AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪೈಲ್ವಾನರ ಮಾಸಾಶನ ಹೆಚ್ಚಿಸಿದ್ದು ನಮ್ಮ ಸರ್ಕಾರ ಎಂಬ ಸಿ.ಸಿ.ಪಾಟೀಲ್ ಹೇಳಿಕೆಗೆ ‘ಮಾಸಾಶನ ಬಂದೇ ಇಲ್ಲ’ ಎಂದ ಪೈಲ್ವಾನರು

ಸರ್ಕಾರದ ವಿರುದ್ಧ ಘೋಷಣೆ ಕೂಗಿದ ಪೈಲ್ವಾನರ ಬಗ್ಗೆ ಸಿ.ಸಿ. ಪಾಟೀಲ್ ಗರಂ ಆಗಿದ್ದಾರೆ. ನಿಮ್ಮನ್ನು ಕೇಳೋದು ಬೇಡ ಅಂದ್ರೆ ನಾವು ಯಾರಿಗೆ ಕೇಳಬೇಕು ಎಂದು ಪೈಲ್ವಾನರು ಕೂಡ ವಾಗ್ವಾದ ನಡೆಸಿದ್ದಾರೆ. ನಿಮ್ಮ ಸರ್ಕಾರ ನಿಮಗೇ ಕೇಳಬೇಕು ಎಂದು ಪೈಲ್ವಾನರು ಕಿಡಿಯಾಗಿದ್ದಾರೆ.

ಪೈಲ್ವಾನರ ಮಾಸಾಶನ ಹೆಚ್ಚಿಸಿದ್ದು ನಮ್ಮ ಸರ್ಕಾರ ಎಂಬ ಸಿ.ಸಿ.ಪಾಟೀಲ್ ಹೇಳಿಕೆಗೆ ‘ಮಾಸಾಶನ ಬಂದೇ ಇಲ್ಲ’ ಎಂದ ಪೈಲ್ವಾನರು
ಸಚಿವ ಸಿ.ಸಿ ಪಾಟೀಲ್ (ಸಂಗ್ರಹ ಚಿತ್ರ)
TV9 Web
| Edited By: |

Updated on:Apr 05, 2022 | 12:49 PM

Share

ಗದಗ: ನಮ್ಮ ಸರ್ಕಾರ ಪೈಲ್ವಾನರಿಗೆ ಮಾಸಾಶನ ಹೆಚ್ಚಳ ಮಾಡಿದೆ ಎಂಬ ಸಚಿವ ಸಿ.ಸಿ. ಪಾಟೀಲ್ ಹೇಳಿಕೆಗೆ ಪೈಲ್ವಾನರು ಆಕ್ರೋಶ ವ್ಯಕ್ತಪಡಿಸಿದ ಘಟನೆ ನಗರದ ಪ್ರವಾಸಿ ಮಂದಿರದಲ್ಲಿ ಇಂದು (ಏಪ್ರಿಲ್ 5) ಘಟಿಸಿದೆ. ಗದಗ ನಗರದಲ್ಲಿ ಮಾಸಾಶನ ನೀಡುವಂತೆ ಪೈಲ್ವಾನರು ಮನವಿ ಸಲ್ಲಿಸಿದ್ದರು. ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ಸಿ.ಸಿ.ಪಾಟೀಲ್ ಪೈಲ್ವಾನರ ಮನವಿ ಸ್ವೀಕರಿಸಿದ್ದರು. ಆ ಬಳಿಕ ಮಾತನಾಡಿದ, ಸಿ.ಸಿ.ಪಾಟೀಲ್ ನಮ್ಮ ಸರ್ಕಾರ ಪೈಲ್ವಾನರ ಮಾಸಾಶನ ಹೆಚ್ಚಳ ಮಾಡಿದೆ ಎಂದಿದ್ದಾರೆ. ಇದಕ್ಕೆ ಪೈಲ್ವಾನರ ಪ್ರತಿರೋಧ ವ್ಯಕ್ತವಾಗಿದೆ.

