AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಲ್ಲಿ ಪಂಚಮಸಾಲಿ ಸಮುದಾಯದ ಬೃಹತ್​ ಸಮಾವೇಶ: 1 ಲಕ್ಷ ಮಂದಿ ಭಾಗಿ ಸಾಧ್ಯತೆ

ಮೀಸಲಾತಿ ಪರಿಷ್ಕರಣೆಗೆ ಆಗ್ರಹಿಸಿ ಜ.14ರಂದು ಕೂಡಲಸಂಗಮದಿಂದ ಹೊರಟಿದ್ದ ಪಾದಯಾತ್ರೆ ಶುಕ್ರವಾರ ಬೆಂಗಳೂರು ಪ್ರವೇಶಿಸಿದೆ. ನಾಳೆಯ ಸಮಾವೇಶದ ಮೂಲಕ ಪಾದಯಾತ್ರೆ ಪೂರ್ಣಗೊಳ್ಳಲಿದೆ.

ಬೆಂಗಳೂರಲ್ಲಿ ಪಂಚಮಸಾಲಿ ಸಮುದಾಯದ ಬೃಹತ್​ ಸಮಾವೇಶ: 1 ಲಕ್ಷ ಮಂದಿ ಭಾಗಿ ಸಾಧ್ಯತೆ
ಬಸವಜಯ ಮೃತ್ಯುಂಜಯಶ್ರೀ ಸ್ವಾಮೀಜಿ
ರಾಜೇಶ್ ದುಗ್ಗುಮನೆ
| Edited By: |

Updated on: Feb 20, 2021 | 7:51 PM

Share

ಬೆಂಗಳೂರು: ಕರ್ನಾಟಕದಲ್ಲಿ ರಾಜಕೀಯ ಹಾಗೂ ಸಾಮಾಜಿಕವಾಗಿ ಪ್ರಬಲರಾಗಿರುವ ಅನೇಕ ಸಮುದಾಯದವರು ಹೋರಾಟಕ್ಕೆ ಇಳಿದಿದ್ದಾರೆ. ಈ ಹೋರಾಟ ನೇರವಾಗಿ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸುತ್ತಿದೆ. ಅದೇ ರೀತಿ, ಪಂಚಮಸಾಲಿ ಸಮುದಾಯಕ್ಕೆ 2A ಮೀಸಲಾತಿ ನೀಡಬೇಕು ಎಂದು ಆಗ್ರಹಿಸಿ ನಾಳೆ ಬೆಂಗಳೂರು ಅರಮನೆ ಮೈದಾನದಲ್ಲಿ ಬೃಹತ್​ ಸಮಾವೇಶ ನಡೆಯಲಿದೆ. ಈ ವೇಳೆ ಲಕ್ಷಾಂತರ ಮಂದಿ ಸೇರುವ ನಿರೀಕ್ಷೆ ಇದೆ. ಹೀಗಾಗಿ ನಾಳೆ ನಡೆಯುವ ಸಮಾವೇಶ ತುಂಬಾನೇ ಪ್ರಾಮುಖ್ಯತೆ ಪಡೆದುಕೊಂಡಿದೆ.

ಪಂಚಮಸಾಲಿ ಸಮುದಾಯವನ್ನು ಹಿಂದುಳಿದ ವರ್ಗಗಳ ಪ್ರವರ್ಗ 2A ಪಟ್ಟಿಗೆ ಸೇರಿಸಬೇಕೆಂದು ಕೂಡಲ ಸಂಗಮದ ಪಂಚಮಸಾಲಿ ಪೀಠದ ಬಸವ ಜಯಮೃತ್ಯುಂಜಯ ಸ್ವಾಮೀಜಿ ಮತ್ತು ಹರಿಹರದ ವಚನಾನಂದ ಸ್ವಾಮೀಜಿ ಆಗ್ರಹವಾಗಿದೆ. ಮೀಸಲಾತಿ ಪರಿಷ್ಕರಣೆಗೆ ಆಗ್ರಹಿಸಿ ಜ.14ರಂದು ಕೂಡಲಸಂಗಮದಿಂದ ಹೊರಟಿದ್ದ ಪಾದಯಾತ್ರೆ ಶುಕ್ರವಾರ ಬೆಂಗಳೂರು ಪ್ರವೇಶಿಸಿದೆ. ನಾಳೆಯ ಸಮಾವೇಶದ ಮೂಲಕ ಪಾದಯಾತ್ರೆ ಪೂರ್ಣಗೊಳ್ಳಲಿದೆ.  ಭಾನುವಾರ ಬೆಳಗ್ಗೆ 11 ಗಂಟೆಗೆ ಆರಂಭವಾಗುವ ಬೃಹತ್  ಸಮಾವೇಶ ಸಂಜೆ ನಾಲ್ಕು ಗಂಟೆ ವೇಳೆಗೆ ಮುಗಿಯಲಿದೆ.

