Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪೂರ್ಣಗೊಳ್ಳದ ರಸ್ತೆ ಕಾಮಗಾರಿ ವಿರುದ್ಧ ಸಿಡಿದೆದ್ದ ಜನತೆ; 45 ಕಿಲೋಮೀಟರ್ ಉದ್ದದ ಔರಾದ್-ಬೀದರ್ ರಸ್ತೆ ನಿರ್ಮಾಣಕ್ಕೆ ಮನವಿ

335 ಕೋಟಿ ರೂಪಾಯಿ ವೆಚ್ಚದಲ್ಲಿ ಔರಾದ್-ಬೀದರ್ ರಸ್ತೆಯನ್ನು ರಾಜ್ಯ ಹೆದ್ದಾರಿಯಿಂದ ರಾಷ್ಟ್ರೀಯ ಹೆದ್ದಾರಿ-16 ಎ ಎಂದು ಮೆಲ್ದರ್ಜೇಗೇರಿಸಲು ತಿರ್ಮಾನಿಸಲಾಗಿದೆ. ಅಲ್ಲದೆ ದ್ವಿಪತದ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗೆ ಶಂಕು ಸ್ಥಾಪನೆ ಕೂಡಾ ಮಾಡಲಾಗಿದೆ. ಆದರೆ ಈ ರಸ್ತೆ ಕಾಮಗಾರಿಗೆ ಚಾಲನೆ ನೀಡಿ ಏಳು ತಿಂಗಳು ಕಳೆದರು ಇನ್ನೂ ರಸ್ತೆ ಕಾಮಗಾರಿ ಮಾತ್ರ ಆರಂಭಿಸಿಲ್ಲ.

ಪೂರ್ಣಗೊಳ್ಳದ ರಸ್ತೆ ಕಾಮಗಾರಿ ವಿರುದ್ಧ ಸಿಡಿದೆದ್ದ ಜನತೆ; 45 ಕಿಲೋಮೀಟರ್ ಉದ್ದದ ಔರಾದ್-ಬೀದರ್ ರಸ್ತೆ ನಿರ್ಮಾಣಕ್ಕೆ ಮನವಿ
ಪೂರ್ಣಗೊಳ್ಳದ ರಸ್ತೆ ಕಾಮಗಾರಿ ವಿರುದ್ಧ ಸಿಡಿದೆದ್ದ ಜನತೆ
Follow us
TV9 Web
| Updated By: preethi shettigar

Updated on: Jul 05, 2021 | 12:58 PM

ಬೀದರ್: 45 ಕಿಲೋಮೀಟರ್ ಉದ್ದದ ಔರಾದ್-ಬೀದರ್ ರಸ್ತೆಯನ್ನು 2017 ಜನವರಿ 3 ರಂದು ರಾಷ್ಟ್ರೀಯ ಹೆದ್ದಾರಿಯಾಗಿ ಘೋಷಿಸಲಾಗಿತ್ತು. ಆದರೆ ರಾಷ್ಟ್ರೀಯ ಹೆದ್ದಾರಿಯಾಗಿ ಅಭಿವೃದ್ಧಿ ಪಡಿಸುವ ಮೂಲ ಕೆಲಸ ಶುರುವಾಗಲೇ ಇಲ್ಲ. ಮುಂಚೆ ಲೋಕೋಪಯೋಗಿ ಇಲಾಖೆ ವ್ಯಾಪ್ತಿಯಲ್ಲಿದ್ದ ಈ ರಸ್ತೆಯನ್ನು ರಾಷ್ಟ್ರೀಯ ಹೆದ್ದಾರಿ ಕಲಬುರಗಿ ವಿಭಾಗಕ್ಕೆ ಹಸ್ತಾಂತರ ಮಾಡಲಾಯಿತು. ಆದರೆ ಈ ರಸ್ತೆಯ ಕಾಮಗಾರಿಯನ್ನು ಮಾತ್ರ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದವರು ಕೈಗೆತ್ತಿಕೊಳ್ಳಲೇ ಇಲ್ಲ. ಹೀಗಾಗಿ ಔರಾದ್-ಬೀದರ್ ರಸ್ತೆಯಲ್ಲಿ ವಾಹನ ಸವಾರರು ಓಡಾಡಬೇಕಾದರೆ ಜೀವ ಕೈಯಲ್ಲಿ ಹಿಡಿದುಕೊಂಡು ವಾಹನ ನಡೆಸಬೇಕಾಗಿದ ಸ್ಥಿತಿ ನಿರ್ಮಾಣವಾಗಿದೆ.

ಸಾರ್ವಜನಿಕರ ಒತ್ತಡಕ್ಕೆ ಮಣಿದು 2020 ಡಿಸೆಂಬರ್ 19 ರಂದು ಈ ರಸ್ತೆ ಕಾಮಗಾರಿಗೆ ಆನ್​ಲೈನ್ ಮೂಲಕ ಸಚಿವ ನಿತಿನ್ ಗಡ್ಕರಿ ಚಾಲನೆ ನೀಡಿದ್ದು, 335 ಕೋಟಿ ರೂಪಾಯಿ ವೆಚ್ಚದಲ್ಲಿ ಔರಾದ್-ಬೀದರ್ ರಸ್ತೆಯನ್ನು ರಾಜ್ಯ ಹೆದ್ದಾರಿಯಿಂದ ರಾಷ್ಟ್ರೀಯ ಹೆದ್ದಾರಿ-16 ಎ ಎಂದು ಮೆಲ್ದರ್ಜೇಗೇರಿಸಲು ತಿರ್ಮಾನಿಸಲಾಗಿದೆ. ಅಲ್ಲದೆ ದ್ವಿಪತದ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗೆ ಶಂಕು ಸ್ಥಾಪನೆ ಕೂಡಾ ಮಾಡಲಾಗಿದೆ. ಆದರೆ ಈ ರಸ್ತೆ ಕಾಮಗಾರಿಗೆ ಚಾಲನೆ ನೀಡಿ ಏಳು ತಿಂಗಳು ಕಳೆದರು ಇನ್ನೂ ರಸ್ತೆ ಕಾಮಗಾರಿ ಮಾತ್ರ ಆರಂಭಿಸಿಲ್ಲ. ಹೀಗಾಗಿ ಅದೇ ಹಾಳಾದ ರಸ್ತೆಯಲ್ಲಿ ಓಡಾಡುವುದು ಅನಿವಾರ್ಯವಾಗಿದ್ದು, ಇದು ಸಹಜವಾಗಿಯೇ ಇಲ್ಲಿನ ಜನರ ಅಸಮಾಧಾನಕ್ಕೆ ಕಾರಣವಾಗಿದೆ.

ರಸ್ತೆ ಕಾಮಗಾರಿಗೆ ಚಾಲನೆ ನೀಡಿದ ಒಂದೆರಡು ದಿನದಲ್ಲಿ ಔರಾದ್ ತಾಲೂಕಿನ ಲಾಧಾ ಗ್ರಾಮದ ಹತ್ತಿರ, ರಸ್ತೆ ಕಾಮಗಾರಿ ಮಾಡುವ ವಾಹನಗಳನ್ನು, ಮಷೀನ್​​ಗಳನ್ನ ಮತ್ತು ಕೆಲವು ರಸ್ತೆ ಕಾಮಗಾರಿ ಮಾಡುವ ಸಿಬ್ಬಂಧಿಯನ್ನು ಕರೆತಂದರು. ಇದೆನ್ನೇಲ್ಲ ನೋಡಿದ ವಾಹನ ಸವಾರರು ಇನ್ನೇನು ಒಂದೇ ವರ್ಷದಲ್ಲಿ ರಸ್ತೆ ಕಾಮಗಾರಿ ಮಾಡಿಯೇ ಬಿಡುತ್ತಾರೆ ಎಂದುಕೊಂಡರು. ಆದರೆ ಏಳು ತಿಂಗಳು ಕಳೆದರು ಕೂಡಾ ಇನ್ನೂ ರಸ್ತೆ ಕಾಮಗಾರಿ ಆರಂಭಿಸಿಲ್ಲ. ಒಂದು ವರ್ಷದಲ್ಲಿ ಮುಗಿಯೋ ಕೆಲಸ ಐದಾರು ವರ್ಷ ತೆಗೆದುಕೊಳ್ಳುತ್ತಾರೆ ಎನ್ನುವುದು ಈ ಕೆಲಸ ನೋಡಿದರೆ ತಿಳಿಯುತ್ತದೆ ಎಂದು ಗ್ರಾಮಸ್ಥರಾದ ರವಿ ಮರಕಲ್ ತಿಳಿಸಿದ್ದಾರೆ.

ಔರಾದ್ ಬೀದರ್ ರಸ್ತೆಯ ಮೇಲೆ ಸಾವಿರಾರು ವಾಹನಗಳು ಓಡಾಡುತ್ತವೆ. ಒಂದು ರಾಜ್ಯದಿಂದ ಇನ್ನೊಂದು ರಾಜ್ಯಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಯೂ ಕೂಡ ಇದಾಗಿದೆ. ಈ ರಸ್ತೆಯ ಕೆಲಸ ಎಷ್ಟೂ ಬೇಗ ಮಾಡುತ್ತಾರೋ ಅಷ್ಟು ವಾಹನ ಸವಾರರಿಗೆ ಅನುಕೂಲವಾಗಲಿದೆ. ಇಲ್ಲಿ ದ್ವೀಪತದ ರಾಷ್ಟ್ರೀಯ ಹೆದ್ದಾರಿಯಾಗಿರುವುದರಿಂದ ಸಾರ್ವಜನಕರಿಗೆ, ಕೈಗಾರಿಕೋದ್ಯಮಿಗಳಿಗೆ ಇದರಿಂದ ಸಾಕಷ್ಟು ಅನುಕೂಲವಾಗಲಿದೆ. ಇಲ್ಲಿಂದ ಇದೇ ಮಾರ್ಗವಾಗಿ ಮಹಾರಾಷ್ಟ್ರದ ನಾಂದೇಡ್​ಗೆ ನೇರ ಸಂಪರ್ಕ ಕಲ್ಪಿಸುವುದುರಿಂದ ಜನರಿಗೆ ಬಹಳ ಅನುಕೂಲವಾಗಲಿದೆ. ಈ ರಸ್ತೆ ಕಾಮಗಾರಿ ಪಡೆದ ಗುತ್ತಿದೆಗಾರನಿಗೆ 2022 ರವರೆಗೆ ರಸ್ತೆ ಪೂರ್ಣಗೊಳಿಸಲು ಅವಕಾಶವಿದ್ದು, ರಸ್ತೆ ಕಾಮಗಾರಿ ಗುಣಮಟ್ಟದಿಂದ ಮಾಡಲಾಗುತ್ತದೆ. ಹೀಗಾಗಿ ಸ್ವಲ್ಪ ತಡವಾಗುತ್ತಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವರಾದ ಪ್ರಭು ಚೌಹಾಣ್ ತಿಳಿಸಿದ್ದಾರೆ.

ರಾಷ್ಟ್ರೀಯ ಹೆದ್ದಾರಿ ರಸ್ತೆ ಕಾಮಗಾರಿಗೆ ಚಾಲನೆ ಸಿಕ್ಕ ಕೂಡಲೇ ಆ ರಸ್ತೆಯಲ್ಲಿ ಓಡಾಡುವ ಸಾರ್ವಜನಿಕರು ಖುಷಿಯಾಗಿದ್ದರು. ಆದರೆ ಇನ್ನೇನು ಕೆಲವೇ ಕೆಲವು ತಿಂಗಳಲ್ಲಿ ಉತ್ತಮ ಗುಣಮಟ್ಟದ ರಸ್ತೆಯಾಗುತ್ತದೆಂದು ತಿಳಿದಿದ್ದ ಸಾರ್ವಜನಕರಿಗೆ ನಿರಾಸೆ ಭಾವನೆ ಕಾಡಲಾರಂಭಿಸಿದೆ. ಬೇಗ ರಸ್ತೆ ಕಾಮಗಾರಿ ಆರಂಭಿಸಿ ಬೇಗ ಕೆಲಸ ಮುಗಿಸಿದರೆ ಜನರಿಗೆ ಅನುಕೂಲವಾಗುತ್ತದೆ ಎನ್ನುವುದು ಸದ್ಯ ಈ ಭಾಗದ ಜನರ ಮನವಿಯಾಗಿದೆ.

ಇದನ್ನೂ ಓದಿ: ರಸ್ತೆ ಕಾಮಗಾರಿ ನೆಪ ಮರಗಳ ಮಾರಣ ಹೋಮ; ಸರ್ಕಾರಿ ಜಾಗವಲ್ಲ ಎನ್ನುತ್ತಿರುವ ಜನ, ಕ್ರಮಕ್ಕೆ ಮುಂದಾದ ಅರಣ್ಯ ಇಲಾಖೆ

ಕೋಟೆನಾಡಿನಲ್ಲಿ ಮುಗಿಯದ ರಸ್ತೆ ಕಾಮಗಾರಿ: ಹೆಚ್ಚಿನ ಧೂಳಿನಿಂದ ಸೃಷ್ಟಿಯಾಯ್ತು ಕೊರೊನಾ ಆತಂಕ

ಟಿವಿ9 ಎಕ್ಸ್​ಪೋನಲ್ಲಿ ರಾಶಿಕಾ ಶೆಟ್ಟಿ ಸುತ್ತಾಟ, ನಟಿಗೆ ಇಷ್ಟವಾಗಿದ್ದೇನು?
ಟಿವಿ9 ಎಕ್ಸ್​ಪೋನಲ್ಲಿ ರಾಶಿಕಾ ಶೆಟ್ಟಿ ಸುತ್ತಾಟ, ನಟಿಗೆ ಇಷ್ಟವಾಗಿದ್ದೇನು?
ಸ್ಪೀಕರ್ ವರ್ತನೆ ಸರಿಯಾ ತಪ್ಪಾ ಅಂತ ಜನ ತೀರ್ಮಾನಿಸುತ್ತಾರೆ: ಯುಟಿ ಖಾದರ್
ಸ್ಪೀಕರ್ ವರ್ತನೆ ಸರಿಯಾ ತಪ್ಪಾ ಅಂತ ಜನ ತೀರ್ಮಾನಿಸುತ್ತಾರೆ: ಯುಟಿ ಖಾದರ್
ಸರ್ಕಾರದ ಕ್ರಮವನ್ನು ಹೈಕೋರ್ಟ್​​ನಲ್ಲಿ ಪ್ರಶ್ನಿಸುತ್ತೇವೆ: ಬಸನಗೌಡ ಯತ್ನಾಳ್
ಸರ್ಕಾರದ ಕ್ರಮವನ್ನು ಹೈಕೋರ್ಟ್​​ನಲ್ಲಿ ಪ್ರಶ್ನಿಸುತ್ತೇವೆ: ಬಸನಗೌಡ ಯತ್ನಾಳ್
ನಿರ್ದೇಶಕ ಎಟಿ ರಘು ನಿಧನದ ಸುದ್ದಿ ಕೇಳಿ ಆಘಾತ ಆಯಿತು: ದೊಡ್ಡಣ್ಣ
ನಿರ್ದೇಶಕ ಎಟಿ ರಘು ನಿಧನದ ಸುದ್ದಿ ಕೇಳಿ ಆಘಾತ ಆಯಿತು: ದೊಡ್ಡಣ್ಣ
ಸದನದ ಗೌರವ ಕಾಪಾಡಲು ನಾವು ಹೋರಾಟ ಮಾಡಿದ್ದು: ಅಶೋಕ
ಸದನದ ಗೌರವ ಕಾಪಾಡಲು ನಾವು ಹೋರಾಟ ಮಾಡಿದ್ದು: ಅಶೋಕ
ಸಸ್ಪೆಂಡ್ ಮಾಡುವ ಪ್ರಸ್ತಾವನೆ ಮಂಡಿಸಿದ ಸಂಸದೀಯ ವ್ಯವಹಾರಗಳ ಸಚಿವ ಪಾಟೀಲ್
ಸಸ್ಪೆಂಡ್ ಮಾಡುವ ಪ್ರಸ್ತಾವನೆ ಮಂಡಿಸಿದ ಸಂಸದೀಯ ವ್ಯವಹಾರಗಳ ಸಚಿವ ಪಾಟೀಲ್
18 ಬಿಜೆಪಿ ಶಾಸಕರು ಅಮಾನತು: ಕೈಕಾಲು ಹಿಡ್ದು ಮುನಿರತ್ನನ ಹೊರಹಾಕಿದ ಮಾರ್ಷಲ್
18 ಬಿಜೆಪಿ ಶಾಸಕರು ಅಮಾನತು: ಕೈಕಾಲು ಹಿಡ್ದು ಮುನಿರತ್ನನ ಹೊರಹಾಕಿದ ಮಾರ್ಷಲ್
ಭಲೇ ಕಳ್ಳರು! ಜಡ್ಜ್ ಮನೆಗೆ ನುಗ್ಗಿ ಕಳ್ಳತನಕ್ಕೆ ಯತ್ನ, ಖದೀಮರ ವಿಡಿಯೋ ನೋಡಿ
ಭಲೇ ಕಳ್ಳರು! ಜಡ್ಜ್ ಮನೆಗೆ ನುಗ್ಗಿ ಕಳ್ಳತನಕ್ಕೆ ಯತ್ನ, ಖದೀಮರ ವಿಡಿಯೋ ನೋಡಿ
ಸಿದ್ದರಾಮಯ್ಯ ಮತ್ತು ಶಿವಕುಮಾರ್ ಆಗಮನದ ನಂತರ ಹೆಚ್ಚಿದ ಗಲಾಟೆ
ಸಿದ್ದರಾಮಯ್ಯ ಮತ್ತು ಶಿವಕುಮಾರ್ ಆಗಮನದ ನಂತರ ಹೆಚ್ಚಿದ ಗಲಾಟೆ
ಕಾಂಗ್ರೆಸ್ 2009ರಲ್ಲಿ ಸ್ಪೀಕರ್ ಜೊತೆ ನಡೆದುಕೊಂಡ ರೀತಿ ಗೊತ್ತಿದೆ: ಶಾಸಕ
ಕಾಂಗ್ರೆಸ್ 2009ರಲ್ಲಿ ಸ್ಪೀಕರ್ ಜೊತೆ ನಡೆದುಕೊಂಡ ರೀತಿ ಗೊತ್ತಿದೆ: ಶಾಸಕ