾಡಿದೆ.

ಪಹಲ್​ಗಾಮ್ ಉಗ್ರ ದಾಳಿ: ಕನ್ನಡಿಗರ ರಕ್ಷಣೆಗಾಗಿ ಕರ್ನಾಟಕದಿಂದ ಸಹಾಯವಾಣಿ ಆರಂಭ, ಇಲ್ಲಿದೆ ವಿವರ
ಕನ್ನಡಿಗರ ರಕ್ಷಣೆಗಾಗಿ ಸಹಾಯವಾಣಿ ಆರಂಭಿಸಿದ ಕರ್ನಾಟಕ ಸರ್ಕಾರ
ಗಣಪತಿ ಶರ್ಮಾ
|

Updated on:Apr 23, 2025 | 11:54 AM

Share

ಬೆಂಗಳೂರು, ಏಪ್ರಿಲ್ 23: ಕಾಶ್ಮೀರದ ಪಹಲ್​ಗಾಮ್​​ನಲ್ಲಿ  (Pahalgam Terror Attack) ಪ್ರವಾಸಿಗರನ್ನು ಗುರಿಯಾಗಿಸಿ ಉಗ್ರರಿಂದ ಗುಂಡಿನ ದಾಳಿ ನಡೆದಿದ್ದು, ಕರ್ನಾಟಕದ (Karnataka) ಅನೇಕ ಪ್ರವಾಸಿಗರು ಸದ್ಯ ಅಲ್ಲಿ ಸಿಲುಕಿದ್ದಾರೆ. ಅವರನ್ನು ಕರೆತರಲು ಕರ್ನಾಟಕ ಸರ್ಕಾರ 2 ತಂಡಗಳನ್ನು ಕಳುಹಿಸಿದೆ. ಸಚಿವ ಅನಿಲ್ ಲಾಡ್ ಅವರ ನೇತೃತ್ವದಲ್ಲಿ ರಕ್ಷಣಾ ತಂಡಗಳನ್ನು ಕಳುಹಿಸಲಾಗಿದೆ. ಇದೀಗ ಕರ್ನಾಟಕ ಸರ್ಕಾರ ಸಹಾಯವಾಣಿ (Karnataka Helpline) ಸಂಖ್ಯೆಗಳನ್ನು ಆರಂಭಿಸಿದೆ. ರಾಜ್ಯದ ಪ್ರವಾಸಿಗರ ಸಂಬಂಧಿಕರು, ಕುಟುಂಬಸ್ಥರು ಈ ಸಂಖ್ಯೆಗಳಿಗೆ ಕರೆ ಮಾಡುವ ಮೂಲಕ ಸಹಾಯ ಪಡೆಯಬಹುದು ಎಂದು ಸರ್ಕಾರ ತಿಳಿಸಿದೆ.

ಕಾಶ್ಮೀರ ಉಗ್ರ ದಾಳಿ: ಕರ್ನಾಟಕ ಸಹಾಯವಾಣಿ ಸಂಖ್ಯೆಗಳು

  • 080-43344334
  • 080-43344335
  • 080-43344336
  • 080-43344342

ಕನ್ನಡಿಗರು ಈ ದೂರವಾಣಿ ಸಂಖ್ಯೆಗೆ ಕರೆ ಮಾಡಿ ಜಮ್ಮು ಮತ್ತು ಕಾಶ್ಮೀರ ಪ್ರವಾಸಕ್ಕೆ ತೆರಳಿದವರ ಮಾಹಿತಿ ನೀಡಲು ಮನವಿ ಮಾಡಲಾಗಿದೆ. ಸಂಬಂಧಿಕರು, ಸ್ನೇಹಿತರು, ಪರಿಚಯಸ್ಥರ ಮಾಹಿತಿ ನೀಡಲು ರಾಜ್ಯ ಸರ್ಕಾರ ಮನವಿ ಮಾಡಲಾಗಿದೆ.

