ಮತ್ತೆ ಶುರುವಾಯ್ತು ಖಾಸಗಿ ಶಾಲೆಗಳ ಫೀಸ್ ಟಾರ್ಚರ್; ಪೋಷಕರಿಂದ ಪ್ರತಿಭಟನೆ

ಶೈಕ್ಷಣಿಕ ವರ್ಷ ಆರಂಭಕ್ಕೂ ಮುನ್ನವೇ ಖಾಸಗಿ ಶಾಲೆಗಳಲ್ಲಿ ಫೀಸ್ ಕೊಡುವಂತೆ ಒತ್ತಾಯ ಹೇರುತ್ತಿದ್ದಾರೆ. ಹೀಗಾಗಿ ಪೋಷಕರು ಮೌನ ಪ್ರತಿಭಟನೆ ಮಾಡಿದರು. ನಗರದ ನಂದಿನಿ ಲೇಔಟ್​ನ ಪ್ರೆಸಿಡೆನ್ಸಿ ಶಾಲೆಯಿಂದ ಫೀಸ್ ಟಾರ್ಚರ್ ಮಾಡುತ್ತಿದ್ದಾರೆ ಎಂದು ಮಕ್ಕಳ ಪೋಷಕರು ಪ್ರತಿಭಟನೆಗೆ ಮುಂದಾಗಿದ್ದರು.

ಮತ್ತೆ ಶುರುವಾಯ್ತು ಖಾಸಗಿ ಶಾಲೆಗಳ ಫೀಸ್ ಟಾರ್ಚರ್; ಪೋಷಕರಿಂದ ಪ್ರತಿಭಟನೆ
ಪಾಲಕರ ಪ್ರತಿಭಟನೆ
Follow us
| Updated By: sandhya thejappa

Updated on: Jun 08, 2021 | 9:14 AM

ಬೆಂಗಳೂರು: ಕೊರೊನಾ ನಿಯಂತ್ರಿಸಲು ಲಾಕ್​ಡೌನ್​ ವಿಧಿಸುವುದು ಅನಿವಾರ್ಯವಾಗಿತ್ತು. ಆದರೆ ಜಾರಿಯಾದ ಲಾಕ್​ಡೌನ್​ನಿಂದಾದ ಸಮಸ್ಯೆ ಒಂದೆರೆಡಲ್ಲ. ಅದೆಷ್ಟೋ ಕುಟುಂಬಗಳು ಕೆಲಸವಿಲ್ಲದೆ, ಹಣವಿಲ್ಲದೆ ಒಂದು ಹೊತ್ತಿನ ಊಟಕ್ಕೂ ಪರದಾಡುವಂತಾಗಿದೆ. ಕೊರೊನಾ ಮಕ್ಕಳ ಭವಿಷ್ಯಕ್ಕೂ ಕಂಟಕವಾಗಿದೆ. ಶಾಲೆಗಳಲ್ಲಿ ಆಟದ ಜೊತೆಗೆ ಪಾಠ ಕಲಿಯುತ್ತಿದ್ದ ಮಕ್ಕಳು ಮನೆಯಲ್ಲಿ ಒಂದು ಕಡೆ ಕೂತು ಆನ್​ಲೈನ್​ ತರಗತಿಯನ್ನು ಕೇಳುತ್ತಿದ್ದಾರೆ. ಈ ಎಲ್ಲಾ ಸಮಸ್ಯೆಗಳ ನಡುವೆ ಖಾಸಗಿ ಶಾಲೆಗಳು ಮಕ್ಕಳ ಶಾಲಾ ಫೀಸ್ ಕೊಡುವಂತೆ ಒತ್ತಾಯಿಸುತ್ತಿವೆ.

