ಮಂದಿರ ನಿರ್ಮಾಣವರೆಗೂ ಪೇಜಾವರ ಶ್ರೀಗಳು ಬದುಕಿರಬೇಕು: ಯಡಿಯೂರಪ್ಪ

ಉಡುಪಿ: ಪೇಜಾವರ ವಿಶ್ವೇಶತೀರ್ಥ ಶ್ರೀಗಳಿಗೆ ಅನಾರೋಗ್ಯ ಹಿನ್ನೆಲೆ ಮಣಿಪಾಲದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿದಿದೆ. ಇಂದು ಸಿಎಂ ಬಿ.ಎಸ್. ಯಡಿಯೂರಪ್ಪ ಶ್ರೀಗಳ ಆರೋಗ್ಯ ವಿಚಾರಿಸಿದರು. ಬಳಿಕ ಮಾತನಾಡಿದ ಸಿಎಂ BSY ಪೇಜಾವರಶ್ರೀ ಗುಣಮುಖರಾಗಲು ಪ್ರಾರ್ಥಿಸಬೇಕು. ನೆನ್ನೆ-ಇಂದು ಶ್ರೀಗಳ ಸುಧಾರಣೆ ಆಗಿದೆ. ಗುಣಮುಖರಾಗಿ ಬಂದು ಎಂದಿನಂತೆ ಪೂಜೆ ಮಾಡಲಿ. ತಜ್ಞ ವೈದ್ಯರು ಪ್ರಯತ್ನ ಮಾಡಿದ್ದಾರೆ. ಶ್ರೀಗಳು ಕಣ್ಣು ಬಿಡುತ್ತಿದ್ದಾರೆ. ಸೋಂಕು ಆಗಬಾರದೆಂದು ಕಟ್ಟೆಚ್ಚರ ವಹಿಸಲಾಗಿದೆ ಎಂದು ತಿಳಿಸಿದರು. ಇದೇ ವೇಳೆ ಸಿಎಂ ಯಡಿಯೂರಪ್ಪ, ರಾಮ ಮಂದಿರ ಹೋರಾಟ ನೆನಪಿಸಿಕೊಂಡರು. […]

ಮಂದಿರ ನಿರ್ಮಾಣವರೆಗೂ ಪೇಜಾವರ ಶ್ರೀಗಳು ಬದುಕಿರಬೇಕು: ಯಡಿಯೂರಪ್ಪ
ಸಾಧು ಶ್ರೀನಾಥ್​

Updated on: Dec 23, 2019 | 10:35 AM

ಉಡುಪಿ: ಪೇಜಾವರ ವಿಶ್ವೇಶತೀರ್ಥ ಶ್ರೀಗಳಿಗೆ ಅನಾರೋಗ್ಯ ಹಿನ್ನೆಲೆ ಮಣಿಪಾಲದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿದಿದೆ. ಇಂದು ಸಿಎಂ ಬಿ.ಎಸ್. ಯಡಿಯೂರಪ್ಪ ಶ್ರೀಗಳ ಆರೋಗ್ಯ ವಿಚಾರಿಸಿದರು. ಬಳಿಕ ಮಾತನಾಡಿದ ಸಿಎಂ BSY ಪೇಜಾವರಶ್ರೀ ಗುಣಮುಖರಾಗಲು ಪ್ರಾರ್ಥಿಸಬೇಕು. ನೆನ್ನೆ-ಇಂದು ಶ್ರೀಗಳ ಸುಧಾರಣೆ ಆಗಿದೆ. ಗುಣಮುಖರಾಗಿ ಬಂದು ಎಂದಿನಂತೆ ಪೂಜೆ ಮಾಡಲಿ. ತಜ್ಞ ವೈದ್ಯರು ಪ್ರಯತ್ನ ಮಾಡಿದ್ದಾರೆ. ಶ್ರೀಗಳು ಕಣ್ಣು ಬಿಡುತ್ತಿದ್ದಾರೆ. ಸೋಂಕು ಆಗಬಾರದೆಂದು ಕಟ್ಟೆಚ್ಚರ ವಹಿಸಲಾಗಿದೆ ಎಂದು ತಿಳಿಸಿದರು.

ಇದೇ ವೇಳೆ ಸಿಎಂ ಯಡಿಯೂರಪ್ಪ, ರಾಮ ಮಂದಿರ ಹೋರಾಟ ನೆನಪಿಸಿಕೊಂಡರು. ಸ್ವಾಮೀಜಿ ಜೊತೆ ಅಂದು 16 ಜನ ಇದ್ದೆವು. 16 ಜನರ ಪೈಕಿ ನಾನು ಒಬ್ಬ. ಇದು ರಾಮಮಂದಿರ ಕಟ್ಟುವ ಸುಸಂದರ್ಭ. ಮಂದಿರ ನಿರ್ಮಾಣವಾಗುವವರೆಗೆ ಅವರು ಬದುಕಿರಬೇಕು. ಸ್ವತಂತ್ರ್ಯ ಭಾರತದಲ್ಲಿ ಬೇರೆ ಯಾರೂ ಇವರಷ್ಟು ಓಡಾಟ ಮಾಡುತ್ತಿಲ್ಲ. ಓಡಾಟ ಕಡಿಮೆ ಮಾಡಲು ನೂರಾರು ಬಾರಿ ಹೇಳಿದ್ದೆ. ವಯೋಸಹಜ ಸಮಸ್ಯೆ ಕಾಡುತ್ತಿದೆ ಎಂದು ಯಡಿಯೂರಪ್ಪ ವಿಷಾದದ ದಿನಯಲ್ಲಿ ಹೇಳಿದರು.

ಸ್ವಾಮೀಜಿ ಶಿಕ್ಷಣಕ್ಕೆ ಹೆಚ್ಚು ಒತ್ತು ಕೊಟ್ಟಿದ್ದರು. ಈಗಿರುವ ಆರೋಗ್ಯ ಸಮಸ್ಯೆಯನ್ನು ದಾಟಿ ಬರಲಿ. ಎರಡು ದಿನಗಳಲ್ಲಿ ಶ್ರೀಗಳ ಆರೋಗ್ಯ ಸುಧಾರಣೆ ಆಗಿದೆ ಎಂದು ವೈದ್ಯರು ಹೇಳಿದ್ದಾರೆ. ಪ್ರಧಾನಿ ಮೋದಿ ಮತ್ತು ಅಮಿತ್ ಶಾ ಶ್ರೀಗಳ ಆರೋಗ್ಯ ವಿಚಾರಿಸಿದ್ದಾರೆ ಎಂದು ಮಣಿಪಾಲದಲ್ಲಿ ಸಿಎಂ ಬಿಎಸ್ ಯಡಿಯೂರಪ್ಪ ಹೇಳಿದ್ದಾರೆ.

Published On - 4:18 pm, Sat, 21 December 19

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us