AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲೈಂಗಿಕ ದೌರ್ಜನ್ಯ ಕೇಸ್: ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಅರೆಸ್ಟ್ ವಾರಂಟ್

ಸಂಸದ ಪ್ರಜ್ವಲ್​ ರೇವಣ್ಣ ಅವರದ್ದು ಎನ್ನಲಾಗಿರುವ ಅಶ್ಲೀಲ ವಿಡಿಯೋ ಪ್ರಕರಣ ರಾಷ್ಟ್ರ ಮಟ್ಟದಲ್ಲಿ ಸದ್ದು ಮಾಡಿದೆ. ಈ ಪ್ರಕರಣ ದಿನದಿಂದ ದಿನಕ್ಕೆ ರೋಚಕತೆ ಪಡೆದುಕೊಳ್ಳುತ್ತಿದೆ. ಇದೀಗ, ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಪ್ರಜ್ವಲ್​ ರೇವಣ್ಣ ವಿರುದ್ಧ ಅರೆಸ್ಟ್​ ವಾರಂಟ್​ ಜಾರಿ ಮಾಡಿದೆ.

ಲೈಂಗಿಕ ದೌರ್ಜನ್ಯ ಕೇಸ್: ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಅರೆಸ್ಟ್ ವಾರಂಟ್
ಸಂಸದ ಪ್ರಜ್ವಲ್​ ರೇವಣ್ಣ
ಶಿವಪ್ರಸಾದ್​ ಬಿ.
| Edited By: ವಿವೇಕ ಬಿರಾದಾರ|

Updated on: May 19, 2024 | 9:42 AM

Share

ಬೆಂಗಳೂರು, ಮೇ 19: ಅತ್ಯಾಚಾರ ಮತ್ತು ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿ ಸಂಸದ ಪ್ರಜ್ವಲ್​ ರೇವಣ್ಣ (Prjwal Revanna) ವಿರುದ್ಧ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಬಂಧನ ವಾರಂಟ್​​​ ಜಾರಿಗೊಳಿಸಿದೆ. ಸದ್ಯ ಪ್ರಜ್ವಲ್​ ರೇವಣ್ಣ ವಿದೇಶದಲ್ಲಿದ್ದು, ಭಾರತಕ್ಕೆ ಮರಳಿದ ಕೂಡಲೇ ಅವರನ್ನು ಬಂಧಿಸಲಾಗುತ್ತದೆ. ಜೊತೆಗೆ ಪ್ರಜ್ವಲ್ ಬಳಿಯಿರುವ ರಾಜತಾಂತ್ರಿಕ ಪಾಸ್​​ಪೋರ್ಟ್​ ರದ್ದತಿಗು ಕೂಡ ವಿಶೇಷ ತಿನಿಖಾ ದಳ (SIT) ಪ್ರಯತ್ನ ನಡೆಸುತ್ತಿದೆ.

ಮನೆಯ ಮಹಿಳಾ ಕೆಲಸದಾಳುವಿನ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪದ ಮೇರೆಗೆ ಹೊಳೆನರಸೀಪುರ ಠಾಣೆಯಲ್ಲಿ ಪ್ರಜ್ವಲ್ ಹಾಗೂ ಅವರ ತಂದೆ ಮತ್ತು ಮಾಜಿ ಸಚಿವ ಹೆಚ್.ಡಿ.ರೇವಣ್ಣ ವಿರುದ್ಧ ಪ್ರಕರಣ ದಾಖಲಾಗಿತ್ತು. ಈ ಕೃತ್ಯದ ಸಂತ್ರಸ್ತೆ ಹೇಳಿಕೆ ಆಧರಿಸಿ ಪ್ರಜ್ವಲ್ ರೇವಣ್ಣ ಅವರ ಮೇಲೆ 376 ರಡಿ (ಅತ್ಯಾಚಾರ) ಸೆಕ್ಷನ್ ಅನ್ನು ಸಹ ಎಸ್‌ಐಟಿ ಸೇರಿಸಿತ್ತು. ಇದಾದ ಬಳಿಕ ವಿಚಾರಣೆಗೆ ಹಾಜರಾಗುವಂತೆ ಎಸ್​ಐಟಿ ನೋಟಿಸ್​ ನೀಡಿದ್ದರೂ, ಪ್ರಜ್ವಲ್​ ರೇವಣ್ಣ ಇನ್ನೂವರೆಗು ವಿಚಾರಣೆಗೆ ಹಾಜರಾಗಿಲ್ಲ.

ಪ್ರಕರಣಕ್ಕೆ ಪೂರಕವಾಗಿ ಕೆಲ ದಾಖಲೆಗಳನ್ನು ಸಂಗ್ರಹಿಸಿ ಎಸ್​ಐಟಿ ನ್ಯಾಯಾಲಯಕ್ಕೆ ಸಲ್ಲಿಸಿತು. ಈ ಪ್ರಕರಣ ಸಂಬಂಧ ವಿದೇಶದಲ್ಲಿರುವ ಪ್ರಜ್ವಲ್ ವಿರುದ್ಧ ಬಂಧನ ವಾರಂಟ್‌ ಜಾರಿಗೊಳಿಸುವಂತೆ ನ್ಯಾಯಾಲಯಕ್ಕೆ ಎಸ್​ಐಟಿ ಅಧಿಕಾರಿಗಳು ಮನವಿ ಮಾಡಿದ್ದರು.

ಇದನ್ನೂ ಓದಿ: ಜರ್ಮಿನಿಯಿಂದ ಲಂಡನ್‌ಗೆ ಪರಾರಿಯಾದ ಪ್ರಜ್ವಲ್​ ರೇವಣ್ಣ

ಪಾಸ್ ಪೋರ್ಟ್ ರದ್ದತಿಗೆ ಕೇಂದ್ರಕ್ಕೆ ಪತ್ರ

ಪ್ರಜ್ವಲ್​ ರೇವಣ್ಣ ಸಂಸದರಾಗಿರುವ ಕಾರಣ ತಮ್ಮ ರಾಜತಾಂತ್ರಿಕ ಪಾಸ್‌ಪೋರ್ಟ್ ಬಳಸಿ ವಿದೇಶಕ್ಕೆ ತೆರಳಿದ್ದಾರೆ. ಹೀಗಾಗಿ ಆ ಪಾಸ್ ಪೋರ್ಟ್ ರದ್ದಾದರೆ ಕೂಡಲೇ ಅವರು ಸ್ವದೇಶಕ್ಕೆ ಮರಳಬೇಕಾಗುತ್ತದೆ. ಈಗ ನ್ಯಾಯಾಲಯದ ಬಂಧನ ವಾರಂಟ್ ಆಧರಿಸಿ ಪಾಸ್ ಪೋರ್ಟ್ ರದ್ದುಗೊಳಿಸುವಂತೆ ಕೇಂದ್ರ ಸರ್ಕಾರಕ್ಕೆ ಎಸ್‌ಐಟಿ ಪತ್ರ ಬರೆಯಲಿದೆ.

ಆರ್ಥಿಕವಾಗಿ ಕಟ್ಟಿಹಾಕಲು SIT ಮಾಸ್ಟರ್​​ ಪ್ಲ್ಯಾನ್

ವಿದೇಶದಲ್ಲಿರುವ ಪ್ರಜ್ವಲ್​ ರೇವಣ್ಣ ಅವರ ಖಾತೆಗೆ ಬೆಂಗಳೂರಿನಿಂದ ಲಕ್ಷಾಂತರ ಹಣ ವರ್ಗಾವಣೆಯಾಗಿದೆ ಎಂದು ಮಾಹಿತಿ ಎಸ್​ಐಟಿ ಅಧಿಕಾರಿಗಳಿಗೆ ದೊರೆತಿದೆ. ಹೀಗಾಗಿ ಹಣ ವರ್ಗಾವಣೆಯಾಗದಂತೆ ತಡೆಯಲು ಎಸ್​ಐಟಿ ಅಧಿಕಾರಿಗಳು ನ್ಯಾಯಾಲಯದ ಅನುಮತಿ ಪಡೆದು ಪ್ರಜ್ವಲ್​ ರೇವಣ್ಣ ಅವರ ಬ್ಯಾಂಕ್ ಖಾತೆಯನ್ನು ಫ್ರೀಜ್ ಮಾಡಲು ಸಿದ್ಧತೆ ನಡೆಸಿದ್ದಾರೆ. ಈ ಹಿನ್ನೆಲೆಯಲ್ಲಿ ಎಸ್ಐಟಿ ಅಧಿಕಾರಿಗಳು ಪ್ರಜ್ವಲ್ ರೇವಣ್ಣ ಅವರ ಬ್ಯಾಂಕ್ ಖಾತೆಗಳ ಬಗ್ಗೆ ಮಾಹಿತಿ ಕಲೆ ಹಾಕುತ್ತಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
ಆಂಧ್ರದಲ್ಲಿ ಮೋದಿ ಸ್ವಾಗತಕ್ಕೆ ಸಜ್ಜು;ವಿದ್ಯಾರ್ಥಿಗಳಿಂದ ನೃತ್ಯ ತಾಲೀಮು
ಆಂಧ್ರದಲ್ಲಿ ಮೋದಿ ಸ್ವಾಗತಕ್ಕೆ ಸಜ್ಜು;ವಿದ್ಯಾರ್ಥಿಗಳಿಂದ ನೃತ್ಯ ತಾಲೀಮು
ಸಂಸತ್ ಆವರಣದಲ್ಲಿ ಡ್ರಾಮಾ; ಸನ್ಯಾಸಿಯ ವೇಷ ಧರಿಸಿ ಪಪ್ಪು ಯಾದವ್ ಪ್ರತಿಭಟನೆ
ಸಂಸತ್ ಆವರಣದಲ್ಲಿ ಡ್ರಾಮಾ; ಸನ್ಯಾಸಿಯ ವೇಷ ಧರಿಸಿ ಪಪ್ಪು ಯಾದವ್ ಪ್ರತಿಭಟನೆ
ಜೈಲಿನಲ್ಲಿ ದರ್ಶನ್ ಜೊತೆ 1 ಗಂಟೆಗೂ ಹೆಚ್ಚು ಕಾಲ ವಿಜಯಲಕ್ಷ್ಮಿ ಸಮಾಲೋಚನೆ
ಜೈಲಿನಲ್ಲಿ ದರ್ಶನ್ ಜೊತೆ 1 ಗಂಟೆಗೂ ಹೆಚ್ಚು ಕಾಲ ವಿಜಯಲಕ್ಷ್ಮಿ ಸಮಾಲೋಚನೆ
ಪೊಲೀಸ್ ನೇಮಕಾತಿ ಪರೀಕ್ಷೆ: ಸುಳ್ಳು ಪೋಸ್ಟ್ ಹಾಕಿದ್ರೆ ಕೇಸ್ ಬುಕ್; ಕೆಇಎ ಎಚ
ಪೊಲೀಸ್ ನೇಮಕಾತಿ ಪರೀಕ್ಷೆ: ಸುಳ್ಳು ಪೋಸ್ಟ್ ಹಾಕಿದ್ರೆ ಕೇಸ್ ಬುಕ್; ಕೆಇಎ ಎಚ
ಊರ್ವಶಿ ಚಿತ್ರಮಂದಿರದಿಂದ ‘ಜನ ನಾಯಗನ್’ ಎತ್ತಂಗಡಿ: ವಿಡಿಯೋ ನೋಡಿ
ಊರ್ವಶಿ ಚಿತ್ರಮಂದಿರದಿಂದ ‘ಜನ ನಾಯಗನ್’ ಎತ್ತಂಗಡಿ: ವಿಡಿಯೋ ನೋಡಿ
ರೈತ ದಂಪತಿ ಸಾವು: ಕುಟುಂಬಕ್ಕೆ ಹೆಚ್.ಡಿ. ಕುಮಾರಸ್ವಾಮಿ ಸಾಂತ್ವನ
ರೈತ ದಂಪತಿ ಸಾವು: ಕುಟುಂಬಕ್ಕೆ ಹೆಚ್.ಡಿ. ಕುಮಾರಸ್ವಾಮಿ ಸಾಂತ್ವನ
ಹಿಂಗಾರು ಮಳೆ ಬಗ್ಗೆ ಬಿಗ್ ಅಪ್ಡೇಟ್ ಕೊಟ್ಟ ಹವಾಮಾನ ಇಲಾಖೆ ನಿರ್ದೇಶಕ
ಹಿಂಗಾರು ಮಳೆ ಬಗ್ಗೆ ಬಿಗ್ ಅಪ್ಡೇಟ್ ಕೊಟ್ಟ ಹವಾಮಾನ ಇಲಾಖೆ ನಿರ್ದೇಶಕ
ಆ.13ರಂದು ಕರ್ನಾಟಕ ಬಂದ್​​ ಬಗ್ಗೆ ಹೋಟೆಲ್ ಮಾಲೀಕರ ಸಂಘ ಹೇಳಿದ್ದೇನು?
ಆ.13ರಂದು ಕರ್ನಾಟಕ ಬಂದ್​​ ಬಗ್ಗೆ ಹೋಟೆಲ್ ಮಾಲೀಕರ ಸಂಘ ಹೇಳಿದ್ದೇನು?
ತಮಿಳುನಾಡು ಸಿಎಂ ಬೆಂಗಳೂರಿಗೆ ಬರುವುದು ಬೇಡ ಎಂದ ಡಿಕೆಶಿ, ಕಾರಣ?
ತಮಿಳುನಾಡು ಸಿಎಂ ಬೆಂಗಳೂರಿಗೆ ಬರುವುದು ಬೇಡ ಎಂದ ಡಿಕೆಶಿ, ಕಾರಣ?
ಕಾವೇರಿ ನೀರು ವಿವಾದ: ಡಿಕೆಶಿ ಸರ್ಕಾರಕ್ಕೆ ಕುಮಾರಸ್ವಾಮಿ ಕೊಟ್ಟ ಸಲಹೆ ಏನು?
ಕಾವೇರಿ ನೀರು ವಿವಾದ: ಡಿಕೆಶಿ ಸರ್ಕಾರಕ್ಕೆ ಕುಮಾರಸ್ವಾಮಿ ಕೊಟ್ಟ ಸಲಹೆ ಏನು?