AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪರಪ್ಪನ ಅಗ್ರಹಾರ ಜೈಲಿನಲ್ಲಿ ಒಳ ಉಡುಪಿನಲ್ಲಿ ಬಚ್ಚಿಟ್ಟುಕೊಂಡು ಕೈದಿಗೆ ಮೊಬೈಲ್ ನೀಡಲು ಹೋದ ಸಿಬ್ಬಂದಿ ಅರೆಸ್ಟ್

ಕರ್ತವ್ಯಕ್ಕೆ ಹಾಜರಾಗಲು ಬಂದಿದ್ದ ಭಾನುಪ್ರಕಾಶ್, ಜೈಲು ಪ್ರವೇಶ ಮಾಡುವಾಗ ಕೆಎಸ್ಐಎಸ್ಎಫ್ ಸಿಬ್ಬಂದಿ ತಪಾಸಣೆ ಮಾಡಿದ್ದಾರೆ. ಆಗ, ಭಾನುಪ್ರಕಾಶ್ ಒಳ ಉಡುಪಿನಲ್ಲಿ ಮೊಬೈಲ್ ಬಚ್ಚಿಟ್ಟುಕೊಂಡಿರುವುದು ತಿಳಿದುಬಂದಿದೆ.

ಪರಪ್ಪನ ಅಗ್ರಹಾರ ಜೈಲಿನಲ್ಲಿ ಒಳ ಉಡುಪಿನಲ್ಲಿ ಬಚ್ಚಿಟ್ಟುಕೊಂಡು ಕೈದಿಗೆ ಮೊಬೈಲ್ ನೀಡಲು ಹೋದ ಸಿಬ್ಬಂದಿ ಅರೆಸ್ಟ್
ಪರಪ್ಪನ ಅಗ್ರಹಾರ
ರಾಮು, ಆನೇಕಲ್​
| Edited By: |

Updated on: Jul 28, 2023 | 10:50 PM

Share

ಬೆಂಗಳೂರು, ಜುಲೈ 28: ಪರಪ್ಪನ ಅಗ್ರಹಾರ ಜೈಲಿನಲ್ಲಿ (Parappana Agrahara Jail) ಸಿಬ್ಬಂದಿಯೇ ಅಕ್ರಮ ಎಸಗುತ್ತಿರುವುದು ಮತ್ತೆ ಸಾಬೀತಾಗಿದೆ. ಒಳ ಉಡುಪಿನಲ್ಲಿ ಮೊಬೈಲ್ ಬಚ್ಚಿಟ್ಟುಕೊಂಡು ಕೈದಿಗೆ ನೀಡಲು ಹೋದ ಸಿಬ್ಬಂದಿಯೊಬ್ಬರು ಜೈಲು ಅಧಿಕಾರಿಗಳ ತಪಾಸಣೆ ವೇಳೆ ಸಿಕ್ಕಿಬಿದ್ದಿದ್ದಾರೆ. ಚಾಲಕ ಭಾನುಪ್ರಕಾಶ್ ಬಂಧಿತ ಆರೋಪಿಯಾಗಿದ್ದು, ಜುಲೈ 25 ರಂದು ಇವರು ರೆಡ್​ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದರು.

ಜೈಲು ಸಿಬ್ಬಂದಿ ಸಿಕ್ಕಿಬಿದ್ದಿದ್ದು ಹೇಗೆ?

ಕರ್ತವ್ಯಕ್ಕೆ ಹಾಜರಾಗಲು ಬಂದಿದ್ದ ಭಾನುಪ್ರಕಾಶ್, ಜೈಲು ಪ್ರವೇಶ ಮಾಡುವಾಗ ಕೆಎಸ್ಐಎಸ್ಎಫ್ ಸಿಬ್ಬಂದಿ ತಪಾಸಣೆ ಮಾಡಿದ್ದಾರೆ. ಆಗ, ಭಾನುಪ್ರಕಾಶ್ ಒಳ ಉಡುಪಿನಲ್ಲಿ ಮೊಬೈಲ್ ಬಚ್ಚಿಟ್ಟುಕೊಂಡಿರುವುದು ತಿಳಿದುಬಂದಿದೆ. ಈ ವಿಚಾರವಾಗಿ ಕಾರಗೃಹದ ಮುಖ್ಯ ಅಧೀಕ್ಷಕ ಮಲ್ಲಿಕಾರ್ಜುನ ಪರಪ್ಪನ ಅಗ್ರಹಾರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಬಳಿಕ ಭಾನುಪ್ರಕಾಶ್ ಅವರನ್ನು ಬಂಧಿಸಲಾಗಿದೆ.

