AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಂಪಾ ಸರೋವರ ದೇವಸ್ಥಾನದ ಅರ್ಚಕರಾದ ಮಹಾಂತ ರಾಮದಾಸ್ ಬಾಬ ವಿಧಿವಶ

Archak Mahantha Ramadas Baba: ಅರ್ಚಕರಾದ ಮಹಾಂತ ರಾಮದಾಸ್ ಬಾಬಾ ಅವರು ಮೂಲತಃ ಉತ್ತರ ಪ್ರದೇಶ ರಾಜ್ಯದವರಾಗಿದ್ದು, ಸುಮಾರು 50 ವರ್ಷಗಳ ಕಾಲ ಗಂಗಾವತಿಯ ಪಂಪಾ ಸರೋವರ ವಿಜಯಲಕ್ಷ್ಮಿ ದೇವಸ್ಥಾನದ ಅರ್ಚಕರಾಗಿ ಸೇವೆ ಸಲ್ಲಿಸಿದ್ದಾರೆ.

ಪಂಪಾ ಸರೋವರ ದೇವಸ್ಥಾನದ ಅರ್ಚಕರಾದ ಮಹಾಂತ ರಾಮದಾಸ್ ಬಾಬ ವಿಧಿವಶ
ಪಂಪಾ ಸರೋವರ ದೇವಸ್ಥಾನದ ಅರ್ಚಕರಾದ ಮಹಾಂತ ರಾಮದಾಸ್ ಬಾಬ ವಿಧಿವಶ
TV9 Web
| Edited By: ಸಾಧು ಶ್ರೀನಾಥ್​|

Updated on:Aug 16, 2022 | 8:37 PM

Share

ಕೊಪ್ಪಳ‌ ಜಿಲ್ಲೆ ಗಂಗಾವತಿ (Gangavathi) ತಾಲೂಕಿನ ಐತಿಹಾಸಿಕ ಹಾಗೂ ರಾಮಾಯಣ ಕಾಲದ ಇತಿಹಾಸ ಸಾರುವ ಪವಿತ್ರ ಪಂಪಾ ಸರೋವರದಲ್ಲಿರುವ (Pampa Sarovar Temple) ವಿಜಯಲಕ್ಷ್ಮಿ ದೇವಸ್ಥಾನದ ಅರ್ಚಕರಾದ ಮಹಾಂತ ರಾಮದಾಸ್ ಬಾಬಾ (95) ಮಂಗಳವಾದ ದೈವಧೀನರಾದರು. ಇವರು (Archak Mahantha Ramadas Baba) ಮೂಲತಃ ಉತ್ತರ ಪ್ರದೇಶ ರಾಜ್ಯದವರಾಗಿದ್ದು, ಸುಮಾರು 50 ವರ್ಷಗಳ ಕಾಲ ಪಂಪಾ ಸರೋವರ ವಿಜಯಲಕ್ಷ್ಮಿ ದೇವಸ್ಥಾನದ ಅರ್ಚಕರಾಗಿ ಸೇವೆ ಸಲ್ಲಿಸಿದ್ದಾರೆ.

ಈ ಐತಿಹಾಸಿಕ ಪಂಪಾ ಸರೋವರದಲ್ಲಿ ರಾಮನ ಭಕ್ತೆಯಾದ ಶಬರಿ ರಾಮನ ಆಗಮನಕ್ಕಾಗಿ ಕಾದು ಕುಳಿತಿದ್ದಳು ಎಂದು ಹಿಂದೂ ಮಹಾಕಾವ್ಯ ರಾಮಯಣದಲ್ಲಿ ಉಲ್ಲೇಖವಿದೆ.

ಇವರ ಅಸ್ತಂಗತ ವಿಷಯ ತಿಳಿದು ರಾಜವಂಶಸ್ಥ ರಾಜ ರಾಮದೇವರಾಯ, ಹರಿಹರದೇವರಾಯ, ರಾಜವಂಶಸ್ಥೆ ಲಲಿತಾರಾಣಿ, ಅಂಜನಾದ್ರಿ ದೇವಸ್ಥಾನದ ಅರ್ಚಕ ವಿದ್ಯಾ ದಾಸ ಬಾಬ, ಆದಿಶಕ್ತಿ ದುರ್ಗಾದೇವಿ ದೇವಸ್ಥಾನದ ಬ್ರಹ್ಮಾನಂದ ಸ್ವಾಮೀಜಿ, ತಹಶೀಲ್ದಾರ ಯು. ನಾಗರಾಜ ಸೇರಿದಂತೆ ಅಂಜನಾದ್ರಿ ಬೆಟ್ಟದ ಆಡಳಿತ ಸಿಬ್ಬಂದಿ ಭೇಟಿ ನೀಡಿದರು.

ಬುಧವಾರ ಬೆಳಗ್ಗೆ 11.30ಕ್ಕೆ ಪಂಪಾ ಸರೋವರ ದೇವಸ್ಥಾನದ ಕಲ್ಯಾಣ ಮಂಟಪದ ಬಳಿ ಇರುವ ಶಾಮಸುಂದರ್ ದಾಸ, ಲಕ್ಷ್ಮಣದಾಸ ಸಮಾಧಿ ಬಳಿ ಮಹಾಂತ ರಾಮದಾಸ್ ಬಾಬ ಅವರ ಅಂತ್ಯಕ್ರಿಯೆ ನಡೆಯಲಿದೆ ಎಂದು ದೇವಸ್ಥಾನದ ಆಡಳಿತ ಸಿಬ್ಬಂದಿ ತಿಳಿಸಿದೆ.

Published On - 8:34 pm, Tue, 16 August 22

Follow Us
Web contact
Web contact

TV9 Kannada

Read More
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