AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂದಿರ ನಿರ್ಮಾಣವರೆಗೂ ಪೇಜಾವರ ಶ್ರೀಗಳು ಬದುಕಿರಬೇಕು: ಯಡಿಯೂರಪ್ಪ

ಉಡುಪಿ: ಪೇಜಾವರ ವಿಶ್ವೇಶತೀರ್ಥ ಶ್ರೀಗಳಿಗೆ ಅನಾರೋಗ್ಯ ಹಿನ್ನೆಲೆ ಮಣಿಪಾಲದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿದಿದೆ. ಇಂದು ಸಿಎಂ ಬಿ.ಎಸ್. ಯಡಿಯೂರಪ್ಪ ಶ್ರೀಗಳ ಆರೋಗ್ಯ ವಿಚಾರಿಸಿದರು. ಬಳಿಕ ಮಾತನಾಡಿದ ಸಿಎಂ BSY ಪೇಜಾವರಶ್ರೀ ಗುಣಮುಖರಾಗಲು ಪ್ರಾರ್ಥಿಸಬೇಕು. ನೆನ್ನೆ-ಇಂದು ಶ್ರೀಗಳ ಸುಧಾರಣೆ ಆಗಿದೆ. ಗುಣಮುಖರಾಗಿ ಬಂದು ಎಂದಿನಂತೆ ಪೂಜೆ ಮಾಡಲಿ. ತಜ್ಞ ವೈದ್ಯರು ಪ್ರಯತ್ನ ಮಾಡಿದ್ದಾರೆ. ಶ್ರೀಗಳು ಕಣ್ಣು ಬಿಡುತ್ತಿದ್ದಾರೆ. ಸೋಂಕು ಆಗಬಾರದೆಂದು ಕಟ್ಟೆಚ್ಚರ ವಹಿಸಲಾಗಿದೆ ಎಂದು ತಿಳಿಸಿದರು. ಇದೇ ವೇಳೆ ಸಿಎಂ ಯಡಿಯೂರಪ್ಪ, ರಾಮ ಮಂದಿರ ಹೋರಾಟ ನೆನಪಿಸಿಕೊಂಡರು. […]

ಮಂದಿರ ನಿರ್ಮಾಣವರೆಗೂ ಪೇಜಾವರ ಶ್ರೀಗಳು ಬದುಕಿರಬೇಕು: ಯಡಿಯೂರಪ್ಪ
Follow us
ಸಾಧು ಶ್ರೀನಾಥ್​
|

Updated on:Dec 23, 2019 | 10:35 AM

ಉಡುಪಿ: ಪೇಜಾವರ ವಿಶ್ವೇಶತೀರ್ಥ ಶ್ರೀಗಳಿಗೆ ಅನಾರೋಗ್ಯ ಹಿನ್ನೆಲೆ ಮಣಿಪಾಲದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿದಿದೆ. ಇಂದು ಸಿಎಂ ಬಿ.ಎಸ್. ಯಡಿಯೂರಪ್ಪ ಶ್ರೀಗಳ ಆರೋಗ್ಯ ವಿಚಾರಿಸಿದರು. ಬಳಿಕ ಮಾತನಾಡಿದ ಸಿಎಂ BSY ಪೇಜಾವರಶ್ರೀ ಗುಣಮುಖರಾಗಲು ಪ್ರಾರ್ಥಿಸಬೇಕು. ನೆನ್ನೆ-ಇಂದು ಶ್ರೀಗಳ ಸುಧಾರಣೆ ಆಗಿದೆ. ಗುಣಮುಖರಾಗಿ ಬಂದು ಎಂದಿನಂತೆ ಪೂಜೆ ಮಾಡಲಿ. ತಜ್ಞ ವೈದ್ಯರು ಪ್ರಯತ್ನ ಮಾಡಿದ್ದಾರೆ. ಶ್ರೀಗಳು ಕಣ್ಣು ಬಿಡುತ್ತಿದ್ದಾರೆ. ಸೋಂಕು ಆಗಬಾರದೆಂದು ಕಟ್ಟೆಚ್ಚರ ವಹಿಸಲಾಗಿದೆ ಎಂದು ತಿಳಿಸಿದರು.

ಇದೇ ವೇಳೆ ಸಿಎಂ ಯಡಿಯೂರಪ್ಪ, ರಾಮ ಮಂದಿರ ಹೋರಾಟ ನೆನಪಿಸಿಕೊಂಡರು. ಸ್ವಾಮೀಜಿ ಜೊತೆ ಅಂದು 16 ಜನ ಇದ್ದೆವು. 16 ಜನರ ಪೈಕಿ ನಾನು ಒಬ್ಬ. ಇದು ರಾಮಮಂದಿರ ಕಟ್ಟುವ ಸುಸಂದರ್ಭ. ಮಂದಿರ ನಿರ್ಮಾಣವಾಗುವವರೆಗೆ ಅವರು ಬದುಕಿರಬೇಕು. ಸ್ವತಂತ್ರ್ಯ ಭಾರತದಲ್ಲಿ ಬೇರೆ ಯಾರೂ ಇವರಷ್ಟು ಓಡಾಟ ಮಾಡುತ್ತಿಲ್ಲ. ಓಡಾಟ ಕಡಿಮೆ ಮಾಡಲು ನೂರಾರು ಬಾರಿ ಹೇಳಿದ್ದೆ. ವಯೋಸಹಜ ಸಮಸ್ಯೆ ಕಾಡುತ್ತಿದೆ ಎಂದು ಯಡಿಯೂರಪ್ಪ ವಿಷಾದದ ದಿನಯಲ್ಲಿ ಹೇಳಿದರು.

ಸ್ವಾಮೀಜಿ ಶಿಕ್ಷಣಕ್ಕೆ ಹೆಚ್ಚು ಒತ್ತು ಕೊಟ್ಟಿದ್ದರು. ಈಗಿರುವ ಆರೋಗ್ಯ ಸಮಸ್ಯೆಯನ್ನು ದಾಟಿ ಬರಲಿ. ಎರಡು ದಿನಗಳಲ್ಲಿ ಶ್ರೀಗಳ ಆರೋಗ್ಯ ಸುಧಾರಣೆ ಆಗಿದೆ ಎಂದು ವೈದ್ಯರು ಹೇಳಿದ್ದಾರೆ. ಪ್ರಧಾನಿ ಮೋದಿ ಮತ್ತು ಅಮಿತ್ ಶಾ ಶ್ರೀಗಳ ಆರೋಗ್ಯ ವಿಚಾರಿಸಿದ್ದಾರೆ ಎಂದು ಮಣಿಪಾಲದಲ್ಲಿ ಸಿಎಂ ಬಿಎಸ್ ಯಡಿಯೂರಪ್ಪ ಹೇಳಿದ್ದಾರೆ.

Published On - 4:18 pm, Sat, 21 December 19

Daily Devotional: ಕಾಲುಂಗುರ ಕಳೆದು ಹೋದರೆ ಅದರ ಮುನ್ಸೂಚನೆ ಏನು?
Daily Devotional: ಕಾಲುಂಗುರ ಕಳೆದು ಹೋದರೆ ಅದರ ಮುನ್ಸೂಚನೆ ಏನು?
ಈ ದಿನ ಜ್ಯೇಷ್ಠ ನಕ್ಷತ್ರ, ಸಿದ್ಧಯೋಗ: ಯಾವ ರಾಶಿಗಳಿಗೆ ಶುಭ ದಿನ ತಿಳಿಯಿರಿ
ಈ ದಿನ ಜ್ಯೇಷ್ಠ ನಕ್ಷತ್ರ, ಸಿದ್ಧಯೋಗ: ಯಾವ ರಾಶಿಗಳಿಗೆ ಶುಭ ದಿನ ತಿಳಿಯಿರಿ
ತುಂಬ ಆ್ಯಕ್ಟೀವ್ ಆಗಿದ್ದ ರಾಕೇಶ್​ಗೆ ಹೃದಯಾಘಾತ, ನಂಬೋಕೆ ಆಗಲಿಲ್ಲ: ರಘು
ತುಂಬ ಆ್ಯಕ್ಟೀವ್ ಆಗಿದ್ದ ರಾಕೇಶ್​ಗೆ ಹೃದಯಾಘಾತ, ನಂಬೋಕೆ ಆಗಲಿಲ್ಲ: ರಘು
ನೆಲಮಂಗಲದಲ್ಲಿ ಭಾರೀ ಮಳೆ: ರಾಷ್ಟ್ರೀಯ ಹೆದ್ದಾರಿ ಜಲಾವೃತ, ಟ್ರಾಫಿಕ್ ಜಾಮ್
ನೆಲಮಂಗಲದಲ್ಲಿ ಭಾರೀ ಮಳೆ: ರಾಷ್ಟ್ರೀಯ ಹೆದ್ದಾರಿ ಜಲಾವೃತ, ಟ್ರಾಫಿಕ್ ಜಾಮ್
ನಾಗೇಶ್ ಮೇಲೆ ಹಲ್ಲೆ ನಡೆಸಿ ಕೊಲೆ ಮಾಡಿದ ದೃಶ್ಯ ಸಿಸಿಟಿವಿಯಲ್ಲಿ ಸೆರೆ
ನಾಗೇಶ್ ಮೇಲೆ ಹಲ್ಲೆ ನಡೆಸಿ ಕೊಲೆ ಮಾಡಿದ ದೃಶ್ಯ ಸಿಸಿಟಿವಿಯಲ್ಲಿ ಸೆರೆ
ಸ್ನೇಹಿತರೊಂದಿಗೆ ಸೇರಿ ತಂದೆಯನ್ನೇ ಕೊಂದ ಮಗ: ಪ್ರಕರಣದ ಅಸಲಿಯತ್ತು ಇಲ್ಲಿದೆ
ಸ್ನೇಹಿತರೊಂದಿಗೆ ಸೇರಿ ತಂದೆಯನ್ನೇ ಕೊಂದ ಮಗ: ಪ್ರಕರಣದ ಅಸಲಿಯತ್ತು ಇಲ್ಲಿದೆ
ಹಿಂದೊಮ್ಮೆ ಪಾಕಿಸ್ತಾನ ಫೈರ್ ಮಾಡಿದ ಮಿಸೈಲ್ 5 ವರ್ಷದ ನಂತರ ಸಿಡಿದಿತ್ತು!
ಹಿಂದೊಮ್ಮೆ ಪಾಕಿಸ್ತಾನ ಫೈರ್ ಮಾಡಿದ ಮಿಸೈಲ್ 5 ವರ್ಷದ ನಂತರ ಸಿಡಿದಿತ್ತು!
ಆಡಿದ ಮಾತಿಗೆ ಕ್ಷಮೆ ಯಾಚಿಸಿದ ಮಧ್ಯಪ್ರದೇಶದ ಮಂತ್ರಿ ವಿಜಯ್ ಶಾ
ಆಡಿದ ಮಾತಿಗೆ ಕ್ಷಮೆ ಯಾಚಿಸಿದ ಮಧ್ಯಪ್ರದೇಶದ ಮಂತ್ರಿ ವಿಜಯ್ ಶಾ
ಒಪ್ಪಿಕೊಂಡಷ್ಟು ಅನುದಾನವನ್ನು ಕೇಂದ್ರ ಬಿಡುಗಡೆ ಮಾಡಬೇಕು: ಸಿದ್ದರಾಮಯ್ಯ
ಒಪ್ಪಿಕೊಂಡಷ್ಟು ಅನುದಾನವನ್ನು ಕೇಂದ್ರ ಬಿಡುಗಡೆ ಮಾಡಬೇಕು: ಸಿದ್ದರಾಮಯ್ಯ
ರಾಮನ ಹಾಡು ಹಾಡಿ ಮಗುವ ಮಲಗಿಸಿದ ನಟಿ ಹರಿಪ್ರಿಯಾ, ವಿಡಿಯೋ ನೋಡಿ
ರಾಮನ ಹಾಡು ಹಾಡಿ ಮಗುವ ಮಲಗಿಸಿದ ನಟಿ ಹರಿಪ್ರಿಯಾ, ವಿಡಿಯೋ ನೋಡಿ