AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಫ್​ಲೈನ್ ಬದಲು ಆನ್​ಲೈನ್ ಪರೀಕ್ಷೆ ನಡೆಸಿ.. ಸರ್ಕಾರಕ್ಕೆ ಪೋಷಕರ ಒತ್ತಾಯ

ಕೊರೊನಾ ಎರಡನೇ ಅಲೆ ಗುಮ್ಮ ಮತ್ತೆ ಸೌಂಡ್ ಮಾಡ್ತಿದೆ. ನಿಶ್ಚಿಂತೆಯಿಂದಿದ್ದ ಪೋಷಕರಿಗೆ ಮತ್ತೆ ನಿದ್ರೆಗೆಡಿಸಿದೆ. ಆಫ್​ಲೈನ್ ಬದಲು ಆನ್​ಲೈನ್ ಪರೀಕ್ಷೆ ನಡೆಸಿ ಅಂತಾ ಸರ್ಕಾರವನ್ನ ಒತ್ತಾಯಿಸ್ತಿದ್ದಾರೆ.

ಆಫ್​ಲೈನ್ ಬದಲು ಆನ್​ಲೈನ್ ಪರೀಕ್ಷೆ ನಡೆಸಿ.. ಸರ್ಕಾರಕ್ಕೆ ಪೋಷಕರ ಒತ್ತಾಯ
ಸಾಂದರ್ಭಿಕ ಚಿತ್ರ
ಆಯೇಷಾ ಬಾನು
|

Updated on: Mar 23, 2021 | 7:20 AM

Share

ಬೆಂಗಳೂರು: ರಾಜ್ಯದಲ್ಲಿ ದಿನೇದಿನೆ ಕೊರೊನಾ ಎರಡನೇ ಅಲೆ ಆತಂಕ ಹೆಚ್ಚಾಗ್ತಿದೆ. ಕಳೆದ ಒಂದು ವಾರದಿಂದ ಬೆಂಗಳೂರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಕೊರೊನಾ ರುದ್ರನರ್ತನ ಮಾಡ್ತಿದೆ. ಸದ್ಯ ರಾಜ್ಯದಲ್ಲಿ 6 ರಿಂದ 10ನೇ ತರಗತಿಗಳು ಆರಂಭವಾಗಿದ್ದು, ಬೆಂಗಳೂರು ಮತ್ತು ಕೇರಳ ಗಡಿ ಭಾಗದಲ್ಲಿ 8 ರಿಂದ 10ನೇ ತರಗತಿವರೆಗೆ ಮಾತ್ರ ಆರಂಭವಾಗಿದೆ. ಆದ್ರೆ, ಡೆಡ್ಲಿ ಕೊರೊನಾ ಮತ್ತೆ ಆರ್ಭಟಿಸ್ತಿರೋದ್ರಿಂದ ಮಕ್ಕಳಿಗೆ, ಆಫ್​ಲೈನ್​ ಪರೀಕ್ಷೆ ನಡೆಸಿದ್ರೆ ಕಂಟಕ ಎದುರಾಗಲಿದೆ. ಹೀಗಾಗಿ ಆನ್​ಲೈನ್ ಪರೀಕ್ಷೆ ನಡೆಸಿ ಅಂತಾ ಪೋಷಕರು ಒತ್ತಾಯಿಸ್ತಿದ್ದಾರೆ.

