AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೈಗಾರಿಕೆಗಳನ್ನು ಆರಂಭಿಸಲು ಈಗ ಆಕ್ಸಿಜನ್ ಕೊರತೆ.. ಕೈಗಾರಿಕೆ ಮುಚ್ಚುವ ಆತಂಕ ವ್ಯಕ್ತಪಡಿಸಿದ ಅಧ್ಯಕ್ಷ ಪ್ರಕಾಶ್

ಲಾಕ್ಡೌನ್ಗೂ ಮುನ್ನ ಕೈಗಾರಿಕೆಗಳಿಗೆ ಪೂರೈಕೆಯಾಗುತ್ತಿದ್ದ ಆಕ್ಸಿಜನ್ಗಳನ್ನ ಕೊರೊನಾ ಸೋಂಕಿತರ ಅವಶ್ಯಕತೆಗೆ ಸರ್ಕಾರ ನೀಡಿತ್ತು. ಈ ಪರಿಸ್ಥಿತಿ ಸುಧಾರಿಸುವ ತನಕ ಕೈಗಾರಿಕೆಗಳಿಗೆ ಆಕ್ಸಿನ್ ಪೂರೈಕೆ ಮಾಡದಂತೆ ಸರ್ಕಾರ ತಾಕೀತು ಮಾಡಿತ್ತು. ಪೀಣ್ಯ ಕೈಗಾರಿಕಾ ಕ್ಷೇತ್ರದಲ್ಲಿನ 2000ಕ್ಕೂ ಅಧಿಕ ಕೈಗಾರಿಕೆಗಳು ಆಕ್ಸಿಜನ್ ಇಲ್ಲದೆ ಕಾರ್ಯ ನಿರ್ವಹಿಸುವುದಿಲ್ಲ.

ಕೈಗಾರಿಕೆಗಳನ್ನು ಆರಂಭಿಸಲು ಈಗ ಆಕ್ಸಿಜನ್ ಕೊರತೆ.. ಕೈಗಾರಿಕೆ ಮುಚ್ಚುವ ಆತಂಕ ವ್ಯಕ್ತಪಡಿಸಿದ ಅಧ್ಯಕ್ಷ ಪ್ರಕಾಶ್
ಪೀಣ್ಯ ಕೈಗಾರಿಕಾ ಸಂಘದ ಅಧ್ಯಕ್ಷ ಪ್ರಕಾಶ್
Follow us
TV9 Web
| Updated By: sandhya thejappa

Updated on: Jun 10, 2021 | 11:20 AM

ಬೆಂಗಳೂರು: ಮಹಾಮಾರಿ ಕೊರೊನಾ ಸಮಯದಲ್ಲಿ ಜೀವದ ಉಳಿವಿಗಾಗಿ ಆಕ್ಸಿಜನ್ ನೀಡಿತ್ತಿದ್ದವವರಿಗೆ ಆಕ್ಸಿಜನ್ ಸಮಸ್ಯೆ ಎದುರಾಗಿದೆ. ಅಂದರೆ ಕೊವಿಡ್ ಸಂದರ್ಭದಲ್ಲಿ ಸೋಂಕಿತರ ಚಿಕಿತ್ಸೆಗೆಂದು ಕೈಗಾರಿಕೆಗಳು ಆಮ್ಲಜನಕ ಒದಗಿಸಿದ್ದವು. ಆದರೆ ಇದೀಗ ಕೈಗಾರಿಕೆ ಓಪನ್ ಆದ್ರು ಸಹ ಆಮ್ಲಜನಕದ ಕೊರತೆ ತಲೆದೂರಿದೆ. ಕೈಗಾರಿಕೆಗಳನ್ನು ಆರಂಭಿಸಲು ಈಗ ಆಕ್ಸಿಜನ್ ಕೊರತೆ ಉಂಟಾಗಿದೆ.

