AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟಿಕೆಟ್ ಇಲ್ಲದೇ ಪ್ರಯಾಣಿಸಿದವರಿಗೆ ದಂಡದ ಬಿಸಿ: ಬಿಎಂಟಿಸಿ ಖಜಾನೆಗೆ ಹರಿದು ಬಂತು ಲಕ್ಷ ಲಕ್ಷ ಹಣ

ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ವಾಹನಗಳಲ್ಲಿ ಸಂಚರಿಸುವ ಪ್ರಯಾಣಿಕರು ಟಿಕೆಟ್​ ಪಡೆಯದೆ ಅನಧಿಕೃತವಾಗಿ ಪ್ರಯಾಣ ಮಾಡುವವರನ್ನು ಮತ್ತು ಸಂಸ್ಥೆಯ ಸಾರಿಗೆ ಆದಾಯದ ಸೋರಿಕೆಯನ್ನು ತಡೆಗಟ್ಟುವ ನಿಟ್ಟಿನಲ್ಲಿ 18,378 ಟ್ರಿಪ್​ಗಳನ್ನು ತಪಾಸಿಸಿ 7,68,910 ರೂ. ದಂಡ ವಿಧಿಸಲಾಗಿದೆ. ಆ ಮೂಲಕ ಬಿಎಂಟಿಸಿಗೆ ಲಕ್ಷ ಲಕ್ಷ ರೂ. ಹಣ ಹರಿದು ಬಂದಿದೆ.

ಟಿಕೆಟ್ ಇಲ್ಲದೇ ಪ್ರಯಾಣಿಸಿದವರಿಗೆ ದಂಡದ ಬಿಸಿ: ಬಿಎಂಟಿಸಿ ಖಜಾನೆಗೆ ಹರಿದು ಬಂತು ಲಕ್ಷ ಲಕ್ಷ ಹಣ
ಟಿಕೆಟ್ ಇಲ್ಲದೇ ಪ್ರಯಾಣಿಸಿದವರಿಗೆ ದಂಡದ ಬಿಸಿ: ಬಿಎಂಟಿಸಿ ಖಜಾನೆಗೆ ಹರಿದು ಬಂತು ಲಕ್ಷ ಲಕ್ಷ ಹಣ
ಕಿರಣ್​ ಸೂರ್ಯ
| Edited By: |

Updated on: Jul 23, 2024 | 6:47 PM

Share

ಬೆಂಗಳೂರು, ಜುಲೈ 23: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (BMTC) ಜೂನ್ ತಿಂಗಳಲ್ಲಿ ವಿವಿಧ ನಿಯಮಗಳ ಉಲ್ಲಂಘನೆ ವಿಚಾರವಾಗಿ 3708 ಪ್ರಯಾಣಿಕರಿಗೆ ದಂಡ (fine) ವಿಧಿಸುವ ಮೂಲಕ ಒಟ್ಟು 8,11,510 ರೂ. ದಂಡ ವಸೂಲಿ ಮಾಡಲಾಗಿದೆ ಎಂದು ಬಿಎಂಟಿಸಿ ತಿಳಿಸಿದೆ. ಆ ಮೂಲಕ ಟಿಕೆಟ್ ಇಲ್ಲದೇ ಪ್ರಯಾಣಿಸಿದವರಿಗೆ ಬಿಎಂಟಿಸಿ ಬಿಸಿ ಮುಟ್ಟಿಸಿದೆ. ದಂಡದಿಂದ ಬಿಎಂಟಿಸಿಗೆ ಲಕ್ಷ ಲಕ್ಷ ರೂ. ಹಣ ಹರಿದು ಬಂದಿದೆ.

ಈ ಬಗ್ಗೆ ಬಿಎಂಟಿಸಿ ಮಾಧ್ಯಮ ಪ್ರಕಟಣೆ ಹೊರಡಿಸಿದ್ದು, ಮಹಿಳೆಯರ ಸೀಟ್​ನಲ್ಲಿ ಕುಳಿತು ಪ್ರಯಾಣಿಸಿದ್ದ ಹಾಗೂ ಟಿಕೆಟ್‌ ರಹಿತವಾಗಿ ಪ್ರಯಾಣಿಸಿದವರಿಂದ ದಂಡ ವಸೂಲಿ ಮಾಡಲಾಗಿದೆ ಎಂದು ತಿಳಿಸಿದೆ.

ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ವಾಹನಗಳಲ್ಲಿ ಸಂಚರಿಸುವ ಪ್ರಯಾಣಿಕರು ಟಿಕೆಟ್​ ಪಡೆಯದೆ ಅನಧಿಕೃತವಾಗಿ ಪ್ರಯಾಣ ಮಾಡುವವರನ್ನು ಮತ್ತು ಸಂಸ್ಥೆಯ ಸಾರಿಗೆ ಆದಾಯದ ಸೋರಿಕೆಯನ್ನು ತಡೆಗಟ್ಟುವ ನಿಟ್ಟಿನಲ್ಲಿ ನಗರದಾದ್ಯಂತ ಸಂಚರಿಸುವ ವಾಹನಗಳನ್ನು ನಮ್ಮ ಸಂಸ್ಥೆಯ ತನಿಖಾ ತಂಡಗಳು ಜೂನ್​ ತಿಂಗಳಲ್ಲಿ ಒಟ್ಟು 18,378 ಟ್ರಿಪ್​ಗಳನ್ನು ತಪಾಸಿಸಿ 3750 ಟಿಕೆಟ್​ ರಹಿತ ಪ್ರಯಾಣಿಕರನ್ನು ಪತ್ತೆ ಹಚ್ಚಿ, ಅವರಿಂದ ಒಟ್ಟು 7,68,910 ರೂ. ದಂಡ ವಸೂಲಿ ಮಾಡಿ ಸಂಸ್ಥೆಯ ನಿರ್ವಾಹಕರ ವಿರುದ್ಧ 1014 ಪ್ರಕರಣಗಳನ್ನು ದಾಖಲಿಸಲಾಗಿದೆ.

ಇದನ್ನೂ ಓದಿ: ವಾಕರಸಾ ಸಂಸ್ಥೆಯಿಂದ ವಿಶೇಷ ಟೂರ್ ಪ್ಯಾಕೇಜ್: ಸ್ಥಳ, ದರ ಬಗ್ಗೆ ಇಲ್ಲಿದೆ ಮಾಹಿತಿ

ಮಹಿಳಾ ಪ್ರಯಾಣಿಕರಿಗೆಂದೇ ಮೀಸಲಾಗಿರುವ ಆಸನಗಳಲ್ಲಿ ಕುಳಿತು ಪ್ರಯಾಣಿಸಿರುವ 426 ಪುರುಷ ಪ್ರಯಾಣಿಕರಿಂದ ಒಟ್ಟು 42,600 ರೂ. ಮೋಟಾರು ವಾಹನ ಕಾಯ್ದೆ 1988ರ ಕಾಲಂ 177 ಮತ್ತು 94 ರ ಪ್ರಕಾರ ದಂಡ ವಿಧಿಸಲಾಗಿದೆ.

ಒಟ್ಟಾರೆಯಾಗಿ ಜೂನ್ ತಿಂಗಳಲ್ಲಿ 4,176 ಪ್ರಯಾಣಿಕರಿಂದ ಒಟ್ಟು 8,11,510 ರೂ. ದಂಡವನ್ನು ವಸೂಲಿ ಮಾಡಲಾಗಿದೆ. ಪ್ರಯಾಣಿಕರು ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ವಾಹನಗಳಲ್ಲಿ ಪ್ರಯಾಣಿಸುವಾಗ ಅಧಿಕೃತ ಟಿಕೆಟ್​, ದಿನದ ಪಾಸು, ವಾರದ ಪಾಸು, ಮಾಸಿಕ ಪಾಸುಗಳನ್ನು ಪಡೆದು ಪ್ರಯಾಣಿಸಬೇಕು. ಇದರಿಂದ ಅನಗತ್ಯ ದಂಡ ಕಟ್ಟುವುದನ್ನು ತಡೆಯಬಹುದಾಗಿದೆ ಹಾಗೂ ಇಂತಹ ಪ್ರವೃತ್ತಿಯಿಂದ ಸಂಸ್ಥೆಯು ಉತ್ತಮ ಸೇವೆಯನ್ನು ಪ್ರಯಾಣಿಕರಿಗೆ ನೀಡಲು ಸಹಾಯವಾಗುತ್ತದೆ ಎಂದು ತಿಳಿಸಲಾಗಿದೆ.

ಇದನ್ನೂ ಓದಿ: ಪ್ರಯಾಣಿಕರ ಗಮನಕ್ಕೆ: ಹುಬ್ಬಳ್ಳಿ-ಸೊಲ್ಲಾಪುರ, ಬೆಂಗಳೂರು ಸೇರಿದಂತೆ ರಾಜ್ಯದ ಈ ರೈಲುಗಳ ಸಮಯ ಬದಲಾವಣೆ