ಜಿಲ್ಲಾ ಉಸ್ತುವಾರಿ ಸಚಿವರ ಮಾತಿಗೆ ಆಕ್ರೋಶ ವ್ಯಕ್ತಪಡಿಸಿದ ಪೈಲ್ವಾನರು, ನಿಮ್ಮ ಸರ್ಕಾರ ಮಾಸಾಶನ ಬಿಡುಗಡೆ ಮಾಡಿಲ್ಲ ಎಂದು ತಿಳಿಸಿದ್ದಾರೆ. ಬಿಜೆಪಿ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ಪೈಲ್ವಾನರು ಆಕ್ರೋಶ ಹೊರಹಾಕಿದ್ದಾರೆ. ಸಚಿವ ಸಿ.ಸಿ.ಪಾಟೀಲ್​ ಜತೆ ವಾಗ್ವಾದ ನಡೆಸಿದ್ದಾರೆ. ಅಷ್ಟೇ ಅಲ್ಲದೆ, ಪ್ರವಾಸಿ ಮಂದಿರದಲ್ಲೇ ಧರಣಿ ಕುಳಿತು ವಿರೋಧಿಸಿದ್ದಾರೆ.

ಈ ಮಧ್ಯೆ, ಸರ್ಕಾರದ ವಿರುದ್ಧ ಘೋಷಣೆ ಕೂಗಿದ ಪೈಲ್ವಾನರ ಬಗ್ಗೆ ಸಿ.ಸಿ. ಪಾಟೀಲ್ ಗರಂ ಆಗಿದ್ದಾರೆ. ನಿಮ್ಮನ್ನು ಕೇಳೋದು ಬೇಡ ಅಂದ್ರೆ ನಾವು ಯಾರಿಗೆ ಕೇಳಬೇಕು ಎಂದು ಪೈಲ್ವಾನರು ಕೂಡ ವಾಗ್ವಾದ ನಡೆಸಿದ್ದಾರೆ. ನಿಮ್ಮ ಸರ್ಕಾರ ನಿಮಗೇ ಕೇಳಬೇಕು ಎಂದು ಪೈಲ್ವಾನರು ಕಿಡಿಯಾಗಿದ್ದಾರೆ. ಬಳಿಕ ಆಕ್ರೋಶಗೊಂಡ ಪೈಲ್ವಾನರನ್ನು ಸಂಸದ ಶಿವಕುಮಾರ ಉದಾಸಿ ಸಮಾಧಾನಪಡಿಸಿದ್ದಾರೆ. ಕೊರೊನಾ ಕಾರಣದಿಂದ ಎಲ್ಲಾ ಕಡೆಯೂ ಈ ಪ್ರಕ್ರಿಯೆ ತಡವಾಗಿದೆ, ನಿಧಾನವಾಗಿದೆ. ಡಿಸಿ ಹಾಗೂ ಉಸ್ತುವಾರಿ ಸಚಿವರ ಜೊತೆಗೆ ಮಾತನಾಡಿ ಮಾಸಾಶನ ಕೊಡಿಸುವುದಾಗಿ ಶಿವಕುಮಾರ ಉದಾಸಿ ಭರವಸೆ ನೀಡಿದ್ದಾರೆ.

ಇದನ್ನೂ ಓದಿ: ಪಿಂಚಣಿ ಹಣ ಡ್ರಾ ಮಾಡದಿದ್ದರೆ ಬ್ಯಾಂಕ್ ಖಾತೆ ಸ್ಥಗಿತ: ಆರ್.ಅಶೋಕ ಹೇಳಿಕೆಗೆ ವ್ಯಾಪಕ ಖಂಡನೆ

ಇದನ್ನೂ ಓದಿ: ಸಿದ್ದರಾಮಯ್ಯ ಹೇಳಿದ ತಕ್ಷಣ ಅದು ವೇದಾಂತವಲ್ಲ: ಬಿ.ಸಿ.ಪಾಟೀಲ್

Published On - 8:00 pm, Mon, 5 April 21

ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಮಾಡದ ತಪ್ಪಿಗೆ ಸುಟ್ಟು ಕರಕಲಾದ ಸೀಬರ್ಡ್ ಬಸ್ಸಿನ ಕೊನೆಯ ದೃಶ್ಯ
ಮಾಡದ ತಪ್ಪಿಗೆ ಸುಟ್ಟು ಕರಕಲಾದ ಸೀಬರ್ಡ್ ಬಸ್ಸಿನ ಕೊನೆಯ ದೃಶ್ಯ