AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೊಮ್ಮಾಯಿ ಸರ್ಕಾರಕ್ಕೆ ಕೊನೆಯ ಡೆಡ್​ಲೈನ್ ಕೊಟ್ಟ ಬಸವ ಜಯಮೃತ್ಯುಂಜಯ ಸ್ವಾಮೀಜಿ

2ಎ ಮೀಸಲಾತಿಗಾಗಿ ಕೂಡಲಸಂಗಮದ ಪಂಚಮಸಾಲಿಪೀಠದ ಬಸವ ಜಯಮೃತ್ಯುಂಜಯಶ್ರೀ ಬಸವರಾಜ ಬೊಮ್ಮಾಯಿ ಸರ್ಕಾರಕ್ಕೆ ಖಡಕ್​ ಎಚ್ಚರಿಕೆ ನೀಡಿದ್ದಾರೆ.

ಬೊಮ್ಮಾಯಿ ಸರ್ಕಾರಕ್ಕೆ ಕೊನೆಯ ಡೆಡ್​ಲೈನ್ ಕೊಟ್ಟ ಬಸವ ಜಯಮೃತ್ಯುಂಜಯ ಸ್ವಾಮೀಜಿ
ಬಸವ ಜಯ ಮೃತ್ಯುಂಜಯ ಸ್ವಾಮೀಜಿ (ಸಂಗ್ರಹ ಚಿತ್ರ)
TV9 Web
| Edited By: |

Updated on:Oct 13, 2022 | 3:22 PM

Share

ಬೆಂಗಳೂರು: ಎಸ್​ಸಿ ಹಾಗೂ ಎಸ್​ಟಿ ಸಮುದಾಯಕ್ಕೆ ಮೀಸಲಾತಿ ಹೆಚ್ಚಿಸಲು ತೀರ್ಮಾನಿಸಿದ ಬೆನ್ನಲ್ಲೇ ಇದೀಗ ಪಂಚಮಸಾಲಿಗೆ 2ಎ ಮೀಸಲಾತಿ ನೀಡಲೇಬೇಕೆಂದು ಬಸವ ಜಯಮೃತ್ಯುಂಜಯಶ್ರೀ ಸರ್ಕಾರಕ್ಕೆ ಮತ್ತೆ ಗಡುವು ನೀಡಿದ್ದಾರೆ.

ಬೆಂಗಳೂರಿನಲ್ಲಿ ಇಂದು(ಅಕ್ಟೋಬರ್ 13) ಸುದ್ದಿಗಾರರೊಂದಿಗೆ ಮಾತನಾಡಿದ ಸ್ವಾಮೀಜಿ, ಅ.21ರೊಳಗೆ 2ಎ ಮೀಸಲಾತಿ ಬಗ್ಗೆ ಸರ್ಕಾರ ಸ್ಪಷ್ಟನೆ ನೀಡಬೇಕು. ಇಲ್ಲದಿದ್ದರೆ ಅ.21ರಂದು ಹುಕ್ಕೇರಿಯಲ್ಲಿ ಪಂಚಮಸಾಲಿ ಸಮುದಾಯದಿಂದ ಬೃಹತ್ ಸಮಾವೇಶ ನಡೆಸಲಾಗುತ್ತೆ ಎಂದು ಬಸವರಾಜ ಬೊಮ್ಮಾಯಿ ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.

ಮೃತ್ಯುಂಜಯ ಸ್ವಾಮೀಜಿ ಹಾಗೂ ಭಕ್ತರಿಂದ ಜೀವ ಬೆದರಿಕೆ: ಬಹಿರಂಗ ಕ್ಷಮೆಯಾಚಿಸಿದ ಮಾಜಿ MLC

2ಎ ಮೀಸಲಾತಿಗೆ ಕಳೆದ 2 ವರ್ಷಗಳಿಂದ ನಿರಂತರ ಹೋರಾಟ ಮಾಡುತ್ತಿದ್ದೇವೆ. ಈವರೆಗೆ ನಮ್ಮ ಹೋರಾಟಕ್ಕೆ ಯಾವುದೇ ಪ್ರತಿಕ್ರಿಯೆ ಸಿಕ್ಕಿಲ್ಲ. ಸೆ.15ರೊಳಗೆ ಮೀಸಲಾತಿ ಘೋಷಿಸಲಾಗುತ್ತೆ ಅಂತ ಬಿಎಸ್​ವೈ ಹೇಳಿದ್ರು. ಆದ್ರೆ ಈ ಸಮಯದವರೆಗೆ ಯಡಿಯೂರಪ್ಪನವರು ಇರಲಿಲ್ಲ. ಅದಾದ ಬಳಿಕ ಬೊಮ್ಮಾಯಿಯವರಿಗೆ ಹಲವು ಭಾರೀ ಮನವಿ ನೀಡಿದ್ದೇವೆ. ಆದರೆ ಯಾವುದೇ ಪ್ರತಿಕ್ರಿಯೆ ಬೊಮ್ಮಾಯಿ ಸರ್ಕಾರದಿಂದ ಬಂದಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಅಷ್ಟರೊಳಗೆ ಸರ್ಕಾರ ಸರ್ವಪಕ್ಷಗಳ ಸಭೆ ನಡೆಸಿ ಮೀಸಲಾತಿ ಬಗ್ಗೆ ಘೋಷಣೆ ಮಾಡಲಿ. ಹುಕ್ಕೇರಿಯಲ್ಲಿ 2ಎ ಮೀಸಲಾತಿಗಾಗಿ ಆಗ್ರಹಿಸಿ ಬೃಹತ್ ಹೋರಾಟ ಮಾಡಲಾಗುತ್ತೆ. ರಾಜ್ಯದ ಮೂಲೆಮೂಲೆಗಳಿಂದ ಅ.21ರಂದು ಸುಮಾರು 3 ಲಕ್ಷ ಜನ ಭಾಗಿಯಾಗಲಿದ್ದಾರೆ ಎಂದರು.

ಸರ್ವ ಪಕ್ಷಗಳ ಸಭೆ ಕರೆದು ಹೋರಾಟಕ್ಕೆ ನ್ಯಾಯ ಕೊಡಿಸಿ. ಮೀಸಲಾತಿ ಕೊಡ್ತೀನಿ ಅಂದ್ರೆ ಯಾವಾಗ ಕೊಡ್ತೀರಿ ಅಂತ ಹೇಳಿ ಕೊಡೊಲ್ಲ ಅಂದ್ರೆ ಅದನ್ನಾದ್ರೂ ಸ್ಪಷ್ಟವಾಗಿ ತಿಳಿಸಿ ಎಂದು ಹೇಳಿದರು.

ಪಂಚಮಸಾಲಿ ಸಮುದಾಯದ ನಿರಂತರ ಹೋರಾಟಕ್ಕೆ ಸ್ಪಂದಿಸಿ. ಅಕ್ಟೋಬರ್ 21ರೊಳಗೆ ಸ್ಪಷ್ಟವಾದ ನಿಲುವನ್ನ ತಿಳಿಸಿ. ಇಲ್ಲವಾದ್ರೆ 25 ಲಕ್ಷಕ್ಕೂ ಹೆಚ್ಚು ಸಮುದಾಯದ ಜನ ಬೃಹತ್ ಹೋರಾಟ ಮಾಡ್ತೀವಿ. ಅಂತಿಮ ಹೋರಾಟವಾಗಿ ವಿಧಾನಸೌಧಕ್ಕೆ ಮುತ್ತಿಗೆ ಹಾಕುತ್ತೇವೆ. ಹೋರಾಟದ ದಿನಾಂಕವನ್ನ ಅ.21ರಂದೇ ತಿಳಿಸುತ್ತೇವೆ. ನಾವು ಹೋರಾಟದ ದಿನಾಂಕ ಘೋಷಣೆ ಮಾಡಿದ್ರೆ ಯಾವುದೇ ಕಾರಣಕ್ಕೂ ಬದಲಿಸೋದಿಲ್ಲ ಎಂದು ಸ್ಪಷ್ಟಪಡಿಸಿದರು.

ಸುದ್ದಿಗೋಷ್ಠಿಯಲ್ಲಿ ಹರಿಹರ ಮಾಜಿ ಶಾಸಕ ಎಚ್.ಎಸ್ ಶಿವಶಂಕರ, ಗೌಡ ಲಿಂಗಾಯತ ಪಂಚಮಸಾಲಿ ರಾಜ್ಯ ಸಂಚಾಲಕ ಅಂಮನಪುರ ಮಲ್ಲೇಶ್ ಉಪಸ್ಥಿತರಿದ್ದರು.

Published On - 3:22 pm, Thu, 13 October 22

ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?
ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?
ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ
ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ
ಯೂಟ್ಯೂಬ್​​ನಲ್ಲಿರೋ ಟಾಕ್ಸಿಕ್’ ಟೀಸರ್​​ನ ಆ ದೃಶ್ಯಕ್ಕೆ ಬೀಳುತ್ತಾ ಕತ್ತರಿ?
ಯೂಟ್ಯೂಬ್​​ನಲ್ಲಿರೋ ಟಾಕ್ಸಿಕ್’ ಟೀಸರ್​​ನ ಆ ದೃಶ್ಯಕ್ಕೆ ಬೀಳುತ್ತಾ ಕತ್ತರಿ?
'ಐದನೇ ಒಂದು ಭಾಗದಷ್ಟು ನಿಧಿ ಕುಟುಂಬಕ್ಕೆ ಕೊಡ್ತೀವಿ'
'ಐದನೇ ಒಂದು ಭಾಗದಷ್ಟು ನಿಧಿ ಕುಟುಂಬಕ್ಕೆ ಕೊಡ್ತೀವಿ'
ಅರ್ಧ ಕೆಜಿ ಚಿನ್ನ ಸರ್ಕಾರಕ್ಕೆ ಕೊಟ್ಟಾಕೆಗೆ ಇರಲು ಮನೆಯೂ ಇಲ್ಲ: ಸಹೋದರ ಅಳಲು
ಅರ್ಧ ಕೆಜಿ ಚಿನ್ನ ಸರ್ಕಾರಕ್ಕೆ ಕೊಟ್ಟಾಕೆಗೆ ಇರಲು ಮನೆಯೂ ಇಲ್ಲ: ಸಹೋದರ ಅಳಲು
ತಮಿಳು ಮಾತನಾಡಿದ ರಾಹುಲ್: ಪಂದ್ಯದ ನಡುವೆ 'ರಾಷ್ಟ್ರಭಾಷೆ'ಯ ಚರ್ಚೆ!
ತಮಿಳು ಮಾತನಾಡಿದ ರಾಹುಲ್: ಪಂದ್ಯದ ನಡುವೆ 'ರಾಷ್ಟ್ರಭಾಷೆ'ಯ ಚರ್ಚೆ!
ಸಿದ್ದರಾಮಯ್ಯಗೆ ಶಕ್ತಿ ಇದೆ, ಡಿಕೆಶಿಗೆ ಏನಿದೆ? ಸಿಎಂ ಪರ ಯತ್ನಾಳ್ ಬ್ಯಾಟ್
ಸಿದ್ದರಾಮಯ್ಯಗೆ ಶಕ್ತಿ ಇದೆ, ಡಿಕೆಶಿಗೆ ಏನಿದೆ? ಸಿಎಂ ಪರ ಯತ್ನಾಳ್ ಬ್ಯಾಟ್
ರಾಜ್ಯ ಕಾಂಗ್ರೆಸ್​ನಲ್ಲಿ ಸಂಚಲನ: ದಿಢೀರ್​ ಖರ್ಗೆ ಭೇಟಿಯಾಗಿದ್ದೇಕೆ ಡಿಕೆಶಿ?
ರಾಜ್ಯ ಕಾಂಗ್ರೆಸ್​ನಲ್ಲಿ ಸಂಚಲನ: ದಿಢೀರ್​ ಖರ್ಗೆ ಭೇಟಿಯಾಗಿದ್ದೇಕೆ ಡಿಕೆಶಿ?