AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವರ್ಕ್ ಫ್ರಂ ಹೋಂ ನಿಲ್ಲಿಸಿ.. ನಷ್ಟದಲ್ಲಿರುವವರಿಗೆ ಅನುಕೂಲವಾಗುತ್ತೆ – ಸಂಸದ ಪಿ.ಸಿ. ಮೋಹನ್

ಸರ್ಕಾರಕ್ಕೆ ನಷ್ಟ ಉಂಟಾಗುತ್ತಿದೆಯಂತೆ. ಹೀಗಾಗಿ ವರ್ಕ್ ಫ್ರಮ್ ಹೋಂ ರದ್ದು ಮಾಡುವಂತೆ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ, ಡಿಸಿಎಂ ಅಶ್ವತ್ಥ್ ನಾರಾಯಣರಿಗೆ ಸಂಸದ ಪಿ.ಸಿ.ಮೋಹನ್ ಮನವಿ ಮಾಡಿಕೊಂಡಿದ್ದಾರೆ.

ವರ್ಕ್ ಫ್ರಂ ಹೋಂ ನಿಲ್ಲಿಸಿ.. ನಷ್ಟದಲ್ಲಿರುವವರಿಗೆ ಅನುಕೂಲವಾಗುತ್ತೆ - ಸಂಸದ ಪಿ.ಸಿ. ಮೋಹನ್
ಸಂಸದ ಪಿ.ಸಿ.ಮೋಹನ್
ಆಯೇಷಾ ಬಾನು
| Edited By: |

Updated on: Jan 05, 2021 | 12:49 PM

Share

ಬೆಂಗಳೂರು: ಮಹಾಮಾರಿ ಕೊರೊನಾ ಹಿನ್ನೆಲೆಯಲ್ಲಿ IT-BT ಉದ್ಯಮಿಗಳಿಗೆ ವರ್ಕ್ ಫ್ರಮ್ ಹೋಮ್ ನೀಡಲಾಗಿತ್ತು. ಆದರೆ ಈಗ ವರ್ಕ್ ಫ್ರಮ್ ಹೋಂ ರದ್ದು ಮಾಡುವಂತೆ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ, ಡಿಸಿಎಂ ಅಶ್ವತ್ಥ್ ನಾರಾಯಣರಿಗೆ ಸಂಸದ ಪಿ.ಸಿ.ಮೋಹನ್ ಮನವಿ ಮಾಡಿಕೊಂಡಿದ್ದಾರೆ. ಜೊತೆಗೆ ಈ ಬಗ್ಗೆ ಅಬಕಾರಿ ಇಲಾಖೆ ಸಚಿವ ನಾಗೇಶ್‌ರಿಂದಲೂ ಒತ್ತಾಯ ಕೇಳಿ ಬಂದಿತ್ತು.

ರಾಜ್ಯದಲ್ಲಿ ಕೊರೊನಾ ಆರ್ಭಟ ಜೋರಾಗುತ್ತಿದ್ದಂತೆ ಎಲ್ಲವೂ ಬಂದ್ ಆಗಿತ್ತು. ಶಾಲೆ-ಕಾಲೇಜುಗಳ ಬಾಗಿಲು ಮುಚ್ಚಿದ್ದವು. ರಾಜ್ಯದಲ್ಲಿ ಕಠಿಣ ಕ್ರಮಗಳು ಜಾರಿಯಾಗಿದ್ದವು. ಲಾಕ್​ಡೌನ್ ಹೇರಲಾಗುತ್ತು. ಹಾಗೇ ನಿಮಗೆಲ್ಲಾ ತಿಳಿದಂತೆ ಸರ್ಕಾರ ಉದ್ಯಮಿಗಳು ಮನೆಯಲ್ಲೇ ಕೂತು ಕೆಲಸ ಮಾಡಲಿ ಎಂದು ವರ್ಕ್ ಫ್ರಮ್ ಹೋಮ್ ಘೋಷಿಸಿತ್ತು. ಆದರೆ ಈಗ ಪರಿಸ್ಥಿತಿ ಸುಧಾರಿಸಿದೆ. ಬಿಗಿದಿದ್ದ ಗಂಟಲು ಸರಳಾದಂತಾಗಿದೆ.