10,000ಕ್ಕೂ ಹೆಚ್ಚು ಕೈಗಾರಿಕೆಗಳಿರುವ ಬೆಂಗಳೂರಿನ ಪೀಣ್ಯ ಕೈಗಾರಿಕಾ ಪ್ರದೇಶದ ಕೈಗಾರಿಕೆಗಳನ್ನು ಆಮ್ಲಜನಕ ಕೊರತೆಯಿಂದ ಮುಚ್ಚುವ ಆತಂಕ ಎದುರಾಗಿದೆ. ಈ ಬಗ್ಗೆ ಪೀಣ್ಯ ಕೈಗಾರಿಕಾ ಸಂಘದ ಅಧ್ಯಕ್ಷ ಪ್ರಕಾಶ್ ಆತಂಕ ವ್ಯಕ್ತಪಡಿಸಿದ್ದಾರೆ. ಕೈಗಾರಿಕೆಗಳಿಗೆ ಪೂರೈಸಲಾಗುತ್ತಿದ್ದ ಆಕ್ಸಿಜನ್ನನ್ನು ಸೋಂಕಿತರಿಗೆ ನೀಡಲಾಗಿದೆ. ಕೊರೊನಾ ಹಿನ್ನೆಲೆ ಸರ್ಕಾರ ಆಸ್ಪತ್ರೆಗಳಿಗೆ ಆಕ್ಸಿಜನ್ ನೀಡಿತ್ತು. ಈಗ ಆಸ್ಪತ್ರೆಗಳಿಗೆ ಸಾಕಾಗುವಷ್ಟು ಆಕ್ಸಿಜನ್ ಪೂರೈಕೆಯಾಗ್ತಿದೆ. ಆದರೆ ಕೈಗಾರಿಕೆಗಳಿಗೆ ಆಕ್ಸಿಜನ್ ನೀಡಲಾಗಿಲ್ಲ. ಆಕ್ಸಿಜನ್ ಇಲ್ಲದಿದ್ದರೆ 2000ಕ್ಕೂ ಹೆಚ್ಚು ಕೈಗಾರಿಕೆಗಳು ಸ್ಥಗಿತವಾಗಲಿವೆ. ಹೀಗಾಗಿ ಕೈಗಾರಿಕೆಗಳಿಗೆ ಆಕ್ಸಿಜನ್ ನೀಡುವಂತೆ ಪೀಣ್ಯ ಕೈಗಾರಿಕಾ ಸಂಘದ ಅಧ್ಯಕ್ಷ ಪ್ರಕಾಶ್ ಮನವಿ ಮಾಡಿಕೊಂಡಿದ್ದಾರೆ.

ನಾವೆಲ್ಲರೂ ಜೀವ ಮತ್ತೆ ಜೀವನದ ನಡುವೆ ಹೋರಾಡ್ತಿದ್ದೀವಿ. ಲಾಕ್ಡೌನ್ಗೂ ಮುನ್ನ ಕೈಗಾರಿಕೆಗಳಿಗೆ ಪೂರೈಕೆಯಾಗುತ್ತಿದ್ದ ಆಕ್ಸಿಜನ್ಗಳನ್ನ ಕೊರೊನಾ ಸೋಂಕಿತರ ಅವಶ್ಯಕತೆಗೆ ಸರ್ಕಾರ ನೀಡಿತ್ತು. ಈ ಪರಿಸ್ಥಿತಿ ಸುಧಾರಿಸುವ ತನಕ ಕೈಗಾರಿಕೆಗಳಿಗೆ ಆಕ್ಸಿನ್ ಪೂರೈಕೆ ಮಾಡದಂತೆ ಸರ್ಕಾರ ತಾಕೀತು ಮಾಡಿತ್ತು. ಪೀಣ್ಯ ಕೈಗಾರಿಕಾ ಕ್ಷೇತ್ರದಲ್ಲಿನ 2000ಕ್ಕೂ ಅಧಿಕ ಕೈಗಾರಿಕೆಗಳು ಆಕ್ಸಿಜನ್ ಇಲ್ಲದೆ ಕಾರ್ಯ ನಿರ್ವಹಿಸುವುದಿಲ್ಲ. ಸದ್ಯ ಆಸ್ಪತ್ರೆಗಳಿಗೆ ಸಾಕಾಗುವಷ್ಟು ಆಮ್ಲಜನಕ ಪೂರೈಕೆಯಾಗುತ್ತಿದ್ದು ಕೈಗಾರಿಕೆಗಳಿಗೆ ಆಕ್ಸಿಜನ್ ನೀಡಿ ಎಂದು ಪ್ರಕಾಶ್ ಮನವಿ ಮಾಡಿಕೊಂಡಿದ್ದಾರೆ.

ಕೈಗಾರಿಕೆಗಳು ರಾಜ್ಯದ ಆರ್ಥಿಕ ಪರಿಸ್ಥಿತಿಯನ್ನು ಸುಧಾರಿಸಬಲ್ಲದು. ಆದರೆ ಇದೀಗ ಒಂದು ವೇಳೆ ಲಾಕ್ಡೌನ್ ತೆರವುಗೊಂಡರು ಸಹ ಆಕ್ಸಿಜನ್ ಇಲ್ಲದೆ ಕೈಗಾರಿಕೆಗಳು ಕೆಲಸ ನಿರ್ವಹಿಸಲು ಸಾಧ್ಯವಿಲ್ಲದಂತಾಗಿದೆ ಎಂದು ಈ ಬಗ್ಗೆ ಟಿವಿ9 ಗೆ ಸಿ.ಪ್ರಕಾಶ್ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ಕೊರೊನಾ ಲಸಿಕೆ ಪಡೆಯಲು ಹೋದಾಗ ಸೂಜಿಗೆ ಹೆದರಿ ನೆಲಕ್ಕುರುಳಿದ ವ್ಯಕ್ತಿ: ವಿಡಿಯೋ ವೈರಲ್

