AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಮಮಂದಿರ ನಿರ್ಮಾಣಕ್ಕೆ 2,100 ಕೋಟಿ ರೂ. ಸಂಗ್ರಹವಾಗಿದೆ -ವಿಶ್ವಪ್ರಸನ್ನತೀರ್ಥ ಸ್ವಾಮೀಜಿ

ಮಂದಿರ ನಿರ್ಮಾಣಕ್ಕೆ 2,100 ಕೋಟಿ ರೂ. ಸಂಗ್ರಹವಾಗಿದೆ. 1,500 ಕೋಟಿ ಹಣ ಸಂಗ್ರಹವಾಗುತ್ತೆಂದು ಅಂದುಕೊಂಡಿದ್ದೆವು. ರಾಮ ಭಕ್ತರು ನಾವು ಅಂದುಕೊಂಡಿದ್ದಕ್ಕಿಂತ ಹೆಚ್ಚು ಕೊಟ್ಟಿದ್ದಾರೆ ಎಂದು ಪೇಜಾವರ ಮಠದ ವಿಶ್ವಪ್ರಸನ್ನತೀರ್ಥಶ್ರೀ ಹೇಳಿದ್ದಾರೆ.

ರಾಮಮಂದಿರ ನಿರ್ಮಾಣಕ್ಕೆ 2,100 ಕೋಟಿ ರೂ. ಸಂಗ್ರಹವಾಗಿದೆ -ವಿಶ್ವಪ್ರಸನ್ನತೀರ್ಥ ಸ್ವಾಮೀಜಿ
ವಿಶ್ವಪ್ರಸನ್ನ ತೀರ್ಥಶ್ರೀ
KUSHAL V
|

Updated on: Feb 27, 2021 | 11:05 PM

Share

ಬೆಂಗಳೂರು: ರಾಮಮಂದಿರ ನಿರ್ಮಾಣಕ್ಕೆ ದೇಣಿಗೆ ಸಮರ್ಪಣಾ ಅಭಿಯಾನಕ್ಕೆ ಉಡುಪಿಯ ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥಶ್ರೀಗಳಿಂದ ತೆರೆ ಬಿದ್ದಿದೆ. ಮಂದಿರ ನಿರ್ಮಾಣಕ್ಕೆ 2,100 ಕೋಟಿ ರೂ. ಸಂಗ್ರಹವಾಗಿದೆ ಎಂದು ಕಾರ್ಯಕ್ರಮದ ಬಳಿಕ ವಿಶ್ವಪ್ರಸನ್ನತೀರ್ಥ ಸ್ವಾಮೀಜಿ ಹೇಳಿದ್ದಾರೆ. ರಾಷ್ಟ್ರಧರ್ಮ ಸಂಸ್ಥೆ ನಿಧಿ ಸಮರ್ಪಣಾ ಅಭಿಯಾನ ನಡೆಸಿತ್ತು.

ಮಂದಿರ ನಿರ್ಮಾಣಕ್ಕೆ 2,100 ಕೋಟಿ ರೂ. ಸಂಗ್ರಹವಾಗಿದೆ. 1,500 ಕೋಟಿ ಹಣ ಸಂಗ್ರಹವಾಗುತ್ತೆಂದು ಅಂದುಕೊಂಡಿದ್ದೆವು. ರಾಮ ಭಕ್ತರು ನಾವು ಅಂದುಕೊಂಡಿದ್ದಕ್ಕಿಂತ ಹೆಚ್ಚು ಕೊಟ್ಟಿದ್ದಾರೆ. ವಿವಾದಿತ ಭೂಮಿ ಅಲ್ಲವೆಂದು ನ್ಯಾಯಾಲಯ ತೀರ್ಪು ನೀಡಿದೆ. ಭವ್ಯ ರಾಮ ಮಂದಿರ ನಿರ್ಮಾಣಕ್ಕೆ ಕೋರ್ಟ್‌ ತೀರ್ಪು ನೀಡಿದೆ ಎಂದು ಪೇಜಾವರ ಮಠದ ವಿಶ್ವಪ್ರಸನ್ನತೀರ್ಥಶ್ರೀ ಹೇಳಿದ್ದಾರೆ. ಬೆಂಗಳೂರಿನ ಲಾಲ್​ಬಾಗ್​ ವೆಸ್ಟ್​ಗೇಟ್​ ಬಳಿಯ ಅನಂತವನದಲ್ಲಿ ನಡೆದ ಸಮಾರೋಪ ಸಮಾರಂಭದಲ್ಲಿ ಶ್ರೀಗಳು ಮಾತನಾಡಿದರು.

