AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಂಪಾ ಸರೋವರ ದೇವಸ್ಥಾನದ ಅರ್ಚಕರಾದ ಮಹಾಂತ ರಾಮದಾಸ್ ಬಾಬ ವಿಧಿವಶ

Archak Mahantha Ramadas Baba: ಅರ್ಚಕರಾದ ಮಹಾಂತ ರಾಮದಾಸ್ ಬಾಬಾ ಅವರು ಮೂಲತಃ ಉತ್ತರ ಪ್ರದೇಶ ರಾಜ್ಯದವರಾಗಿದ್ದು, ಸುಮಾರು 50 ವರ್ಷಗಳ ಕಾಲ ಗಂಗಾವತಿಯ ಪಂಪಾ ಸರೋವರ ವಿಜಯಲಕ್ಷ್ಮಿ ದೇವಸ್ಥಾನದ ಅರ್ಚಕರಾಗಿ ಸೇವೆ ಸಲ್ಲಿಸಿದ್ದಾರೆ.

ಪಂಪಾ ಸರೋವರ ದೇವಸ್ಥಾನದ ಅರ್ಚಕರಾದ ಮಹಾಂತ ರಾಮದಾಸ್ ಬಾಬ ವಿಧಿವಶ
ಪಂಪಾ ಸರೋವರ ದೇವಸ್ಥಾನದ ಅರ್ಚಕರಾದ ಮಹಾಂತ ರಾಮದಾಸ್ ಬಾಬ ವಿಧಿವಶ
TV9 Web
| Edited By: |

Updated on:Aug 16, 2022 | 8:37 PM

Share

ಕೊಪ್ಪಳ‌ ಜಿಲ್ಲೆ ಗಂಗಾವತಿ (Gangavathi) ತಾಲೂಕಿನ ಐತಿಹಾಸಿಕ ಹಾಗೂ ರಾಮಾಯಣ ಕಾಲದ ಇತಿಹಾಸ ಸಾರುವ ಪವಿತ್ರ ಪಂಪಾ ಸರೋವರದಲ್ಲಿರುವ (Pampa Sarovar Temple) ವಿಜಯಲಕ್ಷ್ಮಿ ದೇವಸ್ಥಾನದ ಅರ್ಚಕರಾದ ಮಹಾಂತ ರಾಮದಾಸ್ ಬಾಬಾ (95) ಮಂಗಳವಾದ ದೈವಧೀನರಾದರು. ಇವರು (Archak Mahantha Ramadas Baba) ಮೂಲತಃ ಉತ್ತರ ಪ್ರದೇಶ ರಾಜ್ಯದವರಾಗಿದ್ದು, ಸುಮಾರು 50 ವರ್ಷಗಳ ಕಾಲ ಪಂಪಾ ಸರೋವರ ವಿಜಯಲಕ್ಷ್ಮಿ ದೇವಸ್ಥಾನದ ಅರ್ಚಕರಾಗಿ ಸೇವೆ ಸಲ್ಲಿಸಿದ್ದಾರೆ.

ಈ ಐತಿಹಾಸಿಕ ಪಂಪಾ ಸರೋವರದಲ್ಲಿ ರಾಮನ ಭಕ್ತೆಯಾದ ಶಬರಿ ರಾಮನ ಆಗಮನಕ್ಕಾಗಿ ಕಾದು ಕುಳಿತಿದ್ದಳು ಎಂದು ಹಿಂದೂ ಮಹಾಕಾವ್ಯ ರಾಮಯಣದಲ್ಲಿ ಉಲ್ಲೇಖವಿದೆ.

ಇವರ ಅಸ್ತಂಗತ ವಿಷಯ ತಿಳಿದು ರಾಜವಂಶಸ್ಥ ರಾಜ ರಾಮದೇವರಾಯ, ಹರಿಹರದೇವರಾಯ, ರಾಜವಂಶಸ್ಥೆ ಲಲಿತಾರಾಣಿ, ಅಂಜನಾದ್ರಿ ದೇವಸ್ಥಾನದ ಅರ್ಚಕ ವಿದ್ಯಾ ದಾಸ ಬಾಬ, ಆದಿಶಕ್ತಿ ದುರ್ಗಾದೇವಿ ದೇವಸ್ಥಾನದ ಬ್ರಹ್ಮಾನಂದ ಸ್ವಾಮೀಜಿ, ತಹಶೀಲ್ದಾರ ಯು. ನಾಗರಾಜ ಸೇರಿದಂತೆ ಅಂಜನಾದ್ರಿ ಬೆಟ್ಟದ ಆಡಳಿತ ಸಿಬ್ಬಂದಿ ಭೇಟಿ ನೀಡಿದರು.

ಬುಧವಾರ ಬೆಳಗ್ಗೆ 11.30ಕ್ಕೆ ಪಂಪಾ ಸರೋವರ ದೇವಸ್ಥಾನದ ಕಲ್ಯಾಣ ಮಂಟಪದ ಬಳಿ ಇರುವ ಶಾಮಸುಂದರ್ ದಾಸ, ಲಕ್ಷ್ಮಣದಾಸ ಸಮಾಧಿ ಬಳಿ ಮಹಾಂತ ರಾಮದಾಸ್ ಬಾಬ ಅವರ ಅಂತ್ಯಕ್ರಿಯೆ ನಡೆಯಲಿದೆ ಎಂದು ದೇವಸ್ಥಾನದ ಆಡಳಿತ ಸಿಬ್ಬಂದಿ ತಿಳಿಸಿದೆ.

Published On - 8:34 pm, Tue, 16 August 22

ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್