AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪೆನ್ನಾರ್‌ ನದಿ ನೀರು ವಿವಾದ: ಮಧ್ಯಸ್ಥಿಕೆಗೆ ಕೇಂದ್ರ ಸರ್ಕಾರದ ಮನವಿಗೆ ತಮಿಳುನಾಡು ವಿರೋಧ

ಕೋಲಾರ, ಬಂಗಾರಪೇಟೆ ಮತ್ತು ಮಾಲೂರು ನಗರ ಪಟ್ಟಣಗಳಿಗೆ ನೀರು ಪೂರೈಸುವ ಮಾರ್ಕಂಡೇಯ ಅಣೆಕಟ್ಟು ನಿರ್ಮಾಣ ವಿಚಾರವಾಗಿ ಸದ್ಯ ಕೇಂದ್ರ ಸರ್ಕಾರ ಸುಪ್ರೀಂಕೋರ್ಟ್​ನಲ್ಲಿ ಅರ್ಜಿ ಸಲ್ಲಿಸಿದ್ದು, ಕರ್ನಾಟಕ ಮತ್ತು ತಮಿಳುನಾಡು ನಡುವೆ ಮಧ್ಯಸ್ಥಿಕೆಗೆ 12 ವಾರಗಳ ಸಮಯ ಕೇಳಿದೆ. ಆದರೆ ಕೇಂದ್ರ ಸರ್ಕಾರದ ಈ ಮನವಿಗೆ ತಮಿಳುನಾಡು ವಿರೋಧ ವ್ಯಕ್ತಪಡಿಸಿದೆ.

ಪೆನ್ನಾರ್‌ ನದಿ ನೀರು ವಿವಾದ: ಮಧ್ಯಸ್ಥಿಕೆಗೆ ಕೇಂದ್ರ ಸರ್ಕಾರದ ಮನವಿಗೆ ತಮಿಳುನಾಡು ವಿರೋಧ
ಸುಪ್ರೀಂಕೋರ್ಟ್
ಹರೀಶ್ ಜಿ.ಆರ್​.
| Edited By: |

Updated on: Oct 16, 2023 | 5:48 PM

Share

ದೆಹಲಿ, ಅಕ್ಟೋಬರ್​​ 16: ಕೋಲಾರ, ಬಂಗಾರಪೇಟೆ ಮತ್ತು ಮಾಲೂರು ನಗರ ಪಟ್ಟಣಗಳಿಗೆ ನೀರು ಪೂರೈಸುವ ಮಾರ್ಕಂಡೇಯ ಅಣೆಕಟ್ಟು ನಿರ್ಮಾಣ ವಿಚಾರವಾಗಿ ಸದ್ಯ ಕೇಂದ್ರ ಸರ್ಕಾರ ಸುಪ್ರೀಂಕೋರ್ಟ್​ನಲ್ಲಿ ಅರ್ಜಿ ಸಲ್ಲಿಸಿದ್ದು, ಕರ್ನಾಟಕ ಮತ್ತು ತಮಿಳುನಾಡು (Tamil Nadu) ನಡುವೆ ಮಧ್ಯಸ್ಥಿಕೆಗೆ 12 ವಾರಗಳ ಸಮಯ ಕೇಳಿದೆ. ಆದರೆ ಕೇಂದ್ರ ಸರ್ಕಾರದ ಈ ಮನವಿಗೆ ತಮಿಳುನಾಡು ವಿರೋಧ ವ್ಯಕ್ತಪಡಿಸಿದೆ. ಕೇಂದ್ರ ಸರ್ಕಾರದ ಅಫಿಡವಿಟ್ ಪರಿಶೀಲನೆ ನಡೆಸಿ, ರಾಜ್ಯಗಳ ಅಭಿಪ್ರಾಯ ಪಡೆದು ಆದೇಶಿಸುವ ಭರವಸೆ ನೀಡಿದ್ದು, ಸದ್ಯ 4 ವಾರಗಳ ಕಾಲ ವಿಚಾರಣೆಯನ್ನು ಸುಪ್ರೀಂಕೋರ್ಟ್ ಮುಂದೂಡಿದೆ.