ಈಗಾಗ್ಲೇ ಸೋಂಕು ಹೆಚ್ಚಾದ ಹಿನ್ನೆಲೆಯಲ್ಲಿ ತಮಿಳುನಾಡಿನಲ್ಲಿ ಶಾಲಾ-ಕಾಲೇಜುಗಳನ್ನ ನಿನ್ನೆಯಿಂದಲೇ ಬಂದ್ ಮಾಡಲಾಗಿದೆ. ಎಸ್ಎಸ್ಎಲ್​ಸಿ‌ ಪರೀಕ್ಷೆಯನ್ನೂ ತಮಿಳುನಾಡು ಸರ್ಕಾರ ರದ್ದುಗೊಳಿಸಿದೆ. ಬೆಂಗಳೂರಿನಲ್ಲಿ ಕೊರೊನಾ ಕೇಸ್​ಗಳು ಪ್ರತಿದಿನ ಸಾವಿರದ ಗಡಿ ದಾಟುತ್ತಿದ್ದು, ಮುಂದಿನ 2 ವಾರ ಡೇಂಜರ್ ಅಂತಾ ಹೇಳಿದ್ದು, ಎಚ್ಚರ ವಹಿಸುವಂತೆ ತಜ್ಞರು ಸಲಹೆ ನೀಡಿದ್ದಾರೆ. ನಿನ್ನೆಯೂ ಬೆಂಗಳೂರಿನಲ್ಲಿ ಸಾವಿರಕ್ಕೂ ಹೆಚ್ಚು ಹೊಸ ಕೊರೊನಾ‌ ಕೇಸ್​ಗಳು ಪತ್ತೆಯಾಗಿವೆ. ಇದು ಪೋಷಕರು ಮತ್ತು ವಿದ್ಯಾರ್ಥಿಗಳನ್ನ ಆತಂಕಕ್ಕೆ ದೂಡಿದೆ. ಶಾಲೆಗಳಲ್ಲೇ ಎಷ್ಟೇ ಸುರಕ್ಷತೆ ತೆಗೆದುಕೊಂಡ್ರೂ, ಭಯ ಇದ್ದೇ ಇದೆ. ಹೀಗಾಗಿ ಆನ್​ಲೈನ್ ಪರೀಕ್ಷೆ ನಡೆಸಿ ಅಂತಾ ಪೋಷಕರು ಮನವಿ ಮಾಡಿದ್ದಾರೆ.

ಒಟ್ನಲ್ಲಿ ದಿನೇದಿನೆ ಹೆಚ್ಚಾಗುತ್ತಿರೋ ಕೊರೊನಾ ಸೋಂಕಿನ ಭೀತಿ ಹಿನ್ನೆಲೆಯಲ್ಲಿ ಆನ್​ಲೈನ್ ಕ್ಲಾಸ್ ಹಾಗೂ ಆನ್​ಲೈನ್ ಪರೀಕ್ಷೆ ನಡೆಸಲು ಒತ್ತಡ ಹೆಚ್ಚುತ್ತಿದೆ. ಹೀಗಾಗಿ ಸರ್ಕಾರ ಈ ವಿಚಾರವನ್ನ ಗಂಭೀರವಾಗಿ ಪರಿಗಣಿಸಿ, ಸೂಕ್ತ ನಿರ್ಧಾರ ಕೈಗೊಳ್ಳಬೇಕಿದೆ.

ಇದನ್ನೂ ಓದಿ: ಕಾಲೇಜುಗಳಿಗೆ ಕಂಟಕವಾದ ಕೊರೊನಾ.. ಕಿಟ್ ಧರಿಸಿ ಮಹಾರಾಣಿ ಕಾಲೇಜಿನಲ್ಲಿ ಪರೀಕ್ಷೆ ಬರೆದ ವಿದ್ಯಾರ್ಥಿನಿಯರು

ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
Video: ತರಗತಿಯಲ್ಲಿ ಕುಳಿತಿದ್ದಾಗಲೇ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು
Video: ತರಗತಿಯಲ್ಲಿ ಕುಳಿತಿದ್ದಾಗಲೇ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು
ರಸ್ತೆಯಲ್ಲಿರೋದು ಒಂದೇ ಒಂದು ಕಾರು, ಟ್ರಾಫಿಕ್ ಇಲ್ಲ, ಸ್ಟಿಲ್ ವೈಟಿಂಗ್
ರಸ್ತೆಯಲ್ಲಿರೋದು ಒಂದೇ ಒಂದು ಕಾರು, ಟ್ರಾಫಿಕ್ ಇಲ್ಲ, ಸ್ಟಿಲ್ ವೈಟಿಂಗ್