AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿಗೆ ಶುರುವಾಗಿದೆ ಬಿಹಾರಿ ನಂಜಿನ ಭಯ, P 419 ಟ್ರಾವೆಲ್ ಹಿಸ್ಟರಿ ಆತಂಕಕಾರಿ

ಬೆಂಗಳೂರು: ಕೊರೊನಾ ತಡೆಗಟ್ಟುವ ನಿಟ್ಟಿನಲ್ಲಿ ಲಾಕ್​ಡೌನ್ ಮಾಡಲಾಗಿದೆ. ಆದರೆ ಈ ಮಹಾಮಾರಿ ಕೊರೊನಾ ದಿನೇ ದಿನೆ ಬೆಳೆಯುತ್ತಲೇ ಹೋಗುತ್ತಿದ್ದು, 419 ಸೋಂಕಿತನ ಹಿಸ್ಟರಿ ಬೆಂಗಳೂರಿಗರನ್ನು ಬೆಚ್ಚಿ ಬೀಳಿಸುವಂತಿದೆ. ಸೋಂಕಿತ ವ್ಯಕ್ತಿ 54 ವರ್ಷದ ಬಿಹಾರಿ ಮೂಲದವನು ಕಳೆದ ಕೆಲ ದಿನಗಳಿಂದ ತನ್ನ ಸ್ನೇಹಿತನ ಜೊತೆ ಹೊಂಗಸಂದ್ರದಲ್ಲಿ 150ಕ್ಕೂ ಹೆಚ್ಚು ಮಂದಿ ವಾಸಿಸುತ್ತಿದ್ದ ಸ್ಲಂನಲ್ಲಿ ವಾಸಿಸುತ್ತಿದ್ದನು. ನಿನ್ನೆ ಈತನಿಗೆ ಕೊರೊನಾ ಸೋಂಕು ಇರುವುದು ದೃಢಪಟ್ಟಿದೆ. ಸೋಂಕು ದೃಢವಾಗೋ ಮೊದಲು ಎಲ್ಲಿ ಬೇಕಂದ್ರಲ್ಲಿ ಓಡಾಡಿದ್ದ. ಜ್ವರ, ಕೆಮ್ಮ ಕಾಣಿಸಿಕೊಂಡಿದೆ ಎಂದು […]

ಬೆಂಗಳೂರಿಗೆ ಶುರುವಾಗಿದೆ ಬಿಹಾರಿ ನಂಜಿನ ಭಯ, P 419 ಟ್ರಾವೆಲ್ ಹಿಸ್ಟರಿ ಆತಂಕಕಾರಿ
ಸಾಧು ಶ್ರೀನಾಥ್​
|

Updated on:Apr 23, 2020 | 1:19 PM

Share

ಬೆಂಗಳೂರು: ಕೊರೊನಾ ತಡೆಗಟ್ಟುವ ನಿಟ್ಟಿನಲ್ಲಿ ಲಾಕ್​ಡೌನ್ ಮಾಡಲಾಗಿದೆ. ಆದರೆ ಈ ಮಹಾಮಾರಿ ಕೊರೊನಾ ದಿನೇ ದಿನೆ ಬೆಳೆಯುತ್ತಲೇ ಹೋಗುತ್ತಿದ್ದು, 419 ಸೋಂಕಿತನ ಹಿಸ್ಟರಿ ಬೆಂಗಳೂರಿಗರನ್ನು ಬೆಚ್ಚಿ ಬೀಳಿಸುವಂತಿದೆ. ಸೋಂಕಿತ ವ್ಯಕ್ತಿ 54 ವರ್ಷದ ಬಿಹಾರಿ ಮೂಲದವನು ಕಳೆದ ಕೆಲ ದಿನಗಳಿಂದ ತನ್ನ ಸ್ನೇಹಿತನ ಜೊತೆ ಹೊಂಗಸಂದ್ರದಲ್ಲಿ 150ಕ್ಕೂ ಹೆಚ್ಚು ಮಂದಿ ವಾಸಿಸುತ್ತಿದ್ದ ಸ್ಲಂನಲ್ಲಿ ವಾಸಿಸುತ್ತಿದ್ದನು. ನಿನ್ನೆ ಈತನಿಗೆ ಕೊರೊನಾ ಸೋಂಕು ಇರುವುದು ದೃಢಪಟ್ಟಿದೆ.