ಕರ್ನಾಟಕವು ಪೆನ್ನಾರ್ ನದಿಯ ಉಪನದಿ ಮಾರ್ಕಂಡೇಯ ನದಿಗೆ ಅಡ್ಡಲಾಗಿ ಕೋಲಾರ ಜಿಲ್ಲೆಯ ಯರಗೋಳದಲ್ಲಿ ಅಣೆ ಕಟ್ಟನ್ನು ನಿರ್ಮಿಸುತ್ತಿದೆ, ಇದಕ್ಕೆ 240 ಕೋಟಿ ರೂ. ವೆಚ್ಚದ ಯೋಜನೆಗೆ ಸರ್ಕಾರದಿಂದ ಅನುಮತಿ ಪಡೆಯಲಾಗಿದೆ. ಆದರೆ ಈ ಅಣೆಕಟ್ಟು ನಿರ್ಮಾಣ ಕುರಿತು ತಮಿಳುನಾಡು ತದಾಗೆ ತೆಗೆದಿತ್ತು. ಅಣೆಕಟ್ಟು ನಿರ್ಮಾಣಗೊಂಡರೆ ನದಿಯ ನೈಸರ್ಗಿಕ ಹರಿವಿಗೆ ತೊಂದರೆಯಾಗಲಿದ್ದು, ಕೃಷಿ ಚಟುವಟಿಕೆ ಹಾಗೂ ಕುಡಿಯುವ ನೀರಿನ ಮೇಲೆ ಪ್ರಭಾವ ಬೀರಲಿದೆ ಎಂದು ವಾದಿಸಲಾಗಿತ್ತು.

ಇದನ್ನೂ ಓದಿ: Pennaiyar River Dispute : ಕರ್ನಾಟಕ-ತಮಿಳುನಾಡು ನಡುವಿನ ಜಲ ವಿವಾದ ಬಗೆಹರಿಸಲು ನೀರು ನ್ಯಾಯಾಧೀಕರಣ ರಚಿಸುವಂತೆ ಕೇಂದ್ರಕ್ಕೆ ಸುಪ್ರೀಂ ನಿರ್ದೇಶನ

ಪೆನ್ನಾರ್ ನದಿ ನೀರಿನ ವಿಚಾರದಲ್ಲಿ ಕರ್ನಾಟಕದೊಂದಿಗೆ ಇರುವ ಸಮಸ್ಯೆಗಳನ್ನು ಬಗೆಹರಿಸಲು ಅಂತಾರಾಜ್ಯ ಜಲ ವಿವಾದ ನ್ಯಾಯಾಧೀಕರಣ ಸ್ಥಾಪಿಸುವಂತೆ ಕೇಂದ್ರ ಸರ್ಕಾರಕ್ಕೆ ತಮಿಳುನಾಡು ಸರ್ಕಾರ ಈ ಹಿಂದೆಯೇ ಮನವಿ ಮಾಡಿತ್ತು. ಕಳೆದ ವಿಚಾರಣೆ ವೇಳೆ, ಕೇಂದ್ರವು ನಾಲ್ಕು ವಾರಗಳಲ್ಲಿ ನ್ಯಾಯಾಧೀಕರಣವನ್ನು ಸ್ಥಾಪಿಸುವುದಾಗಿ ಹೇಳಿತ್ತು. ಶೀಘ್ರದಲ್ಲೇ ಗೆಜೆಟ್ ಅಧಿಸೂಚನೆಯನ್ನು ಪ್ರಕಟಿಸುವುದಾಗಿ ಸುಪ್ರೀಂಕೋರ್ಟ್​ಗೆ ತಿಳಿಸಲಾಗಿತ್ತು.

