AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪೆನ್ನಾರ್‌ ನದಿ ನೀರು ವಿವಾದ: ಮಧ್ಯಸ್ಥಿಕೆಗೆ ಕೇಂದ್ರ ಸರ್ಕಾರದ ಮನವಿಗೆ ತಮಿಳುನಾಡು ವಿರೋಧ

ಕೋಲಾರ, ಬಂಗಾರಪೇಟೆ ಮತ್ತು ಮಾಲೂರು ನಗರ ಪಟ್ಟಣಗಳಿಗೆ ನೀರು ಪೂರೈಸುವ ಮಾರ್ಕಂಡೇಯ ಅಣೆಕಟ್ಟು ನಿರ್ಮಾಣ ವಿಚಾರವಾಗಿ ಸದ್ಯ ಕೇಂದ್ರ ಸರ್ಕಾರ ಸುಪ್ರೀಂಕೋರ್ಟ್​ನಲ್ಲಿ ಅರ್ಜಿ ಸಲ್ಲಿಸಿದ್ದು, ಕರ್ನಾಟಕ ಮತ್ತು ತಮಿಳುನಾಡು ನಡುವೆ ಮಧ್ಯಸ್ಥಿಕೆಗೆ 12 ವಾರಗಳ ಸಮಯ ಕೇಳಿದೆ. ಆದರೆ ಕೇಂದ್ರ ಸರ್ಕಾರದ ಈ ಮನವಿಗೆ ತಮಿಳುನಾಡು ವಿರೋಧ ವ್ಯಕ್ತಪಡಿಸಿದೆ.

ಪೆನ್ನಾರ್‌ ನದಿ ನೀರು ವಿವಾದ: ಮಧ್ಯಸ್ಥಿಕೆಗೆ ಕೇಂದ್ರ ಸರ್ಕಾರದ ಮನವಿಗೆ ತಮಿಳುನಾಡು ವಿರೋಧ
ಸುಪ್ರೀಂಕೋರ್ಟ್
ಹರೀಶ್ ಜಿ.ಆರ್​.
| Edited By: |

Updated on: Oct 16, 2023 | 5:48 PM

Share

ದೆಹಲಿ, ಅಕ್ಟೋಬರ್​​ 16: ಕೋಲಾರ, ಬಂಗಾರಪೇಟೆ ಮತ್ತು ಮಾಲೂರು ನಗರ ಪಟ್ಟಣಗಳಿಗೆ ನೀರು ಪೂರೈಸುವ ಮಾರ್ಕಂಡೇಯ ಅಣೆಕಟ್ಟು ನಿರ್ಮಾಣ ವಿಚಾರವಾಗಿ ಸದ್ಯ ಕೇಂದ್ರ ಸರ್ಕಾರ ಸುಪ್ರೀಂಕೋರ್ಟ್​ನಲ್ಲಿ ಅರ್ಜಿ ಸಲ್ಲಿಸಿದ್ದು, ಕರ್ನಾಟಕ ಮತ್ತು ತಮಿಳುನಾಡು (Tamil Nadu) ನಡುವೆ ಮಧ್ಯಸ್ಥಿಕೆಗೆ 12 ವಾರಗಳ ಸಮಯ ಕೇಳಿದೆ. ಆದರೆ ಕೇಂದ್ರ ಸರ್ಕಾರದ ಈ ಮನವಿಗೆ ತಮಿಳುನಾಡು ವಿರೋಧ ವ್ಯಕ್ತಪಡಿಸಿದೆ. ಕೇಂದ್ರ ಸರ್ಕಾರದ ಅಫಿಡವಿಟ್ ಪರಿಶೀಲನೆ ನಡೆಸಿ, ರಾಜ್ಯಗಳ ಅಭಿಪ್ರಾಯ ಪಡೆದು ಆದೇಶಿಸುವ ಭರವಸೆ ನೀಡಿದ್ದು, ಸದ್ಯ 4 ವಾರಗಳ ಕಾಲ ವಿಚಾರಣೆಯನ್ನು ಸುಪ್ರೀಂಕೋರ್ಟ್ ಮುಂದೂಡಿದೆ.

