Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಮ ಜನ್ಮಭೂಮಿ ಟ್ರಸ್ಟ್ ಬೇನಾಮಿ ಸಂಸ್ಥೆ ಅಲ್ಲ; ವಿಹೆಚ್​ಪಿ ಪುಂಡುಪೋಕರಿಗಳ ಸಂಸ್ಥೆಯಲ್ಲ: ಪೇಜಾವರ ಶ್ರೀ

ದೇಣಿಗೆ ಸಂಗ್ರಹ ವಿಚಾರದಲ್ಲಿ ಖಂಡಿತವಾಗಿಯೂ ಪಾರದರ್ಶಕತೆ ಬೇಕು. ಆದರೆ, ಲೆಕ್ಕ ಪರಿಶೋಧನೆ ಬಳಿಕ ಪುರಾವೆ ಕೊಡಲು ಸಾಧ್ಯವಿದೆ ಎಂದು ಪೇಜಾವರಶ್ರೀಗಳು ಹೇಳಿದ್ದಾರೆ.

ರಾಮ ಜನ್ಮಭೂಮಿ ಟ್ರಸ್ಟ್ ಬೇನಾಮಿ ಸಂಸ್ಥೆ ಅಲ್ಲ; ವಿಹೆಚ್​ಪಿ ಪುಂಡುಪೋಕರಿಗಳ ಸಂಸ್ಥೆಯಲ್ಲ: ಪೇಜಾವರ ಶ್ರೀ
ಪೇಜಾವರ ಮಠಾಧೀಶ ವಿಶ್ವಪ್ರಸನ್ನತೀರ್ಥ ಶ್ರೀ
Follow us
TV9 Web
| Updated By: ganapathi bhat

Updated on:Apr 06, 2022 | 8:04 PM

ಉಡುಪಿ: ರಾಮ ಜನ್ಮಭೂಮಿ ಟ್ರಸ್ಟ್ ಬೇನಾಮಿ ಸಂಸ್ಥೆ ಅಲ್ಲ. ಅದೊಂದು ನೋಂದಣಿಯಾಗಿರುವ ಸಂಸ್ಥೆ ಎಂದು ಪೇಜಾವರ ಮಠದ ವಿಶ್ವಪ್ರಸನ್ನಶ್ರೀಗಳು ತಿಳಿಸಿದ್ದಾರೆ. ನೋಂದಣಿಗೆ ಅದರದ್ದೇ ಆದ ನೀತಿ ನಿಯಮಾವಳಿಗಳು ಇದೆ. ದೇಣಿಗೆ ಸಂಗ್ರಹ ಮಾಡಲು ಅದರದ್ದೇ ಆದ ಕಾನೂನು ಇದೆ. ನಮಗೆ ಸಂವಿಧಾನವೇ ಅಧಿಕಾರ ಕೊಟ್ಟಿದೆ. ಸಂಶಯಗಳನ್ನು ಮುಂದೆ ಇಟ್ಟರೆ ಸೂಕ್ತ ಪರಿಹಾರ ಕಂಡುಕೊಳ್ಳಬಹುದು. ಇಲ್ಲಿ ಮುಚ್ಚು ಮರೆಯ ಯಾವುದೇ ವಿಷಯಗಳು ನಡೆಯುದಿಲ್ಲ ಎಂದು ಶ್ರೀಗಳು ಮಾಹಿತಿ ನೀಡಿದ್ದಾರೆ.

ದೇಣಿಗೆ ಸಂಗ್ರಹ ವಿಚಾರದಲ್ಲಿ ಖಂಡಿತವಾಗಿಯೂ ಪಾರದರ್ಶಕತೆ ಬೇಕು. ಆದರೆ, ಲೆಕ್ಕ ಪರಿಶೋಧನೆ ಬಳಿಕ ಪುರಾವೆ ಕೊಡಲು ಸಾಧ್ಯವಿದೆ. ಈಗ ವಿಹೆಚ್​ಪಿ​ ಕಾರ್ಯಕರ್ತರು ದೇಣಿಗೆ ಸಂಗ್ರಹ ಮಾಡುತ್ತಿದ್ದಾರೆ. ವಿಶ್ವ ಹಿಂದೂ ಪರಿಷತ್​ನ ಕಾರ್ಯರ್ತರಿಗೆ ದೇಣಿಗೆ ಸಂಗ್ರಹ ದ ಜವಾಬ್ದಾರಿ ನೀಡಲಾಗಿದೆ. ಹಿರಿಯ, ಮುಂದಾಳುಗಳ ನೇತೃತ್ವದಲ್ಲಿ ನಿಧಿ ಸಂಗ್ರಹಿಸುತ್ತಾರೆ ಎಂದು ಶ್ರೀಗಳು ತಿಳಿಸಿದ್ದಾರೆ.

