AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಣ ದುರುಪಯೋಗ ಮಾಡಿಕೊಂಡ ಪಿಡಿಒ ಬಂಧನ, ತೊಗರಿಬೇಳೆ ಕದ್ದ ಶಿಕ್ಷಕನ ವಿರುದ್ಧ ದೂರು ದಾಖಲು

ಶಾಲೆಯಲ್ಲಿ ಕದ್ದ ಬೇಳೆಯನ್ನು ಅಂಗಡಿಗೆ ಸಾಗಿಸುತ್ತಿದ್ದ ವೇಳೆ ವೇಳೆ ಸ್ಥಳೀಯರೊಬ್ಬರು ವಿಡಿಯೊ ಮಾಡಿಕೊಂಡು ಸಾಮಾಜಿಕ ಮಾಧ್ಯಮಗಳಿಗೆ ಹರಿಬಿಟ್ಟಿದ್ದರು.

ಹಣ ದುರುಪಯೋಗ ಮಾಡಿಕೊಂಡ ಪಿಡಿಒ ಬಂಧನ, ತೊಗರಿಬೇಳೆ ಕದ್ದ ಶಿಕ್ಷಕನ ವಿರುದ್ಧ ದೂರು ದಾಖಲು
ಅಕ್ರಮದ ಆರೋಪ ಎದುರಿಸುತ್ತಿರುವ ಪಿಡಿಒ ಕಮಲಾ ಮತ್ತು ಮುಖ್ಯ ಶಿಕ್ಷಕ ರಾಜೇಗೌಡ
TV9 Web
| Edited By: |

Updated on:Jul 01, 2022 | 12:13 PM

Share

ಕೋಲಾರ: ಸರ್ಕಾರಕ್ಕೆ ಸೇರಿದ್ದ ಲಕ್ಷಾಂತರ ರೂಪಾಯಿ ಮೊತ್ತದ ಹಣ ದುರುಪಯೋಗಪಡಿಸಿಕೊಂಡ ಆರೋಪದ ಮೇಲೆ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ (ಪಿಡಿಒ) ಕಮಲಾ ಅವರನ್ನು ಕೋಲಾರ ಗ್ರಾಮಾಂತರ ರಾಣೆ ಪೊಲೀಸರು ಬಂಧಿಸಿದ್ದಾರೆ. ಕೋಲಾರ ತಾಲ್ಲೂಕುನ ಮಾರ್ಜೇನಹಳ್ಳಿ ಗ್ರಾಪಂ ಪಿಡಿಒ ಕಮಲಾ, 14 ಮತ್ತು 15ನೇ ಹಣಕಾಸು ಯೋಜನೆಯಲ್ಲಿ ನಕಲಿ ಬಿಲ್ ಸೃಷ್ಟಿಸಿ ಸರ್ಕಾರಕ್ಕೆ ₹ 16.5 ಲಕ್ಷ ವಂಚನೆ ಮಾಡಿರುವ ಆರೋಪ ಎದುರಿಸುತ್ತಿದ್ದಾರೆ. ಈ ಕುರಿತು ಮಾರ್ಜೇನಹಳ್ಳಿ ಗ್ರಾಮ ಪಂಚಾಯಿತ ಆಡಳಿತ ಮಂಡಳಿ ಕಳೆದ ಜನವರಿ 20ರಂದು ಪೊಲೀಸರಿಗೆ ದೂರು ನೀಡಿತ್ತು. ಕಮಲಾ ಅವರು ಡೇಟಾ ಎಂಟ್ರಿ ಸಿಬ್ಬಂದಿ ಮೇಲೆ ಆರೋಪ ಹೊರಿಸಿದ್ದರು.