ಮೊಬೈಲ್ ಯಾರಿಗೆ ಕೊಡಲು ಕೊಂಡೊಯ್ಯಲಾಗುತ್ತಿತ್ತು ಎನ್ನುವ ಬಗ್ಗೆ ಪೋಲೀಸರು ತನಿಖೆ ನಡೆಸುತ್ತಿದ್ದಾರೆ. ಈ ಪ್ರಕರಣದಿಂದ, ಜೈಲಿನಲ್ಲಿ ನಡೆಯುವ ಅಕ್ರಮಗಳಿಗೆ ಕೆಲ ಜೈಲು ಸಿಬ್ಬಂದಿಗಳೇ ಸಾಥ್ ನೀಡುತ್ತಿದ್ದಾರೆ ಎಂಬ ಆರೋಪಗಳಿಗೆ ಮತ್ತಷ್ಟು ಪುಷ್ಟಿ ದೊರೆತಂತಾಗಿದೆ.

ಇದನ್ನೂ ಓದಿ: ಎಷ್ಟೇ ಖಡಕ್ ಎಚ್ಚರಿಕೆ ಕೊಟ್ಟರೂ ಪ್ರಯೋಜನವಿಲ್ಲ; ಪರಪ್ಪನ ಅಗ್ರಹಾರ ಜೈಲಿನಲ್ಲಿ ಮತ್ತೆ ಮೊಬೈಲ್ ಫೋನ್​ಗಳು ಪತ್ತೆ

ಜೈಲು ಸಿಬ್ಬಂದಿಯು ಹಣದ ಆಸೆಗೆ ಮೊಬೈಲ್, ಮಾದಕ ವಸ್ತುಗಳ ಪೂರೈಕೆ ಮಾಡುತ್ತಿದ್ದಾರೆ. ಜೈಲಿನಲ್ಲಿ ಕೈದಿಗಳ ಬಳಿ ಹಣ ಪಡೆದು ನಿಷೇಧಿತ ವಸ್ತುಗಳ ಪೂರೈಕೆ ಮಾಡುತ್ತಾರೆ ಎನ್ನಲಾಗಿದೆ. ಇತ್ತೀಚೆಗಷ್ಟೆ ಜೈಲಿನಲ್ಲಿ ಉಗ್ರ ಚಟುವಟಿಕೆಗಳಿಗೆ ಪ್ರಚೋದನೆ ನೀಡಿದ್ದ ವಿಚಾರ ಸಂಚಲನ ಮೂಡಿಸಿತ್ತು. ಬೆಂಗಳೂರಿನಲ್ಲಿ ಬಂಧಿತ ಐವರು ಶಂಕಿತ ಉಗ್ರರಿಗೆ ಜೈಲಿನಲ್ಲೇ ಪ್ರಚೋದನೆ ನೀಡಲಾಗಿತ್ತು ಎಂಬುದು ಬಹಿರಂಗವಾಗಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Ramu Ram
Ramu Ram

ರಾಮು, ಟಿವಿ9 ವಾಹಿನಿ ಮುಖ್ಯ ಕಚೇರಿಯ ಬೆಂಗಳೂರಿನಲ್ಲಿ11 ವರ್ಷದಿಂದ ಕೆಲಸ ನಿರ್ವಹಿಸುತ್ತಿದ್ದು,2023 ಜುಲೈ ತಿಂಗಳಿಂದ ಆನೇಕಲ್ ತಾಲೂಕು ವರದಿಗಾರನಾಗಿ ಕಾರ್ಯನಿರ್ವಹಿಸುತ್ತಿದ್ದೇನೆ, ನಾನು ಕ್ರೈಂ ಪೊಲಿಟಿಕಲ್ ಸಿನಿಮಾ ಮತ್ತು ಮೆಟ್ರೋ ಸ್ಟೋರೀಸ್ ಗಳನ್ನು ಕವರೇಜ್ ಮಾಡುತ್ತೇನೆ .

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು