AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಫ್​ಲೈನ್ ಬದಲು ಆನ್​ಲೈನ್ ಪರೀಕ್ಷೆ ನಡೆಸಿ.. ಸರ್ಕಾರಕ್ಕೆ ಪೋಷಕರ ಒತ್ತಾಯ

ಕೊರೊನಾ ಎರಡನೇ ಅಲೆ ಗುಮ್ಮ ಮತ್ತೆ ಸೌಂಡ್ ಮಾಡ್ತಿದೆ. ನಿಶ್ಚಿಂತೆಯಿಂದಿದ್ದ ಪೋಷಕರಿಗೆ ಮತ್ತೆ ನಿದ್ರೆಗೆಡಿಸಿದೆ. ಆಫ್​ಲೈನ್ ಬದಲು ಆನ್​ಲೈನ್ ಪರೀಕ್ಷೆ ನಡೆಸಿ ಅಂತಾ ಸರ್ಕಾರವನ್ನ ಒತ್ತಾಯಿಸ್ತಿದ್ದಾರೆ.

ಆಫ್​ಲೈನ್ ಬದಲು ಆನ್​ಲೈನ್ ಪರೀಕ್ಷೆ ನಡೆಸಿ.. ಸರ್ಕಾರಕ್ಕೆ ಪೋಷಕರ ಒತ್ತಾಯ
ಸಾಂದರ್ಭಿಕ ಚಿತ್ರ
ಆಯೇಷಾ ಬಾನು
|

Updated on: Mar 23, 2021 | 7:20 AM

Share

ಬೆಂಗಳೂರು: ರಾಜ್ಯದಲ್ಲಿ ದಿನೇದಿನೆ ಕೊರೊನಾ ಎರಡನೇ ಅಲೆ ಆತಂಕ ಹೆಚ್ಚಾಗ್ತಿದೆ. ಕಳೆದ ಒಂದು ವಾರದಿಂದ ಬೆಂಗಳೂರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಕೊರೊನಾ ರುದ್ರನರ್ತನ ಮಾಡ್ತಿದೆ. ಸದ್ಯ ರಾಜ್ಯದಲ್ಲಿ 6 ರಿಂದ 10ನೇ ತರಗತಿಗಳು ಆರಂಭವಾಗಿದ್ದು, ಬೆಂಗಳೂರು ಮತ್ತು ಕೇರಳ ಗಡಿ ಭಾಗದಲ್ಲಿ 8 ರಿಂದ 10ನೇ ತರಗತಿವರೆಗೆ ಮಾತ್ರ ಆರಂಭವಾಗಿದೆ. ಆದ್ರೆ, ಡೆಡ್ಲಿ ಕೊರೊನಾ ಮತ್ತೆ ಆರ್ಭಟಿಸ್ತಿರೋದ್ರಿಂದ ಮಕ್ಕಳಿಗೆ, ಆಫ್​ಲೈನ್​ ಪರೀಕ್ಷೆ ನಡೆಸಿದ್ರೆ ಕಂಟಕ ಎದುರಾಗಲಿದೆ. ಹೀಗಾಗಿ ಆನ್​ಲೈನ್ ಪರೀಕ್ಷೆ ನಡೆಸಿ ಅಂತಾ ಪೋಷಕರು ಒತ್ತಾಯಿಸ್ತಿದ್ದಾರೆ.

ಈಗಾಗ್ಲೇ ಸೋಂಕು ಹೆಚ್ಚಾದ ಹಿನ್ನೆಲೆಯಲ್ಲಿ ತಮಿಳುನಾಡಿನಲ್ಲಿ ಶಾಲಾ-ಕಾಲೇಜುಗಳನ್ನ ನಿನ್ನೆಯಿಂದಲೇ ಬಂದ್ ಮಾಡಲಾಗಿದೆ. ಎಸ್ಎಸ್ಎಲ್​ಸಿ‌ ಪರೀಕ್ಷೆಯನ್ನೂ ತಮಿಳುನಾಡು ಸರ್ಕಾರ ರದ್ದುಗೊಳಿಸಿದೆ. ಬೆಂಗಳೂರಿನಲ್ಲಿ ಕೊರೊನಾ ಕೇಸ್​ಗಳು ಪ್ರತಿದಿನ ಸಾವಿರದ ಗಡಿ ದಾಟುತ್ತಿದ್ದು, ಮುಂದಿನ 2 ವಾರ ಡೇಂಜರ್ ಅಂತಾ ಹೇಳಿದ್ದು, ಎಚ್ಚರ ವಹಿಸುವಂತೆ ತಜ್ಞರು ಸಲಹೆ ನೀಡಿದ್ದಾರೆ. ನಿನ್ನೆಯೂ ಬೆಂಗಳೂರಿನಲ್ಲಿ ಸಾವಿರಕ್ಕೂ ಹೆಚ್ಚು ಹೊಸ ಕೊರೊನಾ‌ ಕೇಸ್​ಗಳು ಪತ್ತೆಯಾಗಿವೆ. ಇದು ಪೋಷಕರು ಮತ್ತು ವಿದ್ಯಾರ್ಥಿಗಳನ್ನ ಆತಂಕಕ್ಕೆ ದೂಡಿದೆ. ಶಾಲೆಗಳಲ್ಲೇ ಎಷ್ಟೇ ಸುರಕ್ಷತೆ ತೆಗೆದುಕೊಂಡ್ರೂ, ಭಯ ಇದ್ದೇ ಇದೆ. ಹೀಗಾಗಿ ಆನ್​ಲೈನ್ ಪರೀಕ್ಷೆ ನಡೆಸಿ ಅಂತಾ ಪೋಷಕರು ಮನವಿ ಮಾಡಿದ್ದಾರೆ.

ಒಟ್ನಲ್ಲಿ ದಿನೇದಿನೆ ಹೆಚ್ಚಾಗುತ್ತಿರೋ ಕೊರೊನಾ ಸೋಂಕಿನ ಭೀತಿ ಹಿನ್ನೆಲೆಯಲ್ಲಿ ಆನ್​ಲೈನ್ ಕ್ಲಾಸ್ ಹಾಗೂ ಆನ್​ಲೈನ್ ಪರೀಕ್ಷೆ ನಡೆಸಲು ಒತ್ತಡ ಹೆಚ್ಚುತ್ತಿದೆ. ಹೀಗಾಗಿ ಸರ್ಕಾರ ಈ ವಿಚಾರವನ್ನ ಗಂಭೀರವಾಗಿ ಪರಿಗಣಿಸಿ, ಸೂಕ್ತ ನಿರ್ಧಾರ ಕೈಗೊಳ್ಳಬೇಕಿದೆ.

ಇದನ್ನೂ ಓದಿ: ಕಾಲೇಜುಗಳಿಗೆ ಕಂಟಕವಾದ ಕೊರೊನಾ.. ಕಿಟ್ ಧರಿಸಿ ಮಹಾರಾಣಿ ಕಾಲೇಜಿನಲ್ಲಿ ಪರೀಕ್ಷೆ ಬರೆದ ವಿದ್ಯಾರ್ಥಿನಿಯರು

