Prajwal Revanna: ಪ್ರಜ್ವಲ್ ರೇವಣ್ಣ ಬಂಧನ ಫಿಕ್ಸ್: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಗೃಹ ಸಚಿವ ಪರಮೇಶ್ವರ್

ಪ್ರಜ್ವಲ್ ಇವತ್ತು ಬರ್ತಾರೆ, ನಾಳೆ ಬರ್ತಾರೆ, ಬಂದೇ ಬಿಟ್ರು ಅನ್ನೋ ಊಹಾಪೋಹಗಳಿಗೆ ತೆರೆ ಬಿದ್ದಿದೆ. ಹಾಸನದಿಂದ ವಿದೇಶಕ್ಕೆ ಹಾರಿಹೋಗಿದ್ದ ಪ್ರಜ್ವಲ್, ಬರೋಬ್ಬರಿ 31 ದಿನದ ಬಳಿಕ ಪ್ರತ್ಯಕ್ಷವಾಗಿದ್ದಾರೆ. ಈ ಕುರಿಯಾಗಿ ವಿಡಿಯೋ ಹೇಳಿಕೆ ಬಿಟ್ಟ ಬೆನ್ನೆಲ್ಲೇ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಪ್ರತಿಕ್ರಿಯಿಸಿದ್ದಾರೆ. ಪ್ರಜ್ವಲ್ ಅವರೇ ಶರಣಾಗುತ್ತೇನೆ ಅಂತಾ ಹೇಳಿದ್ದಾರೆ ಹಾಗಾಗಿ ಅರೆಸ್ಟ್ ಅಂತೂ ಆಗುತ್ತಾರೆ ಎಂದಿದ್ದಾರೆ.

Prajwal Revanna: ಪ್ರಜ್ವಲ್ ರೇವಣ್ಣ ಬಂಧನ ಫಿಕ್ಸ್: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಗೃಹ ಸಚಿವ ಪರಮೇಶ್ವರ್
ಪ್ರಜ್ವಲ್ ರೇವಣ್ಣ ಬಂಧನ ಫಿಕ್ಸ್: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಗೃಹ ಸಚಿವ ಪರಮೇಶ್ವರ್
ಮಹೇಶ್ ಇ, ಭೂಮನಹಳ್ಳಿ Edited By:

Updated on: May 27, 2024 | 6:40 PM

ತುಮಕೂರು, ಮೇ 27: ಪ್ರಜ್ವಲ್ ರೇವಣ್ಣ (Prajwal Revanna) ಅವರೇ ಶರಣಾಗುತ್ತೇನೆ ಅಂತಾ ಹೇಳಿದ್ದಾರೆ ಹಾಗಾಗಿ ಅರೆಸ್ಟ್ ಅಂತೂ ಆಗುತ್ತಾರೆ ಎಂದು ಗೃಹ ಖಾತೆ ಸಚಿವ ಡಾ.ಜಿ.ಪರಮೇಶ್ವರ್ (G. Parameshwara) ಹೇಳಿದ್ದಾರೆ. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಈಗಾಗಲೇ ಪ್ರಜ್ವಲ್ ವಿರುದ್ಧ ಅರೆಸ್ಟ್ ವಾರಂಟ್ ಜಾರಿ ಆಗಿದೆ. ಬ್ಲೂ ಕಾರ್ನರ್ ನೋಟಿಸ್, ವಾರಂಟ್ ಜಾರಿ ಹಿನ್ನೆಲೆ ಅರೆಸ್ಟ್ ಮಾಡಬೇಕು. ಎಸ್​ಐಟಿಯವರು ಯಾವ ರೀತಿ ಕ್ರಮ ತೆಗೆದುಕೊಳ್ಳತ್ತಾರೆಂದು ನೋಡಬೇಕು ಎಂದು ಹೇಳಿದ್ದಾರೆ.

ವಿದೇಶಕ್ಕೆ ಹೋಗುವ ವಿಚಾರದಲ್ಲಿ ತಪ್ಪಿಲ್ಲ ಅಂತಾ ಹೇಳಿರಬಹುದು. ಪ್ರಜ್ವಲ್​ ಹೇಳಿದಂತೆ ಅಲ್ಲಿತನಕ ಯಾವುದೇ ಕಂಪ್ಲೆಂಟ್ ಆಗಿರಲಿಲ್ಲ. ಪ್ರಜ್ವಲ್ ರೇವಣ್ಣ ಏನು ಹೇಳಿಕೆ ಕೊಡ್ತಾರೋ ಕೊಡಲಿ. SITಯವರು ಏನು ಕ್ರಮ ತೆಗೆದುಕೊಳ್ಳಬೇಕೋ ಅದನ್ನು ಕೈಗೊಳುತ್ತಾರೆ. ಒಂದು ದೇಶದಿಂದ ಒಬ್ಬರನ್ನ ಕರೆದುಕೊಂಡು ಬರೋದು ಸುಲಭವಲ್ಲ ಎಂದಿದ್ದಾರೆ.

ಇದನ್ನೂ ಓದಿ: Prajwal Revanna Video: ಕೊನೆಗೂ ಸಂಸದ ಪ್ರಜ್ವಲ್ ರೇವಣ್ಣ ಪ್ರತ್ಯಕ್ಷ, ತಂದೆ-ತಾಯಿ ಬಳಿ ಕ್ಷಮೆಯಾಚನೆ

ಪ್ರಜ್ವಲ್ ರೇವಣ್ಣ ವಿಡಿಯೋ ಹೇಳಿಕೆ ಬಿಡುಗಡೆ ವಿಚಾರವಾಗಿ ಮಾತನಾಡಿದ ಅವರು, ಮೇ 31ರಂದು ಬೆಳಗ್ಗೆ 10ಕ್ಕೆ ಎಸ್‌ಐಟಿ ತನಿಖೆಗೆ ಸಹಕರಿಸುತ್ತೇನೆಂದು ಹೇಳಿದ್ದಾರೆ, ಇದನ್ನು ಸ್ವಾಗತಿಸುವೆ. ಕರ್ನಾಟಕದ ಇತಿಹಾಸದಲ್ಲಿ ಇಂತಹ ಘಟನೆ ನಡೆದಿರಲಿಲ್ಲ. ಇಡೀ ಜಗತ್ತೇ ಮಾತನಾಡುವ ವೇಳೆ ವಾಪಸ್ ಕರೆತರಲು ಪ್ರಯತ್ನಿಸಿದ್ದೆವು.

ಪ್ರಧಾನಿಗೆ ಸಿಎಂ 2 ಸಲ ಪತ್ರ ಬರೆದಿದ್ದರು, ಸಿಬಿಐಗೆ ಮನವಿ ಮಾಡಿದ್ದೆವು. ಇಂಟರ್‌ಪೋಲ್‌ಗೂ ಮನವಿ ಮಾಡಿದ್ದು, ಬ್ಲೂಕಾರ್ನರ್‌ ನೋಟಿಸ್ ಸಹ ನೀಡಿದ್ದರು. ಪಾಸ್‌ಪೋರ್ಟ್‌ ರದ್ದು ಮಾಡಿ ಅಂತಾ ಕೇಂದ್ರಕ್ಕೂ ಮನವಿ ಮಾಡಿದ್ದೆವು. ಪಾಸ್‌ಪೋರ್ಟ್‌ ರದ್ದು ಪ್ರಕ್ರಿಯೆ ಆರಂಭಿಸಿದ್ದೇವೆ ಅಂತಾ ಕೇಂದ್ರ ಹೇಳಿತ್ತು. ಈ ಮಧ್ಯೆ ಪ್ರಜ್ವಲ್ ಬರುತ್ತೇವೆ ಅಂತಾ ಹೇಳಿದ್ದನ್ನು ಸ್ವಾಗತ ಮಾಡುತ್ತೇನೆ. ತಮ್ಮ ಬಳಿಯಿರುವ ಸಾಕ್ಷ್ಯ, ಮಾಹಿತಿ ಆಧರಿಸಿ SIT ತನಿಖೆ ಮುಂದುವರಿಸುತ್ತೆ ಎಂದರು.

ಇದನ್ನೂ ಓದಿ: Prajwal Revanna Video: ಪ್ರಜ್ವಲ್ ರೇವಣ್ಣನ​ ಹೊಸ ವಿಡಿಯೋ ರಿಲೀಸ್: ಮಹತ್ವದ ವಿಚಾರ ಹಂಚಿಕೊಂಡ ಸಂಸದ

ಪ್ರಜ್ವಲ್ ರೇವಣ್ಣ ನನ್ನದೇನು ತಪ್ಪಿಲ್ಲ ಎಂಬ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯಿಸಿದ್ದು, ಎಲ್ಲರು ಹಂಗೆ ಹೇಳ್ತಾರೆ, ನಮ್ಮದು ತಪ್ಪಿಲ್ಲ ಅಂತ. ತಪ್ಪಿಲ್ಲ ಅಂದರೆ ಮಾಡಿದೋರು ಯಾರು ಎಂಬ ಪ್ರಶ್ನೆ ಉದ್ಭವಿಸುತ್ತೆ. ಎಸ್​ಐಟಿ ಅವರು ಎಲ್ಲಾ ಮಾಹಿತಿ ಕಲೆಹಾಕಿ ಅದರ ಆಧಾರದ ಮೇಲೆ ಯಾರದ್ದು ತಪ್ಪು, ಯಾರದ್ದು ತಪ್ಪಿಲ್ಲ ಅಂತ ಹೇಳ್ತಾರೆ. ಒಂದು ವೇಳೆ 31 ಕ್ಕೂ ಬಂದಿಲ್ಲ ಅಂದರೆ ಮುಂದೆ ಏನಾಗುತ್ತೆ ನೋಡೋಣ. ಇನ್ನು ಮೂರು ನಾಲ್ಕು ದಿನ ಇರೋದು ಅಷ್ಟೇ ಎಂದು ಹೇಳಿದ್ದಾರೆ.

ಸಚಿವರು, ಅಧಿಕಾರಿಗಳೇ ನಿಮಗೂ ಅಕ್ಕ, ತಂಗಿ, ತಾಯಿ ಇಲ್ವಾ? ಕುಮಾರಸ್ವಾಮಿ ಕಿಡಿ

ಚಿಕ್ಕಬಳ್ಳಾಪುರದಲ್ಲಿ ಜೆಡಿಎಸ್​ ರಾಜ್ಯಾಧ್ಯಕ್ಷ ಹೆಚ್​ಡಿ ಕುಮಾರಸ್ವಾಮಿ ಪ್ರತಿಕ್ರಿಯಿಸಿದ್ದು, ತಪ್ಪಿತಸ್ಥರು ಯಾರೇ ಆಗಿದ್ರೂ ಶಿಕ್ಷೆಯಾಗಲಿ. ಪೆನ್​ಡ್ರೈವ್ ಹಂಚಿದವರ ತಪ್ಪು ಇಲ್ಲ ಅಂತಾ ಸಿಎಂ ಹೇಳಿದ್ದಾರೆ. ಪೆನ್​ಡ್ರೈವ್ ಹಂಚಿದವರ ರಕ್ಷಣೆಗೆ ಇದ್ದೇವೆಂದು ಹೇಳಿದಂತಾಗಿದೆ. ನೊಂದವರಿಗೆ ಸರ್ಕಾರ ಏನು ಸಾಂತ್ವನ ಹೇಳ್ತಿದೆ. ಒಂದು ಚುನಾವಣೆ ಗೆಲ್ಲಲು ಇಷ್ಟು ಕೀಳು ಮಟ್ಟಕ್ಕೆ ಇಳಿದಿದ್ದಾರೆ. ಸಚಿವರು, ಅಧಿಕಾರಿಗಳೇ ನಿಮಗೂ ಅಕ್ಕ, ತಂಗಿ, ತಾಯಿ ಇಲ್ವಾ ಎಂದು ವಾಗ್ದಾಳಿ ಮಾಡಿದ್ದಾರೆ.

ಪ್ರಜ್ವಲ್​ ಪ್ರಕರಣದ ತನಿಖೆಯನ್ನು ಸಮರ್ಪಕವಾಗಿ ಮಾಡುತ್ತಿಲ್ಲ. ಪ್ರಕರಣವನ್ನು ಸಿಬಿಐಗೆ ಕೊಟ್ಟರೆ ಸರ್ಕಾರ ಸಿಕ್ಕಿ ಹಾಕಿಕೊಳ್ಳುತ್ತದೆ. ಪೆನ್​ಡ್ರೈವ್ ಹಂಚಿದವರು ಸಿಕ್ಕಿ ಬೀಳ್ತಾರೆ, ಅದಕ್ಕೆ ಸಿಬಿಐಗೆ ಕೊಡುತ್ತಿಲ್ಲ ಎಂದು ಹೇಳಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. 

Mahesha E

ಮಹೇಶ್ ಇ ಎಂಬ ನಾನು ಮೂಲತಃ ಚಿಕ್ಕಬಳ್ಳಾಪುರ ಜಿಲ್ಲೆ ಗೌರಿಬಿದನೂರು ತಾಲೂಕಿನ ಭೂಮನಹಳ್ಳಿ ಗ್ರಾಮದ ನಿವಾಸಿ. ನಮ್ಮ ಹೆಮ್ಮೆಯ ಟಿವಿ9 ತುಮಕೂರು ಜಿಲ್ಲಾ ವರದಿಗಾರನಾಗಿ ಸತತ 9 ವರ್ಷಗಳಿಂದ ಕರ್ತವ್ಯ ನಿರ್ವಹಿಸುತ್ತಿದ್ದೇನೆ. ನಡೆದಾಡುವ ದೇವರು ತ್ರಿವಿಧ ದಾಸೋಹಿ ಶಿವಕುಮಾರ್ ಶ್ರೀಗಳು ಲಿಂಗೈಕ್ಯರಾದಾಗ ಆ ಸುದ್ದಿ ಬಿತ್ತರ ಬಗ್ಗೆ ಹಾಗೂ ಕೊನೆ ಕ್ಷಣದಲ್ಲಿ ದೇವರ ಜೊತೆಯಿದ್ದ ಎಲ್ಲಾ ಕಾರ್ಯಕ್ರಮಗಳನ್ನ ನೋಡಿ ವರದಿ ಮಾಡಿದ್ದು ನನ್ನ ಭಾಗ್ಯ..ಬಡ ಕುಟುಂಬದಿಂದ ಬಂದಿರುವ ನನಗೆ ಟಿವಿ9 ಸಂಸ್ಥೆ ತುಮಕೂರು ಅಂತಾ ಅತಿದೊಡ್ಡ ಜಿಲ್ಲೆಯಲ್ಲಿ ಕೆಲಸ ಮಾಡಲು ಅವಕಾಶ ನೀಡಿದ್ದಕ್ಕೆ ಧನ್ಯವಾದ...

Follow Us