AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮತ್ತೆ ಶುರುವಾಯ್ತು ಖಾಸಗಿ ಶಾಲೆಗಳ ಫೀಸ್ ಟಾರ್ಚರ್; ಪೋಷಕರಿಂದ ಪ್ರತಿಭಟನೆ

ಶೈಕ್ಷಣಿಕ ವರ್ಷ ಆರಂಭಕ್ಕೂ ಮುನ್ನವೇ ಖಾಸಗಿ ಶಾಲೆಗಳಲ್ಲಿ ಫೀಸ್ ಕೊಡುವಂತೆ ಒತ್ತಾಯ ಹೇರುತ್ತಿದ್ದಾರೆ. ಹೀಗಾಗಿ ಪೋಷಕರು ಮೌನ ಪ್ರತಿಭಟನೆ ಮಾಡಿದರು. ನಗರದ ನಂದಿನಿ ಲೇಔಟ್​ನ ಪ್ರೆಸಿಡೆನ್ಸಿ ಶಾಲೆಯಿಂದ ಫೀಸ್ ಟಾರ್ಚರ್ ಮಾಡುತ್ತಿದ್ದಾರೆ ಎಂದು ಮಕ್ಕಳ ಪೋಷಕರು ಪ್ರತಿಭಟನೆಗೆ ಮುಂದಾಗಿದ್ದರು.

ಮತ್ತೆ ಶುರುವಾಯ್ತು ಖಾಸಗಿ ಶಾಲೆಗಳ ಫೀಸ್ ಟಾರ್ಚರ್; ಪೋಷಕರಿಂದ ಪ್ರತಿಭಟನೆ
ಪಾಲಕರ ಪ್ರತಿಭಟನೆ
TV9 Web
| Edited By: |

Updated on: Jun 08, 2021 | 9:14 AM

Share

ಬೆಂಗಳೂರು: ಕೊರೊನಾ ನಿಯಂತ್ರಿಸಲು ಲಾಕ್​ಡೌನ್​ ವಿಧಿಸುವುದು ಅನಿವಾರ್ಯವಾಗಿತ್ತು. ಆದರೆ ಜಾರಿಯಾದ ಲಾಕ್​ಡೌನ್​ನಿಂದಾದ ಸಮಸ್ಯೆ ಒಂದೆರೆಡಲ್ಲ. ಅದೆಷ್ಟೋ ಕುಟುಂಬಗಳು ಕೆಲಸವಿಲ್ಲದೆ, ಹಣವಿಲ್ಲದೆ ಒಂದು ಹೊತ್ತಿನ ಊಟಕ್ಕೂ ಪರದಾಡುವಂತಾಗಿದೆ. ಕೊರೊನಾ ಮಕ್ಕಳ ಭವಿಷ್ಯಕ್ಕೂ ಕಂಟಕವಾಗಿದೆ. ಶಾಲೆಗಳಲ್ಲಿ ಆಟದ ಜೊತೆಗೆ ಪಾಠ ಕಲಿಯುತ್ತಿದ್ದ ಮಕ್ಕಳು ಮನೆಯಲ್ಲಿ ಒಂದು ಕಡೆ ಕೂತು ಆನ್​ಲೈನ್​ ತರಗತಿಯನ್ನು ಕೇಳುತ್ತಿದ್ದಾರೆ. ಈ ಎಲ್ಲಾ ಸಮಸ್ಯೆಗಳ ನಡುವೆ ಖಾಸಗಿ ಶಾಲೆಗಳು ಮಕ್ಕಳ ಶಾಲಾ ಫೀಸ್ ಕೊಡುವಂತೆ ಒತ್ತಾಯಿಸುತ್ತಿವೆ.

ಶೈಕ್ಷಣಿಕ ವರ್ಷ ಆರಂಭಕ್ಕೂ ಮುನ್ನವೇ ಖಾಸಗಿ ಶಾಲೆಗಳಲ್ಲಿ ಫೀಸ್ ಕೊಡುವಂತೆ ಒತ್ತಾಯ ಹೇರುತ್ತಿದ್ದಾರೆ. ಹೀಗಾಗಿ ಪೋಷಕರು ಮೌನ ಪ್ರತಿಭಟನೆ ಮಾಡಿದರು. ನಗರದ ನಂದಿನಿ ಲೇಔಟ್​ನ ಪ್ರೆಸಿಡೆನ್ಸಿ ಶಾಲೆಯಿಂದ ಫೀಸ್ ಟಾರ್ಚರ್ ಮಾಡುತ್ತಿದ್ದಾರೆ ಎಂದು ಮಕ್ಕಳ ಪೋಷಕರು ಪ್ರತಿಭಟನೆಗೆ ಮುಂದಾಗಿದ್ದರು. ಫೀಸ್ ಕಟ್ಟದ ಮಕ್ಕಳನ್ನು ಖಾಸಗಿ ಶಾಲೆಗಳು ಅನ್​ಲೈನ್​ ತರಗತಿಯಿಂದ ರಿಮೂವ್ ಮಾಡುತ್ತಿವೆ. ಇದರಿಂದ ಈಗಾಗಲೇ ವಿದ್ಯಾಭ್ಯಾಸದಿಂದ ವಂಚಿತರಾಗಿರುವ ಮಕ್ಕಳ ಭವಿಷ್ಯಕ್ಕೆ ಇನ್ನಷ್ಟು ಹೊಡೆತ ಬೀಳುತ್ತದೆ.

ಇದನ್ನೂ ಖಂಡಿಸಿ ಪ್ರೆಸಿಡೆನ್ಸಿ ಶಾಲೆಯ ಮುಂದೆ ಮೌನ ಪ್ರತಿಭಟನೆಗೆ ಪೋಷಕರು ಮುಂದಾಗುತ್ತಿದ್ದಂತೆ ಸ್ಥಳಕ್ಕೆ ಪೊಲೀಸರು ಆಗಮಿಸಿದರು. ಈ ವೇಳೆ ಉಲ್ಟಾ ಹೊಡೆದ ಕೆಲ ಪೋಷಕರು ಫೀಸ್ ಕಟ್ಟಲು ಬಂದಿದ್ದೇವೆ ಎಂದು ಹೇಳಿದ್ದಾರೆ.

Fees Torture

ಫೀಸ್​ ಕೋರಿದ ಪ್ರೆಸಿಡೆನ್ಸಿ ಶಾಲೆ

ಇದನ್ನೂ ಓದಿ

ದ್ವಿತೀಯ ಪಿಯುಸಿ ಪರೀಕ್ಷೆ ರದ್ದು; ಪ್ರತಿಷ್ಠಿತ ಕಾಲೇಜುಗಳಲ್ಲಿ ಹೆಚ್ಚಿದ ಸೀಟು ಬೇಡಿಕೆ

ಹತ್ತನೇ ತರಗತಿ ಪರೀಕ್ಷೆ ಬಗ್ಗೆ ಖಚಿತ ಮಾಹಿತಿ ಸಿಕ್ಕಿಲ್ಲ; ಆಗಲೇ ಪಿಯು ಫೀಸ್ ಕಟ್ಟಿಸಿಕೊಳ್ಳುತ್ತಿವೆ ಕೆಲ ಖಾಸಗಿ ಕಾಲೇಜುಗಳು

(Parents protested as private schools demanded a fee in Bengaluru)

ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