ಸಂಶಯವಿದೆ ಎಂದು ಪ್ರಶ್ನೆ ಮಾಡಿದರೆ ಉತ್ತರ ಸಿಗುತ್ತದೆ. ಹಾಗಾಗಿ ಯಾವುದೆ ಸಂಶಯಗಳನ್ನು ಇಟ್ಟು ಆರೋಪ ಮಾಡುವುದು ಸೂಕ್ತವಲ್ಲ ಎಂದು ಉಡುಪಿಯಲ್ಲಿ ಪೇಜಾವರ ಮಠದ ವಿಶ್ವಪ್ರಸನ್ನಶ್ರೀ ಪ್ರತಿಕ್ರಿಯೆ ನೀಡಿದ್ದಾರೆ.

ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಿಸಲು ದೇಣಿಗೆ ಸಂಗ್ರಹಿಸಲಾಗಿದ್ದು, ದೇಣಿಗೆ ನೀಡದವರನ್ನು ಆರ್​ಎಸ್​ಎಸ್​ ಪ್ರತ್ಯೇಕವಾಗಿ ಗುರುತಿಸುತ್ತಿದೆ (Marking). ದೇಣಿಗೆ ನೀಡದವರ ಮನೆಗೆ ಪ್ರತ್ಯೇಕವಾಗಿ ಗುರುತು ಹಾಕುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್​.ಡಿ.ಕುಮಾರಸ್ವಾಮಿ ಟ್ವೀಟ್ ಮಾಡಿ ಕಿಡಿಕಾರಿದ್ದರು.

ಜರ್ಮನಿಯಲ್ಲಿ ನಾಜಿಗಳು ಅನುಸರಿಸಿದ ನಡೆಯನ್ನೇ ಆರ್​ಎಸ್​ಎಸ್​ ಅನುಸರಿಸುತ್ತಿದೆ.  ಅಯೋಧ್ಯೆಯಲ್ಲಿ ನಿರ್ಮಾಣವಾಗಲಿರುವ ರಾಮ ಮಂದಿರಕ್ಕೆ ದೇಣಿಗೆ ನೀಡಿದ ಮತ್ತು ನೀಡದವರ ಮನೆಗಳನ್ನು ಪ್ರತ್ಯೇಕವಾಗಿ ಗುರುತು ಹಾಕುತ್ತಿದೆ ಎಂದು ಆರೋಪಿಸಿದ್ದರು. ರಾಮಮಂದಿರ ನಿಧಿ ಸಮರ್ಪಣಾ ಅಭಿಯಾನಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಬೇಜವಾಬ್ದಾರಿ ಟ್ವೀಟ್ ಮಾಡಿದ್ದಾರೆ ಎಂದು ವಿಶ್ವ ಹಿಂದೂ ಪರಿಷತ್​ನ (VHP) ಸಂಘಟನಾ ಕಾರ್ಯದರ್ಶಿ ಬಸವರಾಜ್ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದರು.

ಇದನ್ನೂ ಓದಿ: ರಾಮಮಂದಿರ ನಿಧಿ ಸಂಗ್ರಹ ಅಭಿಯಾನಕ್ಕೆ ಟೀಕೆ: ಎಚ್​.ಡಿ.ಕುಮಾರಸ್ವಾಮಿ ಟ್ವೀಟ್​ಗೆ ವಿಎಚ್​ಪಿ ಖಂಡನೆ