ತಮಿಳುನಾಡು ತಕರಾರು

ಮಾರ್ಕಂಡೇಯ ನದಿಯು ಪೆನ್ನಾರ್​ನ ಉಪನದಿಯಾದ ಕಾರಣ ಅಣೆಕಟ್ಟು ನಿರ್ಮಿಸಿದರೆ ನದಿ ನೀರಿನ ಹರಿವಿಗೆ ತೊಂದರೆಯಾಗುತ್ತದೆ ತಮಿಳುನಾಡಿನ ಜನರು ಕೃಷಿ ಹಾಗೂ ಕುಡಿಯಲು ಪೆನ್ನಾರ್​ ನದಿ ನೀರನ್ನು ಅವಲಂಬಿಸಿದ್ದಾರೆ. ಹಾಗಾಗಿ ಅಣೆಕಟ್ಟು ನಿರ್ಮಿಸಲು ಅವಕಾಶ ನೀಡಬಾರದು ಎಂದು ತಮಿಳುನಾಡು  ತಕರಾರು ತೆಗೆದಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಬ್ಯಾನರ್​​ ಗಲಾಟೆ ವೇಳೆ ಫೈರಿಂಗ್​: ಸ್ಫೋಟಕ ಸಾಕ್ಷಿಕೊಟ್ಟ ಶ್ರೀರಾಮುಲು
ಬ್ಯಾನರ್​​ ಗಲಾಟೆ ವೇಳೆ ಫೈರಿಂಗ್​: ಸ್ಫೋಟಕ ಸಾಕ್ಷಿಕೊಟ್ಟ ಶ್ರೀರಾಮುಲು
ಗುಂಡೇಟಿಗೆ ಕಾಂಗ್ರೆಸ್ ಕಾರ್ಯಕರ್ತ ಸಾವು: ಸಿಎಂ ಫಸ್ಟ್ ರಿಯಾಕ್ಷನ್
ಗುಂಡೇಟಿಗೆ ಕಾಂಗ್ರೆಸ್ ಕಾರ್ಯಕರ್ತ ಸಾವು: ಸಿಎಂ ಫಸ್ಟ್ ರಿಯಾಕ್ಷನ್
ಬೈಕ್‌ನಲ್ಲಿ ಬಂದು ಕ್ಷಣಾರ್ಧದಲ್ಲಿ ಮೊಬೈಲ್ ಕಿತ್ತು ಪರಾರಿ!
ಬೈಕ್‌ನಲ್ಲಿ ಬಂದು ಕ್ಷಣಾರ್ಧದಲ್ಲಿ ಮೊಬೈಲ್ ಕಿತ್ತು ಪರಾರಿ!
ಗಣಿದಣಿಗೆ ಭರತ್​​ ರೆಡ್ಡಿ ಓಪನ್​ ಚಾಲೆಂಜ್​​: 'ಕೈ​​' ಶಾಸಕ ಹೇಳಿದ್ದೇನು?
ಗಣಿದಣಿಗೆ ಭರತ್​​ ರೆಡ್ಡಿ ಓಪನ್​ ಚಾಲೆಂಜ್​​: 'ಕೈ​​' ಶಾಸಕ ಹೇಳಿದ್ದೇನು?
ಸೋನಲ್-ತರುಣ್ ಗೃಹಪ್ರವೇಶ; ಇಲ್ಲಿದೆ ಸುಂದರ ವಿಡಿಯೋ
ಸೋನಲ್-ತರುಣ್ ಗೃಹಪ್ರವೇಶ; ಇಲ್ಲಿದೆ ಸುಂದರ ವಿಡಿಯೋ
ವೇಗವಾಗಿ ಬಂದು ಟೋಲ್ ಬೂತ್​ಗೆ ಗುದ್ದಿದ ಬಸ್, ಭೀಕರ ದೃಶ್ಯ ಸಿಸಿಟಿವಿಲಿ ಸೆರೆ
ವೇಗವಾಗಿ ಬಂದು ಟೋಲ್ ಬೂತ್​ಗೆ ಗುದ್ದಿದ ಬಸ್, ಭೀಕರ ದೃಶ್ಯ ಸಿಸಿಟಿವಿಲಿ ಸೆರೆ
ಜನಾರ್ದನ ರೆಡ್ಡಿ ಮನೆ ಮುಂದಿನ ಸಂಘರ್ಷದ ಭೀಕರತೆ ಬಿಚ್ಚಿಟ್ಟ ವಿಡಿಯೋ
ಜನಾರ್ದನ ರೆಡ್ಡಿ ಮನೆ ಮುಂದಿನ ಸಂಘರ್ಷದ ಭೀಕರತೆ ಬಿಚ್ಚಿಟ್ಟ ವಿಡಿಯೋ
ಮೋಸದಿಂದ ಕೊನೆಯ ಕ್ಯಾಪ್ಟನ್ ಆದ್ರಾ ಧನುಷ್? ಬಿಗ್ ಬಾಸ್ ಪ್ರಶ್ನೆ
ಮೋಸದಿಂದ ಕೊನೆಯ ಕ್ಯಾಪ್ಟನ್ ಆದ್ರಾ ಧನುಷ್? ಬಿಗ್ ಬಾಸ್ ಪ್ರಶ್ನೆ
ಗಿಲ್ಲಿ ನಟ ಬರೆದು ಹಾಡಿದ ರ್ಯಾಪ್ ಸಾಂಗ್ ಪೂರ್ಣ ವಿಡಿಯೋ ಇಲ್ಲಿದೆ
ಗಿಲ್ಲಿ ನಟ ಬರೆದು ಹಾಡಿದ ರ್ಯಾಪ್ ಸಾಂಗ್ ಪೂರ್ಣ ವಿಡಿಯೋ ಇಲ್ಲಿದೆ