AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಮ ಜನ್ಮಭೂಮಿ ಟ್ರಸ್ಟ್ ಬೇನಾಮಿ ಸಂಸ್ಥೆ ಅಲ್ಲ; ವಿಹೆಚ್​ಪಿ ಪುಂಡುಪೋಕರಿಗಳ ಸಂಸ್ಥೆಯಲ್ಲ: ಪೇಜಾವರ ಶ್ರೀ

ದೇಣಿಗೆ ಸಂಗ್ರಹ ವಿಚಾರದಲ್ಲಿ ಖಂಡಿತವಾಗಿಯೂ ಪಾರದರ್ಶಕತೆ ಬೇಕು. ಆದರೆ, ಲೆಕ್ಕ ಪರಿಶೋಧನೆ ಬಳಿಕ ಪುರಾವೆ ಕೊಡಲು ಸಾಧ್ಯವಿದೆ ಎಂದು ಪೇಜಾವರಶ್ರೀಗಳು ಹೇಳಿದ್ದಾರೆ.

ರಾಮ ಜನ್ಮಭೂಮಿ ಟ್ರಸ್ಟ್ ಬೇನಾಮಿ ಸಂಸ್ಥೆ ಅಲ್ಲ; ವಿಹೆಚ್​ಪಿ ಪುಂಡುಪೋಕರಿಗಳ ಸಂಸ್ಥೆಯಲ್ಲ: ಪೇಜಾವರ ಶ್ರೀ
ಪೇಜಾವರ ಮಠಾಧೀಶ ವಿಶ್ವಪ್ರಸನ್ನತೀರ್ಥ ಶ್ರೀ
TV9 Web
| Edited By: |

Updated on:Apr 06, 2022 | 8:04 PM

Share

ಉಡುಪಿ: ರಾಮ ಜನ್ಮಭೂಮಿ ಟ್ರಸ್ಟ್ ಬೇನಾಮಿ ಸಂಸ್ಥೆ ಅಲ್ಲ. ಅದೊಂದು ನೋಂದಣಿಯಾಗಿರುವ ಸಂಸ್ಥೆ ಎಂದು ಪೇಜಾವರ ಮಠದ ವಿಶ್ವಪ್ರಸನ್ನಶ್ರೀಗಳು ತಿಳಿಸಿದ್ದಾರೆ. ನೋಂದಣಿಗೆ ಅದರದ್ದೇ ಆದ ನೀತಿ ನಿಯಮಾವಳಿಗಳು ಇದೆ. ದೇಣಿಗೆ ಸಂಗ್ರಹ ಮಾಡಲು ಅದರದ್ದೇ ಆದ ಕಾನೂನು ಇದೆ. ನಮಗೆ ಸಂವಿಧಾನವೇ ಅಧಿಕಾರ ಕೊಟ್ಟಿದೆ. ಸಂಶಯಗಳನ್ನು ಮುಂದೆ ಇಟ್ಟರೆ ಸೂಕ್ತ ಪರಿಹಾರ ಕಂಡುಕೊಳ್ಳಬಹುದು. ಇಲ್ಲಿ ಮುಚ್ಚು ಮರೆಯ ಯಾವುದೇ ವಿಷಯಗಳು ನಡೆಯುದಿಲ್ಲ ಎಂದು ಶ್ರೀಗಳು ಮಾಹಿತಿ ನೀಡಿದ್ದಾರೆ.

ದೇಣಿಗೆ ಸಂಗ್ರಹ ವಿಚಾರದಲ್ಲಿ ಖಂಡಿತವಾಗಿಯೂ ಪಾರದರ್ಶಕತೆ ಬೇಕು. ಆದರೆ, ಲೆಕ್ಕ ಪರಿಶೋಧನೆ ಬಳಿಕ ಪುರಾವೆ ಕೊಡಲು ಸಾಧ್ಯವಿದೆ. ಈಗ ವಿಹೆಚ್​ಪಿ​ ಕಾರ್ಯಕರ್ತರು ದೇಣಿಗೆ ಸಂಗ್ರಹ ಮಾಡುತ್ತಿದ್ದಾರೆ. ವಿಶ್ವ ಹಿಂದೂ ಪರಿಷತ್​ನ ಕಾರ್ಯರ್ತರಿಗೆ ದೇಣಿಗೆ ಸಂಗ್ರಹ ದ ಜವಾಬ್ದಾರಿ ನೀಡಲಾಗಿದೆ. ಹಿರಿಯ, ಮುಂದಾಳುಗಳ ನೇತೃತ್ವದಲ್ಲಿ ನಿಧಿ ಸಂಗ್ರಹಿಸುತ್ತಾರೆ ಎಂದು ಶ್ರೀಗಳು ತಿಳಿಸಿದ್ದಾರೆ.

