ಹಿಂದೂ ಹೆಸರಿಟ್ಟುಕೊಂಡು ದಾವಣಗೆರೆಯಲ್ಲಿ ವಾಸವಿದ್ದ ಪಾಕಿಸ್ತಾನ ಪ್ರಜೆಗಳು ಬೆಂಗಳೂರಲ್ಲಿ ಬಂಧನ

ಜಿಗಣಿಯಲ್ಲಿ ಶಂಕಿತ ಉಗ್ರ ಮತ್ತು ಪಾಕಿಸ್ತಾನ ಪ್ರಜೆಯನ್ನು ಬಂಧಿಸಿದ ಬೆನ್ನಲ್ಲೇ ದಾವಣಗೆರೆಯಲ್ಲೂ ಅಂಥದ್ದೇ ಪ್ರಕರಣ ಬಯಲಿಗೆ ಬಂದಿದೆ. ಹಿಂದೂ ಹೆಸರಿಟ್ಟುಕೊಂಡು ವಾಸ ಮಾಡುತ್ತಿದ್ದ ಪಾಕಿಸ್ತಾನ ಪ್ರಜೆಗಳನ್ನು ಬೆಂಗಳೂರು ಪೊಲೀಸರು ಬೆಂಗಳೂರಿನಲ್ಲಿ ಬಂಧಿಸಿದ್ದಾರೆ. ಬಂಧಿತ ಪಾಕ್ ಪ್ರಜೆಗಳು ಯಾರೆಲ್ಲ? ಯಾವ ಹೆಸರಿನಲ್ಲಿ ವಾಸ ಮಾಡುತ್ತಿದ್ದರು ಇತ್ಯಾದಿ ವಿವರಗಳು ಇಲ್ಲಿವೆ.

ಹಿಂದೂ ಹೆಸರಿಟ್ಟುಕೊಂಡು ದಾವಣಗೆರೆಯಲ್ಲಿ ವಾಸವಿದ್ದ ಪಾಕಿಸ್ತಾನ ಪ್ರಜೆಗಳು ಬೆಂಗಳೂರಲ್ಲಿ ಬಂಧನ
ಬಂಧಿತರು ವಾಸವಿದ್ದ ದಾವಣಗೆರೆಯ ಬಡಾವಣೆ ಮತ್ತು ಒಳಚಿತ್ರದಲ್ಲಿ ಆರೋಪಿ
Follow us
| Updated By: ಗಣಪತಿ ಶರ್ಮ

Updated on: Oct 02, 2024 | 2:26 PM

ದಾವಣಗೆರೆ, ಅಕ್ಟೋಬರ್ 2: ಹಿಂದುಗಳ ಹೆಸರಿಟ್ಟುಕೊಂಡು ದಾವಣಗೆರೆಯ ಶಿವಕುಮಾರ ಸ್ವಾಮಿ ಬಡಾವಣೆಯಲ್ಲಿ ವಾಸವಿದ್ದ ಪಾಕಿಸ್ತಾನ ಪ್ರಜೆಗಳನ್ನು ಬೆಂಗಳೂರಿನಲ್ಲಿ ಪೊಲೀಸರು ಬಂಧಿಸಿದ್ದಾರೆ. ದಾವಣಗೆಯಲ್ಲಿ ವಾಸ್ತವ್ಯ ಹೂಡಿದ್ದ ಪಾಕಿಸ್ತಾನದ ಮಹಿಳೆ ನಕಲಿ ದಾಖಲೆ ಸೃಷ್ಟಿಸಿ ಭಾರತದಲ್ಲಿ ನೆಲೆಯಾಗಿರುವುದು ಪೊಲೀಸರಿಗೆ ತಿಳಿದುಬಂದಿದೆ. ಪಾಕ್ ಮೂಲದ ಮಹಿಳೆ ಫಾತಿಮಾ ದಾವಣಗೆರೆಯ ಅಲ್ತಾಫ್ ಜೊತೆ ವಿವಾಹವಾಗಿದ್ದಳು.

ಉಳಿದಂತೆ, ಮೊಹಮ್ಮದ್ ಹನೀಫ್ ಎಂಬಾತನನ್ನು ಪೊಲೀಸರು ಬಂಧಿಸಿದ್ದು, ಈತ ಕೂಡ ಪಾಕಿಸ್ತಾನದವನಾಗಿದ್ದಾನೆ. ಹನೀಫ್ ಸೊಸೆ, ಮಗಳು, ಅಳಿಯನನ್ನೂ ಬಂಧಿಸಲಾಗಿದೆ. ರಶೀದ್ ಅಲಿ ಸಿದ್ದಿಕಿ ಎಂಬಾತನ ಮಾವ ಮೊಹಮ್ಮದ್ ಹನೀಫ್ ಬೆಂಗಳೂರಿನಲ್ಲಿ ಸೆರೆ ಸಿಕ್ಕಿರುವ ಪ್ರಮುಖ ಆರೋಪಿಯಾಗಿದ್ದಾನೆ.