ಸೋಂಕು ದೃಢವಾಗೋ ಮೊದಲು ಎಲ್ಲಿ ಬೇಕಂದ್ರಲ್ಲಿ ಓಡಾಡಿದ್ದ. ಜ್ವರ, ಕೆಮ್ಮ ಕಾಣಿಸಿಕೊಂಡಿದೆ ಎಂದು ಹೊಂಗಸಂದ್ರದ 4 ಕ್ಲಿನಿಕ್​ಗಳಲ್ಲಿ ಆರೋಗ್ಯ ತಪಾಸಣೆ ಮಾಡಿಸಿದ್ದಾನೆ. ಮೊದಲು ಏಪ್ರಿಲ್ 18 ವೇಣು ಹೆಲ್ತ್ ಕೇರ್ ಸೆಂಟರ್​ನಲ್ಲಿ ಚಿಕಿತ್ಸೆ ಪಡೆದಿದ್ದಾನೆ. ಏಪ್ರಿಲ್19 ರಂದು ಜಯದೇವ ಆಸ್ಪತ್ರೆಯಲ್ಲಿ ಚಿಕಿತ್ಸೆ.

ಏ.20ರಂದು ವಿಕ್ಟೋರಿಯಾಗೆ ಚಿಕಿತ್ಸೆಗಾಗಿ ತೆರಳಿದ್ದ ಆದರೆ ಅಲ್ಲಿ ರಾಜೀವ್ ಗಾಂಧಿ ಆಸ್ಪತ್ರೆಗೆ ಹೋಗುವಂತೆ ವಾಪಸ್ ಕಳುಹಿಸಿದ್ದಾರೆ. ಏ.20ರಂದೇ ಕಿಮ್ಸ್ ಆಸ್ಪತ್ರೆಗೆ ತೆರಳಿದ್ದಾನೆ. ನಂತರ ಅಲ್ಲಿಂದ ಅದೇ ದಿನ ರಾಜೀವ್ ಗಾಂಧಿ ಆಸ್ಪತ್ರೆಗೆ ದಾಖಲಾಗಿದ್ದಾನೆ. ನಿನ್ನೆ ಬಿಹಾರ ಮೂಲದ ಕಾರ್ಮಿಕನಿಗೆ ಕೊರೊನಾ ಪಾಸಿಟಿವ್ ಇರುವುದು ದೃಢ ಪಟ್ಟಿದೆ.

ಒಬ್ಬನಿಂದ 9 ಮಂದಿಗೆ ಸೋಂಕು: ಈ ಬಿಹಾರಿ ಮೂಲದ ಕೊರೊನಾ ಸೋಂಕಿತನಿಂದ 9 ಮಂದಿಗೆ ಸೋಂಕು ಹರಡಿದೆ. ತಡರಾತ್ರಿ ಕಾರ್ಯಾಚರಣೆ ನಡೆಸಿ 123 ಮಂದಿಯನ್ನು ಸರ್ ಸಿ.ವಿ. ರಾಮನ್ ಆಸ್ಪತ್ರೆಯಲ್ಲಿ ಕ್ವಾರಂಟೈನ್​ ಮಾಡಲಾಗಿದೆ. ಕ್ವಾರಂಟೈನ್ ಕಾರ್ಯ ಇವತ್ತೂ ಮುಂದುವರಿದಿದೆ.

ಇಡೀ ಬೊಮ್ಮನಹಳ್ಳಿ, ವಿದ್ಯಾಜ್ಯೋತಿ ನಗರ ಕಂಪ್ಲೀಟ್ ಖಾಲಿ ಖಾಲಿ ಹೊರಗೆ ಬರಲು ಜನರಿಗೆ ಭಯ, ಎಲ್ಲಾ ಮನೆಗಳಿಗೂ ಬೀಗ ಬಿದ್ದಿದೆ. ವಿದ್ಯಾಜ್ಯೋತಿ ನಗರದ ಜನರನ್ನು ಖಾಲಿ ಮಾಡಿಸಿ ಕ್ವಾರಂಟೈನ್ ಮಾಡಲಾಗಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ ಸುಧಾಕರ್ ತಿಳಿಸಿದ್ದಾರೆ.

https://www.facebook.com/Tv9Kannada/videos/3033847000030715/

Published On - 12:41 pm, Thu, 23 April 20

Follow Us
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಗದಗ: ಬಸ್ ನಿಲ್ಲಿಸದಿರುವುದನ್ನ ಪ್ರಶ್ನಿಸಿದ ವಿದ್ಯಾರ್ಥಿ ಮೇಲೆ ದರ್ಪ
ಗದಗ: ಬಸ್ ನಿಲ್ಲಿಸದಿರುವುದನ್ನ ಪ್ರಶ್ನಿಸಿದ ವಿದ್ಯಾರ್ಥಿ ಮೇಲೆ ದರ್ಪ
SSLC ಬೋರ್ಡ್ ಎಡವಟ್ಟಿಗೆ ಪ್ರತಿಭಾವಂತ ಅಂಧ ವಿದ್ಯಾರ್ಥಿನಿ ಫೇಲ್
SSLC ಬೋರ್ಡ್ ಎಡವಟ್ಟಿಗೆ ಪ್ರತಿಭಾವಂತ ಅಂಧ ವಿದ್ಯಾರ್ಥಿನಿ ಫೇಲ್