Follow Us
‘ನಿಮ್ಮ ಲೀಡರ್​​ಶಿಪ್ ಇಷ್ಟ’; ಧೋನಿ ಹಾಡಿ ಹೊಗಳಿದ ಶಿವಕಾರ್ತಿಕೇಯ
‘ನಿಮ್ಮ ಲೀಡರ್​​ಶಿಪ್ ಇಷ್ಟ’; ಧೋನಿ ಹಾಡಿ ಹೊಗಳಿದ ಶಿವಕಾರ್ತಿಕೇಯ
ಡ್ಯಾಶ್‌ಕ್ಯಾಮ್‌ನಲ್ಲಿ ಸೆರೆಯಾಯಿತು ಎದೆ ಝಲ್​​ ಎನಿಸೋ ದೃಶ್ಯ
ಡ್ಯಾಶ್‌ಕ್ಯಾಮ್‌ನಲ್ಲಿ ಸೆರೆಯಾಯಿತು ಎದೆ ಝಲ್​​ ಎನಿಸೋ ದೃಶ್ಯ
ವಿಮಾನ ನಿಲ್ದಾಣದ ರನ್​ವೇನಲ್ಲಿ ಟ್ರಕ್​ಗೆ ಡಿಕ್ಕಿ ಹೊಡೆದ ಏರ್ ಕೆನಡಾ ವಿಮಾನ
ವಿಮಾನ ನಿಲ್ದಾಣದ ರನ್​ವೇನಲ್ಲಿ ಟ್ರಕ್​ಗೆ ಡಿಕ್ಕಿ ಹೊಡೆದ ಏರ್ ಕೆನಡಾ ವಿಮಾನ
ರಸ್ತೆ ಹೇಗೆ ದಾಟ್ಬೇಕು ಗೊತ್ತಾ? ಮನುಷ್ಯರಿಗೇ ಪಾಠ ಹೇಳಿದ ಕಾಡಾನೆ ಹಿಂಡು!
ರಸ್ತೆ ಹೇಗೆ ದಾಟ್ಬೇಕು ಗೊತ್ತಾ? ಮನುಷ್ಯರಿಗೇ ಪಾಠ ಹೇಳಿದ ಕಾಡಾನೆ ಹಿಂಡು!
ಕಾಂಗ್ರೆಸ್ ಟಿಕೆಟ್​ ಅಸಮಾಧಾನ: ಬಿಜೆಪಿ ಸೇರಿದ 20ಕ್ಕೂ ಹೆಚ್ಚು ಮುಸ್ಲಿಮರು!
ಕಾಂಗ್ರೆಸ್ ಟಿಕೆಟ್​ ಅಸಮಾಧಾನ: ಬಿಜೆಪಿ ಸೇರಿದ 20ಕ್ಕೂ ಹೆಚ್ಚು ಮುಸ್ಲಿಮರು!
ಬಡವರಿಗೆ ‘ಸರಿಗಮಪ’ದಲ್ಲಿ ಮಣೆ ಎಂದವರಿಗೆ ಪ್ರೋಮೋದಲ್ಲೇ ಖಡಕ್ ಉತ್ತರ
ಬಡವರಿಗೆ ‘ಸರಿಗಮಪ’ದಲ್ಲಿ ಮಣೆ ಎಂದವರಿಗೆ ಪ್ರೋಮೋದಲ್ಲೇ ಖಡಕ್ ಉತ್ತರ
ತುಳಸಿ ಕಟ್ಟೆ ಪ್ರದಕ್ಷಿಣೆ ಹಾಗೂ ಇದರ ಮಹತ್ವವೇನು ಗೊತ್ತಾ?
ತುಳಸಿ ಕಟ್ಟೆ ಪ್ರದಕ್ಷಿಣೆ ಹಾಗೂ ಇದರ ಮಹತ್ವವೇನು ಗೊತ್ತಾ?
ಇಂದು ಈ ರಾಶಿಯ ಪತಿ-ಪತ್ನಿಯರಲ್ಲಿ ಭಿನ್ನಾಭಿಪ್ರಾಯ!
ಇಂದು ಈ ರಾಶಿಯ ಪತಿ-ಪತ್ನಿಯರಲ್ಲಿ ಭಿನ್ನಾಭಿಪ್ರಾಯ!
ಮೋದಿ ನೇತೃತ್ವದಲ್ಲಿ ಮಹತ್ವದ ಸಭೆ:ನಾಗರಿಕರ ಹಿತರಕ್ಷಣೆ ಮೊದಲ ಆದ್ಯತೆ
ಮೋದಿ ನೇತೃತ್ವದಲ್ಲಿ ಮಹತ್ವದ ಸಭೆ:ನಾಗರಿಕರ ಹಿತರಕ್ಷಣೆ ಮೊದಲ ಆದ್ಯತೆ
ದಾವಣಗೆರೆ ದಕ್ಷಿಣ ಉಪಚುನಾವಣೆ: ಆರಂಭದಲ್ಲೇ ಕಾಂಗ್ರೆಸ್​​​ಗೆ ಮರ್ಮಾಘಾತ
ದಾವಣಗೆರೆ ದಕ್ಷಿಣ ಉಪಚುನಾವಣೆ: ಆರಂಭದಲ್ಲೇ ಕಾಂಗ್ರೆಸ್​​​ಗೆ ಮರ್ಮಾಘಾತ