ತಮಿಳುನಾಡಿನಲ್ಲಿ ಚಿನ್ನಮ್ಮ‌ ಶಶಿಕಲಾಗೆ ‌ಮತ್ತೊಂದು ಶಾಕ್ ನೀಡಿದ ಪಳನಿಸ್ವಾಮಿ ನೇತೃತ್ವದ AIADMK ಸರ್ಕಾರ

Palaniswamy AIADMK government confiscate VK Sasikala land ಸುಪ್ರೀಂ ಕೋರ್ಟ್​ ಆದೇಶದ ಮೇರೆಗೆ ಪಳನಿಸ್ವಾಮಿ ನೇತೃತ್ವದ ರಾಜ್ಯ ಸರಕಾರ ತಮಿಳುನಾಡಿನಾದ್ಯಂತ ಶಶಿಕಲಾ ನಟರಾಜನ್​ಗೆ ಸೇರಿದ ಕೋಟ್ಯಾಂತರ ರೂಪಾಯಿ ಜಮೀನುಗಳ ಜಪ್ತಿ ಮಾಡಿದೆ. ಇತ್ತೀಚಿಗೆ ಚನ್ನೈನಲ್ಲಿ 6 ಕಡೆಗಳಲ್ಲಿ ನೂರಾರು ‌ಕೋಟಿ ಆಸ್ತಿಗಳನ್ನು ಜಪ್ತಿ‌ ಮಾಡಿತ್ತು.

ತಮಿಳುನಾಡಿನಲ್ಲಿ ಚಿನ್ನಮ್ಮ‌ ಶಶಿಕಲಾಗೆ ‌ಮತ್ತೊಂದು ಶಾಕ್ ನೀಡಿದ ಪಳನಿಸ್ವಾಮಿ ನೇತೃತ್ವದ AIADMK ಸರ್ಕಾರ
ಪಳನಿ ಸ್ವಾಮಿ, ಶಶಿಕಲಾ
ಸಾಧು ಶ್ರೀನಾಥ್​ Edited By:

Updated on: Feb 10, 2021 | 3:04 PM

ಚೆನ್ನೈ: ಅಸೆಂಬ್ಲಿ ಚುನಾವಣೆ ಹಿನ್ನೆಲೆಯಲ್ಲಿ ತಮಿಳುನಾಡಿನಲ್ಲಿ ತಮ್ಮ ರಾಜಕೀಯ ಆರ್ಭಟ ತೋರಿಸಲು ಮುಂದಾಗಿದ್ದ ಚಿನ್ನಮ್ಮ‌ ವಿಕೆ ಶಶಿಕಲಾ ನಟರಾಜನ್​ಗೆ ಅಣ್ಣಾ ಡಿಎಂಕೆ ಸರ್ಕಾರ ಮತ್ತೊಮ್ಮೆ ಶಾಕ್ ನೀಡಿದೆ. ಶಶಿಕಲಾ ಸಂಬಂಧಿಗಳಾದ ಇಳವರಸಿ ಮತ್ತು ‌ಸುಧಾಕರನ್ ‌ಹೆಸರಲ್ಲಿದ್ದ ಭಾರಿ ಮೌಲ್ಯದ ಆಸ್ತಿಗಳನ್ನು ಜಪ್ತಿ ಮಾಡಿದೆ. ತೂತ್ತುಕುಡಿ ಜಿಲ್ಲೆಯಲ್ಲಿ‌ 800 ಎಕರೆ ಭೂಮಿಯನ್ನು ರಾಜ್ಯ ಸರ್ಕಾರದ ವತಿಯಿಂದ ಜಪ್ತಿ ಮಾಡಲಾಗಿದೆ.

ಸುಪ್ರೀಂ ಕೋರ್ಟ್​ ಆದೇಶದ ಮೇರೆಗೆ ಪಳನಿಸ್ವಾಮಿ ನೇತೃತ್ವದ ರಾಜ್ಯ ಸರಕಾರ ತಮಿಳುನಾಡಿನಾದ್ಯಂತ ಶಶಿಕಲಾ ನಟರಾಜನ್​ಗೆ ಸೇರಿದ ಕೋಟ್ಯಾಂತರ ರೂಪಾಯಿ ಜಮೀನುಗಳ ಜಪ್ತಿ ಮಾಡಿದೆ. ಇತ್ತೀಚಿಗೆ ಚನ್ನೈನಲ್ಲಿ 6 ಕಡೆಗಳಲ್ಲಿ ನೂರಾರು ‌ಕೋಟಿ ಆಸ್ತಿಗಳನ್ನು ಜಪ್ತಿ‌ ಮಾಡಿತ್ತು.

Published On - 4:56 pm, Tue, 9 February 21

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us