ಚಾಮರಾಜನಗರ ಜಿಲ್ಲಾ ಸಹಾಯವಾಣಿ

  • 08226- 213160
  • 08226- 223161
  • 08226- 223163
  • ಮೊಬೈಲ್: 9740942901

ಹಾವೇರಿಯ ಕುಟುಂಬಗಳು ಸುರಕ್ಷಿತ

ಕಾಶ್ಮೀರದಲ್ಲಿ ಉಗ್ರರ ಅಟ್ಟಹಾಸದ ವೇಳೆ ಜಮ್ಮು ಪ್ರವಾಸದಲ್ಲಿ ಇದ್ದ ಹಾವೇರಿ ಜಿಲ್ಲೆಯ ಎರಡು ಕುಟುಂಬಗಳು ಸುರಕ್ಷಿತವಾಗಿವೆ ಎಂಬುದು ತಿಳಿದುಬಂದಿದೆ. ಹಾವೇರಿಯ ವಿರೇಶ್ ದಂಪತಿ ಹಾಗೂ ಶಿಗ್ಗಾವಿಯ ನಾಗರಾಜ್ ದಂಪತಿ ಕಳೆದ ಮೂರು ದಿನಗಳಿಂದ ಜಮ್ಮು ಕಾಶ್ಮೀರದ ಪ್ರವಾಸದಲ್ಲಿದ್ದಾರೆ. ಸದ್ಯ ಇವರು ಸದ್ಯ ಜಮ್ಮುವಿನ ಕತ್ರಾದಲ್ಲಿದ್ದಾರೆ.

ಇದನ್ನೂ ಓದಿ
Image
ಐಸ್ ಕ್ರೀಂ ತಿನ್ನಲೆಂದು ನಿಂತಿದ್ದರಿಂದ ಪಹಲ್ಗಾಮ್ ಉಗ್ರ ದಾಳಿಯಿಂದ ಬಚಾವ್
Image
ಕಾಶ್ಮೀರದಲ್ಲಿ ಕನ್ನಡಿಗರ ರಕ್ಷಣೆಗೆ ಅಧಿಕಾರಿಗಳ ತಂಡ ದೌಡು
Image
ಮಂಜುನಾಥ್, ಸಾವಿಗೂ ಮುನ್ನ ಪತ್ನಿಯೊಂದಿಗೆ ಕಾಶ್ಮೀರದಲ್ಲಿ ಕಳೆದ ಕೊನೆ ಕ್ಷಣ
Image
ಪಹಲ್ಗಾಮ್‌ ಉಗ್ರರ ದಾಳಿ, ಕನ್ನಡಿಗರ ನೆರವಿಗೆ ಅಧಿಕಾರಿಗಳನ್ನ ಕಳುಹಿಸಿದ ಸಿಎಂ

ಮತ್ತೊಂದೆಡೆ, ಕಾಶ್ಮೀರದಲ್ಲಿ ಪ್ರವಾಸಿಗರನ್ನು ಗುರಿಯಾಗಿಸಿ ಉಗ್ರರ ದಾಳಿ ಹಿನ್ನೆಲೆ ಸಾವಿರಾರು ಸಂಖ್ಯೆಯ ಪ್ರವಾಸಿಗರು ಕಾಶ್ಮೀರ ತೊರೆಯುತ್ತಿದ್ದಾರೆ. ಕಾಶ್ಮೀರದ ಹೋಟೆಲ್‌, ಲಾಡ್ಜ್‌ಗಳಿಂದ ಪ್ರವಾಸಿಗರು ನಿರ್ಗಮಿಸುತ್ತಿದ್ದು, ಶ್ರೀನಗರದ ವಿಮಾನ ನಿಲ್ದಾಣದಲ್ಲಿ ಪ್ರವಾಸಿಗರ ದಟ್ಟಣೆ ಹೆಚ್ಚಾಗಿದೆ.

ಇದನ್ನೂ ಓದಿ: ಐಸ್ ಕ್ರೀಂ ತಿನ್ನಲೆಂದು ನಿಂತಿದ್ದರಿಂದ ಬಚಾವ್: ಪಹಲ್ಗಾಮ್ ಉಗ್ರ ದಾಳಿಯಿಂದ ಬೆಂಗಳೂರು ನಿವಾಸಿ ಪಾರಾಗಿದ್ದು ಹೀಗಂತೆ!

ಕಾಶ್ಮೀರದಲ್ಲಿ ಪ್ರವಾಸಿಗರನ್ನು ಗುರಿಯಾಗಿಸಿ ಉಗ್ರರು ನಡೆಸಿದ ಗುಂಡಿನ ದಾಳಿಯಲ್ಲಿ ಮೃತಪಟ್ಟವರ ಸಂಖ್ಯೆ 28ಕ್ಕೆ ಏರಿಕೆಯಾಗಿದೆ. ಘಟನೆಯಲ್ಲಿ 12ಕ್ಕೂ ಹೆಚ್ಚು ಜನರಿಗೆ ಗಾಯಗಳಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಭಯೋತ್ಪಾದಕರ ದಾಳಿಯಲ್ಲಿ ಇಬ್ಬರು ವಿದೇಶಿ ಪ್ರಜೆಗಳು ಸಹ ಮೃತಪಟ್ಟಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:29 am, Wed, 23 April 25

Follow Us
Ganapathi Sharma
Ganapathi Sharma

ಕೇರಳದ ಕಾಸರಗೋಡು ಜಿಲ್ಲೆಯ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 13 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು.