ಪಂಚಮಸಾಲಿ ಸಮುದಾಯವನ್ನು 2Aಗೆ ಸೇರಿಸುವ ಬಗ್ಗೆ ಯಡಿಯೂರಪ್ಪ ಈಗಲೇ ಕಾರ್ಯಪ್ರವೃತ್ತರಾಗಬೇಕು ಎಂಬುದು ಇವರ ಆಗ್ರಹ. ಆದರೆ, ಮುಖ್ಯಮಂತ್ರಿ ಯಡಿಯೂರಪ್ಪ ಈ ಬಗ್ಗೆ ಅಧ್ಯಯನ ನಡೆಸಿ ವರದಿ ನೀಡಿ ಎಂದು ಹಿಂದುಳಿದ ವರ್ಗಗಳ ಆಯೋಗಕ್ಕೆ ಆದೇಶಿಸಿದ್ದಾರೆ. ಅಧ್ಯಯನ ಮಾಡಿ, ಅದರ ವರದಿ ಸರ್ಕಾರದ ಕೈ ಸೇರಿ ಇದು ಜಾರಿಗೆ ಬರುವ ವೇಳೆಗೆ ತುಂಬಾನೇ ಸಮಯವಾಗುತ್ತದೆ ಎನ್ನುವುದು ಇವರ ವಾದ.

ಧರಣಿ ಎಚ್ಚರಿಕೆ.. ಹಿಂದುಳಿದ ವರ್ಗಗಳ ಆಯೋಗ ಅಧ್ಯಯನ ನಡೆಸಿ, ಈ ಬಗ್ಗೆ ವರದಿ ನೀಡುವುದು ತುಂಬ ವಿಳಂಬವಾಗುತ್ತದೆ. ಹೀಗಾಗಿ, ಸಮಾವೇಶ ಮುಗಿಯುವ ಮುನ್ನ ರಾಜ್ಯ ಸರ್ಕಾರ ಮೀಸಲಾತಿ ಸಂಬಂಧ ಸೂಕ್ತ ನಿರ್ಧಾರ ತೆಗೆದುಕೊಳ್ಳಬೇಕು. ಇಲ್ಲದಿದ್ದರೆ, ಅರಮನೆ ಮೈದಾನದಿಂದ ವಿಧಾನಸೌಧದವರೆಗೆ ಪಾದಾಯಾತ್ರೆಯಲ್ಲಿ ತೆರಳಿ, ಧರಣಿ ಸತ್ಯಾಗ್ರಹ ನಡೆಸಲು ನಿರ್ಧರಿಸಲಾಗಿದೆ.

ಮಾರ್ಚ್​​5ರಿಂದ ಉಪವಾಸ ಸತ್ಯಾಗ್ರಹ.. ಪಂಚಮಸಾಲಿ ಸಮುದಾಯಕ್ಕೆ 2A ಮೀಸಲಾತಿ ಪಡೆದೇ ತೀರುತ್ತೇವೆ  ಎಂದು ಜಯಮೃತ್ಯುಂಜಯ ಸ್ವಾಮೀಜಿ  ಹಠ ತೊಟ್ಟಿದ್ದಾರೆ. ಒಂದೊಮ್ಮೆ ಪಾದಯಾತ್ರೆ, ಸಮಾವೇಶ, ಧರಣಿಗೆ ಸರ್ಕಾರ ಬಗ್ಗದಿದ್ದರೆ, ಮಾರ್ಚ್ 5 ರಿಂದ ಉಪವಾಸ ಸತ್ಯಾಗ್ರಹ ಮಾಡುವುದಾಗಿ ಅವರು ಎಚ್ಚರಿಕೆ ನೀಡಿದ್ದಾರೆ.