ಸಂಶಯವಿದೆ ಎಂದು ಪ್ರಶ್ನೆ ಮಾಡಿದರೆ ಉತ್ತರ ಸಿಗುತ್ತದೆ. ಹಾಗಾಗಿ ಯಾವುದೆ ಸಂಶಯಗಳನ್ನು ಇಟ್ಟು ಆರೋಪ ಮಾಡುವುದು ಸೂಕ್ತವಲ್ಲ ಎಂದು ಉಡುಪಿಯಲ್ಲಿ ಪೇಜಾವರ ಮಠದ ವಿಶ್ವಪ್ರಸನ್ನಶ್ರೀ ಪ್ರತಿಕ್ರಿಯೆ ನೀಡಿದ್ದಾರೆ.

ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಿಸಲು ದೇಣಿಗೆ ಸಂಗ್ರಹಿಸಲಾಗಿದ್ದು, ದೇಣಿಗೆ ನೀಡದವರನ್ನು ಆರ್​ಎಸ್​ಎಸ್​ ಪ್ರತ್ಯೇಕವಾಗಿ ಗುರುತಿಸುತ್ತಿದೆ (Marking). ದೇಣಿಗೆ ನೀಡದವರ ಮನೆಗೆ ಪ್ರತ್ಯೇಕವಾಗಿ ಗುರುತು ಹಾಕುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್​.ಡಿ.ಕುಮಾರಸ್ವಾಮಿ ಟ್ವೀಟ್ ಮಾಡಿ ಕಿಡಿಕಾರಿದ್ದರು.

ಜರ್ಮನಿಯಲ್ಲಿ ನಾಜಿಗಳು ಅನುಸರಿಸಿದ ನಡೆಯನ್ನೇ ಆರ್​ಎಸ್​ಎಸ್​ ಅನುಸರಿಸುತ್ತಿದೆ.  ಅಯೋಧ್ಯೆಯಲ್ಲಿ ನಿರ್ಮಾಣವಾಗಲಿರುವ ರಾಮ ಮಂದಿರಕ್ಕೆ ದೇಣಿಗೆ ನೀಡಿದ ಮತ್ತು ನೀಡದವರ ಮನೆಗಳನ್ನು ಪ್ರತ್ಯೇಕವಾಗಿ ಗುರುತು ಹಾಕುತ್ತಿದೆ ಎಂದು ಆರೋಪಿಸಿದ್ದರು. ರಾಮಮಂದಿರ ನಿಧಿ ಸಮರ್ಪಣಾ ಅಭಿಯಾನಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಬೇಜವಾಬ್ದಾರಿ ಟ್ವೀಟ್ ಮಾಡಿದ್ದಾರೆ ಎಂದು ವಿಶ್ವ ಹಿಂದೂ ಪರಿಷತ್​ನ (VHP) ಸಂಘಟನಾ ಕಾರ್ಯದರ್ಶಿ ಬಸವರಾಜ್ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದರು.

ಇದನ್ನೂ ಓದಿ: ರಾಮಮಂದಿರ ನಿಧಿ ಸಂಗ್ರಹ ಅಭಿಯಾನಕ್ಕೆ ಟೀಕೆ: ಎಚ್​.ಡಿ.ಕುಮಾರಸ್ವಾಮಿ ಟ್ವೀಟ್​ಗೆ ವಿಎಚ್​ಪಿ ಖಂಡನೆ

Published On - 5:42 pm, Wed, 17 February 21

ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್