ಬೇರೆ ಘಟನೆ ಉಲ್ಲೇಖಿಸಿ ಸಿಎಂ ಹೊಣೆಗಾರಿಕೆ ತಪ್ಪಿಸಿಕೊಳ್ಳುತ್ತಿದ್ದಾರೆ: ರವಿ
ಬೇರೆ ಘಟನೆ ಉಲ್ಲೇಖಿಸಿ ಸಿಎಂ ಹೊಣೆಗಾರಿಕೆ ತಪ್ಪಿಸಿಕೊಳ್ಳುತ್ತಿದ್ದಾರೆ: ರವಿ
ಪೊಲೀಸ್ ಅಧಿಕಾರಿಗಳು ಕಾರ್ಯಕ್ರಮ ಬೇಡವೆಂದರೂ ಸಿಎಂ ಒತ್ತಾಯಿಸಿದರು: ಅಶೋಕ
ಪೊಲೀಸ್ ಅಧಿಕಾರಿಗಳು ಕಾರ್ಯಕ್ರಮ ಬೇಡವೆಂದರೂ ಸಿಎಂ ಒತ್ತಾಯಿಸಿದರು: ಅಶೋಕ
ನಿನ್ನೆ ಗುಡ್ಡ ಕುಸಿದರೂ ಸ್ವಲ್ಪದರಲ್ಲೇ ಅಪಾಯದಿಂದ ಪಾರಾದ ಜನ
ನಿನ್ನೆ ಗುಡ್ಡ ಕುಸಿದರೂ ಸ್ವಲ್ಪದರಲ್ಲೇ ಅಪಾಯದಿಂದ ಪಾರಾದ ಜನ
ಅಪ್ಪನಿಗೇ ಆವಾಜ್ ಹಾಕಿದ ನಯನತಾರಾ ಮಗ; ಇಲ್ಲಿದೆ ಫನ್ನಿ ವಿಡಿಯೋ
ಅಪ್ಪನಿಗೇ ಆವಾಜ್ ಹಾಕಿದ ನಯನತಾರಾ ಮಗ; ಇಲ್ಲಿದೆ ಫನ್ನಿ ವಿಡಿಯೋ
ಮಾಧ್ಯಮಗಳ ಜೊತೆ ಮಾತಾಡುವ ಮೊದಲು ಸೈಕ್ಲಿಂಗ್ ಮಾಡಿದ ಶಿವಕುಮಾರ್
ಮಾಧ್ಯಮಗಳ ಜೊತೆ ಮಾತಾಡುವ ಮೊದಲು ಸೈಕ್ಲಿಂಗ್ ಮಾಡಿದ ಶಿವಕುಮಾರ್
VIDEO: ಎರಡಂಕಿ ಸ್ಕೋರ್​ಗೆ ಆಲೌಟ್: RCB ದಾಖಲೆ ಸೇಫ್..!
VIDEO: ಎರಡಂಕಿ ಸ್ಕೋರ್​ಗೆ ಆಲೌಟ್: RCB ದಾಖಲೆ ಸೇಫ್..!
ಭೂಕುಸಿತದಿಂದ ಕುಸಿದಿರುವ ಮನೆ, ಅದೃಷ್ಟವಶಾತ್ ಪ್ರಾಣಹಾನಿ ಇಲ್ಲ
ಭೂಕುಸಿತದಿಂದ ಕುಸಿದಿರುವ ಮನೆ, ಅದೃಷ್ಟವಶಾತ್ ಪ್ರಾಣಹಾನಿ ಇಲ್ಲ
ಕರ್ನಾಟಕದವರೊಬ್ಬರ ಪರ್ಸ್​ ಕದ್ದು ಕೋತಿ ಮಾಡಿದ್ದೇನು ನೋಡಿ
ಕರ್ನಾಟಕದವರೊಬ್ಬರ ಪರ್ಸ್​ ಕದ್ದು ಕೋತಿ ಮಾಡಿದ್ದೇನು ನೋಡಿ
ನಿರೂಪಕಿ ಸುದ್ದಿ ಓದುತ್ತಿರುವಾಗಲೇ ಕಚೇರಿ ಮೇಲೆ ಇಸ್ರೇಲ್ ವೈಮಾನಿಕ ದಾಳಿ
ನಿರೂಪಕಿ ಸುದ್ದಿ ಓದುತ್ತಿರುವಾಗಲೇ ಕಚೇರಿ ಮೇಲೆ ಇಸ್ರೇಲ್ ವೈಮಾನಿಕ ದಾಳಿ
ಸೈಪ್ರಸ್ ಭೇಟಿ ಮುಗಿಸಿ ಜಿ7 ಶೃಂಗಸಭೆಗಾಗಿ ಕೆನಡಾಗೆ ಬಂದಿಳಿದ ಪ್ರಧಾನಿ ಮೋದಿ
ಸೈಪ್ರಸ್ ಭೇಟಿ ಮುಗಿಸಿ ಜಿ7 ಶೃಂಗಸಭೆಗಾಗಿ ಕೆನಡಾಗೆ ಬಂದಿಳಿದ ಪ್ರಧಾನಿ ಮೋದಿ