ರಾಜಕೀಯ ಉದ್ದೇಶ ಇಲ್ಲ.. ಪಂಚಮಸಾಲಿ ಸಮುದಾಯದವರು 2A ಮೀಸಲಾತಿಗೆ ಆಗ್ರಹ ಮಾಡುತ್ತಿರುವದರ ಹಿಂದೆ ಕೆಲ ರಾಜಕೀಯ ಉದ್ದೇಶವಿದೆ ಎನ್ನುವ ಮಾತು ಕೇಳಿ ಬಂದಿತ್ತು. ಈ ವಿಚಾರವಾಗಿ ಮಾತನಾಡಿರುವ ಬಸವ ಜಯಮೃತ್ಯುಂಜಯ ಸ್ವಾಮೀಜಿ, ಈ ಆಗ್ರಹದ ಹಿಂದೆ ಯಾವುದೇ ರಾಜಕೀಯ ಉದ್ದೇಶವಿಲ್ಲ. ಯಡಿಯೂರಪ್ಪ ಅವರನ್ನು ಕುರ್ಚಿಯಿಂದ ಇಳಿಸುವ ಉದ್ದೇಶ ನಮ್ಮದಲ್ಲ. ಸಮುದಾಯದವರ ಶಿಕ್ಷಣ ಹಾಗೂ ಉದ್ಯೋಗಕ್ಕಾಗಿ ಮಾತ್ರ ನಾವು ಮೀಸಲಾತಿ ಕೇಳುತ್ತಿದ್ದೇವೆ ಎಂದಿದ್ದಾರೆ.

ಸಂಚಾರ ದಟ್ಟಣೆ ಸಾಧ್ಯತೆ ಬೃಹತ್​ ಸಮಾವೇಶ ಹಿನ್ನೆಲೆಯಲ್ಲಿ ನಾಳೆ ಬೆಂಗಳೂರಿನ ಅನೇಕ ಕಡೆಗಳಲ್ಲಿ ಸಂಚಾರ ದಟ್ಟಣೆ ಉಂಟಾಗುವ ಸಾಧ್ಯತೆ ಇದೆ. ಅರಮನೆ ಮೈದಾನದ ಸುತ್ತಮುತ್ತಲ ಭಾಗದಲ್ಲಿ ಭಾರೀ ಟ್ರಾಫಿಕ್​ ದಟ್ಟಣೆ ಉಂಟಾಗುವ ಸಾಧ್ಯತೆಯನ್ನು ತಳ್ಳಿ ಹಾಕುವಂತಿಲ್ಲ.

ಇದನ್ನೂ ಓದಿ: 2ಎ ಮೀಸಲಾತಿಗೆ ಪಟ್ಟು, ಮುಂದುವರಿದ ಪಾದಯಾತ್ರೆ.. ಫೆಬ್ರವರಿ 21ರಂದು ಪಂಚಮಸಾಲಿ ಸಮುದಾಯದ ಸಮಾವೇಶಕ್ಕೆ ಸಿದ್ಧತೆ ಶುರು

Follow Us
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಚಂದ್ರ ಗ್ರಹಣದಂದು ಮಂತ್ರಾಲಯ ರಾಯರ ಮಠದಲ್ಲಿಲ್ಲ ಯಾವುದೇ ನಿರ್ಬಂಧ!
ಚಂದ್ರ ಗ್ರಹಣದಂದು ಮಂತ್ರಾಲಯ ರಾಯರ ಮಠದಲ್ಲಿಲ್ಲ ಯಾವುದೇ ನಿರ್ಬಂಧ!
ವಿದಾಯ ಪಂದ್ಯದಲ್ಲಿ ಹೊಸ ಇತಿಹಾಸ ನಿರ್ಮಿಸಿದ ಅಲಿಸಾ ಹೀಲಿ
ವಿದಾಯ ಪಂದ್ಯದಲ್ಲಿ ಹೊಸ ಇತಿಹಾಸ ನಿರ್ಮಿಸಿದ ಅಲಿಸಾ ಹೀಲಿ
‘ಹಯಗ್ರೀವ’ ಬಿಡುಗಡೆಗೆ ತೊಂದರೆ ಮಾಡಿದವರಿಗೆ ಧನ್ವೀರ್ ಗೌಡ ಖಡಕ್ ತಿರುಗೇಟು
‘ಹಯಗ್ರೀವ’ ಬಿಡುಗಡೆಗೆ ತೊಂದರೆ ಮಾಡಿದವರಿಗೆ ಧನ್ವೀರ್ ಗೌಡ ಖಡಕ್ ತಿರುಗೇಟು
ಮಾ.03 ಚಂದ್ರಗ್ರಹಣ; 15ನಿಮಿಷಗಳ ಕಾಲ ಗೋಚರಿಸುವ ಗ್ರಹಣದ ಪ್ರಭಾವ ಹೇಗಿರಲಿದೆ?
ಮಾ.03 ಚಂದ್ರಗ್ರಹಣ; 15ನಿಮಿಷಗಳ ಕಾಲ ಗೋಚರಿಸುವ ಗ್ರಹಣದ ಪ್ರಭಾವ ಹೇಗಿರಲಿದೆ?