AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪರಪ್ಪನ ಅಗ್ರಹಾರ ಜೈಲಿನಲ್ಲಿ ಒಳ ಉಡುಪಿನಲ್ಲಿ ಬಚ್ಚಿಟ್ಟುಕೊಂಡು ಕೈದಿಗೆ ಮೊಬೈಲ್ ನೀಡಲು ಹೋದ ಸಿಬ್ಬಂದಿ ಅರೆಸ್ಟ್

ಕರ್ತವ್ಯಕ್ಕೆ ಹಾಜರಾಗಲು ಬಂದಿದ್ದ ಭಾನುಪ್ರಕಾಶ್, ಜೈಲು ಪ್ರವೇಶ ಮಾಡುವಾಗ ಕೆಎಸ್ಐಎಸ್ಎಫ್ ಸಿಬ್ಬಂದಿ ತಪಾಸಣೆ ಮಾಡಿದ್ದಾರೆ. ಆಗ, ಭಾನುಪ್ರಕಾಶ್ ಒಳ ಉಡುಪಿನಲ್ಲಿ ಮೊಬೈಲ್ ಬಚ್ಚಿಟ್ಟುಕೊಂಡಿರುವುದು ತಿಳಿದುಬಂದಿದೆ.

ಪರಪ್ಪನ ಅಗ್ರಹಾರ ಜೈಲಿನಲ್ಲಿ ಒಳ ಉಡುಪಿನಲ್ಲಿ ಬಚ್ಚಿಟ್ಟುಕೊಂಡು ಕೈದಿಗೆ ಮೊಬೈಲ್ ನೀಡಲು ಹೋದ ಸಿಬ್ಬಂದಿ ಅರೆಸ್ಟ್
ಪರಪ್ಪನ ಅಗ್ರಹಾರ
ರಾಮು, ಆನೇಕಲ್​
| Edited By: |

Updated on: Jul 28, 2023 | 10:50 PM

Share

ಬೆಂಗಳೂರು, ಜುಲೈ 28: ಪರಪ್ಪನ ಅಗ್ರಹಾರ ಜೈಲಿನಲ್ಲಿ (Parappana Agrahara Jail) ಸಿಬ್ಬಂದಿಯೇ ಅಕ್ರಮ ಎಸಗುತ್ತಿರುವುದು ಮತ್ತೆ ಸಾಬೀತಾಗಿದೆ. ಒಳ ಉಡುಪಿನಲ್ಲಿ ಮೊಬೈಲ್ ಬಚ್ಚಿಟ್ಟುಕೊಂಡು ಕೈದಿಗೆ ನೀಡಲು ಹೋದ ಸಿಬ್ಬಂದಿಯೊಬ್ಬರು ಜೈಲು ಅಧಿಕಾರಿಗಳ ತಪಾಸಣೆ ವೇಳೆ ಸಿಕ್ಕಿಬಿದ್ದಿದ್ದಾರೆ. ಚಾಲಕ ಭಾನುಪ್ರಕಾಶ್ ಬಂಧಿತ ಆರೋಪಿಯಾಗಿದ್ದು, ಜುಲೈ 25 ರಂದು ಇವರು ರೆಡ್​ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದರು.

ಜೈಲು ಸಿಬ್ಬಂದಿ ಸಿಕ್ಕಿಬಿದ್ದಿದ್ದು ಹೇಗೆ?

ಕರ್ತವ್ಯಕ್ಕೆ ಹಾಜರಾಗಲು ಬಂದಿದ್ದ ಭಾನುಪ್ರಕಾಶ್, ಜೈಲು ಪ್ರವೇಶ ಮಾಡುವಾಗ ಕೆಎಸ್ಐಎಸ್ಎಫ್ ಸಿಬ್ಬಂದಿ ತಪಾಸಣೆ ಮಾಡಿದ್ದಾರೆ. ಆಗ, ಭಾನುಪ್ರಕಾಶ್ ಒಳ ಉಡುಪಿನಲ್ಲಿ ಮೊಬೈಲ್ ಬಚ್ಚಿಟ್ಟುಕೊಂಡಿರುವುದು ತಿಳಿದುಬಂದಿದೆ. ಈ ವಿಚಾರವಾಗಿ ಕಾರಗೃಹದ ಮುಖ್ಯ ಅಧೀಕ್ಷಕ ಮಲ್ಲಿಕಾರ್ಜುನ ಪರಪ್ಪನ ಅಗ್ರಹಾರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಬಳಿಕ ಭಾನುಪ್ರಕಾಶ್ ಅವರನ್ನು ಬಂಧಿಸಲಾಗಿದೆ.

