AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅನ್​ಲಾಕ್ 3.0: ರಾಜ್ಯದ ಕಂಪನಿ, ಕಾರ್ಖಾನೆಗಳ ನೌಕರರಿಗೆ ಲಸಿಕೆ ಕಡ್ಡಾಯ; ಲಸಿಕೆ ಇಲ್ಲದೆ ವಾಪಾಸ್ಸಾಗುತ್ತಿದ್ದಾರೆ ಜನ

ರಾಜ್ಯ ಸರ್ಕಾರವು ಅನ್​ಲಾಕ್ 3.0ನಲ್ಲಿ ಕಂಪನಿ ಹಾಗೂ ಕಾರ್ಖಾನೆಗಳಿಗೆ ನೂರು ಪ್ರತಿಶತ ಕಾರ್ಮಿಕರೊಂದಿಗೆ ಕಾರ್ಯನಿರ್ವಹಿಸಲು ಅನುಮತಿ ನೀಡಿದೆ. ಆದರೆ ಕಾರ್ಮಿಕರಿಗೆ ಕಡ್ಡಾಯವಾಗಿ ವ್ಯಾಕ್ಸಿನ್ ಆಗಿರಬೇಕು ಎಂಬ ಆದೇಶವನ್ನೂ ನೀಡಿದೆ. ಆದರೆ ವ್ಯಾಕ್ಸಿನ್ ಕೇಂದ್ರಗಳಲ್ಲಿ ಲಸಿಕೆ ಕೊರತೆಯಿಂದ ಜನರು ಸರದಿಯಲ್ಲಿ ನಿಂತು ವಾಪಸ್ಸಾಗುತ್ತಿದ್ದಾರೆ.

ಅನ್​ಲಾಕ್ 3.0: ರಾಜ್ಯದ ಕಂಪನಿ, ಕಾರ್ಖಾನೆಗಳ ನೌಕರರಿಗೆ ಲಸಿಕೆ ಕಡ್ಡಾಯ; ಲಸಿಕೆ ಇಲ್ಲದೆ  ವಾಪಾಸ್ಸಾಗುತ್ತಿದ್ದಾರೆ ಜನ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on:Jul 04, 2021 | 11:38 AM

Share

ಬೆಂಗಳೂರು: ಬೆಂಗಳೂರಿನ ಕೆ.ಸಿ.ಜನರಲ್ ಲಸಿಕಾ ಕೇಂದ್ರದಲ್ಲಿ ಇಂದು ಮುಂಜಾನೆಯಿಂದಲೇ ಜನರು ಲಸಿಕೆಗೆ ಕಾದಿದ್ದರು. ಕಾರಣ, ಮೂರನೇ ಹಂತದ ಅನ್​ಲಾಕ್​ನಲ್ಲಿ ರಾಜ್ಯ ಸರ್ಕಾರವು ಕಾರ್ಖಾನೆಗಳು ಹಾಗೂ ಕಂಪನಿಗಳು ನೂರು ಪ್ರತಿಶತ ಕೆಲಸಗಾರರೊಂದಿಗೆ ಕಾರ್ಯನಿರ್ವಹಿಸಲಲು ಅನುಮತಿ ನೀಡಿದೆ ಹಾಗೂ ಕೆಲಸಕ್ಕೆ ಹಾಜರಾಗುವ ಕಾರ್ಮಿಕರಿಗೆ ವ್ಯಾಕ್ಸಿನ್ ಕಡ್ಡಾಯಗೊಳಿಸಿದೆ. ಭಾನುವಾರವಾದ್ದರಿಂದ ಮುಂಜಾನೆ ಐದು ಗಂಟೆಯಿಂದಲೇ ಜನರು ಲಸಿಕಾ ಕೇಂದ್ರದ ಮುಂದೆ ನೆರೆದಿದ್ದರು. ಆದರೆ ವ್ಯಾಕ್ಸಿನ್ ಕೊರತೆಯಿಂದ ವಾಪಾಸ್ಸಾಗುತ್ತಿದ್ದಾರೆ.

ಕೆ.ಸಿ.ಜನರಲ್ ವ್ಯಾಕ್ಸಿನ್ ಕೇಂದ್ರದಲ್ಲಿ ಕೊವ್ಯಾಕ್ಸಿನ್ ಲಸಿಕೆ 200 ಜನರಿಗೆ ಹಾಗೂ ಕೊವಿಶೀಲ್ಡ್ ಲಸಿಕೆ 50 ಜನರಿಗೆ ಮಾತ್ರ ಲಭ್ಯವಿದೆ. ಆದರೆ ವ್ಯಾಕ್ಸಿನ್ ಕೇಂದ್ರದ ಮುಂದೆ ಮುಂಜಾನೆ 5 ಗಂಟೆಯಿಂದ 500ಕ್ಕೂ ಹೆಚ್ಚು ಜನ ಸಾಲುಗಟ್ಟಿ ನಿಂತಿದ್ದರು. ಸಾಮಾಜಿಕ ಅಂತರವನ್ನೂ ಮರೆತು ಜನರು ಸರದಿಯಲ್ಲಿ ಕಾಯುತ್ತಿದ್ದರು.ಆದರೆ ಲಸಿಕೆಯ ಕೊರತೆಯಿದೆ ಎಂದು ತಿಳಿಯುತ್ತಿದ್ದಂತೆ ನಿರಾಶೆಯಿಂದ ಮರಳಿ ಹೋಗುತ್ತಿದ್ದಾರೆ.

ಸರ್ಕಾರವು ಲಸಿಕೆ ಕಡ್ಡಾಯಗೊಳಿಸಿರುವುದು ಸ್ವಾಗತಾರ್ಹ ನಿರ್ಧಾರವಾದರೂ ಅದರ ಲಭ್ಯತೆಯ ಬಗ್ಗೆ ಇನ್ನೂ ಹೆಚ್ಚಿನ ಕ್ರಮಗಳನ್ನು ಕೈಗೊಳ್ಳುವ ಅಗತ್ಯವಿದೆ. ಜನರು ಸಾಮಾಜಿಕ ಅಂತರವನ್ನೂ ಮರೆತು ಸರದಿಯಲ್ಲಿ ಲಸಿಕೆ ಸಿಗದೆ ಮರಳಿ ಹೋಗುತ್ತಿರುವುದು ಕೋವಿಡ್ ವಿರುದ್ಧದ ಹೋರಾಟಕ್ಕೆ ಹಿನ್ನಡೆಯಾಗಬಲ್ಲದು. ಈ ಸಮಯದಲ್ಲಿ ಜನರೂ ತಾಳ್ಮೆಯಿಂದ ಸಾಮಾಜಿಕ ಅಂತರ ಪಾಲಿಸಿದರೆ ಒಳಿತು.

(People are going back because of vaccination shortage in Bengaluru)

ಇದನ್ನೂ ಓದಿ: Sputnik V: ಕೋವಿಶೀಲ್ಡ್​, ಕೋವಾಕ್ಸಿನ್​ ನಂತರ ಮತ್ತೊಂದು ಕೊರೊನಾ ಲಸಿಕೆ, ಸ್ಪುಟ್ನಿಕ್​ ವಿ ಬೆಂಗಳೂರಿ​ನಲ್ಲಿ ಲಭ್ಯ

Published On - 11:00 am, Sun, 4 July 21

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್