Published On - 5:42 pm, Wed, 17 February 21

ಹಿಂದಿ ಬದಲು ಇಂಗ್ಲಿಷ್​​ನಲ್ಲೇ ಭಯೋತ್ಪಾದನೆ ವಿರುದ್ಧ ಮೋದಿ ಸಂದೇಶ ರವಾನೆ
ಹಿಂದಿ ಬದಲು ಇಂಗ್ಲಿಷ್​​ನಲ್ಲೇ ಭಯೋತ್ಪಾದನೆ ವಿರುದ್ಧ ಮೋದಿ ಸಂದೇಶ ರವಾನೆ
ಅಪ್ಪನ ಮುಖ ದಿಟ್ಟಿಸುತ್ತಿದ್ದ ಅಭಿಜಯನಲ್ಲಿನ ತಾಕಲಾಟಗಳು ಒಂದೆರಡಲ್ಲ
ಅಪ್ಪನ ಮುಖ ದಿಟ್ಟಿಸುತ್ತಿದ್ದ ಅಭಿಜಯನಲ್ಲಿನ ತಾಕಲಾಟಗಳು ಒಂದೆರಡಲ್ಲ
ಅಂತಿಮ ಸಂಸ್ಕಾರದಲ್ಲಿ ಭಾಗಿಯಾಗಲಿದ್ದಾರೆ ಉಸ್ತುವಾರಿ ಸಚಿವ ಮಧು ಬಂಗಾರಪ್ಪ
ಅಂತಿಮ ಸಂಸ್ಕಾರದಲ್ಲಿ ಭಾಗಿಯಾಗಲಿದ್ದಾರೆ ಉಸ್ತುವಾರಿ ಸಚಿವ ಮಧು ಬಂಗಾರಪ್ಪ
ಕಂಡಕ್ಟರ್​ನಿಂದ ಯುವತಿಗೆ ಲೈಂಗಿಕ ಕಿರುಕುಳ: ವಿಡಿಯೋ ವೈರಲ್
ಕಂಡಕ್ಟರ್​ನಿಂದ ಯುವತಿಗೆ ಲೈಂಗಿಕ ಕಿರುಕುಳ: ವಿಡಿಯೋ ವೈರಲ್
IPL 2025: ನಂಬಿ ಕೆಟ್ಟ ಇಶಾನ್ ಕಿಶನ್: ಇಲ್ಲಿದೆ ಒರಿಜಿನಲ್ ವಿಡಿಯೋ
IPL 2025: ನಂಬಿ ಕೆಟ್ಟ ಇಶಾನ್ ಕಿಶನ್: ಇಲ್ಲಿದೆ ಒರಿಜಿನಲ್ ವಿಡಿಯೋ
‘ಅಪ್ಪನೇ ನನ್ನ ದೊಡ್ಡ ಪ್ರಪಂಚ’; ತಂದೆಯ ಕಾಲಿಗೆ ಬಿದ್ದು ಹೇಳಿದ ಪ್ರತಾಪ್
‘ಅಪ್ಪನೇ ನನ್ನ ದೊಡ್ಡ ಪ್ರಪಂಚ’; ತಂದೆಯ ಕಾಲಿಗೆ ಬಿದ್ದು ಹೇಳಿದ ಪ್ರತಾಪ್
ಬೆಳಗ್ಗೆ 6 ಗಂಟೆಗೆ ದೆಹಲಿಯಿಂದ ಬೆಂಗಳೂರು ಆಗಮಿಸಿದ ಮಂಜುನಾಥ್ ದೇಹ
ಬೆಳಗ್ಗೆ 6 ಗಂಟೆಗೆ ದೆಹಲಿಯಿಂದ ಬೆಂಗಳೂರು ಆಗಮಿಸಿದ ಮಂಜುನಾಥ್ ದೇಹ
PSL 2025: ಬೌಲಿಂಗ್ ವೇಳೆ ಕಳ್ಳಾಟ: ಆಟಗಾರರ ನಡುವೆ ವಾಕ್ಕಲಹ
PSL 2025: ಬೌಲಿಂಗ್ ವೇಳೆ ಕಳ್ಳಾಟ: ಆಟಗಾರರ ನಡುವೆ ವಾಕ್ಕಲಹ
ಭರತ್ ಭೂಷಣ್ ಪತ್ನಿ ಮತ್ತು ಕುಟುಂಬಸ್ಥರಿಗೆ ಮುಖ್ಯಮಂತ್ರಿಯಿಂದ ಸಾಂತ್ವನ
ಭರತ್ ಭೂಷಣ್ ಪತ್ನಿ ಮತ್ತು ಕುಟುಂಬಸ್ಥರಿಗೆ ಮುಖ್ಯಮಂತ್ರಿಯಿಂದ ಸಾಂತ್ವನ
ಬ್ಯಾಟರ್ ಬಿದ್ದು ಒದ್ದಾಡಿದರೂ ತಿರುಗಿ ಕೂಡ ನೋಡದ ಜಸ್​ಪ್ರೀತ್ ಬುಮ್ರಾ
ಬ್ಯಾಟರ್ ಬಿದ್ದು ಒದ್ದಾಡಿದರೂ ತಿರುಗಿ ಕೂಡ ನೋಡದ ಜಸ್​ಪ್ರೀತ್ ಬುಮ್ರಾ