ಸಿದ್ದಿಕಿ ಮೊಹಮ್ಮದ್ ಯಾಸಿನ್ (ಮಗ), ಜೈನಾಬಿ ನೂರ್ (ಸೊಸೆ), ಫಾತಿಮಾ (ಮಗಳು), ಅಲ್ತಾಫ್ ಬಂಧಿತ ಆರೋಪಿಗಳಾಗಿದ್ದಾರೆ. ಅಲ್ತಾಫ್ ಪತ್ನಿ ಫಾತಿಮಾ ಪಾಕ್ ಪ್ರಜೆಯಾಗಿದ್ದಾಳೆ.

ಹಿಂದೂ ಹೆಸರುಗಳನ್ನಿಟ್ಟುಕೊಂಡಿದ್ದ ಆರೋಪಿಗಳು

ಬಂಧಿತರ ಪೈಕಿ ರಶೀದ್ ಅಲಿ ಸಿದ್ದಿಕಿ ಶಂಕರ್ ಶರ್ಮಾ (48) ಎಂದು ಹೆಸರಿಟ್ಟುಕೊಂಡಿದ್ದರೆ, ಆಯೇಷಾ ಹನೀಫ್ @ ಆಶಾ ಶರ್ಮಾ (38), ಮೊಹಮ್ಮದ್ ಹನೀಫ್ @ ರಾಮ್ ಬಾಬಾ ಶರ್ಮಾ (73) ರುಬೀನಾ @ ರಾಣಿ ಶರ್ಮಾ (61) ಎಂದು ಹೆಸರುಗಳನ್ನಿಟ್ಟುಕೊಂಡಿದ್ದರು.

ಜಿಗಣಿಯಲ್ಲಿ ಪಾಕ್ ಪ್ರಜೆಗಳ ಬಂಧನ ತನಿಖೆಗೆ 4 ತಂಡಗಳು

ಏತನ್ಮಧ್ಯೆ, ಬೆಂಗಳೂರಿನ ಜಿಗಣಿಯಲ್ಲಿ ಪಾಕಿಸ್ತಾನ ಪ್ರಜೆಗಳು ಬಂಧನವಾಗಿರುವ ಸಂಬಂಧ ಹೆಚ್ಚಿನ ತನಿಖೆಗಾಗಿ ಪೊಲೀಸರ 4 ತಂಡಗಳ ರಚನೆ ಮಾಡಲಾಗಿದೆ. ಡಿವೈಎಸ್​ಪಿ ಮೋಹನ್​ಕುಮಾರ್ ನೇತೃತ್ವದಲ್ಲಿ 4 ತಂಡಗಳನ್ನು ರಚಿಸಲಾಗಿದೆ. ಬನ್ನೇರುಘಟ್ಟ ಪೊಲೀಸ್ ಠಾಣೆ ಇನ್ಸ್​​ಪೆಕ್ಟರ್ ಕೃಷ್ಣಕುಮಾರ್, ಜಿಗಣಿ ಪೊಲೀಸ್ ಠಾಣೆ ಇನ್ಸ್​ಪೆಕ್ಟರ್ ಮಂಜುನಾಥ್, ಅತ್ತಿಬೆಲೆ ಪೊಲೀಸ್ ಠಾಣೆ ಇನ್ಸ್​ಪೆಕ್ಟರ್ ರಾಘವೇಂದ್ರ, ಸರ್ಜಾಪುರ ಪೊಲೀಸ್ ಠಾಣೆ ಇನ್ಸ್​ಪೆಕ್ಟರ್​ಗಳಾದ ನವೀನ್​, ಕುಮಾರ್ ಅವರ ತಂಡ ರಚನೆ ಮಾಡಲಾಗಿದೆ.

ಇದನ್ನೂ ಓದಿ: ಬೆಂಗಳೂರು: ಆನೇಕಲ್​ನಲ್ಲಿ ಪಾಕಿಸ್ತಾನ ಪ್ರಜೆಯ ಬಂಧನ

ಈ ತನಿಖಾ ತಂಡಗಳು ದೆಹಲಿ, ಚೆನ್ನೈ ಬೆಳಗಾವಿ, ಮುಂಬೈ ಸೇರಿ ಹಲವೆಡೆ ತೆರಳಿ ಮಾಹಿತಿ ಕಲೆ ಹಾಕಲಿವೆ. ಪಾಕಿಸ್ತಾನ ಪ್ರಜೆಗಳಿಗೆ ನಕಲಿ ಆಧಾರ್​ ಮಾಡಿಕೊಟ್ಟವರು ಯಾರು? ಭಾರತೀಯ ದಾಖಲಾತಿಗಳನ್ನು ಮಾಡಿಕೊಟ್ಟವರನ್ನು ತಲಾಶ್ ಮಾಡಲಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಸಿಎಂ ಸಿದ್ದರಾಮಯ್ಯಗೆ ಗಾಂಧಿ ಟೋಪಿ ಹಾಕಿದ ಡಿಕೆ ಶಿವಕುಮಾರ್​
ಸಿಎಂ ಸಿದ್ದರಾಮಯ್ಯಗೆ ಗಾಂಧಿ ಟೋಪಿ ಹಾಕಿದ ಡಿಕೆ ಶಿವಕುಮಾರ್​
ಗಾಂಧಿ ಜಂಯತಿ 2024: ವಿಧಾನಸೌಧದವರೆಗೂ ನಡೆದುಕೊಂಡೇ ಹೋದ ಸಿಎಂ, ಡಿಸಿಎಂ
ಗಾಂಧಿ ಜಂಯತಿ 2024: ವಿಧಾನಸೌಧದವರೆಗೂ ನಡೆದುಕೊಂಡೇ ಹೋದ ಸಿಎಂ, ಡಿಸಿಎಂ
ಇದು ಪ್ರಾರಂಭ ಅಷ್ಟೆ, ಪಿಕ್ಚರ್ ಇನ್ನೂ ಬಾಕಿ ಇದೆ ಎಂದ ಜಗದೀಶ್
ಇದು ಪ್ರಾರಂಭ ಅಷ್ಟೆ, ಪಿಕ್ಚರ್ ಇನ್ನೂ ಬಾಕಿ ಇದೆ ಎಂದ ಜಗದೀಶ್
ಗಾಂಧಿ ಜಯಂತಿ: ಮಕ್ಕಳೊಂದಿಗೆ ಸ್ವಚ್ಛತಾ ಕಾರ್ಯದಲ್ಲಿ ಪಾಲ್ಗೊಂಡ ಮೋದಿ
ಗಾಂಧಿ ಜಯಂತಿ: ಮಕ್ಕಳೊಂದಿಗೆ ಸ್ವಚ್ಛತಾ ಕಾರ್ಯದಲ್ಲಿ ಪಾಲ್ಗೊಂಡ ಮೋದಿ
ಬೆಂಗಳೂರು ಹನುಮಂತನಗರದಲ್ಲಿ ಲಾಂಗ್, ಬ್ಯಾಟ್ ಹಿಡಿದು ಪುಡಿ ರೌಡಿಗಳ ಅಟ್ಟಹಾಸ
ಬೆಂಗಳೂರು ಹನುಮಂತನಗರದಲ್ಲಿ ಲಾಂಗ್, ಬ್ಯಾಟ್ ಹಿಡಿದು ಪುಡಿ ರೌಡಿಗಳ ಅಟ್ಟಹಾಸ
ರಾಜ್​ಘಾಟ್​ನಲ್ಲಿ ರಾಷ್ಟ್ರಪಿತನಿಗೆ ಪುಷ್ಟನಮನ ಸಲ್ಲಿಸಿದ ಪ್ರಧಾನಿ ಮೋದಿ
ರಾಜ್​ಘಾಟ್​ನಲ್ಲಿ ರಾಷ್ಟ್ರಪಿತನಿಗೆ ಪುಷ್ಟನಮನ ಸಲ್ಲಿಸಿದ ಪ್ರಧಾನಿ ಮೋದಿ
ಪ್ರಯಾಣಿಕರ ಗಮನಕ್ಕೆ: ಬೆಳಗಾವಿ-ಮೀರಜ್ ನಡುವೆ ವಿಶೇಷ ರೈಲು ಸೇವೆ
ಪ್ರಯಾಣಿಕರ ಗಮನಕ್ಕೆ: ಬೆಳಗಾವಿ-ಮೀರಜ್ ನಡುವೆ ವಿಶೇಷ ರೈಲು ಸೇವೆ
ಕೇತುಗ್ರಸ್ತ ಸೂರ್ಯಗ್ರಹಣ ಪ್ರಭಾವ ಹೇಗಿರುತ್ತೆ ತಿಳಿಯಿರಿ
ಕೇತುಗ್ರಸ್ತ ಸೂರ್ಯಗ್ರಹಣ ಪ್ರಭಾವ ಹೇಗಿರುತ್ತೆ ತಿಳಿಯಿರಿ
Nithya Bhavishya: ಮಹಾಲಯ ಅಮವಾಸ್ಯೆ ದಿನದ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ಮಹಾಲಯ ಅಮವಾಸ್ಯೆ ದಿನದ ರಾಶಿ ಭವಿಷ್ಯ ತಿಳಿಯಿರಿ
ಪರೀಕ್ಷೆಯ ಹಿಂದಿನ ರಾತ್ರಿ ಬೆಂಗಳೂರು ಹಾಸ್ಟೆಲ್ ಹುಡುಗೀರ ಡ್ಯಾನ್ಸ್
ಪರೀಕ್ಷೆಯ ಹಿಂದಿನ ರಾತ್ರಿ ಬೆಂಗಳೂರು ಹಾಸ್ಟೆಲ್ ಹುಡುಗೀರ ಡ್ಯಾನ್ಸ್