ಮೊಬೈಲ್ ಯಾರಿಗೆ ಕೊಡಲು ಕೊಂಡೊಯ್ಯಲಾಗುತ್ತಿತ್ತು ಎನ್ನುವ ಬಗ್ಗೆ ಪೋಲೀಸರು ತನಿಖೆ ನಡೆಸುತ್ತಿದ್ದಾರೆ. ಈ ಪ್ರಕರಣದಿಂದ, ಜೈಲಿನಲ್ಲಿ ನಡೆಯುವ ಅಕ್ರಮಗಳಿಗೆ ಕೆಲ ಜೈಲು ಸಿಬ್ಬಂದಿಗಳೇ ಸಾಥ್ ನೀಡುತ್ತಿದ್ದಾರೆ ಎಂಬ ಆರೋಪಗಳಿಗೆ ಮತ್ತಷ್ಟು ಪುಷ್ಟಿ ದೊರೆತಂತಾಗಿದೆ.

ಇದನ್ನೂ ಓದಿ: ಎಷ್ಟೇ ಖಡಕ್ ಎಚ್ಚರಿಕೆ ಕೊಟ್ಟರೂ ಪ್ರಯೋಜನವಿಲ್ಲ; ಪರಪ್ಪನ ಅಗ್ರಹಾರ ಜೈಲಿನಲ್ಲಿ ಮತ್ತೆ ಮೊಬೈಲ್ ಫೋನ್​ಗಳು ಪತ್ತೆ

ಜೈಲು ಸಿಬ್ಬಂದಿಯು ಹಣದ ಆಸೆಗೆ ಮೊಬೈಲ್, ಮಾದಕ ವಸ್ತುಗಳ ಪೂರೈಕೆ ಮಾಡುತ್ತಿದ್ದಾರೆ. ಜೈಲಿನಲ್ಲಿ ಕೈದಿಗಳ ಬಳಿ ಹಣ ಪಡೆದು ನಿಷೇಧಿತ ವಸ್ತುಗಳ ಪೂರೈಕೆ ಮಾಡುತ್ತಾರೆ ಎನ್ನಲಾಗಿದೆ. ಇತ್ತೀಚೆಗಷ್ಟೆ ಜೈಲಿನಲ್ಲಿ ಉಗ್ರ ಚಟುವಟಿಕೆಗಳಿಗೆ ಪ್ರಚೋದನೆ ನೀಡಿದ್ದ ವಿಚಾರ ಸಂಚಲನ ಮೂಡಿಸಿತ್ತು. ಬೆಂಗಳೂರಿನಲ್ಲಿ ಬಂಧಿತ ಐವರು ಶಂಕಿತ ಉಗ್ರರಿಗೆ ಜೈಲಿನಲ್ಲೇ ಪ್ರಚೋದನೆ ನೀಡಲಾಗಿತ್ತು ಎಂಬುದು ಬಹಿರಂಗವಾಗಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ಚಂಡೀಗಢದ ಬಿಜೆಪಿ ಕಚೇರಿಯ ಹೊರಗೆ ಗ್ರೆನೇಡ್ ಸ್ಫೋಟ; ವಿಡಿಯೋ ಇಲ್ಲಿದೆ
ಚಂಡೀಗಢದ ಬಿಜೆಪಿ ಕಚೇರಿಯ ಹೊರಗೆ ಗ್ರೆನೇಡ್ ಸ್ಫೋಟ; ವಿಡಿಯೋ ಇಲ್ಲಿದೆ
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?