ಶೈಕ್ಷಣಿಕ ವರ್ಷ ಆರಂಭಕ್ಕೂ ಮುನ್ನವೇ ಖಾಸಗಿ ಶಾಲೆಗಳಲ್ಲಿ ಫೀಸ್ ಕೊಡುವಂತೆ ಒತ್ತಾಯ ಹೇರುತ್ತಿದ್ದಾರೆ. ಹೀಗಾಗಿ ಪೋಷಕರು ಮೌನ ಪ್ರತಿಭಟನೆ ಮಾಡಿದರು. ನಗರದ ನಂದಿನಿ ಲೇಔಟ್​ನ ಪ್ರೆಸಿಡೆನ್ಸಿ ಶಾಲೆಯಿಂದ ಫೀಸ್ ಟಾರ್ಚರ್ ಮಾಡುತ್ತಿದ್ದಾರೆ ಎಂದು ಮಕ್ಕಳ ಪೋಷಕರು ಪ್ರತಿಭಟನೆಗೆ ಮುಂದಾಗಿದ್ದರು. ಫೀಸ್ ಕಟ್ಟದ ಮಕ್ಕಳನ್ನು ಖಾಸಗಿ ಶಾಲೆಗಳು ಅನ್​ಲೈನ್​ ತರಗತಿಯಿಂದ ರಿಮೂವ್ ಮಾಡುತ್ತಿವೆ. ಇದರಿಂದ ಈಗಾಗಲೇ ವಿದ್ಯಾಭ್ಯಾಸದಿಂದ ವಂಚಿತರಾಗಿರುವ ಮಕ್ಕಳ ಭವಿಷ್ಯಕ್ಕೆ ಇನ್ನಷ್ಟು ಹೊಡೆತ ಬೀಳುತ್ತದೆ.

ಇದನ್ನೂ ಖಂಡಿಸಿ ಪ್ರೆಸಿಡೆನ್ಸಿ ಶಾಲೆಯ ಮುಂದೆ ಮೌನ ಪ್ರತಿಭಟನೆಗೆ ಪೋಷಕರು ಮುಂದಾಗುತ್ತಿದ್ದಂತೆ ಸ್ಥಳಕ್ಕೆ ಪೊಲೀಸರು ಆಗಮಿಸಿದರು. ಈ ವೇಳೆ ಉಲ್ಟಾ ಹೊಡೆದ ಕೆಲ ಪೋಷಕರು ಫೀಸ್ ಕಟ್ಟಲು ಬಂದಿದ್ದೇವೆ ಎಂದು ಹೇಳಿದ್ದಾರೆ.

Fees Torture

ಫೀಸ್​ ಕೋರಿದ ಪ್ರೆಸಿಡೆನ್ಸಿ ಶಾಲೆ

ಇದನ್ನೂ ಓದಿ

ದ್ವಿತೀಯ ಪಿಯುಸಿ ಪರೀಕ್ಷೆ ರದ್ದು; ಪ್ರತಿಷ್ಠಿತ ಕಾಲೇಜುಗಳಲ್ಲಿ ಹೆಚ್ಚಿದ ಸೀಟು ಬೇಡಿಕೆ

ಹತ್ತನೇ ತರಗತಿ ಪರೀಕ್ಷೆ ಬಗ್ಗೆ ಖಚಿತ ಮಾಹಿತಿ ಸಿಕ್ಕಿಲ್ಲ; ಆಗಲೇ ಪಿಯು ಫೀಸ್ ಕಟ್ಟಿಸಿಕೊಳ್ಳುತ್ತಿವೆ ಕೆಲ ಖಾಸಗಿ ಕಾಲೇಜುಗಳು

(Parents protested as private schools demanded a fee in Bengaluru)

