AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವರ್ಕ್ ಫ್ರಂ ಹೋಂ ನಿಲ್ಲಿಸಿ.. ನಷ್ಟದಲ್ಲಿರುವವರಿಗೆ ಅನುಕೂಲವಾಗುತ್ತೆ – ಸಂಸದ ಪಿ.ಸಿ. ಮೋಹನ್

ಸರ್ಕಾರಕ್ಕೆ ನಷ್ಟ ಉಂಟಾಗುತ್ತಿದೆಯಂತೆ. ಹೀಗಾಗಿ ವರ್ಕ್ ಫ್ರಮ್ ಹೋಂ ರದ್ದು ಮಾಡುವಂತೆ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ, ಡಿಸಿಎಂ ಅಶ್ವತ್ಥ್ ನಾರಾಯಣರಿಗೆ ಸಂಸದ ಪಿ.ಸಿ.ಮೋಹನ್ ಮನವಿ ಮಾಡಿಕೊಂಡಿದ್ದಾರೆ.

ವರ್ಕ್ ಫ್ರಂ ಹೋಂ ನಿಲ್ಲಿಸಿ.. ನಷ್ಟದಲ್ಲಿರುವವರಿಗೆ ಅನುಕೂಲವಾಗುತ್ತೆ - ಸಂಸದ ಪಿ.ಸಿ. ಮೋಹನ್
ಸಂಸದ ಪಿ.ಸಿ.ಮೋಹನ್
ಆಯೇಷಾ ಬಾನು
ಆಯೇಷಾ ಬಾನು| Edited By: ಸಾಧು ಶ್ರೀನಾಥ್​|

Updated on: Jan 05, 2021 | 12:49 PM

Share

ಬೆಂಗಳೂರು: ಮಹಾಮಾರಿ ಕೊರೊನಾ ಹಿನ್ನೆಲೆಯಲ್ಲಿ IT-BT ಉದ್ಯಮಿಗಳಿಗೆ ವರ್ಕ್ ಫ್ರಮ್ ಹೋಮ್ ನೀಡಲಾಗಿತ್ತು. ಆದರೆ ಈಗ ವರ್ಕ್ ಫ್ರಮ್ ಹೋಂ ರದ್ದು ಮಾಡುವಂತೆ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ, ಡಿಸಿಎಂ ಅಶ್ವತ್ಥ್ ನಾರಾಯಣರಿಗೆ ಸಂಸದ ಪಿ.ಸಿ.ಮೋಹನ್ ಮನವಿ ಮಾಡಿಕೊಂಡಿದ್ದಾರೆ. ಜೊತೆಗೆ ಈ ಬಗ್ಗೆ ಅಬಕಾರಿ ಇಲಾಖೆ ಸಚಿವ ನಾಗೇಶ್‌ರಿಂದಲೂ ಒತ್ತಾಯ ಕೇಳಿ ಬಂದಿತ್ತು.

ರಾಜ್ಯದಲ್ಲಿ ಕೊರೊನಾ ಆರ್ಭಟ ಜೋರಾಗುತ್ತಿದ್ದಂತೆ ಎಲ್ಲವೂ ಬಂದ್ ಆಗಿತ್ತು. ಶಾಲೆ-ಕಾಲೇಜುಗಳ ಬಾಗಿಲು ಮುಚ್ಚಿದ್ದವು. ರಾಜ್ಯದಲ್ಲಿ ಕಠಿಣ ಕ್ರಮಗಳು ಜಾರಿಯಾಗಿದ್ದವು. ಲಾಕ್​ಡೌನ್ ಹೇರಲಾಗುತ್ತು. ಹಾಗೇ ನಿಮಗೆಲ್ಲಾ ತಿಳಿದಂತೆ ಸರ್ಕಾರ ಉದ್ಯಮಿಗಳು ಮನೆಯಲ್ಲೇ ಕೂತು ಕೆಲಸ ಮಾಡಲಿ ಎಂದು ವರ್ಕ್ ಫ್ರಮ್ ಹೋಮ್ ಘೋಷಿಸಿತ್ತು. ಆದರೆ ಈಗ ಪರಿಸ್ಥಿತಿ ಸುಧಾರಿಸಿದೆ. ಬಿಗಿದಿದ್ದ ಗಂಟಲು ಸರಳಾದಂತಾಗಿದೆ.

ಆರ್ಥಿಕತೆ ಹಂತ ಹಂತವಾಗಿ ಮೇಲೇಳುತ್ತಿದೆ. ವಿದ್ಯಾರ್ಥಿಗಳು ಶಾಲೆ-ಕಾಲೇಜಿನತ್ತ ಮುಖ ಮಾಡುತ್ತಿದ್ದಾರೆ. ಇಷ್ಟೆಲ್ಲಾ ಸುಧಾರಣೆಯಾದರೂ IT-BT ಉದ್ಯಮಿಗಳಿಗೆ ವರ್ಕ್ ಫ್ರಮ್ ಹೋಮ್ ಮಾತ್ರ ಕ್ಯಾನ್ಸಲ್ ಆಗಿಲ್ಲ. ಕೊರೊನಾ ಬಂದಾಗಿನಿಂದಲೂ ಮನೆಯಲ್ಲೇ ಕೆಲಸ ಮಾಡ್ತಿದ್ದಾರೆ. ಸದ್ಯ ಇದರಿಂದ ಸರ್ಕಾರಕ್ಕೆ ನಷ್ಟ ಉಂಟಾಗುತ್ತಿದೆಯಂತೆ. ಹೀಗಾಗಿ ವರ್ಕ್ ಫ್ರಮ್ ಹೋಂ ರದ್ದು ಮಾಡುವಂತೆ ಮನವಿ ಮಾಡಿಕೊಂಡಿದ್ದಾರೆ.

ಶಾಲಾ ಕಾಲೇಜು ಶುರು ಆದ್ಮೇಲೆ ಐಟಿ ಬಿಟಿ ಕಂಪನಿಗಳು ಯಾಕೆ ಆರಂಭ ಆಗ್ತಿಲ್ಲ? ಶಾಲಾ ಕಾಲೇಜು ಶುರು ಆದ್ಮೇಲೆ ಐಟಿ ಬಿಟಿ ಕಂಪನಿಗಳು ಯಾಕೆ ಆರಂಭ ಆಗ್ತಿಲ್ಲ ಅಂತ ಸಂಸದ ಪಿಸಿ ಮೋಹನ್ ಪ್ರಶ್ನಿಸಿದ್ದಾರೆ. ವರ್ಕ್ ಫ್ರಮ್ ಹೋಮ್‌ನಿಂದ ಅಬಕಾರಿ ಇಲಾಖೆಗೆ ಭಾರಿ ನಷ್ಟವಾಗಿದೆ. ಬಾರ್ & ರೆಸ್ಟೋರೆಂಟ್‌ಗಳು, ಹೋಟೆಲ್‌ಗಳು, ಕ್ಯಾಬ್ ಚಾಲಕರು, ಸಣ್ಣ ಪುಟ್ಟ ಅಂಗಡಿಗಳು ನಷ್ಟದಲ್ಲಿವೆ. ಹೀಗಾಗಿ ವರ್ಕ್ ಫ್ರಮ್ ಹೋಮ್ ರದ್ದು ಮಾಡಿದರೆ ನಷ್ಟದಲ್ಲಿರುವವರಿಗೆ ಅನುಕೂಲವಾಗಲಿದೆ ಎಂದು ಮನವಿ ಮಾಡಿದ್ದಾರೆ.

‘Work from Home ಪದ್ಧತಿ ಕೊರೊನಾ ಮಹಾಮಾರಿ ಮುಗಿದ ಬಳಿಕವೂ ಮುಂದುವರಿಯಲಿದೆ, ಆದ್ರೇ?’

Follow Us
Ayesha Banu
Ayesha Banu

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