ತೊಗರಿಬೇಳೆ ಕದ್ದು ಸಿಕ್ಕಿಬಿದ್ದ ಶಿಕ್ಷಕ

ಮಂಡ್ಯ: ಮಕ್ಕಳ ಬಿಸಿಯೂಟಕ್ಕೆ ಬಳಸಬೇಕಿದ್ದ ತೊಗರಿಬೇಳೆಯನ್ನು ಕದ್ದು ಸಾಗಿಸುತ್ತಿದ್ದ ಆರೋಪದ ಮೇಲೆ ಮುಖ್ಯ ಶಿಕ್ಷಕನ ಮೇಲೆ ಶಿಕ್ಷಣ ಇಲಾಖೆಯ ಬಿಸಿಯೂಟ ವಿಭಾಗದ ಅಧಿಕಾರಿ ಪೊಲೀಸರಿಗೆ ದೂರು ನೀಡಿದ್ದಾರೆ. ಮಳವಳ್ಳಿ ತಾಲ್ಲೂಕಿನ ಮಾರೆಗೌಡನಹಳ್ಳಿ ಶಾಲೆಯ ಮುಖ್ಯ ಶಿಕ್ಷಕ ಕಾಳರಾಜೇಗೌಡ ವಿರುದ್ಧ ಬೇಳೆ ಕಳ್ಳತನದ ಆರೋಪ ಕೇಳಿಬಂದಿದೆ. ಶಾಲೆಯಲ್ಲಿ ಕದ್ದ ಬೇಳೆಯನ್ನು ಆಟೊವೊಂದರಲ್ಲಿ ಹಲಗೂರಿನ ಅಂಗಡಿಗೆ ಸಾಗಿಸುತ್ತಿದ್ದ ವೇಳೆ ವೇಳೆ ಸ್ಥಳೀಯರೊಬ್ಬರು ವಿಡಿಯೊ ಮಾಡಿಕೊಂಡು ಸಾಮಾಜಿಕ ಮಾಧ್ಯಮಗಳಿಗೆ ಹರಿಬಿಟ್ಟಿದ್ದರು.

ವಿಡಿಯೊ ನೋಡಿದ್ದ ಜನರು ಶಿಕ್ಷಕನ ವಿರುದ್ದ ಕ್ರಮಕ್ಕೆ ಒತ್ತಾಯಿಸಿದ್ದರು. ವಿಡಿಯೊ ಸಾಕ್ಷ್ಯದ ಆಧಾರದ ಮೇಲೆ ಶಿಕ್ಷಣ ಇಲಾಖೆಯ ಅಧಿಕಾರಿಗಳು ಮುಖ್ಯ ಶಿಕ್ಷಕನಿಗೆ ನೊಟೀಸ್ ಜಾರಿ ಮಾಡಿದ್ದರು. ಕಳ್ಳತನ ವಿಡಿಯೊ ಆಧರಿಸಿ ಹಲಗೂರು ಪೊಲೀಸರಿಗೆ ಜಿಸಿಯೂಟದ ಅಧಿಕಾರಿ ದೂರು ನೀಡಿದ್ದಾರೆ.

Published On - 12:13 pm, Fri, 1 July 22

Follow Us
ಸಿದ್ದರಾಮಯ್ಯನವರಿಂದ ದೂರ: ವಿಡಿಯೋ ವೈರಲ್ ಬಗ್ಗೆ ಜಾರಕಿಹೊಳಿ ಸ್ಪಷ್ಟನೆ
ಸಿದ್ದರಾಮಯ್ಯನವರಿಂದ ದೂರ: ವಿಡಿಯೋ ವೈರಲ್ ಬಗ್ಗೆ ಜಾರಕಿಹೊಳಿ ಸ್ಪಷ್ಟನೆ
ಜಿಬಿಎ ನಿರ್ಲಕ್ಷ್ಯ: ಹೊಂಡದಲ್ಲಿ ಕಾರಿನ ಚಕ್ರ ಸಿಲುಕಿ ಚಾಲಕನ ಪರದಾಟ
ಜಿಬಿಎ ನಿರ್ಲಕ್ಷ್ಯ: ಹೊಂಡದಲ್ಲಿ ಕಾರಿನ ಚಕ್ರ ಸಿಲುಕಿ ಚಾಲಕನ ಪರದಾಟ
ಕರ್ನಾಟಕದ ಮುಖ್ಯ ಚುನಾವಣಾ ಅಧಿಕಾರಿ ಸುದ್ದಿಗೋಷ್ಠಿ ನೇರಪ್ರಸಾರ
ಕರ್ನಾಟಕದ ಮುಖ್ಯ ಚುನಾವಣಾ ಅಧಿಕಾರಿ ಸುದ್ದಿಗೋಷ್ಠಿ ನೇರಪ್ರಸಾರ
ಮಂಗಳೂರು-ಕಾರ್ಕಳ ಹೆದ್ದಾರಿಯಲ್ಲಿ ಭೂಕುಸಿತ: ಸ್ಥಳೀಯರಲ್ಲಿ ಹೆಚ್ಚಿದ ಆತಂಕ
ಮಂಗಳೂರು-ಕಾರ್ಕಳ ಹೆದ್ದಾರಿಯಲ್ಲಿ ಭೂಕುಸಿತ: ಸ್ಥಳೀಯರಲ್ಲಿ ಹೆಚ್ಚಿದ ಆತಂಕ
ವಯನಾಡು ಭೂಕುಸಿತ: ಭಯಾನಕ ದೃಶ್ಯದಲ್ಲಿ ಸೆರೆಯಾದ ಟ್ಯಾಂಕರ್ ಕರ್ನಾಟಕದ್ದು!
ವಯನಾಡು ಭೂಕುಸಿತ: ಭಯಾನಕ ದೃಶ್ಯದಲ್ಲಿ ಸೆರೆಯಾದ ಟ್ಯಾಂಕರ್ ಕರ್ನಾಟಕದ್ದು!
ಬೆಂಗಳೂರಿನ ಪ್ಯಾಲೇಸ್ ರಸ್ತೆ ಮಧ್ಯೆ ಹೆಡೆಬಿಚ್ಚಿ ನಿಂತ ನಾಗರಹಾವು
ಬೆಂಗಳೂರಿನ ಪ್ಯಾಲೇಸ್ ರಸ್ತೆ ಮಧ್ಯೆ ಹೆಡೆಬಿಚ್ಚಿ ನಿಂತ ನಾಗರಹಾವು
24 ಗಂಟೆಗಳಿಂದ ಕೆಸರಿನಲ್ಲಿ ಸಿಲುಕಿ ನರಳಾಡುತ್ತಿರುವ ಕಾಡಾನೆ
24 ಗಂಟೆಗಳಿಂದ ಕೆಸರಿನಲ್ಲಿ ಸಿಲುಕಿ ನರಳಾಡುತ್ತಿರುವ ಕಾಡಾನೆ
ಬೆಳಗಾವಿಯಲ್ಲಿ RSS ವಾರ್ಷಿಕ ಸಭೆ ಬಗ್ಗೆ ಪ್ರಿಯಾಂಕ್ ಖರ್ಗೆ ಖಡಕ್ ಮಾತು
ಬೆಳಗಾವಿಯಲ್ಲಿ RSS ವಾರ್ಷಿಕ ಸಭೆ ಬಗ್ಗೆ ಪ್ರಿಯಾಂಕ್ ಖರ್ಗೆ ಖಡಕ್ ಮಾತು
ವಯನಾಡು ಭೂಕುಸಿತದ ಬಗ್ಗೆ ಡಿಸಿ ಮೇಘಶ್ರೀ ಮಾಹಿತಿ
ವಯನಾಡು ಭೂಕುಸಿತದ ಬಗ್ಗೆ ಡಿಸಿ ಮೇಘಶ್ರೀ ಮಾಹಿತಿ
ವಯನಾಡು ಗುಡ್ಡ ಕುಸಿತ ದುರಂತದ ಬಗ್ಗೆ ಮಾಹಿತಿ ಬಿಚ್ಚಿಟ್ಟ ಹೊಟೇಲ್ ಮಾಲೀಕ
ವಯನಾಡು ಗುಡ್ಡ ಕುಸಿತ ದುರಂತದ ಬಗ್ಗೆ ಮಾಹಿತಿ ಬಿಚ್ಚಿಟ್ಟ ಹೊಟೇಲ್ ಮಾಲೀಕ