ಕಾರು ಡಿಕ್ಕಿ ಹೊಡೆದ ರಭಸಕ್ಕೆ ಫ್ಲೈಓವರ್ ಪಿಲ್ಲರ್ ಮೇಲೆ ಸಿಲುಕಿದ ಯುವತಿ
ಕಾರು ಡಿಕ್ಕಿ ಹೊಡೆದ ರಭಸಕ್ಕೆ ಫ್ಲೈಓವರ್ ಪಿಲ್ಲರ್ ಮೇಲೆ ಸಿಲುಕಿದ ಯುವತಿ
ಬೀದರ್​​ನ ಐತಿಹಾಸಿಕ ಕೋಟೆ ಆವರಣದಲ್ಲಿ ಏರ್ ಶೋ ಪ್ರದರ್ಶನ
ಬೀದರ್​​ನ ಐತಿಹಾಸಿಕ ಕೋಟೆ ಆವರಣದಲ್ಲಿ ಏರ್ ಶೋ ಪ್ರದರ್ಶನ
ಬಾಂಗ್ಲಾ ತಂಡದ ಫೀಲ್ಡಿಂಗ್ ಸೆಟ್ ಮಾಡಿದ ರಿಷಭ್ ಪಂತ್
ಬಾಂಗ್ಲಾ ತಂಡದ ಫೀಲ್ಡಿಂಗ್ ಸೆಟ್ ಮಾಡಿದ ರಿಷಭ್ ಪಂತ್
ದರ್ಬಾರ್ ಗಲ್ಲಿಯಲ್ಲಿ ರಸ್ತೆಯುದ್ದಕ್ಕೂ ಪ್ಯಾಲೆಸ್ತೀನ್ ಧ್ವಜ ಶಾಮಿಯಾನ
ದರ್ಬಾರ್ ಗಲ್ಲಿಯಲ್ಲಿ ರಸ್ತೆಯುದ್ದಕ್ಕೂ ಪ್ಯಾಲೆಸ್ತೀನ್ ಧ್ವಜ ಶಾಮಿಯಾನ
ಚನ್ನಪಟ್ಟಣ: ಹೈಟೆಕ್ ಕ್ರೀಡಾಂಗಣ ನಿರ್ಮಾಣಕ್ಕೆ ಡಿಕೆಶಿ ಶಂಕುಸ್ಥಾಪನೆ
ಚನ್ನಪಟ್ಟಣ: ಹೈಟೆಕ್ ಕ್ರೀಡಾಂಗಣ ನಿರ್ಮಾಣಕ್ಕೆ ಡಿಕೆಶಿ ಶಂಕುಸ್ಥಾಪನೆ
ಬೆಳಗಾವಿ: ರೋಗಿ ಕೈಗೆ ಕೊಳಲು ಕೊಟ್ಟು ಶಸ್ತ್ರ ಚಿಕಿತ್ಸೆ ಮಾಡಿದ ವೈದ್ಯರು
ಬೆಳಗಾವಿ: ರೋಗಿ ಕೈಗೆ ಕೊಳಲು ಕೊಟ್ಟು ಶಸ್ತ್ರ ಚಿಕಿತ್ಸೆ ಮಾಡಿದ ವೈದ್ಯರು
ಒಂದು ಕಡೆ ಕೋಮು ಗಲಭೆ, ಮತ್ತೊಂದೆಡೆ ಹಿಂದೂ ಮುಸ್ಲಿಂ ಯುವಕರಿಂದ ವಿಸರ್ಜನೆ
ಒಂದು ಕಡೆ ಕೋಮು ಗಲಭೆ, ಮತ್ತೊಂದೆಡೆ ಹಿಂದೂ ಮುಸ್ಲಿಂ ಯುವಕರಿಂದ ವಿಸರ್ಜನೆ
ವೇದಿಕೆ ಏರುತ್ತಿದ್ದಂತೆ ಹಾಸ್ಯದ ಹೊಳೆ ಹರಿಸಿದಿ ಕಿಚ್ಚ ಸುದೀಪ್
ವೇದಿಕೆ ಏರುತ್ತಿದ್ದಂತೆ ಹಾಸ್ಯದ ಹೊಳೆ ಹರಿಸಿದಿ ಕಿಚ್ಚ ಸುದೀಪ್
Vastu Tips: ಮನೆಯಲ್ಲಿ ಆಮೆ ಇಡುವುದರ ಹಿಂದಿನ ಮಹತ್ವವೇನು?
Vastu Tips: ಮನೆಯಲ್ಲಿ ಆಮೆ ಇಡುವುದರ ಹಿಂದಿನ ಮಹತ್ವವೇನು?
ಮೈಸೂರು: ಕಾದಾಡುತ್ತಾ ಅರಮನೆ ಆವರಣದಿಂದ ರಸ್ತೆಗೆ ಬಂದ ದಸರಾ ಆನೆಗಳು
ಮೈಸೂರು: ಕಾದಾಡುತ್ತಾ ಅರಮನೆ ಆವರಣದಿಂದ ರಸ್ತೆಗೆ ಬಂದ ದಸರಾ ಆನೆಗಳು