ಮಹಿಳಾ ಪ್ರಯಾಣಿಕರಿಗೆಂದೇ ಮೀಸಲಾಗಿರುವ ಆಸನಗಳಲ್ಲಿ ಪುರುಷ ಪ್ರಯಾಣಿಕರು ಆಸನಗಳನ್ನು ತೆರವು ಮಾಡಿಕೊಡುವ ಮೂಲಕ ಅವರಿಗೆ ಕುಳಿತುಕೊಳ್ಳಲು ಅವಕಾಶ ನೀಡಬೇಕೆಂದು ಕೋರಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
KPSC ಹಗರಣ: ಐಎಎಸ್‌ ಅಧಿಕಾರಿ ಜ್ಞಾನೇಂದ್ರ ರಾತ್ರಿ ಕಾರುಬಾರು ಬಯಲು!
KPSC ಹಗರಣ: ಐಎಎಸ್‌ ಅಧಿಕಾರಿ ಜ್ಞಾನೇಂದ್ರ ರಾತ್ರಿ ಕಾರುಬಾರು ಬಯಲು!
ಬಿಗ್ ಬಾಸ್ ಅಗ್ನಿಪರೀಕ್ಷೆ ಗ್ರ್ಯಾಂಡ್ ಫಿನಾಲೆಗೆ ಕ್ಷಣಗಣನೆ; ಗೆಲ್ಲೋರ್ಯಾರು?
ಬಿಗ್ ಬಾಸ್ ಅಗ್ನಿಪರೀಕ್ಷೆ ಗ್ರ್ಯಾಂಡ್ ಫಿನಾಲೆಗೆ ಕ್ಷಣಗಣನೆ; ಗೆಲ್ಲೋರ್ಯಾರು?
SIR: ಜೀವಂತ ವ್ಯಕ್ತಿಯನ್ನೇ ‘ಸತ್ತಿದ್ದಾರೆ’ ಎಂದು ಘೋಷಿಸಿದ ಚುನಾವಣಾ ಆಯೋಗ!
SIR: ಜೀವಂತ ವ್ಯಕ್ತಿಯನ್ನೇ ‘ಸತ್ತಿದ್ದಾರೆ’ ಎಂದು ಘೋಷಿಸಿದ ಚುನಾವಣಾ ಆಯೋಗ!
ಸ್ಯಾಂಪಲ್ ತಗೊಳಿ, ಹೋಟೆಲ್ ಹೆಸರು ಹೇಳ್ಬೇಡಿ! ಸ್ಟಾರ್ ಹೋಟೆಲ್ ಮಾಲೀಕರ ಅಳಲು
ಸ್ಯಾಂಪಲ್ ತಗೊಳಿ, ಹೋಟೆಲ್ ಹೆಸರು ಹೇಳ್ಬೇಡಿ! ಸ್ಟಾರ್ ಹೋಟೆಲ್ ಮಾಲೀಕರ ಅಳಲು
'ನನಗೆ ಗೊತ್ತಿಲ್ಲದೆ ಪ್ರಶ್ನೆ ಪತ್ರಿಕೆ ತೆಗೆದು ಕೊಂಡಿರಬಹುದು': ಜ್ಞಾನೇಂದ್ರ
'ನನಗೆ ಗೊತ್ತಿಲ್ಲದೆ ಪ್ರಶ್ನೆ ಪತ್ರಿಕೆ ತೆಗೆದು ಕೊಂಡಿರಬಹುದು': ಜ್ಞಾನೇಂದ್ರ
ಯಾರು ಸಿಕ್ಕಿಬಿದ್ರೂ ನಯಾಪೈಸೆ ಉಪಕಾರ ಮಾಡಲ್ಲವೆಂದ ಖಾದರ್!
ಯಾರು ಸಿಕ್ಕಿಬಿದ್ರೂ ನಯಾಪೈಸೆ ಉಪಕಾರ ಮಾಡಲ್ಲವೆಂದ ಖಾದರ್!
ಕೊಡಗು-ಕೇರಳ ಗಡಿಯಲ್ಲಿ ಲಂಚಾವತಾರ? ಚೆಕ್‌ಪೋಸ್ಟ್‌ ವಿಡಿಯೋ ವೈರಲ್
ಕೊಡಗು-ಕೇರಳ ಗಡಿಯಲ್ಲಿ ಲಂಚಾವತಾರ? ಚೆಕ್‌ಪೋಸ್ಟ್‌ ವಿಡಿಯೋ ವೈರಲ್
ಮನೆಯ ಮುಂದೆ ಪಾರ್ಕ್ ಮಾಡಿದ್ದ ಆಟೋದ ಚಕ್ರ ಕಳವು
ಮನೆಯ ಮುಂದೆ ಪಾರ್ಕ್ ಮಾಡಿದ್ದ ಆಟೋದ ಚಕ್ರ ಕಳವು
ಹೊಸ ಗೃಹಬಳಕೆ ಸಂಪರ್ಕ ಸಿಗದೆ ಗ್ರಾಹಕರ ಆಕ್ರೋಶ
ಹೊಸ ಗೃಹಬಳಕೆ ಸಂಪರ್ಕ ಸಿಗದೆ ಗ್ರಾಹಕರ ಆಕ್ರೋಶ
ಬ್ಯಾಂಕ್​ಗಳಲ್ಲಿ ಕನ್ನಡಿಗರನ್ನೇ ಕೆಲಸಕ್ಕೆ ನೇಮಿಸಿ: ಸಚಿವ ತಂಗಡಗಿ
ಬ್ಯಾಂಕ್​ಗಳಲ್ಲಿ ಕನ್ನಡಿಗರನ್ನೇ ಕೆಲಸಕ್ಕೆ ನೇಮಿಸಿ: ಸಚಿವ ತಂಗಡಗಿ