Read More
ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ‘ಶಿವ ತಾಂಡವ’ ರಂಗು!
ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ‘ಶಿವ ತಾಂಡವ’ ರಂಗು!
ಐಪಿಎಲ್ ಫೈನಲ್: ಬೆಂಗಳೂರಿನಲ್ಲಿ ಖಾಕಿ ಸರ್ಪಗಾವಲು; ತೀವ್ರ ಕಟ್ಟೆಚ್ಚರ
ಐಪಿಎಲ್ ಫೈನಲ್: ಬೆಂಗಳೂರಿನಲ್ಲಿ ಖಾಕಿ ಸರ್ಪಗಾವಲು; ತೀವ್ರ ಕಟ್ಟೆಚ್ಚರ
ಪವರ್​ ಪ್ಲೇನಲ್ಲೇ ಗುಜರಾತ್ ಪವರ್ ಕಸಿದ ಆರ್​ಸಿಬಿ
ಪವರ್​ ಪ್ಲೇನಲ್ಲೇ ಗುಜರಾತ್ ಪವರ್ ಕಸಿದ ಆರ್​ಸಿಬಿ
ಆರ್​​ಸಿಬಿ ಫ್ಯಾನ್ಸ್‌ಗೆ ಬೆಂಗಳೂರು ಕಮಿಷನರ್ ಕಠಿಣ ವಾರ್ನಿಂಗ್!
ಆರ್​​ಸಿಬಿ ಫ್ಯಾನ್ಸ್‌ಗೆ ಬೆಂಗಳೂರು ಕಮಿಷನರ್ ಕಠಿಣ ವಾರ್ನಿಂಗ್!
ಸಿದ್ ಶ್ರೀರಾಮ್ ಗಾಯನಕ್ಕೆ ಹಿನ್ನೆಲೆ ಸಂಗೀತದ ಅವಶ್ಯಕತೆಯೇ ಇಲ್ಲ: ವಿಡಿಯೋ
ಸಿದ್ ಶ್ರೀರಾಮ್ ಗಾಯನಕ್ಕೆ ಹಿನ್ನೆಲೆ ಸಂಗೀತದ ಅವಶ್ಯಕತೆಯೇ ಇಲ್ಲ: ವಿಡಿಯೋ
ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಬಿಗ್​​ ಅಪ್ಡೇಡ್​​ ನೀಡಿದ ಡಿ.ಕೆ ಶಿವಕುಮಾರ್
ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಬಿಗ್​​ ಅಪ್ಡೇಡ್​​ ನೀಡಿದ ಡಿ.ಕೆ ಶಿವಕುಮಾರ್
ಶ್ರೀ ಕೃಷ್ಣನ ಸನ್ನಿಧಾನದಲ್ಲಿ ವಸಿಷ್ಠ ಸಿಂಹ, ಹರಿಪ್ರಿಯ ದಂಪತಿ: ವಿಡಿಯೋ
ಶ್ರೀ ಕೃಷ್ಣನ ಸನ್ನಿಧಾನದಲ್ಲಿ ವಸಿಷ್ಠ ಸಿಂಹ, ಹರಿಪ್ರಿಯ ದಂಪತಿ: ವಿಡಿಯೋ
ಪುತ್ರಿ ರೂಪಾ ಶಶಿಧರ್ ಸಚಿವ ಸ್ಥಾನ ನೀಡುವ ಬಗ್ಗೆ ಮಹತ್ವದ ಹೇಳಿಕೆ
ಪುತ್ರಿ ರೂಪಾ ಶಶಿಧರ್ ಸಚಿವ ಸ್ಥಾನ ನೀಡುವ ಬಗ್ಗೆ ಮಹತ್ವದ ಹೇಳಿಕೆ
ವಿಜಯೇಂದ್ರ ಮತ್ತು ಅಶೋಕ್​ಗೆ ಹುಷಾರ್​​ ಆಗಿರಿ ಎಂದಿದ್ದೇಕೆ ಯತ್ನಾಳ್​
ವಿಜಯೇಂದ್ರ ಮತ್ತು ಅಶೋಕ್​ಗೆ ಹುಷಾರ್​​ ಆಗಿರಿ ಎಂದಿದ್ದೇಕೆ ಯತ್ನಾಳ್​
ಬೆಂಗಳೂರಿನ ಆಟೋ ಚಾಲಕನಿಗೆ ಹಿಂದಿಯಲ್ಲಿ ನಿಂದಿಸಿದ ಮಹಿಳೆ
ಬೆಂಗಳೂರಿನ ಆಟೋ ಚಾಲಕನಿಗೆ ಹಿಂದಿಯಲ್ಲಿ ನಿಂದಿಸಿದ ಮಹಿಳೆ