ಸೋಂಕಿತರಿಗೆ ಬೇಡಿ ತೊಡಿಸಿ ಚಿಕಿತ್ಸೆ ನೀಡಲಾಗುತ್ತಿದೆ!: ಪಾಟೀಲ್

ರಾಜ್ಯದ ಕೆಲವು ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಸೋಂಕಿತರನ್ನ ಬಂಧಿಗಳಂತೆ ಪರಿಗಣಿಸಲಾಗುತ್ತಿದೆ, ಅವರ ಕೈ–ಕಾಲುಗಳಿಗೆ ಬೇಡಿ ತೊಡಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಹಿರಿಯ ಕಾಂಗ್ರೆಸ್ ನಾಯಕ ಹಾಗೂ ಸಾರ್ವಜನಿಕ ಲೆಕ್ಕಪತ್ರ ಸ್ಥಾಯಿಸಮಿತಿ ಅಧ್ಯಕ್ಷ ಹೆಚ್ ಕೆ ಪಾಟೀಲ್ ಗಂಭೀರ ಆರೋಪ ಮಾಡಿದ್ದಾರೆ. ಸಾರ್ವಜನಿಕ ಲೆಕ್ಕಪತ್ರ ಸಮಿತಿ ಸಭೆಯಲ್ಲಿ ಈ ಕುರಿತು ಚರ್ಚೆ ಶುರುವಾದಾಗ ಸದರಿ ಅಮಾನವೀಯ ವಿಷಯವನ್ನು ಪ್ರಸ್ತಾಪಿಸಿದ ಪಾಟೀಲ್, ಒಬ್ಬ ಶಾಸಕರ ತಂದೆಗೂ ಹೀಗೆ ಬರ್ಬರವಾಗಿ ನೋಡಿಕೊಳ್ಳಲಾಗಿದೆ ಎಂದು ಆಪಾದಿಸಿದರು. “ಸೋಂಕಿತರು ಆಸ್ಪತ್ರೆಯಿಂದ ತಪ್ಪಿಸಿಕೊಳ್ಳಬಾರದೆಂದು ಹಾಗೆ ಮಾಡಲಾಗಿದೆ […]

ಸೋಂಕಿತರಿಗೆ ಬೇಡಿ ತೊಡಿಸಿ ಚಿಕಿತ್ಸೆ ನೀಡಲಾಗುತ್ತಿದೆ!: ಪಾಟೀಲ್
ಈಗ ಹೆಚ್.ಕೆ.ಪಾಟೀಲ್ ಏನು ಮಾಡುತ್ತಿದ್ದಾರೆ? ಮಾಜಿ ಸಿಎಂ ಕುಮಾರಸ್ವಾಮಿ ಪ್ರ
ಅರುಣ್​ ಕುಮಾರ್​ ಬೆಳ್ಳಿ

Updated on: Aug 11, 2020 | 5:44 PM

ರಾಜ್ಯದ ಕೆಲವು ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಸೋಂಕಿತರನ್ನ ಬಂಧಿಗಳಂತೆ ಪರಿಗಣಿಸಲಾಗುತ್ತಿದೆ, ಅವರ ಕೈಕಾಲುಗಳಿಗೆ ಬೇಡಿ ತೊಡಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಹಿರಿಯ ಕಾಂಗ್ರೆಸ್ ನಾಯಕ ಹಾಗೂ ಸಾರ್ವಜನಿಕ ಲೆಕ್ಕಪತ್ರ ಸ್ಥಾಯಿಸಮಿತಿ ಅಧ್ಯಕ್ಷ ಹೆಚ್ ಕೆ ಪಾಟೀಲ್ ಗಂಭೀರ ಆರೋಪ ಮಾಡಿದ್ದಾರೆ.

ಸಾರ್ವಜನಿಕ ಲೆಕ್ಕಪತ್ರ ಸಮಿತಿ ಸಭೆಯಲ್ಲಿ ಈ ಕುರಿತು ಚರ್ಚೆ ಶುರುವಾದಾಗ ಸದರಿ ಅಮಾನವೀಯ ವಿಷಯವನ್ನು ಪ್ರಸ್ತಾಪಿಸಿದ ಪಾಟೀಲ್, ಒಬ್ಬ ಶಾಸಕರ ತಂದೆಗೂ ಹೀಗೆ ಬರ್ಬರವಾಗಿ ನೋಡಿಕೊಳ್ಳಲಾಗಿದೆ ಎಂದು ಆಪಾದಿಸಿದರು.

ಸೋಂಕಿತರು ಆಸ್ಪತ್ರೆಯಿಂದ ತಪ್ಪಿಸಿಕೊಳ್ಳಬಾರದೆಂದು ಹಾಗೆ ಮಾಡಲಾಗಿದೆ ಎಂದು ವೈದ್ಯರು ಹೇಳುತ್ತಾರೆ. ಅವರಿಗೆ ಮನುಷ್ಯತ್ವ ಅನ್ನೋದು ಇದೆಯಾ? ಸೋಂಕಿತರೇನು ಪಶುಗಳೇ?” ಎಂದು ಪಾಟೀಲ್ ಗುಡುಗಿದರೆನ್ನಲಾಗಿದೆ.

ರೋಗಿಗಳ ಸಂಬಂಧಿಕರನ್ನು ದೂರದಿಂದ ನೋಡಲು ಸಹ ಬಿಡುತ್ತಿಲ್ಲ, ಅವರು ಹೇಳುವ ಪ್ರಕಾರ ಕೆಲ ವೈದ್ಯರು ರೋಗಿಗಳನ್ನು ಮುಟ್ಟಲು ಸಹ ಹಿಂಜರಿಯುತ್ತಿದ್ದಾರೆ,” ಎಂದು ಪಾಟೀಲ್ ಹೇಳಿದಾಗ, ಕೆಲ ಕಾಂಗ್ರೆಸ್ ಮತ್ತು ಬಿಜೆಪಿ ಶಾಸಕರು ಸಹ ದನಿಗೂಡಿಸಿ ಬೇಸರ ವ್ಯಕ್ತಪಡಿಸಿದರು.

ಅಂಥ ಆಸ್ಪತ್ರೆಗಳ ಮೇಲೆ ನಿಗಾ ಇಡಲು ತಂಡವೊಂದನ್ನು ರಚಿಸುವಂತೆ ಪಾಟೀಲ್, ಬಿಬಿಎಂಪಿ ಆಯುಕ್ತರಿಗೆ ಸೂಚಿಸಿದರು.

Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.

Follow Us