ಅನಂತ ವನದಲ್ಲಿ ನಡೆದ ಸಮಾರೋಪ ಸಮಾರಂಭದಲ್ಲಿ 60 ಸಾವಿರ ನಾಣ್ಯಗಳಿಂದ ಶ್ರೀರಾಮನ ಕಲಾಕೃತಿ ನಿರ್ಮಾಣವಾಯ್ತು. ರಾಮಮಂದಿರ ಹಾಗೂ ಶ್ರೀರಾಮನ ಕಲಾಕೃತಿ ನಿರ್ಮಾಣವಾಯ್ತು. ಜ.15ಕ್ಕೆ ಆರಂಭವಾಗಿದ್ದ ದೇಣಿಗೆ ಸಮರ್ಪಣಾ ಅಭಿಯಾನಕ್ಕೆ ಶ್ರೀಗಳಿಂದ ತೆರೆ ಬಿದ್ದಿದೆ.

‘ರಾಮನಿಗೆ ಸಿದ್ದರಾಮಯ್ಯ, ಹೆಚ್‌ಡಿಕೆ ಅಪಮಾನ ಮಾಡ್ತಿದ್ದಾರೆ’ ಬಿಜೆಪಿ, ಆರ್‌ಎಸ್‌ಎಸ್ ವಿರೋಧಿಸಲು ಹೋಗಿ ರಾಮನಿಗೆ ಸಿದ್ದರಾಮಯ್ಯ, ಹೆಚ್‌ಡಿಕೆ ಅಪಮಾನ ಮಾಡ್ತಿದ್ದಾರೆ ಎಂದು ವಿಜಯಪುರ ನಗರದಲ್ಲಿ ಪ್ರಮೋದ್ ಮುತಾಲಿಕ್ ಹೇಳಿದ್ದಾರೆ. ನಿಧಿ ಸಂಗ್ರಹ ಕುರಿತು ಆಕ್ಷೇಪಿಸಿದ್ದಕ್ಕೆ ಮುತಾಲಿಕ್ ವಾಗ್ದಾಳಿ ನಡೆಸಿದ್ದಾರೆ.

ಮಂದಿರ ನಿರ್ಮಾಣಕ್ಕೆ ನಿಧಿ ಸಂಗ್ರಹ ಕುರಿತು ಆಕ್ಷೇಪಿಸಿದ್ದರು. ಶ್ರೀರಾಮ ಹಾಗೂ ರಾಮ ಭಕ್ತರಿಗೆ ಅಪಮಾನ ಮಾಡುತ್ತಿದ್ದಾರೆ ಎಂದು ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್‌ ಮುತಾಲಿಕ್‌ ಹೇಳಿದ್ದಾರೆ.

ಇದನ್ನೂ ಓದಿ: ವಹ್ನಿಕುಲ ಕ್ಷತ್ರಿಯ ಕುಲದೇವತೆ ವಿರುದ್ಧ ಅವಹೇಳನಕಾರಿ ಹೇಳಿಕೆ: ಹಿರಿಯ ಸಾಹಿತಿ S​​.L.ಭೈರಪ್ಪ ಕ್ಷಮೆಯಾಚಿಸುವಂತೆ ಆಗ್ರಹ

Follow Us
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