ಆರ್ಥಿಕತೆ ಹಂತ ಹಂತವಾಗಿ ಮೇಲೇಳುತ್ತಿದೆ. ವಿದ್ಯಾರ್ಥಿಗಳು ಶಾಲೆ-ಕಾಲೇಜಿನತ್ತ ಮುಖ ಮಾಡುತ್ತಿದ್ದಾರೆ. ಇಷ್ಟೆಲ್ಲಾ ಸುಧಾರಣೆಯಾದರೂ IT-BT ಉದ್ಯಮಿಗಳಿಗೆ ವರ್ಕ್ ಫ್ರಮ್ ಹೋಮ್ ಮಾತ್ರ ಕ್ಯಾನ್ಸಲ್ ಆಗಿಲ್ಲ. ಕೊರೊನಾ ಬಂದಾಗಿನಿಂದಲೂ ಮನೆಯಲ್ಲೇ ಕೆಲಸ ಮಾಡ್ತಿದ್ದಾರೆ. ಸದ್ಯ ಇದರಿಂದ ಸರ್ಕಾರಕ್ಕೆ ನಷ್ಟ ಉಂಟಾಗುತ್ತಿದೆಯಂತೆ. ಹೀಗಾಗಿ ವರ್ಕ್ ಫ್ರಮ್ ಹೋಂ ರದ್ದು ಮಾಡುವಂತೆ ಮನವಿ ಮಾಡಿಕೊಂಡಿದ್ದಾರೆ.

ಶಾಲಾ ಕಾಲೇಜು ಶುರು ಆದ್ಮೇಲೆ ಐಟಿ ಬಿಟಿ ಕಂಪನಿಗಳು ಯಾಕೆ ಆರಂಭ ಆಗ್ತಿಲ್ಲ? ಶಾಲಾ ಕಾಲೇಜು ಶುರು ಆದ್ಮೇಲೆ ಐಟಿ ಬಿಟಿ ಕಂಪನಿಗಳು ಯಾಕೆ ಆರಂಭ ಆಗ್ತಿಲ್ಲ ಅಂತ ಸಂಸದ ಪಿಸಿ ಮೋಹನ್ ಪ್ರಶ್ನಿಸಿದ್ದಾರೆ. ವರ್ಕ್ ಫ್ರಮ್ ಹೋಮ್‌ನಿಂದ ಅಬಕಾರಿ ಇಲಾಖೆಗೆ ಭಾರಿ ನಷ್ಟವಾಗಿದೆ. ಬಾರ್ & ರೆಸ್ಟೋರೆಂಟ್‌ಗಳು, ಹೋಟೆಲ್‌ಗಳು, ಕ್ಯಾಬ್ ಚಾಲಕರು, ಸಣ್ಣ ಪುಟ್ಟ ಅಂಗಡಿಗಳು ನಷ್ಟದಲ್ಲಿವೆ. ಹೀಗಾಗಿ ವರ್ಕ್ ಫ್ರಮ್ ಹೋಮ್ ರದ್ದು ಮಾಡಿದರೆ ನಷ್ಟದಲ್ಲಿರುವವರಿಗೆ ಅನುಕೂಲವಾಗಲಿದೆ ಎಂದು ಮನವಿ ಮಾಡಿದ್ದಾರೆ.

‘Work from Home ಪದ್ಧತಿ ಕೊರೊನಾ ಮಹಾಮಾರಿ ಮುಗಿದ ಬಳಿಕವೂ ಮುಂದುವರಿಯಲಿದೆ, ಆದ್ರೇ?’

ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು
ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು