AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದ್ವಿತೀಯ ಪಿಯುಸಿ ಪರೀಕ್ಷೆ ಶುಲ್ಕವನ್ನು ವಾಪಸ್ ನೀಡುವಂತೆ ರಾಜ್ಯ ಸರ್ಕಾರಕ್ಕೆ ಪೋಷಕರ ಸಮನ್ವಯ ಸಮಿತಿ ಆಗ್ರಹ

ಈಗಾಗಲೇ ದ್ವಿತೀಯ ಪಿಯುಸಿ ಪರೀಕ್ಷೆಗೆಂದು ವಿದ್ಯಾರ್ಥಿಗಳು ಶುಲ್ಕವನ್ನು ಕಟ್ಟಿದ್ದಾರೆ. ಆದರೆ ಪರೀಕ್ಷೆ ನಡೆಯದ ಕಾರಣ ಶುಲ್ಕ ಮರುಪಾವತಿಸಿ ಪೋಷಕರ ಸಮನ್ವಯ ಸಮಿತಿ ಆಗ್ರಹಿಸುತ್ತಿದೆ. ಪರೀಕ್ಷೆ ಶುಲ್ಕದಿಂದ ಬರೋಬ್ಬರಿ 11 ಕೋಟಿ ರೂ. ಸಂಗ್ರಹವಾಗಿದೆ.

ದ್ವಿತೀಯ ಪಿಯುಸಿ ಪರೀಕ್ಷೆ ಶುಲ್ಕವನ್ನು ವಾಪಸ್ ನೀಡುವಂತೆ ರಾಜ್ಯ ಸರ್ಕಾರಕ್ಕೆ ಪೋಷಕರ ಸಮನ್ವಯ ಸಮಿತಿ ಆಗ್ರಹ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Jun 07, 2021 | 9:50 AM

Share

ಬೆಂಗಳೂರು: ವಿದ್ಯಾರ್ಥಿಗಳ ಆರೋಗ್ಯ ಹಿತಾದೃಷ್ಟಿಯಿಂದ ದ್ವಿತೀಯ ಪಿಯುಸಿ ಪರೀಕ್ಷೆಯನ್ನು ರಾಜ್ಯ ಸರ್ಕಾರ ರದ್ದುಗೊಳಿಸಿದೆ. ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಫಲಿತಾಂಶ ನೀಡುವ ಬಗ್ಗೆ ಗೊಂದಲುಗಳು ಹೆಚ್ಚಾಗಿವೆ. ಈ ನಡುವೆ ಪರೀಕ್ಷೆ ರದ್ದಾದ ಹಿನ್ನೆಲೆ ಪರೀಕ್ಷಾ ಶುಲ್ಕವನ್ನು ವಾಪಸ್ ನೀಡುವಂತೆ ಪೋಷಕರ ಸಮನ್ವಯ ಸಮಿತಿ ಆಗ್ರಹಿಸಿದೆ. ಪರೀಕ್ಷೆಗೆಂದು ಕಟ್ಟಿದ್ದ ಶುಲ್ಕವನ್ನು ವಾಪಾಸ್ ನೀಡುವಂತೆ ರಾಜ್ಯ ಸರ್ಕಾರಕ್ಕೆ ವಿದ್ಯಾರ್ಥಿಗಳು ಮತ್ತು ಪೋಷಕರು ಮನವಿ ಮಾಡಿದ್ದಾರೆ.

ಈಗಾಗಲೇ ದ್ವಿತೀಯ ಪಿಯುಸಿ ಪರೀಕ್ಷೆಗೆಂದು ವಿದ್ಯಾರ್ಥಿಗಳು ಶುಲ್ಕವನ್ನು ಕಟ್ಟಿದ್ದಾರೆ. ಆದರೆ ಪರೀಕ್ಷೆ ನಡೆಯದ ಕಾರಣ ಶುಲ್ಕ ಮರುಪಾವತಿಸಿ ಪೋಷಕರ ಸಮನ್ವಯ ಸಮಿತಿ ಆಗ್ರಹಿಸುತ್ತಿದೆ. ಪರೀಕ್ಷೆ ಶುಲ್ಕದಿಂದ ಬರೋಬ್ಬರಿ 11 ಕೋಟಿ ರೂ. ಸಂಗ್ರಹವಾಗಿದೆ ಎಂದು ಅಂದಾಜಿಸಲಾಗಿದೆ. ತಲಾ ವಿದ್ಯಾರ್ಥಿಯಿಂದ 190 ರೂ. ಪ.ಜಾ ಮತ್ತು ಪ.ಪಂ ವಿದ್ಯಾರ್ಥಿಗಳಿಂದ 50 ರೂ. ರಂತೆ ಒಟ್ಟು 6 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳಿಂದ 11 ಕೋಟಿ ರೂ. ಪರೀಕ್ಷಾ ಶುಲ್ಕ ಸಂಗ್ರಹವಾಗಿದೆ ಎಂದು ಮಾಹಿತಿ ಬಂದಿದೆ.

ಇದನ್ನೂ ಓದಿ

ಬಗೆಹರಿಯುತ್ತಿಲ್ಲ ದ್ವಿತೀಯ ಪಿಯುಸಿ ಫಲಿತಾಂಶ ವಿಚಾರ; ಶಿಕ್ಷಣ ಇಲಾಖೆಗೆ ಸಲಹೆ, ಸವಾಲು ತಿಳಿಸಿದ ರುಪ್ಸಾ

ಎಸ್ಎಸ್ಎಲ್​ಸಿ, ಪ್ರಥಮ ಪಿಯು ಅಂಕ ಪರಿಗಣಿಸಿ ದ್ವಿತೀಯ ಪಿಯುಸಿ ಫಲಿತಾಂಶ ನೀಡಿ: ಸಚಿವ ಎಸ್.ಸುರೇಶ್ ಕುಮಾರ್ ಸೂಚನೆ

(Parent coordinating Committee has urged the state government to refund the secondary PUC exam fee)

Published On - 9:20 am, Mon, 7 June 21

ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?