ಕರ್ನಾಟಕವು ಪೆನ್ನಾರ್ ನದಿಯ ಉಪನದಿ ಮಾರ್ಕಂಡೇಯ ನದಿಗೆ ಅಡ್ಡಲಾಗಿ ಕೋಲಾರ ಜಿಲ್ಲೆಯ ಯರಗೋಳದಲ್ಲಿ ಅಣೆ ಕಟ್ಟನ್ನು ನಿರ್ಮಿಸುತ್ತಿದೆ, ಇದಕ್ಕೆ 240 ಕೋಟಿ ರೂ. ವೆಚ್ಚದ ಯೋಜನೆಗೆ ಸರ್ಕಾರದಿಂದ ಅನುಮತಿ ಪಡೆಯಲಾಗಿದೆ. ಆದರೆ ಈ ಅಣೆಕಟ್ಟು ನಿರ್ಮಾಣ ಕುರಿತು ತಮಿಳುನಾಡು ತದಾಗೆ ತೆಗೆದಿತ್ತು. ಅಣೆಕಟ್ಟು ನಿರ್ಮಾಣಗೊಂಡರೆ ನದಿಯ ನೈಸರ್ಗಿಕ ಹರಿವಿಗೆ ತೊಂದರೆಯಾಗಲಿದ್ದು, ಕೃಷಿ ಚಟುವಟಿಕೆ ಹಾಗೂ ಕುಡಿಯುವ ನೀರಿನ ಮೇಲೆ ಪ್ರಭಾವ ಬೀರಲಿದೆ ಎಂದು ವಾದಿಸಲಾಗಿತ್ತು.

ಇದನ್ನೂ ಓದಿ: Pennaiyar River Dispute : ಕರ್ನಾಟಕ-ತಮಿಳುನಾಡು ನಡುವಿನ ಜಲ ವಿವಾದ ಬಗೆಹರಿಸಲು ನೀರು ನ್ಯಾಯಾಧೀಕರಣ ರಚಿಸುವಂತೆ ಕೇಂದ್ರಕ್ಕೆ ಸುಪ್ರೀಂ ನಿರ್ದೇಶನ

ಪೆನ್ನಾರ್ ನದಿ ನೀರಿನ ವಿಚಾರದಲ್ಲಿ ಕರ್ನಾಟಕದೊಂದಿಗೆ ಇರುವ ಸಮಸ್ಯೆಗಳನ್ನು ಬಗೆಹರಿಸಲು ಅಂತಾರಾಜ್ಯ ಜಲ ವಿವಾದ ನ್ಯಾಯಾಧೀಕರಣ ಸ್ಥಾಪಿಸುವಂತೆ ಕೇಂದ್ರ ಸರ್ಕಾರಕ್ಕೆ ತಮಿಳುನಾಡು ಸರ್ಕಾರ ಈ ಹಿಂದೆಯೇ ಮನವಿ ಮಾಡಿತ್ತು. ಕಳೆದ ವಿಚಾರಣೆ ವೇಳೆ, ಕೇಂದ್ರವು ನಾಲ್ಕು ವಾರಗಳಲ್ಲಿ ನ್ಯಾಯಾಧೀಕರಣವನ್ನು ಸ್ಥಾಪಿಸುವುದಾಗಿ ಹೇಳಿತ್ತು. ಶೀಘ್ರದಲ್ಲೇ ಗೆಜೆಟ್ ಅಧಿಸೂಚನೆಯನ್ನು ಪ್ರಕಟಿಸುವುದಾಗಿ ಸುಪ್ರೀಂಕೋರ್ಟ್​ಗೆ ತಿಳಿಸಲಾಗಿತ್ತು.

ತಮಿಳುನಾಡು ತಕರಾರು

ಮಾರ್ಕಂಡೇಯ ನದಿಯು ಪೆನ್ನಾರ್​ನ ಉಪನದಿಯಾದ ಕಾರಣ ಅಣೆಕಟ್ಟು ನಿರ್ಮಿಸಿದರೆ ನದಿ ನೀರಿನ ಹರಿವಿಗೆ ತೊಂದರೆಯಾಗುತ್ತದೆ ತಮಿಳುನಾಡಿನ ಜನರು ಕೃಷಿ ಹಾಗೂ ಕುಡಿಯಲು ಪೆನ್ನಾರ್​ ನದಿ ನೀರನ್ನು ಅವಲಂಬಿಸಿದ್ದಾರೆ. ಹಾಗಾಗಿ ಅಣೆಕಟ್ಟು ನಿರ್ಮಿಸಲು ಅವಕಾಶ ನೀಡಬಾರದು ಎಂದು ತಮಿಳುನಾಡು  ತಕರಾರು ತೆಗೆದಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
Harish GR
Harish GR
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