AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪೈಲ್ವಾನರ ಮಾಸಾಶನ ಹೆಚ್ಚಿಸಿದ್ದು ನಮ್ಮ ಸರ್ಕಾರ ಎಂಬ ಸಿ.ಸಿ.ಪಾಟೀಲ್ ಹೇಳಿಕೆಗೆ ‘ಮಾಸಾಶನ ಬಂದೇ ಇಲ್ಲ’ ಎಂದ ಪೈಲ್ವಾನರು

ಸರ್ಕಾರದ ವಿರುದ್ಧ ಘೋಷಣೆ ಕೂಗಿದ ಪೈಲ್ವಾನರ ಬಗ್ಗೆ ಸಿ.ಸಿ. ಪಾಟೀಲ್ ಗರಂ ಆಗಿದ್ದಾರೆ. ನಿಮ್ಮನ್ನು ಕೇಳೋದು ಬೇಡ ಅಂದ್ರೆ ನಾವು ಯಾರಿಗೆ ಕೇಳಬೇಕು ಎಂದು ಪೈಲ್ವಾನರು ಕೂಡ ವಾಗ್ವಾದ ನಡೆಸಿದ್ದಾರೆ. ನಿಮ್ಮ ಸರ್ಕಾರ ನಿಮಗೇ ಕೇಳಬೇಕು ಎಂದು ಪೈಲ್ವಾನರು ಕಿಡಿಯಾಗಿದ್ದಾರೆ.

ಪೈಲ್ವಾನರ ಮಾಸಾಶನ ಹೆಚ್ಚಿಸಿದ್ದು ನಮ್ಮ ಸರ್ಕಾರ ಎಂಬ ಸಿ.ಸಿ.ಪಾಟೀಲ್ ಹೇಳಿಕೆಗೆ ‘ಮಾಸಾಶನ ಬಂದೇ ಇಲ್ಲ’ ಎಂದ ಪೈಲ್ವಾನರು
ಸಚಿವ ಸಿ.ಸಿ ಪಾಟೀಲ್ (ಸಂಗ್ರಹ ಚಿತ್ರ)
TV9 Web
| Edited By: |

Updated on:Apr 05, 2022 | 12:49 PM

Share

ಗದಗ: ನಮ್ಮ ಸರ್ಕಾರ ಪೈಲ್ವಾನರಿಗೆ ಮಾಸಾಶನ ಹೆಚ್ಚಳ ಮಾಡಿದೆ ಎಂಬ ಸಚಿವ ಸಿ.ಸಿ. ಪಾಟೀಲ್ ಹೇಳಿಕೆಗೆ ಪೈಲ್ವಾನರು ಆಕ್ರೋಶ ವ್ಯಕ್ತಪಡಿಸಿದ ಘಟನೆ ನಗರದ ಪ್ರವಾಸಿ ಮಂದಿರದಲ್ಲಿ ಇಂದು (ಏಪ್ರಿಲ್ 5) ಘಟಿಸಿದೆ. ಗದಗ ನಗರದಲ್ಲಿ ಮಾಸಾಶನ ನೀಡುವಂತೆ ಪೈಲ್ವಾನರು ಮನವಿ ಸಲ್ಲಿಸಿದ್ದರು. ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ಸಿ.ಸಿ.ಪಾಟೀಲ್ ಪೈಲ್ವಾನರ ಮನವಿ ಸ್ವೀಕರಿಸಿದ್ದರು. ಆ ಬಳಿಕ ಮಾತನಾಡಿದ, ಸಿ.ಸಿ.ಪಾಟೀಲ್ ನಮ್ಮ ಸರ್ಕಾರ ಪೈಲ್ವಾನರ ಮಾಸಾಶನ ಹೆಚ್ಚಳ ಮಾಡಿದೆ ಎಂದಿದ್ದಾರೆ. ಇದಕ್ಕೆ ಪೈಲ್ವಾನರ ಪ್ರತಿರೋಧ ವ್ಯಕ್ತವಾಗಿದೆ.

ಜಿಲ್ಲಾ ಉಸ್ತುವಾರಿ ಸಚಿವರ ಮಾತಿಗೆ ಆಕ್ರೋಶ ವ್ಯಕ್ತಪಡಿಸಿದ ಪೈಲ್ವಾನರು, ನಿಮ್ಮ ಸರ್ಕಾರ ಮಾಸಾಶನ ಬಿಡುಗಡೆ ಮಾಡಿಲ್ಲ ಎಂದು ತಿಳಿಸಿದ್ದಾರೆ. ಬಿಜೆಪಿ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ಪೈಲ್ವಾನರು ಆಕ್ರೋಶ ಹೊರಹಾಕಿದ್ದಾರೆ. ಸಚಿವ ಸಿ.ಸಿ.ಪಾಟೀಲ್​ ಜತೆ ವಾಗ್ವಾದ ನಡೆಸಿದ್ದಾರೆ. ಅಷ್ಟೇ ಅಲ್ಲದೆ, ಪ್ರವಾಸಿ ಮಂದಿರದಲ್ಲೇ ಧರಣಿ ಕುಳಿತು ವಿರೋಧಿಸಿದ್ದಾರೆ.

ಈ ಮಧ್ಯೆ, ಸರ್ಕಾರದ ವಿರುದ್ಧ ಘೋಷಣೆ ಕೂಗಿದ ಪೈಲ್ವಾನರ ಬಗ್ಗೆ ಸಿ.ಸಿ. ಪಾಟೀಲ್ ಗರಂ ಆಗಿದ್ದಾರೆ. ನಿಮ್ಮನ್ನು ಕೇಳೋದು ಬೇಡ ಅಂದ್ರೆ ನಾವು ಯಾರಿಗೆ ಕೇಳಬೇಕು ಎಂದು ಪೈಲ್ವಾನರು ಕೂಡ ವಾಗ್ವಾದ ನಡೆಸಿದ್ದಾರೆ. ನಿಮ್ಮ ಸರ್ಕಾರ ನಿಮಗೇ ಕೇಳಬೇಕು ಎಂದು ಪೈಲ್ವಾನರು ಕಿಡಿಯಾಗಿದ್ದಾರೆ. ಬಳಿಕ ಆಕ್ರೋಶಗೊಂಡ ಪೈಲ್ವಾನರನ್ನು ಸಂಸದ ಶಿವಕುಮಾರ ಉದಾಸಿ ಸಮಾಧಾನಪಡಿಸಿದ್ದಾರೆ. ಕೊರೊನಾ ಕಾರಣದಿಂದ ಎಲ್ಲಾ ಕಡೆಯೂ ಈ ಪ್ರಕ್ರಿಯೆ ತಡವಾಗಿದೆ, ನಿಧಾನವಾಗಿದೆ. ಡಿಸಿ ಹಾಗೂ ಉಸ್ತುವಾರಿ ಸಚಿವರ ಜೊತೆಗೆ ಮಾತನಾಡಿ ಮಾಸಾಶನ ಕೊಡಿಸುವುದಾಗಿ ಶಿವಕುಮಾರ ಉದಾಸಿ ಭರವಸೆ ನೀಡಿದ್ದಾರೆ.

ಇದನ್ನೂ ಓದಿ: ಪಿಂಚಣಿ ಹಣ ಡ್ರಾ ಮಾಡದಿದ್ದರೆ ಬ್ಯಾಂಕ್ ಖಾತೆ ಸ್ಥಗಿತ: ಆರ್.ಅಶೋಕ ಹೇಳಿಕೆಗೆ ವ್ಯಾಪಕ ಖಂಡನೆ

ಇದನ್ನೂ ಓದಿ: ಸಿದ್ದರಾಮಯ್ಯ ಹೇಳಿದ ತಕ್ಷಣ ಅದು ವೇದಾಂತವಲ್ಲ: ಬಿ.ಸಿ.ಪಾಟೀಲ್

Published On - 8:00 pm, Mon, 5 April 21

ರಾಹುಲ್ ಗಾಂಧಿಗೆ ಕಪ್ಪು ಬಾವುಟ ತೋರಿದ ಬಿಜೆಪಿ ಕಾರ್ಯಕರ್ತರು
ರಾಹುಲ್ ಗಾಂಧಿಗೆ ಕಪ್ಪು ಬಾವುಟ ತೋರಿದ ಬಿಜೆಪಿ ಕಾರ್ಯಕರ್ತರು
ಎಲ್ಲವೂ ಓದಿದ್ರೂ ಪರೀಕ್ಷೆ ಹಾಲ್‌ನಲ್ಲಿ ಕೂತಾಗ ಮರೆತು ಹೋಗುವುದು ಯಾಕೆ?
ಎಲ್ಲವೂ ಓದಿದ್ರೂ ಪರೀಕ್ಷೆ ಹಾಲ್‌ನಲ್ಲಿ ಕೂತಾಗ ಮರೆತು ಹೋಗುವುದು ಯಾಕೆ?
ಮಂಡ್ಯ: ಪ್ರೀತಿಸಿ ಮದುವೆಯಾದ ಅಳಿಯನ ಮನೆಗೆ ಬೆಂಕಿ ಹಚ್ಚಿದ ಮಾವ!
ಮಂಡ್ಯ: ಪ್ರೀತಿಸಿ ಮದುವೆಯಾದ ಅಳಿಯನ ಮನೆಗೆ ಬೆಂಕಿ ಹಚ್ಚಿದ ಮಾವ!
ಸಿಎಂ ಸಿದ್ದರಾಮಯ್ಯರ ಟ್ವೀಟ್ ಬಗ್ಗೆ ಕೇಂದ್ರ ಸಚಿವ ಹೆಚ್​ಡಿಕೆ ಲೇವಡಿ
ಸಿಎಂ ಸಿದ್ದರಾಮಯ್ಯರ ಟ್ವೀಟ್ ಬಗ್ಗೆ ಕೇಂದ್ರ ಸಚಿವ ಹೆಚ್​ಡಿಕೆ ಲೇವಡಿ
ಕಮಿಷನ್​​ ಪಡೆಯುವಾಗಲೇ ಶಾಸಕ ಲಾಕ್​, ಇಲ್ಲಿದೆ ಎಕ್ಸ್​​ಕ್ಲೂಸಿವ್ ವಿಡಿಯೋ
ಕಮಿಷನ್​​ ಪಡೆಯುವಾಗಲೇ ಶಾಸಕ ಲಾಕ್​, ಇಲ್ಲಿದೆ ಎಕ್ಸ್​​ಕ್ಲೂಸಿವ್ ವಿಡಿಯೋ
ಅಭಿಮಾನಿಗಳ ಆ ಒಂದು ಮಹತ್ ಕಾರ್ಯಕ್ಕೆ ಜೈಲಿನಿಂದಲೇ ಧನ್ಯವಾದ ಹೇಳಿದ ದರ್ಶನ್
ಅಭಿಮಾನಿಗಳ ಆ ಒಂದು ಮಹತ್ ಕಾರ್ಯಕ್ಕೆ ಜೈಲಿನಿಂದಲೇ ಧನ್ಯವಾದ ಹೇಳಿದ ದರ್ಶನ್
ಹೆಲಿಕಾಪ್ಟರ್ ಘಟಕಕ್ಕೆ ವಿದ್ಯುತ್ ಕಟ್ ಮಾಡಿ ಎಂದ ಕೊತ್ತೂರು ಶಾಸಕ!
ಹೆಲಿಕಾಪ್ಟರ್ ಘಟಕಕ್ಕೆ ವಿದ್ಯುತ್ ಕಟ್ ಮಾಡಿ ಎಂದ ಕೊತ್ತೂರು ಶಾಸಕ!
ಕಾಂಗ್ರೆಸ್ ಕುರ್ಚಿ ಕದನ: ಖರ್ಗೆ ಭೇಟಿ ಬಳಿಕ ಜಾರಕಿಹೊಳಿ ಸ್ಫೋಟಕ ಮಾಹಿತಿ
ಕಾಂಗ್ರೆಸ್ ಕುರ್ಚಿ ಕದನ: ಖರ್ಗೆ ಭೇಟಿ ಬಳಿಕ ಜಾರಕಿಹೊಳಿ ಸ್ಫೋಟಕ ಮಾಹಿತಿ
ಬಂಧನದ ಬಗ್ಗೆ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಫಸ್ಟ್ ರಿಯಾಕ್ಷನ್
ಬಂಧನದ ಬಗ್ಗೆ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಫಸ್ಟ್ ರಿಯಾಕ್ಷನ್
ವೈರಿಯ ಮನೆಗೆ ಬೆಂಕಿ ಹಚ್ಚಲು ಹೋದವನ ಕಾರೇ ಬೆಂಕಿಗಾಹುತಿ
ವೈರಿಯ ಮನೆಗೆ ಬೆಂಕಿ ಹಚ್ಚಲು ಹೋದವನ ಕಾರೇ ಬೆಂಕಿಗಾಹುತಿ